ಬೆಳಗಾವಿ: ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ. ರಾಯಬಾಗ ಕ್ಷೇತ್ರಿದಂದ ಸತತ ಮೂರು ಬಾರಿ ಶಾಸಕರಾಗಿ ದುರ್ಯೋಧನ ಐಹೊಳೆ ಅವರು ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದೆ. ಸಂಭ್ರಮದ ಮಧ್ಯೆಯೇ 24 ಶಾಸಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಂಪರ್ ಗಿಫ್ಟ್ ನೀಡಿದ್ದಾರೆ. 24 …
Read More »ಅಥಣಿ ತಾಲ್ಲೂಕಿನ ವ್ಯಕ್ತಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಮತ್ತು ನೆಗೆಟಿವ್ ಎರಡು ರಿಪೋರ್ಟ್
ಬೆಳಗಾವಿ: ಜಿಲ್ಲೆ ಅಥಣಿ ತಾಲ್ಲೂಕಿನ ವ್ಯಕ್ತಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಮತ್ತು ನೆಗೆಟಿವ್ ಎರಡು ರಿಪೋರ್ಟ್ ನೀಡಿ ಅಧಿಕಾರಿಗಳು ನಿನ್ನೆ ಎಡವಟ್ಟು ಮಾಡಿದ್ದಾರೆ. ಜುಲೈ 15ರಂದು ಅಥಣಿಯಲ್ಲಿ ಗಂಟಲು ದ್ರವದ ಮಾದರಿಯನ್ನು ನೀಡಿದ್ರು. ಜುಲೈ 16ರಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿ ಅಲ್ಲಿಯೇ ದಾಖಲಾಗಿದ್ದರು. ಜುಲೈ 18ರಂದು ಬೆಳಗಾವಿ ಬಿಮ್ಸ್ ಕೊರೊನಾ ನೆಗೆಟಿವ್ ರಿಪೋರ್ಟ್ ನೀಡಿದ ಹಿನ್ನೆಲೆ ಅಂದೇ ಡಿಸ್ಚಾರ್ಜ್ ಮಾಡಿತ್ತು. ಕೊರೊನಾ ನೆಗೆಟಿವ್ ವರದಿ ಪಡೆದು ವ್ಯಕ್ತಿ …
Read More »ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ತೀವ್ರ ಕುತೂಹಲ
ಬೆಂಗಳೂರು: ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದ್ದು ರಾಜಕೀಯ ಮೊಗಸಾಲೆಯಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ವರ್ಷ ತುಂಬುತ್ತಿದ್ದಂತೆ ದೆಹಲಿಗೆ ಹಾರಿರುವ ಲಕ್ಷ್ಮಣ ಸವದಿ ಇಂದು ಬಿಜೆಪಿ ವರಿಷ್ಠರ ಜೊತೆ ಸಭೆ ನಡೆಸಲಿದ್ದಾರೆ. ಮೊನ್ನೆಯಷ್ಟೇ ರಾಜ್ಯಪಾಲ ವಜೂಭಾಯ್ ವಾಲಾ ಕರೆಗೆ ಓಗೊಟ್ಟು ಸವದಿ ರಾಜಭವನಕ್ಕೆ ತೆರಳಿದ್ದರು. ಈ ವೇಳೆ ರಾಜ್ಯಪಾಲರು, ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವಂತೆ ಸವದಿಗೆ …
Read More »ಬೆಳಗಾವಿ ಜಿಪಂ ಸಭಾಂಗಣದಲ್ಲಿ ಬಿಎಸ್ ವೈ ಸರಕಾರದ ನೇರ ಪ್ರಸಾರ ಕಣ್ತುಂಬಿಕೊಂಡ ಜನತೆ
ಬೆಳಗಾವಿ ಜಿಪಂ ಸಭಾಂಗಣದಲ್ಲಿ ಬಿಎಸ್ ವೈ ಸರಕಾರದ ನೇರ ಪ್ರಸಾರ ಕಣ್ತುಂಬಿಕೊಂಡ ಜನತೆ ಕೋವಿಡ್-19 ಲಾಕ್ ಡೌನ್ ವೇಳೆ ತಾಯಿಗೆ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರು ಔಷಧಿಗಳನ್ನು ಪೂರೈಕೆ ಮಾಡಿದ್ದಕ್ಕೆ ರಾಮದುರ್ಗದ ಪವಿತ್ರಾ ಹಾಲಬಾವಿ ಸಿಎಂ ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸಿದರು. ಬೆಳಗಾವಿ ಜಿಪಂ ಸಭಾಂಗಣದಲ್ಲಿ ಸೋಮವಾರ ರಾಜ್ಯ ಸರಕಾರದ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ “ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” …
