Breaking News

ಜೂಜಾಟದ ಅಡ್ಡೆ: ಬಹುಭಾಷಾ ನಟನನ್ನು ಪೊಲೀಸರು ಬಂಧಿಸಿದ್ದಾರೆ

ಲಾಕ್ಡೌನ್ ಸಂದರ್ಭದಲ್ಲಿ ತನ್ನ ಅಪಾರ್ಟ್ಮೆಂಟ್ ಅನ್ನು ಜೂಜಾಟದ ಅಡ್ಡೆಯನ್ನಾಗಿ ಮಾಡಿಕೊಂಡಿದ್ದ ಬಹುಭಾಷಾ ನಟನನ್ನು ಪೊಲೀಸರು ಬಂಧಿಸಿದ್ದು, ಈ ವೇಳೆ ಜೂಜಾಟಕ್ಕೆ ಬಳಸಿದ್ದ ಲಕ್ಷಾಂತರ ರೂಪಾಯಿ ವಶಪಡಿಸಿಕೊಂಡಿದ್ದಾರೆ. ಕನ್ನಡ ಸೇರಿದಂತೆ ತಮಿಳು, ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಟ ಶ್ಯಾಮ್ ಬಂಧಿತನಾಗಿದ್ದು, ಈತನೊಂದಿಗೆ ಇದ್ದ ಇತರೆ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ಯಾಮ್, ಸ್ಯಾಂಡಲ್ವುಡ್ ನ ‘ತನನಂ’, ರಾಕಿಂಗ್ ಸ್ಟಾರ್ ಯಶ್ ನಾಯಕ ನಟರಾಗಿರುವ ‘ಸಂತು ಸ್ಟ್ರೈಟ್ ಫಾರ್ವರ್ಡ್’ ಚಿತ್ರಗಳಲ್ಲಿ ಅಭಿನಯಿಸಿದ್ದರು. …

Read More »

ಮಗನೇ.. ನನ್ನನ್ನು ಕೊಂದುಬಿಡು ಎಂದು ಅಂಗಲಾಚಿದ್ದ ತಾಯಿಯನ್ನು ದೇವರು ಕಾಪಾಡಲಿಲ್ಲ

ಚೆನ್ನೈ: ವಯಸ್ಸಾದ ತಾಯಿಯನ್ನು ವಯೋಸಹಜ ಕಾಯಿಲೆ ಹಾಗೂ ಅಸಹನೀಯ ನೋವಿನಿಂದ ಶಾಶ್ವತವಾಗಿ ಮುಕ್ತಗೊಳಿಸಲು ಆಕೆಯ ಮಗನೇ ಚಾಕುವಿನಿಂತ ಕತ್ತು ಸೀಳಿ ಅಮಾನವೀಯವಾಗಿ ಹತ್ಯೆ ಗೈದಿದ್ದಾನೆ. 36 ವರ್ಷದ ಆನಂದನ್ ಕೊಲೆಗೈದ ಆರೋಪಿ. ಗೋವಿಂದಮ್ಮಾಳ್ (66) ಕೊಲೆಗೀಡಾದ ದುರ್ದೈವಿ ತಾಯಿ. ಈ ಘಟನೆ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಶ್ರೀಪೆರುಪುದೂರ್ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಗೋವಿಂದಮ್ಮಾಳ್ ತನ್ನ ಪತಿ ಮತ್ತು ಮಗನೊಂದಿಗೆ ವಾಸಿಸುತ್ತಿದ್ದು, ಕುಟುಂಬದವರು ಮರಿಯಮ್ಮನ್ ಕೋಲಿ ಗಲ್ಲಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದಾರೆ.   …

Read More »

ರಾಯಚೂರು :ಕೋವಿಡ್ 19 ದೃಢ ಹೆಡ್ ಕಾನ್‌ಸ್ಟೇಬಲ್‌ ರಾಘವೇಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತ

