Breaking News

ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಾಯಿ‌ ವಿಧಿವಶರಾಗಿದ್ದಾರೆ.‌

ಹುಬ್ಬಳ್ಳಿ ಮಾಜಿ ಮುಖ್ಯಮಂತ್ರಿ ಹಾಗೂ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಾಯಿ‌ ವಿಧಿವಶರಾಗಿದ್ದಾರೆ.‌ ಬಸವಣ್ಣೆಮ್ಮ ಶಿವಪ್ಪ ಶೆಟ್ಟರ್ (87 ) ಇಂದು‌ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಹಲವಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಅಕ್ಕನಬಳಗದಲ್ಲಿ ಸಕ್ರಿಯರಾಗಿದ್ದರು‌. ಕೇಶ್ವಾಪುರದ ಶಬರಿ ನಗರದಲ್ಲಿ ತಮ್ನ ಇನ್ನೊಬ್ಬ ಪುತ್ರ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ನಿವಾಸದಲ್ಲಿ ಇದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡು ವಿಧಿವಶರಾಗಿದ್ದಾರೆ. ಬಸವಣ್ಣೆಮ್ಮ ಶಿವಪ್ಪ ಶೆಟ್ಟರ್ ನಿಧನಕ್ಕೆ …

Read More »

ಹಿರಿಯ ಸಂಶೋಧಕ, ಸಾಹಿತಿ, ಕನ್ನಡ ತಜ್ಞ ಡಾ.ಎಂ.ಚಿದಾನಂದ ಮೂರ್ತಿ ಇಂದು ಬೆಳಗಿನಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಹಿರಿಯ ಸಂಶೋಧಕ, ಸಾಹಿತಿ, ಕನ್ನಡ ತಜ್ಞ ಡಾ.ಎಂ.ಚಿದಾನಂದ ಮೂರ್ತಿ ಇಂದು ಬೆಳಗಿನಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ನೇರ ಮಾತಿನಿಂದ ಪ್ರಸಿದ್ಧರಾಗಿದ್ದ ಚಿದಾನಂದಮೂರ್ತಿ ಕನ್ನಡ ಭಾಷೆ, ಕನ್ನಡ ನಾಡಿನ ಉಳಿವಿಗಾಗಿ ದೊಡ್ಡ ಕೊಡುಗೆ ನೀಡಿದ್ದರು. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ಸಿಗಲು ದೊಡ್ಡ ಕೊಡುಗೆ ನೀಡಿದ್ದರು. ಇತಿಹಾಸ, ಸಾಹಿತ್ಯ ಕ್ಷೇತ್ರದಲ್ಲಿ ಮೌಲಿಕ ಕೊಡುಗೆ ನೀಡಿದ್ದರು. ಕರ್ನಾಟಕದ ಮೂಲೆ ಮೂಲೆಯ ಇತಿಹಾಸವನ್ನು ಅಧ್ಯಯನ ಮಾಡಿದ್ದರು. ಒಂದರ್ಥದಲ್ಲಿ ನಡೆದಾಡುವ ಜ್ಞಾನಕೋಶದಂತಿದ್ದರು. ಮುಖ್ಯಮಂತ್ರಿ …

Read More »

ಮಣಿಪಾಲದ ಜಿ.ಪಂ.ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ

ಮಣಿಪಾಲ ಉಡುಪಿ ಜಿಲ್ಲೆ ಮಣಿಪಾಲದ ಜಿ.ಪಂ.ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಹಾರ, ನಾಗರಿಕರ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖಾ ಪ್ರಗತಿ ಪರಿಶೀಲನಾ ಸಭೆಯನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ನಡೆಸಿ, ಸಭೆಯನ್ನುದ್ದೇಶಿಸಿ ಮಾತನಾಡಿದರು. ಸ್ವಸಹಾಯ ಸಂಘಗಳಿಗೆ …

Read More »

: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಇಷ್ಟೊಂದು ದಬ್ಬಾಳಿಕೆ ಆಗಿರಲಿಕ್ಕಿಲ್ಲ

