Breaking News

ಧಾನಸಭಾ ಅಧಿವೇಶನದ ನಡುವೆಯೂ ಸಿಎಂ ಬಿಎಸ್ ಯಡಿಯೂರಪ್ಪ ನೋಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಜಾತ್ರಾಮಹೋತ್ಸವದಲ್ಲಿ ಪಾಲ್ಗೊಂಡರು.

ತುಮಕೂರು: ವಿಧಾನಸಭಾ ಅಧಿವೇಶನದ ನಡುವೆಯೂ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಿಪಟೂರು ತಾಲೂಕಿನ ನೋಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಜಾತ್ರಾಮಹೋತ್ಸವದಲ್ಲಿ ಪಾಲ್ಗೊಂಡರು. ಹೆಲಿಕಾಪ್ಟರ್ ಮೂಲಕ ಬೆಳಗ್ಗೆ 9:30ಕ್ಕೆ ಮಠಕ್ಕೆ ಆಗಮಿಸಿದ ಸಿಎಂ, ಮೃತ್ಯುಂಜಯ ಹೋಮ, ರುದ್ರ ಹೋಮ, ಜಯಾದಿ ಹೋಮದಲ್ಲಿ ಭಾಗಿಯಾಗಿ ಪೂಜೆ ಸಲ್ಲಿಸಿದರು. ಬಳಿಕ ಕಾಡುಸಿದ್ದೇಶ್ವರ ಮಠದ ಕರಿವೃಷಭ ಶಿವಯೋಗೇಶ್ವರ ಶ್ರೀಗಳ ಆಶೀರ್ವಾದ ಪಡೆದರು. ವೇದಿಕೆ ಕಾರ್ಯಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಕಾಡುಸಿದ್ದೇಶ್ವರ ಮಠದ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ …

Read More »

250 ಚಿತ್ರಗಳಲ್ಲಿ ನಟಿಸಿದ ಹಿರಿಯ ಕಲಾವಿದನಿಗೆ ಕಿಡ್ನಿ ವೈಫಲ್ಯ- ಉಳಿಸಿಕೊಳ್ಳಲು ಜಗ್ಗೇಶ್ ಪ್ರಯತ್ನ

  ಬೆಂಗಳೂರು: ನವರಸನಾಯಕ ಜಗ್ಗೇಶ್ ಇತ್ತೀಚೆಗಷ್ಟೇ ಒಂದು ಕಾರ್ಯಕ್ರಮದಲ್ಲಿ ಹಿರಿಯ ಕನ್ನಡ ಕಲಾವಿದನ ಬಗ್ಗೆ ಮಾತನಾಡಿ ಭಾವುಕರಾಗಿದ್ದರು. ಇದೀಗ ಆ ಕಲಾವಿದ ಯಾರು ಎಂಬುದನ್ನು ತಿಳಿಸಿದ್ದಾರೆ. ಜಗ್ಗೇಶ್ ಅಂದು ಕನ್ನಡ ಚಿತ್ರರಂಗದ ಪೋಷಕ ನಟ ಕಿಲ್ಲರ್ ವೆಂಕಟೇಶ್ ಬಗ್ಗೆ ಮಾತನಾಡಿದ್ದು. ಇವರು ಒಂದು ಕಾಲದಲ್ಲಿ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಮೂಲಕ ಗುರುತಿಸಿಕೊಂಡಿದ್ದರು. ಆದರೆ ಇಂದು ವೆಂಕಟೇಶ್ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿದ್ದಾರೆ. ಈ ಬಗ್ಗೆ ಜಗ್ಗೇಶ್ ಟ್ವೀಟ್ ಮಾಡುವ …

Read More »

ಶಶಿಕಲಾ ಜೊಲ್ಲೆ,ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ಮಾಡಿ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು.

