Breaking News

ಕೊರೊನಾ ಸೋಂಕಿಗೆ ಸವದತ್ತಿಯ ನಿವೃತ್ತ ಪಿಎಸ್ ಐ ಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ.

ಬೆಳಗಾವಿ: ಕೊರೊನಾ ಸೋಂಕಿಗೆ ಸವದತ್ತಿಯ ನಿವೃತ್ತ ಪಿಎಸ್ ಐ ಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ವಿವಿಧೆಡೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಇವರು, ಕಳೆದ ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ದೃಢ ಪಟ್ಟಿರುವ ಹಿನ್ನೆಲೆ ಸವದತ್ತಿ ಆಸ್ಪತ್ರೆಯಿಂದ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಇಂದು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. 65 ವರ್ಷದ ನಿವೃತ್ತ ಪಿಎಸ್ ಐ ಮಗಳ ಸವದತ್ತಿಯಲ್ಲಿ‌ ನೆಲೆಸಿದ್ದರು. ಮಗಳ ಆಕ್ರಂದನ ಮುಗಿಲು …

Read More »

ಬುಧವಾರದಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಇರಲ್ಲ………..

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಲಾಕ್‌ಡೌನ್‌ ವಿಸ್ತರಿಸದೇ ಇರಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಬೆಂಗಳೂರಿನ ಕೊರೊನಾ ನಿಯಂತ್ರಣ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟವಾಗಿ ಈ ನಿರ್ಧಾರವನ್ನು ತಿಳಿಸಿದ್ದಾರೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಮೊನ್ನೆಯೂ ಬೇಡ ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಪದೇ ಪದೇ ಆ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ಹೇಳಿದ್ದಾರೆ. ವಲಯಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನಹರಿಸಿ. ಟ್ರೇಸಿಂಗ್, ಟೆಸ್ಟಿಂಗ್ ಬಗ್ಗೆ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸಚಿವರಿಗೆ ಸಿಎಂ …

Read More »

ಮಗು ಕೊಂದ ಆಸ್ಪತ್ರೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಿ:ಸಿದ್ದರಾಮಯ್ಯ

ಬೆಂಗಳೂರು: ಆಸ್ಪತ್ರೆ ಮುಂದೆ ಆಟೋದಲ್ಲಿಯೇ ಹೆರಿಗೆಯಾಗಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗಡುಕ ಆಸ್ಪತ್ರೆಗಳ ಮೇಲೆ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ, ಹೆರಿಗೆಗಾಗಿ ಬೆಂಗಳೂರಿನ ಆಸ್ಪತ್ರೆಗಳೆಲ್ಲ ಸುತ್ತಾಡಿದ ಗರ್ಭಿಣಿಯೊಬ್ಬರು ಎಲ್ಲಿಯೂ ಸೇರಿಸಿಕೊಳ್ಳದೆ ಇದ್ದಾಗ ಕೊನೆಗೆ ಅಟೊರಿಕ್ಷಾದಲ್ಲಿಯೇ ಹಡೆದ ಪರಿಣಾಮ ಹಸುಕೂಸನ್ನು ಕಳೆದುಕೊಳ್ಳಬೇಕಾಯಿತು. ಹೀಗಾಗಿ ಮುಖ್ಯಮಂತ್ರಿಗಳೇ ಮೊದಲು ಈ ನತದೃಷ್ಟ ತಾಯಿಯ ಮಗುವಿನ …

Read More »

ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಸರ್ಕಾರ ಇದಕ್ಕೆ ಉತ್ತರ ಕೊಡಬೇಕು:ಪ್ರಮೋದ ಮುತಾಲಿಕ್