ಬೆಂಗಳೂರು, ಜ. 10: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಇಷ್ಟೊಂದು ದಬ್ಬಾಳಿಕೆ ಆಗಿರಲಿಕ್ಕಿಲ್ಲ. ಅದಕ್ಕಿಂತ ಹೆಚ್ಚಿನ ದಬ್ಬಾಳಿಕೆ ಸಿಎಎ ವಿರೋಧಿ ಹೋರಾಟಗಾರರನ್ನು ಹತ್ತಿಕ್ಕಲು ರಾಜ್ಯ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಸಂದರ್ಭದಲ್ಲಿ ವಿವಿಧ ಕಡೆಗಳಲ್ಲಿ ಚಿತ್ರೀಕರಿಸಲಾಗಿದ್ದ 26 ನಿಮಿಷ 6 ಸೆಕೆಂಡುಗಳ ಸ್ಪೋಟಕ ವಿಡಿಯೊವನ್ನು ಅವರು …

Read More »

ಇಂದಿನಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರಿ-ಪೇಯ್ಡ್ ಆಟೋ ಸೇವೆ ಪ್ರಾರಂಭ.

ಇಂದಿನಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರಿ-ಪೇಯ್ಡ್ ಆಟೋ ಸೇವೆ ಪ್ರಾರಂಭ. ಬೆಂಗಳೂರು ಮೂಲದ ಪ್ರಿ-ಪೇಯ್ಡ್ ಆಟೋ ಮತ್ತು ಟ್ಯಾಕ್ಸಿ ಸರ್ವಿಸ್ ಈ ಸೌಲಭ್ಯವನ್ನು ಸ್ಥಾಪಿಸಿದೆ (ಪಿಎಎಟಿಎಸ್), ಪೊಲೀಸ್ ಮಾರ್ಗದರ್ಶನದಲ್ಲಿ ಈ ವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡುವರು. ಈಗ ಆರಂಭದಲ್ಲಿ ಮೊದಲು ಬೆಳಿಗ್ಗೆ 5 ರಿಂದ ರಾತ್ರಿ 10 ರವರೆಗೆ ಸೇವೆ ಲಭ್ಯವಿರುತ್ತದೆ. ಮತ್ತು 1.6 ಕಿ.ಮೀ.ಗೆ 28 ರೂಪಾಯಿ ಚಾರ್ಜ್ ಮಾಡುವರು. ನಗರದೊಳಗಿನ ಎಲ್ಲಾ ಸ್ಥಳಗಳಿಗೆ ಮತ್ತು ಧಾರವಾಡ ಎಸ್‌ಡಿಎಂ ವೈದ್ಯಕೀಯ …

Read More »

ಬನದ ಹುಣ್ಣಿಮೆಗೆ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿದ್ದ ಭಕ್ತರಿಬ್ಬರು ಅಪಘಾತಕ್ಕೆ ಬಲಿಯಾಗಿದ್ದಾರೆ.

ಬೆಳಗಾವಿ.. ಬನದ ಹುಣ್ಣಿಮೆಗೆ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿದ್ದ ಭಕ್ತರಿಬ್ಬರು ಅಪಘಾತಕ್ಕೆ ಬಲಿಯಾಗಿದ್ದಾರೆ. ಯಲ್ಲಮ್ಮ ದೇವಿ ಭಕ್ತಾಧಿಗಳ ಮೇಲೆ ರಾಜ್ಯ ಸಾರಿಗೆ ಬಸ್ ಹರಿದು ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಬಸ್ಸಿನ ಬ್ರೇಕ್ ಫೇಲ್ ಆಗಿದ್ದರಿಂದ ನಡೆದುಕೊಂಡು ಹೋಗುತ್ತಿದ್ದ ಇವರ ಮೇಲೆ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡ ಜೋಗುಳಭಾವಿ ಬಳಿ ಶುಕ್ರವಾರ ಈ ಘಟನೆ ನಡೆದಿದೆ. ಬೆಳಗಾವಿ ಶಹಾಪುರ ನಿವಾಸಿ ನಿಕಿತಾ ರಮೇಶ್ ಹದಗಲ್(25), ಚಿಂಚಕಂಡಿ ನಿವಾಸಿ ಬಸಪ್ಪ …