ನಮ್ಮ ರಾಜ್ಯದ ಹೆಮ್ಮೆಯ ಶಿಕ್ಷಣ ಸಂಸ್ಥೆ ಕರ್ನಾಟಕ ಲಿಂಗಾಯತ ಸಂಸ್ಥೆ ( ಕೆಎಲ್ಇ) ಗೆ ಅವಿರೋಧವಾಗಿ 4 ನೇ ಬಾರಿಗೆ ಆಯ್ಕೆ ಆಗುವ ಮೂಲಕ ಕಾರ್ಯಧ್ಯಕ್ಷ ಸ್ಥಾನ ಅಲಂಕರಿಸಿರುವ ಶ್ರೀ ಡಾ.ಪ್ರಭಾಕರ ಕೋರೆ ಜಿ ಯವರನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ …

Read More »

ದೇಶದ ವಿರುದ್ಧ ಘೋಷಣೆಗಳನ್ನ ಕೂಗುವವರಿಗಾಗಿ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ನಾಯಕರು ಸದನವನ್ನ ಬಹಿಷ್ಕಾರ ಮಾಡಿದ್ದಾರೆ:ಶ್ರೀರಾಮುಲು

ರಾಯಚೂರು: ದೇಶದ ವಿರುದ್ಧ ಘೋಷಣೆಗಳನ್ನ ಕೂಗುವವರಿಗಾಗಿ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ನಾಯಕರು ಸದನವನ್ನ ಬಹಿಷ್ಕಾರ ಮಾಡಿದ್ದಾರೆ ಇದು ಸರಿಯಲ್ಲ ಅಂತ ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಶ್ರೀರಾಮುಲು, ಹುಬ್ಬಳ್ಳಿ-ಬೀದರ್ ನಲ್ಲಿ ವಿದ್ಯಾರ್ಥಿಗಳು ಪಾಕಿಸ್ತಾನದ ಪರ ಜಯಘೋಷ ಕೂಗುತ್ತಿದ್ದಾರೆ. ಇಂತಹದ್ದನ್ನ ನೋಡಿಕೊಂಡು ನಾವು, ಸರ್ಕಾರ ಕೈ ಕಟ್ಟಿಕೊಂಡು ಕೂಡಲು ಸಿದ್ಧರಿಲ್ಲ. ಸದನ ಬಹಿಷ್ಕಾರ ಮಾಡುವ ಮೂಲಕ ಅವರನ್ನ ರಕ್ಷಣೆ ಮಾಡುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಭಯೋತ್ಪಾದನೆಗೆ ಪ್ರಚೋದನೆ …

Read More »

ಭೂಗತ ಪಾತಕಿ ಜೈರಾಜ್ ಪಾತ್ರದಲ್ಲಿ ಡಾಲಿ

ಬೆಂಗಳೂರು: ಡಾಲಿ ಖ್ಯಾತಿಯ ಧನಂಜಯ್ ಇತ್ತೀಚೆಗೆ ಸಿಕ್ಕಾಪಟ್ಟೆ ಬ್ಯುಸಿಯಾಗುತ್ತಿದ್ದು, ಒಂದರ ಮೇಲೊಂದು ಸಿನಿಮಾ ಆಫರ್‍ಗಳು ಅವರನ್ನು ಅರಸಿ ಬರುತ್ತಿವೆ. ಅಲ್ಲದೆ ಒಂದಕ್ಕಿಂತ ಮತ್ತೊಂದು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಮತ್ತೊಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲು ಧನಂಜಯ್ ತಯಾರಾಗಿದ್ದು, ಸಿಲಿಕಾನ್ ಸಿಟಿಯ ಭೂಗತ ಪಾತಕಿ ಜೈರಾಜ್ ಪಾತ್ರ ನಿರ್ವಹಿಸಲಿದ್ದಾರೆ. ಟಗರು’ ಸಿನಿಮಾ ತೆರೆಕಂಡ ನಂತರ ಡಾಲಿ ಧನಂಜಯ್ ನಸೀಬು ಫುಲ್ ಚೇಂಜ್ ಆಗಿದೆ. ಸಾಲು ಸಾಲು ಚಿತ್ರಗಳಲ್ಲಿ ನಟಿಸಲು ಅವರಿಗೆ ಆಫರ್‍ಗಳು ಹುಡುಕಿಕೊಂಡು …

Read More »

ರಾಜ್ಯ ಬಿಜೆಪಿಯಲ್ಲಿ ಏನಾಗ್ತಿದೆ. ಲಿಂಗಾಯತ ಶಾಸಕರ ಸೀಕ್ರೆಟ್ ಮೀಟಿಂಗ್..

