ಬೆಳಗಾವಿ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ನೇತೃತ್ವದಲ್ಲಿ ರಾಜ್ಯದಾದ್ಯಂತ ಎಲ್ಲ ತಾಲ್ಲೂಕು ಕಚೇರಿಗಳ ಮುಂದೆ ಇದೇ ಅಗಸ್ಟ್ 10 ರಂದು ‘ಕಾರ್ಪೊರೇಟ್ ಕಂಪನಿಗಳೇ ಕೃಷಿ ಬಿಟ್ಟು ತೊಲಗಿ’ ಎಂಬ ಘೋಷಣೆಯೊಂದಿಗೆ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಡೀ ದೇಶವನ್ನೇ ಖಾಸಗಿ ಬಂಡವಾಳಗಾರರಿಗೆ, ಕಾರ್ಪೊರೇಟ್ ಕಂಪನಿಗಳಿಗೆ …
Read More »ರಾಜ್ಯದಲ್ಲಿ ಕೊರೋನಾದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳ
ಬೆಂಗಳೂರು : ಭಾನುವಾರವೂ ರಾಜ್ಯದಲ್ಲಿ ಕೊರೊನಾ ಅರ್ಭಟ ಮುಂದುವರೆದಿದ್ದು,ಇಂದು 5,532 ಜನರಿಗೆ ಕೋವಿಡ್-19 ಸೋಂಕು ತಗುಲಿದೆ. ಇಂದು84 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿತ ಪ್ರಕರಣಗಳ ಸಂಖ್ಯೆ 1,34,819 ಆಗಿದ್ದು, ಇದರಲ್ಲಿ 57,725 ಜನರು ಬಿಡುಗಡೆಯಾಗಿದ್ದರೆ, 74,590 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ 2,496 ಜನರು ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ರಾಜಧಾನಿ ಬೆಂಗಳೂರು ನಗರದಲ್ಲಿ ಕೋವಿಡ್ ಮಹಾಮಾರಿಯ ಆರ್ಭಟ ಎಂದಿನಂತೆ ಮುಂದುವರಿದಿದ್ದು, 2105 ಹೊಸ ಪ್ರಕರಣಗಳು ವರದಿಯಾಗಿವೆ. …
Read More »ಸಿಎಂ ಯಡಿಯೂರಪ್ಪನವರ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಸಾಧ್ಯತೆ; ರಾಜ್ಯದ ಆಡಳಿತ ನೋಡಿಕೊಳ್ಳುವವರು ಯಾರು?
ಬೆಂಗಳೂರು (ಜು. 3): ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಆಗಬೇಕೆಂದು ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಆಡಳಿತವನ್ನು ನೋಡಿಕೊಳ್ಳುವವರು ಯಾರು? ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಾರದ ರೊಟೀನ್ ಚೆಕಪ್ ವೇಳೆ ನಿನ್ನೆ ಸಿಎಂಗೆ ಕೊರೋನಾ ಪಾಸಿಟಿವ್ ಇರುವುದು ಪತ್ತೆಯಾಗಿತ್ತು. ಹೀಗಾಗಿ, ರಾತ್ರೋರಾತ್ರಿ ಅವರು ಆಸ್ಪತ್ರೆಗೆ …
Read More »ಪ್ರತಿ ಭಾನುವಾರ ಸಿಎಂಗೆ ನಡೀತಿತ್ತು ಕೊರೊನಾ ಟೆಸ್ಟ್……….