Read More »

ಗಡಿವಿವಾದ: ಮುಖ್ಯಮಂತ್ರಿಗಳು ಸುವರ್ಣ ಸೌಧದಲ್ಲೇ ಉನ್ನತ ಮಟ್ಟದ ಸಭೆ ಕರೆಯಲಿ:ಗಡಿ ಸಂರಕ್ಷಣಾ ಆಯೋಗ,ಪ್ರಾಧಿಕಾರ ಬೆಳಗಾವಿಗೆ ಬರಲಿ:ಗಡಿ ಭಾಗದವರೇ ಅಧ್ಯಕ್ಷ ಸ್ಥಾನಗಳಿಗೆ ನಾಮಕರಣ ಆಗಲಿ

ಮಹಾದಾಯಿ:ಕೇಂದ್ರದ ಮೇಲೆ ಒತ್ತಡ ತರಲು ಕೇಂದ್ರದ ಮಂತ್ರಿಗಳು ರಾಜೀನಾಮೆಗೂ ಸಿದ್ಧರಾಗಿ:ಪ್ರಧಾನಿ ಮಧ್ಯಸ್ತಿಕೆಯಲ್ಲಿ ನ್ಯಾಯಾಲಯದ ಹೊರಗೇ ಇತ್ಯರ್ಥವಾಗಲಿ: ಗಡಿವಿವಾದ: ಮುಖ್ಯಮಂತ್ರಿಗಳು ಸುವರ್ಣ ಸೌಧದಲ್ಲೇ ಉನ್ನತ ಮಟ್ಟದ ಸಭೆ ಕರೆಯಲಿ:ಗಡಿ ಸಂರಕ್ಷಣಾ ಆಯೋಗ,ಪ್ರಾಧಿಕಾರ ಬೆಳಗಾವಿಗೆ ಬರಲಿ:ಗಡಿ ಭಾಗದವರೇ ಅಧ್ಯಕ್ಷ ಸ್ಥಾನಗಳಿಗೆ ನಾಮಕರಣ ಆಗಲಿ ಗಡಿವಿವಾದ ಮತ್ತು ಮಹಾದಾಯಿ ವಿವಾದ ಸಂಬಂಧ ಇಂದು ಶುಕ್ರವಾರ ಜನೇವರಿ 10 ರಂದು ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದಲ್ಲಿ ಮಠಾಧೀಶರ ಸಾನಿಧ್ಯದಲ್ಲಿ ನಡೆದ ” ಚಿಂತನ ಸಭೆ” ಯು …

Read More »

ಗಡಿ ಸಮಸ್ಯೆ ‌ಹಾಗೂ ಮಹದಾಯಿ ನೀರು ಹಂಚಿಕೆಯ ವಿಷಯ ಪ್ರಧಾನಿ ನರೇಂದ್ರ ‌ಮೋದಿ‌ ಅವರಿಗೆ ತಿಳಿದಿದೆ. ಆದರೆ ಅವರು ಬುದ್ದಿವಂತರಾಗಿದ್ದಾರೆ

