ಮಡಿಕೇರಿ: ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ವಿಷಯ ಮುನ್ನೆಲೆಗೆ ಬಂದಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಮಡಿಕೇರಿಯಲ್ಲಿ ಮದ್ಯ ಪ್ರಿಯರು ಇಷ್ಟದ ಬ್ರಾಂಡ್ಗಳನ್ನು ಖರೀದಿಸುವುದರಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಒಂದು ವೇಳೆ ಇಡೀ ರಾಜ್ಯ ಅಥವಾ ಆಯ್ದ ಜಿಲ್ಲೆಗಳಲ್ಲಿ ಲಾಕ್ಡೌನ್ ಘೋಷಿಸಿದರೆ ಎಂಬ ಮುಂದಾಲೋಚನೆಯಿಂದ ಮದ್ಯ ಪ್ರಿಯರು ತಮ್ಮಿಷ್ಟದ ಮದ್ಯದ ಬ್ರ್ಯಾಂಡ್ಗಳನ್ನು ಖರೀದಿಸಲು ಮುಗಿಬೀಳುತ್ತಿದ್ದಾರೆ. ಹಲವರು ಒಂದು ವಾರಕ್ಕೆ ಸಾಕಾಗುವಷ್ಟು ಮದ್ಯ …
Read More »ಮೌಢ್ಯ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ವೈಚಾರಿಕ ಚಿಂತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: ಮೌಢ್ಯ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ವೈಚಾರಿಕ ಚಿಂತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮತ್ತೊಂದು ಹೆಜ್ಜೆ ಮುಂದಿರಿಸಿ ಹೊಸ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ. ಇಲ್ಲಿನ ಸದಾಶಿವ ನಗರದ ಬುದ್ದ,ಬಸವ, ಅಂಬೇಡ್ಕರ್ ರುದ್ರಭೂಮಿಯಲ್ಲಿ ಸೋಮವಾರ ಸತೀಶ ಜಾರಕಿಹೊಳಿ ಅವರ ನೂತನ ಕಾರಿಗೆ ಪುಷ್ಪಾರ್ಚನೆ ಮಾಡುವ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮಕ್ಕೆ ನಾಡಿನ ಹೆಸರಾಂತ ಸ್ವಾಮೀಜಿಗಳು ಸಾಥ್ ನೀಡಿದರು. ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಪುತ್ರಿ ಪ್ರಿಯಾಂಕಾ …
Read More »ಸ್ಮಶಾನದಲ್ಲಿ ನೂತನ ಕಾರಿಗೆ ಚಾಲನೆ ನೀಡಿ ಐತಿಹಾಸ ಹೆಜ್ಜೆ
ಬೆಳಗಾವಿ: ಸ್ಮಶಾನವೂ ಕೂಡ ಒಳ್ಳೆಯ ಜಾಗ ಎಂದು ಜನರಿಗೆ ಸಂದೇಶ ನೀಡುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮವನ್ನು ರುದ್ರಭೂಮಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಸದಾಶಿವನಗರ ಬುದ್ದ, ಬಸವ, ಅಂಬೇಡ್ಕರ್ ರುದ್ರಭೂಮಿಯಲ್ಲಿ ರಾಜ್ಯದ ಹಲವು ಮಠಾಧೀಶರ ನೇತೃತ್ವದಲ್ಲಿ ಸೋಮವಾರ ನಡೆದ ನೂತನ ಕಾರು ಚಾಲನಾ ಸಮಾರಂಭದ ಬಳಿಕ ಮಾತನಾಡಿದರು. ದೇವಸ್ಥಾನಕ್ಕೆ ಮತ್ತು ಸ್ಮಶಾನದ ಜಾಗಕ್ಕೆ ಯಾವುದೇ ರೀತಿಯ ವ್ಯತ್ಯಾಸವಿಲ್ಲ. ಎಲ್ಲವೂ …
Read More »ಧಾರವಾಡ ಜಿಲ್ಲೆಯನ್ನು 10 ದಿನಗಳ ಕಾಲ ಲಾಕ್ಡೌನ್: ಜಗದೀಶ್ ಶೆಟ್ಟರ್
ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯನ್ನು 10 ದಿನಗಳ ಕಾಲ ಲಾಕ್ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದರು. ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಬಗ್ಗೆ ಮಾತನಾಡಿದ ಸಚಿವರು, ಜುಲೈ 15ರ ಬೆಳಗ್ಗೆ 10 ಗಂಟೆಯಿಂದ ಜುಲೈ 24ರ ರಾತ್ರಿ 8ವರೆಗೆ ಜಿಲ್ಲೆಯಲ್ಲಿ ಲಾಕ್ಡೌನ್ ಘೋಷಣೆ ಮಾಡುವುದಾಗಿ ತಿಳಿಸಿದರು. 11 ಜಿಲ್ಲೆಗಳ ಬಗ್ಗೆ ಚರ್ಚೆ …
Read More »ಲಾಕ್ಡೌನ್ ಜೊತೆಗೆ ಬೆಂಗಳೂರಿನಲ್ಲಿ ಸೀಲ್ಡೌನ್ಗೂ ಸಿದ್ಧರಾಗಿ- ಯಾವ್ಯಾವ ಏರಿಯಾ ಸೀಲ್?