ಬೆಂಗಳೂರು: ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಡಿಯೂರಪ್ಪನವರು ಪ್ರತಿ ದಿನ ಕೊರೊನಾ ನಿಯಂತ್ರಣ ಸಂಬಂಧ ಅಧಿಕಾರಿಗಳು, ತಜ್ಞರ ಜೊತೆ ಸಭೆ ನಡೆಸುತ್ತಿದ್ದರು. ಅಷ್ಟೇ ಅಲ್ಲದೇ ಪ್ರತಿ ದಿನ ಸಿಎಂ ಭೇಟಿಗೆ ಗಣ್ಯರು ಸಹ ಆಗಮಿಸುತ್ತಿದ್ದರು. ಹೀಗಾಗಿ ಪ್ರತಿ ಭಾನುವಾರ ಸಿಎಂಗೆ ಕೋವಿಡ್ ಪರೀಕ್ಷೆ ನಡೆಯುತ್ತಿತ್ತು. ನಿನ್ನೆ ನಡೆದ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಭಾನುವಾರ ರಾತ್ರಿ ಟ್ವೀಟ್ ಮಾಡಿದ್ದ ಸಿಎಂ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ …
Read More »ಜನ್ಮಜನ್ಮಕೂ ಇವನೇ ನನ್ನ ಅಣ್ಣನಾಗಲಿ, ಇವಳೇ ನನ್ನ ತಂಗಿಯಾಗಲಿ……
ಅಣ್ಣ ತಂಗಿಯರ ಬಾಂಧವ್ಯವದ ಶ್ರೇಷ್ಠತೆಯನ್ನು ಸಾರುವ ಹಬ್ಬ ರಾಖಿ ಹಬ್ಬ. ರಾಖಿ ಹಬ್ಬದಂದು ಸಹೋದರಿ ಸಹೋದರನ ಕೈಗೆ ಕೇಸರಿ ದಾರ ಬರಿ ದಾರವಲ್ಲ, ಅದು ರಕ್ಷೆಯ ಪ್ರತೀಕ. ಅದರಲ್ಲಿ ಅಣ್ಣ ಸದಾಕಾಲ ನನ್ನನ್ನು ರಕ್ಷಿಸಬೇಕೆಂಬ ಆಶಯ ಅಡಗಿದೆ ರಕ್ಷಾ ಬಂಧನವನ್ನು ಏಕೆ ಆಚರಿಸುತ್ತೇವೆ? ಅಣ್ಣ ತಂಗಿಯರ ಅನುಬಂಧದ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ಅರ್ಥಗರ್ಭಿತ ಹಬ್ಬವೇ ರಕ್ಷಾಬಂಧನ. ಭಾರತೀಯ ಸಂಸ್ಕೃತಿಯಲ್ಲಿ ಕಂಡಬರುವ ವೈವಿಧ್ಯಮಯ ಆಚರಣೆಗಳಲ್ಲಿ ಈ ಹಬ್ಬವು ಕೂಡ ಒಂದು. ರಕ್ಷಾಬಂಧನ ಎಂದರೆ …
Read More »ವೈದ್ಯರ ಕುಟುಂಬವೊಂದು ಕುಟುಂಬ ಸಮೇತರಾಗಿ ಕೋವಿಡ್ ಆಸ್ಪತ್ರೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕೋಲಾರ : ನಗರದ ವೈದ್ಯರ ಕುಟುಂಬವೊಂದು ಕುಟುಂಬ ಸಮೇತರಾಗಿ ಕೋವಿಡ್ ಆಸ್ಪತ್ರೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೋಲಾರ ನಗರದ ವೈದ್ಯರೊಬ್ಬರ ಕುಟುಂಬದ ಹಿರಿಯರೊಬ್ಬರು ಕಳೆದ ಹನ್ನೊಂದು ದಿನಗಳ ಹಿಂದೆ ಕಿಡ್ನಿ ವೈಫಲ್ಯ ಹಾಗೂ ವಯೋ ಸಹಜ ಕಾಯಿಲೆಯಿಂದ ಮೃತಪಟ್ಟಿದ್ದರು. ಇದೇ ನೋವಿನಲ್ಲಿ ಇಡೀ ಕುಟುಂಬ ಮೃತರ ಹನ್ನೊಂದನೇ ದಿನದ ತಿಥಿ ಕಾರ್ಯ ಮಾಡಿದ್ದರು. ಈ ವೇಳೆ ಇಡೀ ಕುಟುಂಬಕ್ಕೊಂದು ಆಘಾತಕಾರಿ ಸುದ್ದಿಯೊಂದು ಎರಗಿ ಬಂದಿದ್ದು, ಕುಟುಂಬದ 8 ಜನರಿಗೂ ಕೊರೊನಾ …
Read More »ಭೂಮಿ ಪೂಜೆ ಲೈವ್ – ಇಂದಿರಾ ಗಾಂಧಿ ಭಾಷಣದ ವಿಡಿಯೋ ಅಪ್ಲೋಡ್ ಮಾಡಿ ಪ್ರಶ್ನೆ ಕೇಳಿದ ಬಿಜೆಪಿ