ಬೆಳಗಾವಿ: ಗಡಿ ಸಮಸ್ಯೆ ‌ಹಾಗೂ ಮಹದಾಯಿ ನೀರು ಹಂಚಿಕೆಯ ವಿಷಯ ಪ್ರಧಾನಿ ನರೇಂದ್ರ ‌ಮೋದಿ‌ ಅವರಿಗೆ ತಿಳಿದಿದೆ ಆದರೆ ಅವರು ಬುದ್ದಿವಂತರಾಗಿದ್ದಾರೆ ಎಂದು ಗದುಗಿನ ತೋಂಟದಾರ್ಯ ಶ್ರೀ ಡಾ. ಸಿದ್ದರಾಮ ಸ್ವಾಮೀಜಿ‌ ಹೇಳಿದರು. ಜ.೧೦ ರಂದು ಶಿವಬಸವ ನಗರದ ರುದ್ರಾಕ್ಷಿಮಠದ ಪ್ರಭುದೇವ ಸಭಾಂಗಣದಲ್ಲಿ ಮಹದಾಯಿ -ಕಳಸಾ ಬಂಡೂರಿಯೋಜನೆ ಅನುಷ್ಠಾನ ವಿಳಂಬ ಹಾಗೂ ಕರ್ನಾಟಕ ಮಹಾರಾಷ್ಟ್ರ ಗಡಿವಿವಾದದ ಕುರಿತ ವಿವಿಧ ಮಠಾಧೀಶರ ನೇತೃತ್ವದಲ್ಲಿ ಚಿಂತನಾ ಸಭೆಯನ್ನು‌ ಉದ್ದೇಶಿಸಿ ಮಾತನಾಡಿದರು. ಕಳೆದ‌ ಮೂರ …

Read More »

ಫೇಕ್ ಪ್ರಮಾಣ ಪತ್ರ ಪಡೆದುಕೊಂಡವರ ಮೇಲೆ ಕ್ರಮಿನಲ್ ಪ್ರಕರಣ ದಾಖಲಿಸದಿದ್ದರೆ ಉಗ್ರ ಹೋರಾಟ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಎರಡ್ಮೂರು ತಿಂಗಳ ಹಿಂದೆ ಮೂಡಲಗಿ‌ ಮತ್ತು ಗೋಕಾಕ್ ವ್ಯಾಪ್ತಿಯಲ್ಲಿ ಗ್ರೇಡ್ -2 ತಹಸಿಲ್ದಾರ್, ಕಂದಾಯ ನೀರಿಕ್ಷಕರು ಮತ್ತು ಗ್ರಾಮಲೆಕ್ಕಾಧಿಕಾರಿಗಳು ಸೇರಿ ಸುಳ್ಳು ಜಾತಿ ಪ್ರಮಾಣಪತ್ರ ವಿತರಿಸುವ ಕಾಯಕ ಮಾಡಿಕೊಂಡು ಸಾವಿರಾರು ರೂಪಾಯಿ ಹಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶಿಸಿದರು. ಇದರ ಬಗ್ಗೆ ಹಲವಾರು ಬಾರಿ ಗೋಕಾಕ್ ತಹಸಿಲ್ದಾರ್ ಅವರಿಗೆ ಮೌಖಿಕವಾಗಿ ಹಾಗೂ ಲಿಖಿತ ರೂಪದಲ್ಲಿಉ ಮನವಿ ಮಾಡಿದ್ದೇವೆ. ಆದರೂ ಸಹ ನಿರ್ಲಕ್ಷ ತೋರಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇಂದು …

Read More »

.90 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಹದಗೆಟ್ಟು ಸಾರ್ವಜನಿಕ ಸಂಚಾರಕ್ಕೆ ಅನಾನುಕೂಲವಾಗಿರುವ ಯಾದವಾಡ-ಕುಲಗೋಡ ರಸ್ತೆ ಸುಧಾರಣೆಗೆ ಆದ್ಯತೆ ನೀಡಿದ್ದು, ಈಗಾಗಲೇ 2.90 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಯಾದವಾಡ ಗ್ರಾಮದಲ್ಲಿ ಶುಕ್ರವಾರದಂದು ಲೋಕೋಪಯೋಗಿ ಇಲಾಖೆಯ ಸಂಕೇಶ್ವರ-ಸಂಗಮ ರಾಜ್ಯ ಹೆದ್ದಾರಿ-44 ರ 2.90 ಕೋಟಿ ರೂ. ವೆಚ್ಚದ ಯಾದವಾಡ-ಕುಲಗೋಡ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ವಾರದೊಳಗೆ ರಾಜ್ಯ ಹೆದ್ದಾರಿ …

Read More »