ಬೆಂಗಳೂರು: ಸಿಲಿಕಾನ್ ಸಿಟಿ ಜನರು ಒಂದು ವಾರದ ಲಾಕ್ಡೌನ್ ಕಾಲಕ್ಕೆ ಸಜ್ಜಾಗುತ್ತಿದ್ದಾರೆ. ಈ ಮಧ್ಯೆ ಲಾಕ್ಡೌನ್ ಜೊತೆಗೆ ಸೀಲ್ಡೌನ್ಗೆ ಪಾಲಿಕೆ ಪ್ಲ್ಯಾನ್ ಸಿದ್ಧಗೊಳಿಸುತ್ತಿದೆ. ಹೌದು.ಕೊರೊನಾ ಹೆಚ್ಚಿರುವ ವಾರ್ಡ್ಗಳನ್ನು ಲಾಕ್ಡೌನ್ ಜೊತೆಗೆ ಸೀಲ್ಡೌನ್ ಮಾಡಲು ಬಿಬಿಎಂಪಿ ಪ್ಲ್ಯಾನ್ ಮಾಡಿಕೊಂಡಿದೆ. ಕಳೆದ 15 ದಿನಗಳಲ್ಲಿ ಕೊರೊನಾ ಸ್ಫೋಟಗೊಂಡ ವಾರ್ಡ್ಗಳಲ್ಲಿ ಟಫ್ ಸೀಲ್ಡೌನ್ ಜಾರಿಯಾಗುವ ಸಾಧ್ಯತೆಯಿದೆ. ಸೀಲ್ಡೌನ್ ಜಾರಿಯಾದರೆ ತುರ್ತು ಮತ್ತೊಂದು ಕಾರಣ ಹೇಳಿ ಓಡಾಡಲು ಸಾಧ್ಯವಿಲ್ಲ. ಭಾನುವಾರ ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ …
Read More »ಒಂದು ವಾರ ಸಚಿವ ಬಿ.ಸಿ.ಪಾಟೀಲ್ ಕ್ವಾರಂಟೈನ್
ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಕೆಲ ರಾಜಕೀಯ ನಾಯಕರು ಕೂಡ ಕ್ವಾರಂಟೈನ್ ಆಗಿದ್ದಾರೆ. ಇದೀಗ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕೂಡ ಒಂದು ವಾರಗಳ ಕಾಲ ಕ್ವಾರಂಟೈನ್ ಆಗಿದ್ದಾರೆ. ಬಿ.ಸಿ.ಪಾಟೀಲ್ ಅವರ ಸಂಬಂಧಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರು ಬೆಂಗಳೂರಿನ ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿದ್ದರು. ಈ ಹಿನ್ನೆಲೆಯಲ್ಲಿ ಬಿ.ಸಿ.ಪಾಟೀಲ್ ಒಂದು ವಾರ ಕ್ವಾರಂಟೈನ್ ಆಗಿದ್ದಾರೆ. ಬಿ.ಸಿ.ಪಾಟೀಲ್ ಮಾತ್ರವಲ್ಲದೇ ಅವರ ಕುಟುಂಬಸ್ಥರು ಮತ್ತು ಸಿಬ್ಬಂದಿ ವರ್ಗ ಕೂಡ ಕ್ವಾರಂಟೈನ್ ಆಗಿದ್ದಾರೆ. ಈ …
Read More »ಲಾಕ್ಡೌನ್ ವೇಳೆ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮದ್ಯ ಮಾರಾಟ………….