ರಾಯಚೂರು: ಕೋವಿಡ್ ದೃಢವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಗ್ರಾಮೀಣ ಠಾಣೆಯ ಹೆಡ್ ಕಾನ್‌ಸ್ಟೇಬಲ್‌ ರಾಘವೇಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ಗ್ರಾಮೀಣ ಠಾಣೆಗೆ ಭೇಟಿಕೊಟ್ಟರು. ಇದೇ ವೇಳೆ ರಾಘವೇಂದ್ರ ಅವರಿಗೆ ಪೊಲೀಸರು ಶ್ರದ್ಧಾಂಜಲಿ ಸಲ್ಲಿಸಿದರು. ‘ರಾಘವೇಂದ್ರ ಅವರು ಸಹೃದಯಿ. ಎಲ್ಲರನ್ನು ಪ್ರೀತಿಯಿಂದ ಮಾತನಾಡಿಸುತ್ತಿದ್ದರು ಕರ್ತವ್ಯದಲ್ಲಿ ಪ್ರಾಮಾಣಿಕತೆ, ನಿಷ್ಠೆಯಿಂದ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಇಂತಹ ವ್ಯಕ್ತಿಯ ಮರಣ ನಿಜಕ್ಕೂ ಇಲಾಖೆಗೆ ನೋವುಂಟು ಮಾಡಿದೆ’ …

Read More »

ಕ್ಷುದ್ರಗ್ರಹ ಕಂಡುಹಿಡಿದಿದ್ದಾರೆ 10ನೇ ಕ್ಲಾಸ್‌ ವಿದ್ಯಾರ್ಥಿನಿಯರು!

ನವದೆಹಲಿ: ವಿಜ್ಞಾನ ವಿಷಯದಲ್ಲಿ ಅತೀವ ಆಸಕ್ತಿ ಹೊಂದಿರುವ ಗುಜರಾತ್‌ನ ಸೂರತ್‌ನ ಇಬ್ಬರು ವಿದ್ಯಾರ್ಥಿನಿಯರು ಕ್ಷುದ್ರ ಗ್ರಹವೊಂದನ್ನು ಕಂಡುಹಿಡಿಯುವ ಮೂಲಕ ಇದೀಗ ಭಾರಿ ಶ್ಲಾಘನೆಗೆ ಒಳಗಾಗಿದ್ದಾರೆ. ಈ ಕ್ಷುದ್ರ ಗ್ರಹವು ಇನ್ನು ಕೆಲವೇ ದಿನಗಳಲ್ಲಿ ಭೂಮಿಯ ಸಮೀಪದಿಂದ ಹಾದು ಹೋಗಲಿದೆ. ಅದನ್ನು ಈ ಬಾಲಕಿಯರು ಪತ್ತೆ ಹಚ್ಚಿದ್ದಾರೆ. ವೈದೇಹಿ ವೆಕರಿಯ ಸಂಜಯ್‌ಭಾಯಿ ಹಾಗೂ ರಾಧಿಕಾ ಲಖನಿ ಪ್ರಫ‌ುಲ್ಲಭಾಯಿ ಎಂಬ ಬಾಲಕಿಯರು ಈ ಸಾಧನೆ ಮಾಡಿದ್ದಾರೆ. ಈ ರೀತಿಯ ಯಾವುದೇ ಸಂಶೋಧನೆ ಮಾಡಿದರೆ …

Read More »

ಕಿಲ್ಲರ್ ಕೊರೊನಾಗೆ ಜಿಲ್ಲೆಯಲ್ಲಿ ಕೇವಲ 10 ಗಂಟೆಯಲ್ಲಿ 11 ಸೋಂಕಿತರು ಸಾವನ್ನಪ್ಪಿದ್ದಾರೆ.

ಬೆಳಗಾವಿ: ಕಿಲ್ಲರ್ ಕೊರೊನಾಗೆ ಜಿಲ್ಲೆಯಲ್ಲಿ ಕೇವಲ 10 ಗಂಟೆಯಲ್ಲಿ 11 ಸೋಂಕಿತರು ಸಾವನ್ನಪ್ಪಿದ್ದಾರೆ. ಸದಾಶಿವ ನಗರದ ಸ್ಮಶಾನದಲ್ಲಿ ಏಕಕಾಲಕ್ಕೆ ಮೃತರ ಅಂತ್ಯಕ್ರಿಯೆ ನಡೆಸಲಾಯಿತು. ಸ್ಮಶಾನದಲ್ಲಿ ಸಾಲು ಸಾಲಾಗಿ ಸೋಂಕಿತರ ಶವ ಇಟ್ಟು ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮೃತರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.   ಸದಾಶಿವ ‌ನಗರದ ಸ್ಮಶಾನದಲ್ಲಿ ‌ಮಧ್ಯಾಹ್ನ 2ರವರೆಗೆ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಸಮಯ ಮೀಸಲಿಡಲಾಗಿದೆ. ಮಧ್ಯಾಹ್ನ 2 ಗಂಟೆ ಬಳಿಕ ಸಹಜವಾಗಿ ಸಾವನ್ನಪ್ಪಿದವರ ಅಂತ್ಯಕ್ರಿಯೆಗೆ …