ರಾಜ್ಯ ಬಿಜೆಪಿಯಲ್ಲಿ ಏನಾಗ್ತಿದೆ..? ತಡರಾತ್ರಿ ಪಂಚಮಸಾಲಿ ಲಿಂಗಾಯತ ಶಾಸಕರ ಸೀಕ್ರೆಟ್ ಮೀಟಿಂಗ್.. ಬೆಂಗಳೂರು, ಫೆ.19-ಪಂಚಮಸಾಲಿ ಲಿಂಗಾಯತ ಸಮುದಾಯದ ಬಿಜೆಪಿ ಶಾಸಕರಿಂದ ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆದಿದೆ.ಪಂಚಮಸಾಲಿ ಲಿಂಗಾಯತ ಸಮುದಾಯದ ಬಿಜೆಪಿ ಶಾಸಕರಿಂದ ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಕರಡಿ ಸಂಗಣ್ಣ, ನಿಂಬಣ್ಣವರ್, ಮಹೇಶ್ ಕುಮಟಳ್ಳಿ, ಮೋಹನ್ ಲಿಂಬಿಕಾಯಿ ಹಾಗೂ ಮುರುಗೇಶ್ ನಿರಾಣಿ ಭಾಗವಹಿಸಿದ್ದರು. ನಿನ್ನೆ ರಾತ್ರಿ ಅವರ ನೇತೃತ್ವದಲ್ಲಿ …

Read More »

ಪಾಕಿಸ್ತಾನ ಪರ ಘೋಷಣೆ ಕೂಗಿದ ನಗರದ ಕೆಎಲïಇ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಹಿಂಡಲಗಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಹುಬ್ಬಳ್ಳಿ,ಫೆ,18- ಪಾಕಿಸ್ತಾನ್ ಪರ ಘೊಷಣೆ ಕೂಗಿದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ವಿರುದ್ಧದ ದೇಶದ್ರೋಹಿ ಕೃತ್ಯದ ಪ್ರಕರಣವನ್ನು ಹು-ಧಾ ಪೊಲೀಸ್ ಕಮಿಷನರೇಟ್‍ರವರು ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ಹಸ್ತಾಂತರಿಸಿ ಕೈ ತೊಳೆದುಕೊಂಡಿದ್ದಾರೆ.ಖಾಸಗಿ ಇಂಜಿನಿಯರಿಂಗ್ ಕಾಲೇಜ್ ಪ್ರಾಂಶುಪಾಲರಿಂದ ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ತೆರಳಿ, ಆರೋಪಿತರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳುವವರೆಗೆ ಪೊಲೀಸ್ ಕಮಿಷನರೇಟ್ ಚುರುಕಿನಿಂದಲೇ ಕೆಲಸ ಮಾಡಿತ್ತು. ಗುರುತರ ಆರೋಪದ ಪ್ರಕರಣದಲ್ಲಿ ಆರೋಪಿತರಿಂದ ಪೊಲೀಸ್ ಠಾಣೆಯಲ್ಲೇ ಬಾಂಡ್ ಪಡೆದು ಬಿಟ್ಟು ಕಳುಹಿಸಿದ್ದು ಭಾನುವಾರ …

Read More »