ಧಾರವಾಡ: ಕೊರೊನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸರಿಯಾಗಿ ಕೆಲಸವಾಗುತ್ತಿಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಸರ್ಕಾರ ಇದಕ್ಕೆ ಉತ್ತರ ಕೊಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರ ನೋಟದಲ್ಲಿ ಕೊರೊನಾ ಪ್ರಕ್ರಿಯೆಯಲ್ಲಿ ಗೊಂದಲ ಕಾಣುತ್ತಿದೆ. ರಾಜ್ಯ ಸರ್ಕಾರ ಡಾ.ಕಜೆಯವರ 70 ಲಕ್ಷ ಆಯುರ್ವೇದಿಕ್ ಮಾತ್ರೆ ಖರೀದಿಸಿದೆ ಅದನ್ನು ಎಲ್ಲಿಯೂ ವಿತರಿಸುತ್ತಿಲ್ಲ. ಇದರಿಂದ ಸರ್ಕಾರದ ಮೇಲೆ ಸಂಶಯ ಬರುತ್ತದೆ. ವಿರೋಧ ಪಕ್ಷದವರ …

Read More »

ಶಿವರಾಜ ತಂಗಡಗಿಯಂಥ ಪ್ರಾಮಾಣಿಕ, ಸತ್ಯಹರಿಶ್ಚಂದ್ರರಂತಿರುವ ವ್ಯಕ್ತಿಯನ್ನು ನಾನು ಇದುವರೆಗೂ ನೋಡೇ ಇಲ್ಲ.:

ಕೊಪ್ಪಳ: ಮಾಜಿ ಸಚಿವ, ಕಾಂಗ್ರೆಸ್‌ನ ಕೊಪ್ಪಳ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿಯಂಥ ಪ್ರಾಮಾಣಿಕ, ಸತ್ಯಹರಿಶ್ಚಂದ್ರರಂತಿರುವ ವ್ಯಕ್ತಿಯನ್ನು ನಾನು ಇದುವರೆಗೂ ನೋಡೇ ಇಲ್ಲ. ಅದಕ್ಕೆ ಜನ ಅವರನ್ನ ಎಲ್ಲಿಡಬೇಕೋ ಅಲ್ಲೇ ಇಟ್ಟಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ‌.ಪಾಟೀಲ ಹೇಳಿದರು. ಕೊಪ್ಪಳದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಮಾಲೆ‌ ಕಣ್ಣಿನವರಿಗೆ ಕಾಣೋದೆಲ್ಲ ಹಳದಿನೇ. ಅವರು ಈ ಹಿಂದೆ ಮಾಡಿದ್ದನ್ನ ಪದೇ ಪದೇ ನಮಗೆ ಅನ್ವಯಿಸಿ ಹೇಳುತ್ತಿದ್ದಾರೆ. ಜನ ಈಗಾಗಲೇ ಅವರಿಗೆ …

Read More »

ರಾಜ್ಯ ಸರ್ಕಾರ ಖರೀದಿ ಮಾಡಿದ ಉಪಕರಣಗಳ ಲೆಕ್ಕ ಕೇಳಿದರೆ ಬಾಯಿ ಮಾತಿನಲ್ಲಿ ಹೇಳುತ್ತಾರೆ: ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ಚಿಕಿತ್ಸೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಖರೀದಿ ಮಾಡಿದ ಉಪಕರಣಗಳ ಲೆಕ್ಕ ಕೇಳಿದರೆ ಬಾಯಿ ಮಾತಿನಲ್ಲಿ ಹೇಳುತ್ತಾರೆ, ಬಾಯಿ ಮಾತಿನಲ್ಲಿ ಹೇಳಿದರೆ ನಡೆಯುವುದಿಲ್ಲ. ದಾಖಲೆ ತೋರಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಬಳಿಕ ಮಾತನಾಡಿದ ಅವರು,  ವೈದ್ಯಕೀಯ ಉಪಕರಣಗಳ ಖರೀದಿಯ ಖರ್ಚು ವೆಚ್ಚದ ಲೆಕ್ಕ ಕೊಡಿ ಎಂದರೆ ಹೀಗೆ ಇವರು ಬಾಯಿ ಮಾತಿನಲ್ಲಿ ಕೊಟ್ಟರೆ ಆಗುತ್ತಾ? ಏನೇನು ಖರೀದಿ …

Read More »

ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ನಗರದ ವಿವಿಧೆಡೆಯ ಸೋಮವಾರ ಐದು ಎಸ್​ಎಸ್​ಎಲ್​ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆಯನ್ನು ವೀಕ್ಷಿಸಿದರು, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ. ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, …

