Breaking News

ಬಾಲಿವುಡ್ ಸೂಪರ್ ಹಿಟ್ ಸಿನ್ಮಾ ನೆನಪು ಮಾಡ್ಕೊಂಡ ಟ್ರಂಪ್

ಅಹಮದಾಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಭಾಷಣದಲ್ಲಿ ಬಾಲಿವುಡ್ ಸೂಪರ್ ಹಿಟ್ ಸಿನಿಮಾವನ್ನು ನೆನಪು ಮಾಡಿಕೊಂಡರು. ಮೊಟೆರಾದ ಸ್ಟೇಡಿಯಂಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಡೊನಾಲ್ಡ್ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು. ದೇಶದ ಪ್ರತಿಯೊಂದು ಕ್ಷೇತ್ರಗಳ ಸಾಧನೆಯನ್ನು ತಿಳಿಸಿ ನಾನು ಭಾರತವನ್ನು ಪ್ರೀತಿಸುತ್ತೇನೆ. ಬಾಲಿವುಡ್ ಮತ್ತು ಹಾಲಿವುಡ್ ಹೊಸತನಕ್ಕೆ ಮಾದರಿಯಾಗಿವೆ. ಶಾರೂಖ್ ಖಾನ್ ಮತ್ತು ಕಾಜೋಲ್ ನಟನೆಯ ‘ದಿಲ್‍ವಾಲೇ ದುಲ್ಹನಿಯಾ ಲೇ ಜಾಯೇಂಗೆ’ (ಡಿಡಿಎಲ್‍ಜೆ) ಚಿತ್ರದ ಯಶಸ್ಸು ಭಾರತೀಯ ಸಿನಿಮಾ ಏನು …

Read More »

ಉತ್ತರಾಧಿಕಾರ ವಿವಾದ – ಸಿಎಂ ಮಧ್ಯಸ್ಥಿಕೆಗೆ ದಿಂಗಾಲೇಶ್ವರ ಬೆಂಬಲಿಗರ ಒತ್ತಾಯ

ಹುಬ್ಬಳ್ಳಿ: ಉತ್ತರ ಕರ್ನಾಟಕದ ಹೆಮ್ಮೆಯ ಮಠದಲ್ಲಿ ಒಂದಾಗಿರುವ ಮೂರು ಸಾವಿರ ಮಠದ ಉತ್ತರಾಧಿಕಾರ ವಿವಾದ ಮುಗಿಯದ ಅಧ್ಯಾಯದಂತಾಗಿದ್ದು, ದಿನದಿಂದ ದಿನಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಗೊಂದಲಗಳು ಸೃಷ್ಟಿಯಾಗುತ್ತಲೆ ಇದೆ. ಒಂದು ಕಡೆ ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ನಾನೇ ಉತ್ತರಾಧಿಕಾರ ಎಂದು ಹೇಳುತ್ತಿದ್ದಾರೆ. ಮತ್ತೊಂದು ಕಡೆಯಲ್ಲಿ ಘಟಪ್ರಭಾದ ಮಲ್ಲಿಕಾರ್ಜುನ ಸ್ವಾಮೀಜಿ ನಾನು ಶ್ರೀ ಮಠದ ಉತ್ತರಾಧಿಕಾರ ಎಂದು ಹೇಳುತ್ತಿದ್ದಾರೆ. ಅಲ್ಲದೇ ಮೂಜಗು ಅವರು ಉತ್ತರಾಧಿಕಾರದ ಕುರಿತು ಯಾವುದೇ ಸ್ಪಷ್ಟನೆ ನೀಡದಿರುವುದು ಗೊಂದಲಕ್ಕೆ ಕಾರಣವಾಗಿದ್ದು, ದಿಂಗಾಲೇಶ್ವರ …

Read More »