ನವದೆಹಲಿ: ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಯ ಕಾರ್ಯಕ್ರಮವನ್ನು ಡಿಡಿ ವಾಹಿನಿಯಲ್ಲಿ ಲೈವ್ ಪ್ರಸಾರ ಮಾಡವುದಕ್ಕೆ ಟೀಕೆ ವ್ಯಕ್ತವಾಗಿದ್ದಕ್ಕೆ ಬಿಜೆಪಿ ಇಂದಿರಾ ಗಾಂಧಿ ಭಾಷಣದ ವಿಡಿಯೋವನ್ನು ರಿಲೀಸ್ ಮಾಡಿ ತಿರುಗೇಟು ನೀಡಿದೆ. ಆಗಸ್ಟ್ 5 ರಂದು ಆಯೋಜನೆಗೊಂಡಿರುವ ರಾಮ ಮಂದಿರದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ದೂರದರ್ಶನ ಲೈವ್ ಪ್ರಸಾರ ಮಾಡಲು ಸಿದ್ಧತೆ ನಡೆಸುತ್ತಿತ್ತು.ಸರ್ಕಾರದ ವಾಹಿನಿಯಾಗಿರುವ ಡಿಡಿ ಈ ಕಾರ್ಯಕ್ರಮವನ್ನು ಪ್ರಸಾರ ಮಾಡಲು …
Read More »ಕೊಡಗಿನಲ್ಲಿ ಧಾರಾಕಾರ ಮಳೆ – ಯೆಲ್ಲೊ, ಆರೆಂಜ್ ಅಲರ್ಟ್ ಘೋಷಣೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇದುವರೆಗೂ ಸಾಧಾರಣವಾಗಿ ಬರುತ್ತಿದ್ದ ಮಳೆ ಇಂದು ಮಧ್ಯಾಹ್ನದ ಬಳಿಕ ಧಾರಾಕಾರವಾಗಿ ಸುರಿಯಲಾರಂಭಿಸಿದೆ. ತಲಕಾವೇರಿ, ಭಾಗಮಂಡಲ, ಬ್ರಹ್ಮಗಿರಿ ತಪ್ಪಲು, ನಾಪೋಕ್ಲು, ಮಡಿಕೇರಿ ಮತ್ತು ಮಾದಾಪುರ ಸೇರಿದಂತೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮತ್ತೊಂದೆಡೆ ಸೋಮವಾರ ಮತ್ತು ಮಂಗಳವಾರ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಸೋಮವಾರ 64 ಮಿಲಿ ಮೀಟರ್ನಿಂದ 115 ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೇ ಮಂಗಳವಾರ ಅದರ …
Read More »ಗುಡ್ ನ್ಯೂಸ್ : ಆ.10ರೊಳಗೆ ಸಾರ್ವಜನಿಕರಿಗೆ ಸಿಗಲಿದೆ ರಷ್ಯಾದ ಕೊರೋನಾ ಲಸಿಕೆ..!
ಮಾಸ್ಕೋ, – ಕೋವಿಡ್ ಲಸಿಕೆಯನ್ನು ಆಗಸ್ಟ್ 10ರೊಳಗೆ ಸಾರ್ವಜನಿಕವಾಗಿ ಬಿಡುಗಡೆ ಮಾಡಲು ರಷ್ಯಾ ಮುಂದಾಗಿದೆ.ವಿಶ್ವಾದ್ಯಂತ ಕಾಡುತ್ತಿರುವ ಕೋವಿಡ್ಅನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲೇ ಸಾಕಷ್ಟು ಪರಿಶ್ರಮ ಪಟ್ಟು ಲಸಿಕೆ ಕಂಡುಹಿಡಿಯುವ ನಿಟ್ಟಿನಲ್ಲಿ ರಷ್ಯಾ ವಿಜ್ಞಾನಿಗಳು ಸಾಕಷ್ಟು ಯಶಸ್ಸು ಸಾಧಿಸಿದ್ದಾರೆ. ಈಗಾಗಲೇ ಸೇನಾ ಯೋಧರು ಹಾಗೂ ಸಾರ್ವಜನಿಕರ ಮೇಲೆ ಈ ಲಸಿಕೆ ಪ್ರಯೋಗ ನಡೆಸಿ ಅದು ಫಲ ನೀಡಿರುವ ಹಿನ್ನೆಲೆಯಲ್ಲಿ ಮುಂದಿನ 15 ದಿನಗಳೊಳಗೆ ಲಸಿಕೆಯನ್ನು ಬಿಡುಗಡೆ ಮಾಡಲು ರಷ್ಯಾ ಅಧ್ಯಕ್ಷ ಬ್ಲಾಡಿಮಿರ್ …
Read More »ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ಪತ್ತೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದು, ನನಗೆ ಕೊರೋನಾ ಪಾಸಿಟಿವ್ ಬಂದಿದೆ. ರೋಗ ಲಕ್ಷಣ ಇಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲವೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದೂ ಅವರು ಕೋರಿದ್ದಾರೆ. ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಆಗ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು. …
Read More »