ಕನ್ನಡ ಸಿನಿಮಾವಾಗಲಿದೆ ಕಂಬಳ ವೀರ ಶ್ರೀನಿವಾಸ್ ಜೀವನ ಚರಿತ್ರೆ

ಕಂಬಳ ಹೆಸರಿನಲ್ಲಿ ಟೈಟಲ್ ರಿಜಿಸ್ಟರ್ ಮಂಗಳೂರು: ಕಂಬಳ ವೀರ ಶ್ರೀನಿವಾಸ್ ಗೌಡ ಅವರು ವಿಶ್ವದಾದ್ಯಂತ ಭಾರೀ ಸುದ್ದಿಯಾಗುತ್ತಿದ್ದಂತೆ ಸಿನಿಮಾ ಕ್ಷೇತ್ರ ಕೂಡ ಕಂಬಳ ಕ್ಷೇತ್ರದ ದಾಖಲೆಯನ್ನು ಮೂಲ ವಿಷಯವನ್ನಾಗಿ ಇಟ್ಟುಕೊಂಡು ಕನ್ನಡ ಸಿನಿಮಾ ತಯಾರಿಸಲ ನಿರ್ಮಾಪಕರೊಬ್ಬರು ಮುಂದಾಗಿದೆ. ಮಂಗಳೂರು ಸಮೀಪ ಐಕಳದಲ್ಲಿ ಫೆಬ್ರವರಿ 2ರಂದು ನಡೆದ ಕಂಬಳದಲ್ಲಿ ಮೂಡಬಿದ್ರೆ ಮಿಜಾರು ಅಶ್ವತ್ಥಪುರದ ಶ್ರೀನಿವಾಸ್ ಗೌಡ ಅವರು ದಾಖಲೆ ಬರೆದು ವಿಶ್ವದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಾಗಿಸಿ ಕಥೆ ತಯಾರಾಗಲಿದೆ. ಕರಾವಳಿ …

Read More »

ತವರು ಜಿಲ್ಲೆಯಲ್ಲಿ ಬಿಗ್‍ಬಾಸ್ ವಿನ್ನರ್ ಶೈನ್‍ಗೆ ಅದ್ಧೂರಿ ಸ್ವಾಗತ

ಉಡುಪಿ: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ವಿನ್ನರ್ ಶೈನ್‍ಶೆಟ್ಟಿ ಗೆದ್ದ ನಂತರ ತವರು ಜಿಲ್ಲೆ ಉಡುಪಿಗೆ ಪ್ರಪ್ರಥಮ ಬಾರಿಗೆ ಆಗಮಿಸಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ. ಶೈನ್ ಶೆಟ್ಟಿ ಬಿಗ್‍ಬಾಸ್ ಗೆದ್ದ ಬಳಿ ಮೊದಲ ಬಾರಿಗೆ ಉಡುಪಿಗೆ ಮಂಗಳವಾರ ಆಗಮಿಸಿದ್ದರು. ಹೀಗಾಗಿ ಶೈನ್ ಶೆಟ್ಟಿಯನ್ನು ನಗರದ ಜೋಡುಕಟ್ಟೆಯಿಂದ ಅದ್ಧೂರಿ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗಿತ್ತು. ಶೈನ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ನೂರಾರು ಅಭಿಮಾನಿಗಳು ಮುಗಿಬಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿ …

Read More »

ಶಾಸಕಿಯೊಬ್ಬರ ಸಹೋದರನಿಗೆ ನಕಲಿ ಪ್ರ-ಪತ್ರ ನೀಡಿದ ವ್ಯಕ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ CEO ಆದೇಶ.

ಶಾಸಕಿಯೊಬ್ಬರ ಸಹೋದರನಿಗೆ ನಕಲಿ ಪ್ರ-ಪತ್ರ ನೀಡಿದ ವ್ಯಕ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ CEO ಆದೇಶ..! ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ ಹಟ್ಟಿಹೊಳಿಗೆ ಮೋದಗಾ ಗ್ರಾಮದ ಸುಳ್ಳು ರಹವಾಸಿ ಪ್ರಮಾಣ ಪತ್ರ ನೀಡಿದ ಗ್ರಾಮ ಪಂಚಾಯತಿ ಸದಸ್ಯ ಬಾಬು ಕಾಳೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮೋದಗಾ ಗ್ರಾಮ ಪಂಚಾಯತಿಯ ಪಿಡಿಓಗೆ ಆದೇಶ ನೀಡಿದ್ದಾರೆ. ಚನ್ನರಾಜ ಹಟ್ಟಿಹೊಳಿ ಮೋದಗಾ ಗ್ರಾಮದ …

Read More »