Read More »

ಬಿಜೆಪಿ ಕೊಟ್ಟ ಭರವಸೆಗಳು ಏನು, ಅಧಿಕಾರಕ್ಕೆ ಬಂದ ನಂತರ ಮಾಡಿರುವುದೇನು

ಬೆಂಗಳೂರು, ಜು.20- ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಜು.26ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ. ಅಧಿಕಾರಕ್ಕೆ ಬರುವ ಮುನ್ನ ಬಿಜೆಪಿ ಕೊಟ್ಟ ಭರವಸೆಗಳು ಏನು, ಅಧಿಕಾರಕ್ಕೆ ಬಂದ ನಂತರ ಮಾಡಿರುವುದೇನು ಎನ್ನುವ ಕುರಿತು ಒಂದು ವರದಿ. ಬಿಜೆಪಿ ಸರ್ಕಾರ ರಚನೆಯಾಗಿ ವರ್ಷ ಕಳೆಯುತ್ತಿದೆ. ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾಗಿ ವರ್ಷ ಕಳೆಯುತ್ತಿದೆ. ಕಾಲಮಿತಿಯೊಳಗೊಂಡಂತೆ ನೀಡಿದ್ದ ಭರವಸೆ ಈಡೇರಿಸಿದ್ದರೂ ಬಹುತೇಕ ಹಾಗೂ ಪ್ರಮುಖ …

Read More »

ರಾಮಮಂದಿರ ನಿರ್ಮಾಣವಾದರೆ ನಾವು ಕೋವಿಡ್ 19 ನಿಂದ ಮುಕ್ತರಾಗುತ್ತೇವೆ:ಶರದ್ ಪವಾರ್ ವ್ಯಂಗ್

ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೆ ನಾವು ಕೋವಿಡ್ 19 ನಿಂದ ಮುಕ್ತರಾಗುತ್ತೇವೆ ಎಂದು ಕೆಲವರು ಅಂದುಕೊಂಡಿದ್ದಾರೆ ಅಂತ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ವ್ಯಂಗ್ಯವಾಡಿದ್ದಾರೆ.ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ಮಾಡಲಿದ್ದಾರೆ. ಈ ಸಂಬಂಧ ಮಾಧ್ಯಮಗಳು ಶರದ್ ಪವಾರ್ ಅವರ ಅಭಿಪ್ರಾಯ ಕೇಳಿದಾಗ, ಕೊರೊನಾ ವೈರಸ್ ಅನ್ನು ನಿರ್ಮೂಲನೆ ಮಾಡುವುದು ಮಹಾರಾಷ್ಟ್ರ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ಈ ಮಧ್ಯೆ ಕೆಲವರು ಅಯೋಧ್ಯೆಯಲ್ಲಿ …

Read More »

ಲಾಕ್‍ಡೌನ್ ನಿಯಮ ಉಲ್ಲಂಘನೆ- ಬೇಕಾಬಿಟ್ಟಿ ತಿರುಗಾಡುತ್ತಿದ್ದವರಿಗೆ ಲಾಠಿ ರುಚಿ, ದಂಡ

ಯಾದಗಿರಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆ ಜಿಲ್ಲಾದ್ಯಂತ ಕಠಿಣ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಕಳೆದ 15ರಂದು ಲಾಕ್‍ಡೌನ್ ಆರಂಭವಾಗಿದ್ದು, ಆಗಲೇ 5 ದಿನ ಕಳೆದಿದೆ. ಆದರೂ ಜನತೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು, ಅಂತಹವರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ. ಲಾಕ್‍ಡೌನ್ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಪೊಲೀಸರು ಹರಸಾಹಸ ಪಡುವಂತಾಗಿದೆ. ಫುಲ್ ಅಲರ್ಟ್ ಆಗಿದ್ದಾರೆ. ಮಾಸ್ಕ್ ಇಲ್ಲದೆ ಬೇಕಾಬಿಟ್ಟಿಯಾಗಿ ನಗರದಲ್ಲಿ ತಿರುಗಾಟ ನಡೆಸಿದವರಿಗೆ ದಂಡ ಜೊತೆಗೆ …

Read More »