Read More »

ಶಾಸಕ ತಿಪ್ಪಾರೆಡ್ಡಿ ಹಿರಿಯರು ನಾನು ಅವರು ಇಬ್ಬರು ಮಂತ್ರಿ ಆಗುವ ಕಾಲ ಬಹಳ ದೂರವಿಲ್ಲ. ನಾವು ಇಬ್ಬರು ಸಹ ಮಂತ್ರಿ ಆಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಹಿಂದೆ ನಡೆದ ಸಚಿವ ಸಂಪುಟ ವಿಸ್ತರಣೆ ವೇಳೆ ಕೊನೆಗಳಿಗೆಯಲ್ಲಿ ಉಮೇಶ್ ಕತ್ತಿಯಾವರಿಗೆ ಸಚಿವ ಸ್ಥಾನ ಕೈತಪ್ಪಿತ್ತು. ಆದ್ರೆ, ಈ ಬಾರಿ ಅವರಿಗೆ ಮಂತ್ರಿಗಿರಿ ಸಿಗುವ ಸಾಧ್ಯತೆಗಳು ಹೆಚ್ಚಿವೆ. ಇನ್ನು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಶಾಸಕರಿಗೆ ಸಮಾಧಾನ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ನಿಗಮ ಮಂಡಳಿಗಳನ್ನ ನೀಡಿದ್ದರು. ಹಲವರು ನಯವಾಗೆ ನಿರಾಕರಿಸಿದರೆ ಶಾಸಕ ತಿಪ್ಪಾರೆಡ್ಡಿ ಮಾತ್ರ ನನಗೆ ಅವಮಾನ ಮಾಡಲಾಗಿದೆ. ನನಗೆ ಸಚಿವ ಸ್ಥಾನ ಬೇಕು ಎಂದು ಬಹಿರಂಗವಾಗೆ ತಮ್ಮ ಅಸಮಾಧಾನ ಹೊರ ಹಾಕಿದ್ದರು. ಈಗ ಉಮೇಶ್ ಕತ್ತಿ ಸಹ ನನಗೆ ಮಂತ್ರಿ ಸ್ಥಾನ ಬೇಕು ಎಂದಿದ್ದಾರೆ.

ಬೆಳಗಾವಿ: ನಿಗಮ ಮಂಡಳಿ ನೇಮಕ ಬೆನ್ನಲ್ಲೇ ಇದೀಗ ಸಂಪುಟ ವಿಸ್ತರಣೆ ಸದ್ದು ಜೋರಾಗಿದ್ದು, ಆಗಸ್ಟ್ ಮೊದಲ ವಾರದಲ್ಲೇ ಬಿಎಸ್‌ವೈ ಕೆಲವರನ್ನ ಸಂಪುಟದಿಂದ ಕೈಬಿಟ್ಟು ಬೇರೆಯವರಿಗೆ ಚಾನ್ಸ್ ಕೊಡಲು ಚಿಂತನೆ ನಡೆಸಿದ್ದಾರೆ. ಇದರ ಮಧ್ಯೆ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಈ ಸಲ ಮಂತ್ರಿಯಾಗುವುದು ಫಿಕ್ಸ್ ಎನ್ನುವ ಅರ್ಥದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಚಿಕ್ಕೋಡಿಯಲ್ಲಿ ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿರುವ ಉಮೇಶ್ ಕತ್ತಿ, ರಾಜ್ಯದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆಗಳು ನಡೆದಿರುವ …

Read More »