Read More »ಕೋವಿಡ್ 19 ನಿಯಂತ್ರಣಕ್ಕಾಗಿ ಹಗಲಿರುಳುದುಡಿಯುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಯವರ ರಕ್ಷಣೆ ಕೋರಿ ಮನವಿ
ಗೋಕಾಕ : ಬೆಳಗಾವಿ ಬಿಮ್ಸ್ ನಲ್ಲಿ 22/07/2020 ರಂದು ಆಂಬುಲೆನ್ಸ್ ಸುಟ್ಟಿರುವದು ಮತ್ತು ಆಸ್ಪತ್ರೆಗೆ ನುಗ್ಗಿ ಸಿಬ್ಬಂದಿಗಳ ಮೇಲೆ ಹಲ್ಲೆ ನಡದಿದೆ. ಕೋವಿಡ್ 19 ನಿಯಂತ್ರಣಕ್ಕಾಗಿ ಹಗಲಿರುಳು ತಮ್ಮ ಪ್ರಾಣವನ್ನು ಪಣಕ್ಕೆ ಇಟ್ಟು ದುಡಿಯುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಯವರ ರಕ್ಷಣೆ ಭರವಸೆ ನೀಡಬೇಕು. ಇಂತಹ ಘಟನೆ ಗೋಕಾಕದಲ್ಲಿ ನಡೆಯದಂತೆ ರಕ್ಷಣೆ ನೀಡಬೇಕು ಎಂದು ಇಂದು ಗೋಕಾಕ ತಾಲೂಕಿನ ಕ.ರಾ.ಸ.ನೌ.ಸಂಘ ಹಾಗೂ ಆರೋಗ್ಯ ಇಲಾಖೆಯ ಎಲ್ಲ ವಿವಿಧ ವ್ರುಂದ ಸಂಘಗಳ ವತಿಯಿಂದ …
Read More »ನ್ಯಾಯವಾದಿಗಳ ಪಿರ್ಯಾದಿ ತೆಗೆದುಕೊಳ್ಳದ ಪೋಲಿಸ್ ಅಧಿಕಾರಿ….?
ಕೆಲವು ದಿನಗಳ ಹಿಂದೆ ಹಿಂದು ದೇವರು ಬಗ್ಗೆ ಕೋಮು ಗಲಭೆ ಉಂಟು ಮಾಡುವ ಉದ್ದೇಶದಿಂದ ಹೇಳಿಕೆ ನೀಡಿರುವ ಮಾಜಿ ಸಚಿವ ಮುರಗೇಶ ನಿರಾಣಿಯವರ ವಿರುದ್ದ ಪಿರ್ಯಾದಿ ಕೊಡಲು ಹೋದಾಗ ಸ್ಥಳಿಯ ನಗರ ಪಿಎಸ್ಐ ಯವರು ತೆಗೆದುಕೊಳ್ಳುತ್ತಿಲ್ಲವೆಂದು ಗೋಕಾಕ ನಗರದ ನ್ಯಾಯವಾದಿಗಳಾದ ಬಸವರಾಜ ಕಾಪಸಿ ಇವರು ಪತ್ರಿಕಗೊಷ್ಟಿಯಲ್ಲಿ ಪೋಲಿಸ ಇಲಾಖೆಯ ವಿರುದ್ದ ತಮ್ಮ ಅಸಹಾಕತೆ ತೋರಿದ್ದಾರೆ. ಗೋಕಾಕನಲ್ಲಿ ಪಿ,ಎಸ್,ಐ, ಅಮ್ಮಿನಬಾವಿ ಇವರು ಮೂರ್ನಾಲ್ಕು ದಿನಗಳಿಂದ ನ್ಯಾವಾದಿಗಳು ಮುರಗೇಶ ನಿರಾಣಿ …
Read More »ಉಗ್ರರ ಬಹುದೊಡ್ಡ ಸಂಚು ವಿಫಲ- 8 ಕೆಜಿ ತೂಕದ 2 ಐಇಡಿ ನಿಷ್ಕ್ರಿಯ
ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ಉಗ್ರರ ಬಹುದೊಡ್ಡ ಸಂಚನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಶ್ಮೀರ ಪೊಲೀಸರು ಮತ್ತು ಸೇನೆ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ 4 ಗ್ರೆನೆಡ್ ಲಾಂಚರ್, 3 ಚೀನಿ ಗ್ರೆನೆಡ್, ಎಕೆ-47 ಮತ್ತು ಒಂದು ಬಾಂಬ್ ವಶ ಪಡಿಸಿಕೊಂಡಿದ್ದಾರೆ. ಪೂಂಛ್ ಜಿಲ್ಲೆಯ ಲೊರ್ನಾ ಇಲಾಖೆಯಲ್ಲಿ ಉಗ್ರರು ಬಚ್ಚಿಟ್ಟಿದ್ದ 8 ಕೆಜಿ ತೂಕದ ಎರಡು ಐಇಡಿ ಮತ್ತು ಎರಡು ಹ್ಯಾಂಡ್ ಗ್ರೆನೆಡ್ ಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ. …