ಕರ್ನಾಟಕವನ್ನು ಥೈಲ್ಯಾಂಡ್ ಮಾಡಲು ಹೊರಟಿದ್ದಾರೆ: ಎಚ್.ಕೆ ಪಾಟೀಲ್

ಹುಬ್ಬಳ್ಳಿ: ಬಿಜೆಪಿಯ ನಾಯಕರು ಕ್ಯಾಸಿನೋ ಅಂತಹ ಜೂಜು ಅಡ್ಡೆಗಳನ್ನು ಕರ್ನಾಟಕದಲ್ಲಿ ಸ್ಥಾಪನೆ ಮಾಡುವ ಮೂಲಕ ಕರ್ನಾಟಕವನ್ನು ಥೈಲ್ಯಾಂಡ್ ಮಾಡಲು ಹೊರಟಿದ್ದಾರೆ. ಪ್ರವಾಸಿಗರನ್ನು ಆಕರ್ಷಿಸಲು ರಾಜ್ಯದ ಸಂಸ್ಕೃತಿಗೆ ಧಕ್ಕೆ ತರುತ್ತಿರುವುದು ಖಂಡನೀಯವಾಗಿದೆ ಎಂದು ಮಾಜಿ ಸಚಿವ ಎಚ್.ಕೆ ಪಾಟೀಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನಸಭಾ ಹಾಗೂ ವಿಧಾನ ಪರಿಷತ್ ಕಲಾಪ ಪೂರ್ಣಗೊಂಡ ಬೆನ್ನಲ್ಲೇ ಸಚಿವ ಸಿ.ಟಿ ರವಿ ಅವರು ಪ್ರವಾಸಿಗರನ್ನು ಆಕರ್ಷಿಸಲು ಜೂಜು ಅಡ್ಡೆ …

Read More »

ಸಬರಮತಿ ಆಶ್ರಮದಲ್ಲಿ ಗಾಂಧಿ ಚರಕದಿಂದ ನೂಲು ನೇಯ್ದ ಟ್ರಂಪ್ ದಂಪತಿ

ಅಹಮದಾಬಾದ್, ಫೆ.24- ಭಾರತ ಪ್ರವಾಸ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಥಮ ಮಹಿಳೆ ಮಲೇನಿಯಾ ಟ್ರಂಪ್ ಅಹಮದಾಬಾದ್‍ನಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸಬರ್‍ಮತಿ ಆಶ್ರಮಕ್ಕೆ ಭೇಟಿ ನೀಡಿದರು.ಮೋದಿಯವರೊಂದಿಗೆ ಇಂದು ಮಧ್ಯಾಹ್ನ ಆಶ್ರಮಕ್ಕೆ ತೆರಳಿದ ಟ್ರಂಪ್ ದಂಪತಿ ಬಾಪು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು ಟ್ರಂಪ್ ದಂಪತಿಗಳಿಗೆ ಮಾರ್ಗದರ್ಶಕರಾಗಿದ್ದ ಟ್ರಂಪ್ ಆಶ್ರಮದ ಮಹತ್ವ ಮತ್ತು ಅಲ್ಲಿ ಗಾಂಧೀಜಿಯವರು ಬಳಸುತ್ತಿದ್ದ ವಸ್ತುಗಳ ಬಗ್ಗೆ ವಿವರಿಸಿದರು.ಆಶ್ರಮದಲ್ಲಿದ್ದ ಗಾಂಧೀಜಿ ಮತ್ತು …

Read More »

ರಾಷ್ಟ್ರಾಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಎರಡೂ ರಾಷ್ಟ್ರಗಳ ಗೆಳೆತನವನ್ನು ಮತ್ತಷ್ಟು ಗಟ್ಟಿಗೊಳಿಸುವುದಕ್ಕೆ ಮುನ್ನುಡಿ ಬರೆದಿದ್ದಾರೆ.

ಅಹಮದಾಬಾದ್, ಫೆ.24-ಉಭಯ ದೇಶಗಳಲ್ಲೂ ಭಾರೀ ಸಂಚಲನ ಸೃಷ್ಟಿಸಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ಭಾರತ ಭೇಟಿಯಿಂದಾಗಿ ವಿಶ್ವದ ಎರಡು ಬೃಹತ್ ಪ್ರಜಾಪ್ರಭುತ್ವ ದೇಶಗಳ ಬಾಂಧವ್ಯ ಬಲವರ್ಧನೆಯಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ರಾಷ್ಟ್ರಾಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಎರಡೂ ರಾಷ್ಟ್ರಗಳ ಗೆಳೆತನವನ್ನು ಮತ್ತಷ್ಟು ಗಟ್ಟಿಗೊಳಿಸುವುದಕ್ಕೆ ಮುನ್ನುಡಿ ಬರೆದಿದ್ದಾರೆ. ಭವ್ಯ ಸ್ವಾಗತ : ವಾಷಿಂಗ್ಟನ್‍ನಿಂದ ಏರ್‍ಪೊರ್ಸ್ ಒನ್ ವಿಶೇಷ ವಿಮಾನದಲ್ಲಿ ಗುಜರಾತ್‍ನ ಅಹಮದಾಬಾದ್‍ನ ಸರ್ದಾರ್ ವಲ್ಲಭ್ ಭಾಯಿ ಪಟೇಲ್ …