ಬೆಳಗಾವಿ | 228 ಜನರಿಗೆ ಸೋಂಕು ದೃಢ, 6 ಮಂದಿ ಸಾವು

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 228 ಮಂದಿಗೆ ಕೋವಿಡ್-19 ದೃಢಪಟ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ನೀಡಿರುವ ಮಾಹಿತಿ ಪ್ರಕಾರ, ಆಸ್ಪತ್ರೆಗೆ ದಾಖಲಾಗಿದ್ದ 6 ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅಥಣಿ ತಾಲ್ಲೂಕಿನ 58 ವರ್ಷದ ವ್ಯಕ್ತಿ, ಬೈಲಹೊಂಗಲದ 44 ವರ್ಷದ ಪುರುಷ, ಸವದತ್ತಿಯ 65 ವರ್ಷದ ಮಹಿಳೆ, ರಾಯಬಾಗ ತಾಲ್ಲೂಕಿನ ಕುಡಚಿಯ 55 ವರ್ಷದ ಮಹಿಳೆ ಹಾಗೂ 46 ವರ್ಷದ ಪುರುಷ ಹಾಗೂ ಬೆಳಗಾವಿ ತಾಲ್ಲೂಕಿನ 54 ವರ್ಷದ …

Read More »

ಕೋವಿಡ್-19: ಪ್ರತೀ ದಿನ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿರುವ ಕರ್ನಾಟಕ, ಕೊರೋನಾ ಪಾಸಿಟಿವ್ ದುಪ್ಪಟ್ಟು!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಪ್ರತೀನಿತ್ಯ ಕರ್ನಾಟಕ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿದೆ. ರಾಜ್ಯದಲ್ಲಿ ಸೋಂಕಿನ ಸರಾಸರಿ ಪಾಸಿಟಿವಿಟಿ ಪ್ರಮಾಣ ದುಪ್ಪಟ್ಟಾಗಿದೆ. ಕಳೆದ ಜು.10ರವರೆಗೆ ಪ್ರತಿ 100 ಪರೀಕ್ಷೆಗಳಲ್ಲಿ ಸರಾಸರಿ ಶೇ.4.18ರಷ್ಟಿದ್ದ ಪಾಸಿಟಿವಿಟಿ ದರ ಇದೀಗ ಶೇ.8.60ಕ್ಕೆ ಏರಿಕೆಯಾಗಿದೆ. ಅಲ್ಲದೆ, ಕಳೆದ 18 ದಿನಗಳಲ್ಲಿ ಪ್ರತಿ 100 ಪರೀಕ್ಷೆಗಳಲ್ಲಿ ಸರಾಸರಿ ಶೇ.16.88 ಮಂದಿಗೆ ಸೋಂಕು ದೃಢಪಡುವ ಮೂಲಕ ಆತಂಕ ಹೆಚ್ಚಾಗುವಂತೆ ಮಾಡಿದೆ. ರಾಜ್ಯದಲ್ಲಿ ಜು.10ರವರೆಗೆ ಪಾಸಿಟಿವಿಟಿ …

Read More »

ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ ನೀಡಿದ ಸರ್ಕಾರ

ಬೆಳಗಾವಿ: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಒಪ್ಪಿಗೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಾಣ ಮಾಡಿ. ಕಾಲುವೆ ಮುಖಾಂತರ 1.72 ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ …

Read More »

ಕೋವಿಡ್ ಸೋಂಕಿತರಿಗೆ ದಿನಬಳಕೆ-ಮೆಡಿಕಲ್‌ ಕಿಟ್‌ ವಿತರಣೆ

ಗೋಕಾಕ: ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ ಎಂದು ಹಿರಿಯ ತಜ್ಞ ವೈದ್ಯ ಡಾ| ಆರ್‌.ಎಸ್‌. ಬೆಣಚಿನಮರಡಿ ಹೇಳಿದರು. ಮಂಗಳವಾರ ಇಲ್ಲಿಯ ಎನ್‌ಎಸ್‌ಎಫ್‌ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊರೊನಾ ರೋಗಿಗಳಿಗೆ ಕೊಡಮಾಡಿದ ದಿನಬಳಕೆಯ ಮತ್ತು ಮೆಡಿಕಲ್‌ ಕಿಟ್‌ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಲಾಕ್‌ಡೌನ್‌ ಸಮಯದಲ್ಲಿ ಅರಭಾವಿ ಕ್ಷೇತ್ರದ ಪ್ರತಿ ಕುಟುಂಬಕ್ಕೆ ದಿನಸಿ ಕಿಟ್‌ ವಿತರಿಸಿದ್ದ ಶಾಸಕರು ಈಗ …

Read More »