ಯಾದಗಿರಿ: ಜಿಲ್ಲೆಯಲ್ಲಿ ಕೊರೊನಾ ರುದ್ರ ತಾಂಡವಾಡುತ್ತಿದೆ. ಸೋಂಕಿತರ ಸಂಖ್ಯೆ 1,300ರ ಗಡಿದಾಟುತ್ತಿದೆ. ನಿಯಂತ್ರಣಕ್ಕೆ ಮಾಡುವ ನಿಟ್ಟಿನಲ್ಲಿ ಯಾದಗಿರಿ ಜಿಲ್ಲಾಡಳಿತ ಮತ್ತು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಆದರೆ ಇನ್ನೊಂದೆಡೆ ಅಕ್ರಮ ಮದ್ಯ ಮಾರಾಟದ ಮೂಲಕ ಅವರ ಕೆಲಸಕ್ಕೆ ಬೆಲೆಯೇ ಇಲ್ಲದಂತೆ ಕೆಲ ಕಿಡಿಗೇಡಿಗಳು ಮಾಡುತ್ತಿದ್ದಾರೆ. ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಸಂಜೆ 5ರ ನಂತರ ಎಲ್ಲ ರೀತಿಯ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಿದ್ದರೂ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾತ್ರ …
Read More »ಏಳು ದಿನಗಳ ಕಾಲ ಲಾಕ್ ಡೌನ್ ಸಂಪೂರ್ಣ ವಿಭಿನ್ನ ಹಾಗೂ ಕಠಿಣವಾಗಿರುತ್ತೆ:ಬಸವರಾಜ ಬೊಮ್ಮಾಯಿ
ಬೆಂಗಳೂರು: ಲಾಕ್ಡೌನ್ನಿಂದ ಯಾರಿಗೂ ತೊಂದರೆ ಆಗಬಾರದು ಎಂಬ ಕಾರಣಕ್ಕೆ ನಾಳೆ ಮತ್ತು ನಾಡಿದ್ದು ಸಂಜೆಯವರೆಗೂ ಬೆಂಗಳೂರು ಮಂದಿಗೆ ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಲು, ಊರಿಗೆ ಹೋಗೋರಿದ್ರೆ ಹೋಗಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಬೆಂಗಳೂರಿಗೆ ಬರೋರಿಗೆ, ಬೆಂಗಳೂರಿಂದ ಹೋಗೋರಿಗೆ ಯಾವುದೇ ಅಡ್ಡಿ ಮಾಡಲ್ಲ. ಆದರೆ ಲಾಕ್ಡೌನ್ ಶುರುವಾದ ನಂತರ ಓಡಾಟ ಇರಬಾರದು. ಜನ ಮನೆಯಲ್ಲೇ ಇರಬೇಕು ಎಂದು ಸಚಿವ ಅಶೋಕ್ ಸರ್ಕಾರದ ಪರವಾಗಿ ಮನವಿ ಮಾಡಿಕೊಂಡಿದ್ದಾರೆ. ನಾಳೆ ಸಂಜೆ ಹೊತ್ತಿಗೆ ಲಾಕ್ಡೌನ್ ಮಾರ್ಗಸೂಚಿಯನ್ನು …
Read More »ಕೊರೊನಾ ಬಂದ ವ್ಯಕ್ತಿಗಳನ್ನ ಕೀಳಾಗಿ ಕಾಣಬೇಡಿ- ಪುಟ್ಟ ಬಾಲಕಿ ಮನವಿ
ಹಾವೇರಿ: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕಿತರನ್ನ ನೋಡುವ ದೃಷ್ಟಿಕೋನ ಬೇರೆಯಾಗಿದೆ. ಆದರೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಅಕ್ಕಿಆಲೂರಿನ ಪುಟ್ಟ ಬಾಲಕಿಯೊಬ್ಬಳು ಮಹಾಮಾರಿ ಕೊರೊನಾ ಸೋಂಕಿನ ಬಗ್ಗೆ ಮನಮುಟ್ಟುವ ಸಂದೇಶವನ್ನು ನೀಡಿದ್ದಾಳೆ. ಅಕ್ಕಿಆಲೂರು ಗ್ರಾಮದ ಬಾಲಕಿ ವಚನಾ ಚಿಲ್ಲೂರಮಠ ಜೈನ್ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಕೊರೊನಾ ಕುರಿತು ಮಾನವೀಯ ಸಂದೇಶವನ್ನು ಸಾರಿದ್ದಾಳೆ.ಗ್ರಾಮದ ಕೊರೊನಾ ವ್ಯಕ್ತಿಗಳನ್ನು ಸಮಾಜದಲ್ಲಿ ನೋಡುವ ದೃಷ್ಟಿ ಬದಲಾಗಿದೆ. ಕೊರೊನಾ ಬಂದ …
Read More »ಸಂಡೇ ಲಾಕ್ಡೌನ್ ಮುಗಿಯುತ್ತಿದ್ದಂತೆ ಊರುಗಳತ್ತ ಜನ- ಬೆಳ್ಳಂಬೆಳಗ್ಗೆ ಟ್ರಾಫಿಕ್
ಸಂಡೇ ಲಾಕ್ಡೌನ್ ಮುಗಿಯುತ್ತಿದ್ದಂತೆ ಊರುಗಳತ್ತ ಜನ- ಟ್ರಾಫಿಕ್ ಬೆಂಗಳೂರು: ಬೆಂಗಳೂರು ಲಾಕ್ಡೌನ್ಗೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ಮಂಗಳವಾರ ರಾತ್ರಿ 8 ಗಂಟೆಯಿಂದ 7 ದಿನ ಕಾಲ ಲಾಕ್ಡೌನ್ ಜಾರಿಯಾಗಲಿದೆ. ಈ ವೇಳೆ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳ ಸಂಚಾರ ಸಂಪೂರ್ಣ ಸ್ಥಬ್ಧವಾಗಲಿದೆ. ಹೀಗಾಗಿ ಜನರು ಸಂಡೇ ಲಾಕ್ಡೌನ್ ಮುಗಿಯುತ್ತಿದ್ದಂತೆ ತಮ್ಮ ತಮ್ಮ ಗ್ರಾಮಗಳತ್ತ ಹೋಗುತ್ತಿದ್ದಾರೆ. ಸಂಡೇ ಲಾಕ್ಡೌನ್ ಸಮಯ ಮುಗಿದ ತಕ್ಷಣ ಬೈಕ್ ಮತ್ತು …
Read More »