Read More »

ಅಜ್ಞಾತ ಯುವಕರಿಂದ ನೆಹರು ನಗರ ಹಾಸ್ಟೆಲ್ ಮೇಲೆ ಹಲ್ಲೆಗೆ ಯತ್ನ , ಕಲ್ಲು ತೂರಾಟ !!

ಅಜ್ಞಾತ ಯುವಕರಿಂದ ನೆಹರು ನಗರ ಹಾಸ್ಟೆಲ್ ಮೇಲೆ ಹಲ್ಲೆಗೆ ಯತ್ನ , ಕಲ್ಲು ತೂರಾಟ !! ಭಾನುವಾರ ಸಂಜೆ ಎಂದಿನಂತೆ ಹಾಸ್ಟೆಲ್ ವಿದ್ಯಾರ್ಥಿಗಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿದ್ದರೆ ಇತ್ತ 15-20 ಜನರ ಯುವಕರ ಗುಂಪೊಂದು ಸಮಾಜ ಕಲ್ಯಾಣ ಇಲಾಖೆಯ ನೆಹರು ನಗರದ ಹಾಸ್ಟೆಲ್ ಮೇಲೆ ಏಕಾಏಕಿ ದೊಣ್ಣೆ-ಬಡಿಗೆ ಗಳೊಂದಿಗೆ ಹಲ್ಲೆ ನಡೆಸಿದ್ದು ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡಿದೆ. ಸುಮಾರು 15 ಕ್ಕೂ ಹೆಚ್ಚು ಜನರ ಗುಂಪೊಂದು ಸಂಜೆ 7.45 ರ …

Read More »

ತರಬೇತಿ ಸಮಯದಲ್ಲಿ ತಲೆಗೆ ಪೆಟ್ಟು ಬಿದ್ದು ಯೋಧ ಸಾವು

ಧಾರವಾಡ, ಫೆ.24-ಭಾರತೀಯ ಸೇನೆಯ ತರಬೇತಿಯ ಸಮಯದಲ್ಲಿ ತಲೆಗೆ ಬಲವಾದ ಏಟು ಬಿದ್ದು, ಯೋಧನೊಬ್ಬ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗಪುರ ಸೇನಾ ಕ್ಯಾಂಪ್‍ನಲ್ಲಿ ನಡೆದಿದೆ. ಧಾರವಾಡ ತಾಲೂಕಿನ ನಿಗದಿ ಗ್ರಾಮದ ಮಹೇಶ್ ಸಿಂಗನಹಳ್ಳಿ (20) ಮೃತಪಟ್ಟ ಯೋಧ. ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ಸೇನೆಗೆ ಸೇರಿದ್ದ ಇವರು ತಂದೆ-ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯನ್ನು ಅಗಲಿದ್ದಾರೆ. ಇಂದು ಯೋಧನ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು, ಯೋಧನ ಅಗಲಿಕೆಯಿಂದ ಗ್ರಾಮದಲ್ಲಿ ನೀರವ ಮೌನ …

Read More »