Read More »ಸರ್ ನೀವು ನನ್ನ ಬದುಕಿಸಿದ್ದೀರಿ’ – ಕಿಚ್ಚನಿಗೆ ಜಯಶ್ರೀ ಧನ್ಯವಾದ
ಬೆಂಗಳೂರು: ಇತ್ತೀಚೆಗೆ ‘ಬಿಗ್ಬಾಸ್ ಸೀಸನ್ 3’ ರಲ್ಲಿ ಸ್ಪರ್ಧಿಯಾಗಿದ್ದ ಜಯಶ್ರೀ ರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದೀಗ ಕಿಚ್ಚ ಸುದೀಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ನಟಿ ಜಯಶ್ರೀ ಫೇಸ್ಬುಕ್ನಲ್ಲಿ ಬರೆದುಕೊಳ್ಳುವ ಮೂಲಕ ಸುದೀಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. “ನಿಮ್ಮ ಕಾಳಜಿಗೆ ಧನ್ಯವಾದಗಳು ಸುದೀಪ್ ಸರ್. ನೀವು ನನ್ನನ್ನು ಬದುಕಿಸಿದ್ದೀರಿ. ಸುದೀಪ್ ಅವರ ತಂಡದ ಸದಸ್ಯರು, ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನು ನಾನು ತುಂಬಾ ಪ್ರೀತಿಸುತ್ತೇನೆ. …
Read More »ಕಳೆದ ಒಂದು ವಾರದಲ್ಲಿ ಮೈಸೂರಲ್ಲಿ 1,300 ಪಾಸಿಟಿವ್ ಕೇಸ್ ಬಂದಿವೆ. ಪ್ರತಿ ದಿನ ಸರಾಸರಿ 150 ಪಾಸಿಟಿವ್
ಮೈಸೂರು: ದಿನ ದಿನಕ್ಕೂ ಕೊರೊನಾ ಪ್ರಕರಣಗಳ ಸಂಖ್ಯೆ ಇಡೀ ಮೈಸೂರೇ ಬೆಚ್ಚುವಂತೆ ಏರುತ್ತಿದೆ. ಕಳೆದ ಒಂದು ವಾರದಲ್ಲಿ ಮೈಸೂರಲ್ಲಿ 1,300 ಪಾಸಿಟಿವ್ ಕೇಸ್ ಬಂದಿವೆ. ಪ್ರತಿ ದಿನ ಸರಾಸರಿ 150 ಪಾಸಿಟಿವ್ ಪ್ರಕರಣ ದಾಖಲಾಗುತ್ತಿವೆ. ಒಂದು ವಾರದಲ್ಲಿ 45 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಭಾನುವಾರದವರೆಗೆ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2,867 ಇಷ್ಟು ವೇಗವಾಗಿ ಸೋಂಕು ಹರಡುತ್ತಿರುವುದು ಇಡೀ ಮೈಸೂರನ್ನು ಆತಂಕಕ್ಕೆ ಒಳಗಾಗಿಸಿದೆ. ಮೈಸೂರಿನ ಪ್ರತಿಷ್ಠಿತ ಜೆ.ಕೆ. ಟೈರ್ಸ್ ಕಂಪನಿಯ …
Read More »ಕಾಫಿನಾಡ ಕಾಡಲ್ಲಿ ಬಂಗಾರದ ಕಾಡೆಮ್ಮೆ ಪತ್ತೆ…………
ಚಿಕ್ಕಮಗಳೂರು: 1980-90 ದಶಕದಲ್ಲಿ ಕಣ್ಮರೆಯಾಗಿದ್ದ ಅಪರೂಪದ ಕಾಟಿ ತಳಿಯ ಕಾಡೆಮ್ಮೆ ಸಂತತಿ ಮತ್ತೆ ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಮುತ್ತೋಡಿ ವಲಯದಲ್ಲಿ ಪತ್ತೆಯಾಗಿದೆ. ಕಾಡೆಮ್ಮೆಗಳು ಬಹುತೇಕ ಕಪ್ಪು ಬಣ್ಣದಿಂದ ಕೂಡಿರುತ್ತವೆ. ಆದರೆ ಕಾಟಿ ತಳಿಯ ಈ ಕಾಡೆಮ್ಮೆ ಬಂಗಾರದ ಬಣ್ಣದಿಂದ ಕಂಗೊಳಿಸುತ್ತಿದೆ. ಈ ಅಪರೂಪದ ಕಾಡೆಮ್ಮೆ ಬಣ್ಣ ಹಾಗೂ ಮೈಕಟ್ಟು ನೋಡುಗರಲ್ಲಿ ಅಚ್ಚರಿ ಮೂಡಿಸಿದರೂ 80-90ರ ದಶಕದಲ್ಲಿ ಈ ತಳಿಯ ಕಾಡೆಮ್ಮೆಗಳು ಕಾಫಿನಾಡ ಅರಣ್ಯದಲ್ಲಿ ಇತ್ತು. ಆಗ ಇಂದರ್ಫಿಸ್ಟ್ …
Read More »