ಭೂಗತ ಪಾತಕಿ ರವಿ ಪೂಜಾರಿಯನ್ನು ಬೆಂಗಳೂರಿಗೆ ಕರೆತಂದ ಪೊಲೀಸರು

ಬೆಂಗಳೂರು,ಫೆ.24- ಹಫ್ತಾ ವಸೂಲಿ, ಸುಲಿಗೆ, ಬೆದರಿಕೆ ಸೇರಿದಂತೆ ಭೂಗತ ಚಟುವಟಿಕೆಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ನಟೋರಿಯಸ್ ರವಿ ಪೂಜಾರಿಯನ್ನು ಸ್ವದೇಶಕ್ಕೆ ಕರೆತಂದು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಮುಂಜಾನೆ ಸೆನೆಗಲ್‍ನಿಂದ ಬೆಂಗಳೂರಿಗೆ ರವಿ ಪೂಜಾರಿಯನ್ನು ಕರೆತರಲಾಗಿದ್ದು, ಮಡಿವಾಳದಲ್ಲಿರುವ ಇಂಟರಾಗೇಷನ್ ಕಚೇರಿಯಲ್ಲಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲಾಗಿದೆ. ಎಡಿಜಿಪಿ ಅಮರ್‍ಕುಮಾರ್ ಪಾಂಡೆ ನೇತೃತ್ವದ ತಂಡ ರವಿ ಪೂಜಾರಿಯನ್ನು ವಿಚಾರಣೆಗೊಳಪಡಿಸಿದ್ದಾರೆ. ಕರ್ನಾಟಕದಲ್ಲಿ ರವಿಪೂಜಾರಿ ವಿರುದ್ಧ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ರಾಜಕಾರಣಿಗಳಿಗೆ …

Read More »

ಜಿಂಕೆಗೆ ಡಿಕ್ಕಿ ಹೊಡೆದ ಬೈಕ್ ಸವಾರ ಆಸ್ಪತ್ರೆ ಸೇರಿದ್ದು ಹೇಗೆ..?

ಕೋಲಾರ : ಬೈಕ್ ನಲ್ಲಿ ಚಲಿಸುತ್ತಿದ್ದಾಗ ಅಡ್ಡಬಂದ ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸ್ಥಳದಲ್ಲೆ ಸಾವನ್ನಪ್ಪಿ ಬೈಕ್ ಸವಾರನಿಗೆ ತೀವ್ರ ಗಾಯಗಳಾಗಿರುವ ಘಟನೆ ಕೋಲಾರ ಜಿಲ್ಲೆಯ ಹುಲ್ಲುಂಕಲ್ಲು ಗ್ರಾಮದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಕಲ್ಕೆರೆ ಗ್ರಾಮದ ನಿವಾಸಿ ದೇವರಾಜ್ (50) ಹುಲ್ಲುಂಕಲ್ಲು ಗ್ರಾಮದ ಮೂಲಕವಾಗಿ ಬೈಕ್ ಚಾಲನೆ ಮಾಡುತ್ತಿರುವಾಗ ಏಕಾಏಕಿ ರಸ್ತೆ ಮಧ್ಯೆ ಜಿಂಕೆ ನುಗ್ಗಿ ಬಂದಿದ್ದು ಬೈಕನ್ನು ನಿಯಂತ್ರಣ ಮಾಡಲಾಗದೆ ನೇರವಾಗಿ ಜಿಂಕೆಗೆ ಡಿಕ್ಕಿ ಹೊಡೆದಿದ್ದಾರೆ. ಸ್ಥಳದಲ್ಲೆ …

Read More »

ದ್ವಿತೀಯ PUC ಪರೀಕ್ಷೆ: ಅಕ್ರಮ ತಡೆಗಟ್ಟಲು ಹೊಸ ರೂಲ್ಸ್ , ಹುಷಾರಾಗಿರಿ…!

ಬೆಂಗಳೂರು, [ಫೆ.23]: ದ್ವಿತೀಯ ಪಿಯುಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 4 ರಿಂದ ಪಿಯುಸಿ ಪರೀಕ್ಷೆಗಳು ಶುರುವಾಗಲಿವೆ. 2020-201ನೇ ಸಾಲಿನ ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಇದಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ದತೆಗಳನ್ನ ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಆಗುವ ಅಕ್ರಮಗಳನ್ನ ತಡೆಗಟ್ಟಲು ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಈ ಬಗ್ಗೆ 11 ಅಂಶಗಳ ನಿಯಮಗಳನ್ನ ಜಾರಿಗೆ ತಂದು ಸುತ್ತೋಲೆ ಹೊರಡಿಸಿದೆ. 100ಕ್ಕೆ 100 ಅಂಕ ಪಡೆದ …

Read More »