ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಜು.6- ಕೋವಿಡ್-19 ವೈರಸ್ ಅಟ್ಟಹಾಸದಿಂದ ಜಗತ್ತೇ ಹೈರಾಣಾಗಿದ್ದು, 240ಕ್ಕೂ ಹೆಚ್ಚು ದೇಶಗಳಲ್ಲಿ ರೋಗಿಗಳು ಮತ್ತು ಮೃತರÀ ಸಂಖ್ಯೆ ಅತ್ಯಧಿಕ ಪ್ರಮಾಣದಲ್ಲೇ ಮುಂದುವರಿದಿದೆ. ಜಗತ್ತಿನಾದ್ಯಂತ ಒಟ್ಟು ಸಾವಿನ ಸಂಖ್ಯೆ 5.36 ಲಕ್ಷ ಹಾಗೂ ಸೋಂಕಿತರ ಸಂಖ್ಯೆ 1.15 ಕೋಟಿ ದಾಟಿದೆ. ಇದರ ನಡುವೆಯೂ ವಿಶ್ವದಲ್ಲಿ ಸುಮಾರು 65.39 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ಗುಣಮುಖರಾಗಿದ್ದಾರೆ. ಜಗತ್ತಿನಾದ್ಯಂತ ನಿನ್ನೆ ಮಧ್ಯರಾತ್ರಿವರೆಗೆ 5,36,900 ಮಂದಿ ಸಾವಿಗೀಡಾಗಿದ್ದು, 1,15,64,518 ಸೋಂಕು ಪ್ರಕರಣಗಳು ವರದಿಯಾಗಿದೆ.. ಸಕ್ರಿಯ …
Read More »ಕರೋನ ವಾರಿಯರ್ಸ್ಗಳಂತೆ ಕೆಲಸ ಮಾಡಿ : ಬಿಬಿಎಂಪಿ ಸದಸ್ಯರಿಗೆ ಸಚಿವ ಅಶೋಕ್ ಸಲಹೆ
ಬೆಂಗಳೂರು, ಜು.6- ನಿಮ್ಮ ನಿಮ್ಮ ವಾರ್ಡ್ಗಳಿಗೆ 20 ಲಕ್ಷ ರೂ. ನೀಡಿದ್ದೇವೆ. ಅದನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಿ. ಪಕ್ಷಾತೀತವಾಗಿ ನೀವೇ ವಾರಿಯರ್ಸ್ಗಳಂತೆ ಕೆಲಸ ಮಾಡಬೇಕು ಎಂದು ಪಾಲಿಕೆ ಸದಸ್ಯರಿಗೆ ಸಚಿವ ಆರ್.ಅಶೋಕ್ ಸಲಹೆ ನೀಡಿದರು. ಕೊರೊನಾ ಸಂಬಂಧ ಪಾಲಿಕೆ ಸಭೆಯಲ್ಲಿಂದು ಹಮ್ಮಿಕೊಳ್ಳಲಾಗಿದ್ದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ವಾರ್ಡ್ಗೂ ತಾರತಮ್ಯ ಮಾಡುವುದಿಲ್ಲ. ಎಲ್ಲ ಪಕ್ಷವೂ ಒಂದೇ. ನಿಮಗೆ ನೀಡಿರುವ ಹಣವನ್ನು ರೋಗಿಗಳಿಗೆ ಬಳಸಿ ಎಂದರು. ಕೊರೊನಾದಿಂದಾಗಿ ಹೆಚ್ಚಿನ ಸಮಸ್ಯೆಗಳು …
Read More »ದೊಣ್ಣೆಗಳನ್ನು ಹಿಡಿದು ಕಾವಲು ಕಾಯುತ್ತಿದ್ದಾರೆಗ್ರಾಮಸ್ಥರು
ಹಾವೇರಿ,- ಮಹಾಮಾರಿ ಕೊರೊನಾ ರಾಜ್ಯದ ಮೂಲೆ ಮೂಲೆಗೂ ಹಬ್ಬುತ್ತಿದ್ದು, ಸೋಂಕಿನಿಂದ ದೂರವಿರಲು ಹಿರೆಕೆರೂರು ತಾಲ್ಲೂಕಿನ ಚಿನ್ನಮುಳಗುಂದ ಗ್ರಾಮಸ್ಥರು ದೊಣ್ಣೆಗಳನ್ನು ಹಿಡಿದು ಸ್ವಯಂಪ್ರೇರಿತ ನಿರ್ಬಂಧ ಹೇರಿಕೊಂಡಿದ್ದಾರೆ. ನಮ್ಮ ಗ್ರಾಮದಲ್ಲಿ ಯಾವುದೇ ಸೋಂಕಿಲ್ಲ. ಬೇರೆ ಊರಿನವರು ಬಂದು ಸೋಂಕು ಹಬ್ಬಿಸುವುದು ಬೇಡ ಎಂದು ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರು ದೊಣ್ಣೆಗಳನ್ನು ಹಿಡಿದು ಕಾವಲು ಕಾಯುತ್ತಿದ್ದಾರೆ. ಈ ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರುವಂತಿಲ್ಲ, ಯಾರೂ ಹೊರಹೋಗದಂತೆ ನೋಡಿಕೊಳ್ಳುತ್ತಿದ್ದಾರೆ.ಮನೆಗೆ ಒಬ್ಬೊಬ್ಬರು ಇಂತಿಷ್ಟು ಗಂಟೆಗಳ ಲೆಕ್ಕದಲ್ಲಿ ಊರಿನ …
Read More »ಸರ್ಕಾರದ ನೆರವಿಲ್ಲದೆ 10 ಲಕ್ಷ ರೂ. ವೆಚ್ಚದಲ್ಲಿ 250 ಮೀಟರ್ ಉದ್ದದ ಬಂಬೂ ಬ್ರಿಡ್ಜುನಿರ್ಮಾಣ
ಅಸ್ಸಾಂ,ಜುಲೈ.6- ಸೇತುವೆ ನಿರ್ಮಾಣಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನಲೆಯಲ್ಲಿ ಇಲ್ಲಿನ ಗ್ರಾಮಸ್ಥರು ಸರ್ಕಾರದ ನೆರವಿಲ್ಲದೆ 10 ಲಕ್ಷ ರೂ. ವೆಚ್ಚದಲ್ಲಿ 250 ಮೀಟರ್ ಉದ್ದದ ಬಂಬೂ ಬ್ರಿಡ್ಜು ನಿರ್ಮಿಸಿದ್ದಾರೆ. ಬರ್ಪೆಟ್ ಜಿಲ್ಲೆಯ ಕಚುಮರ ಪ್ರದೇಶದ ಸುತ್ತಮುತ್ತಲ ಹತ್ತು ಹಳ್ಳಿಗಳ ಗ್ರಾಮಸ್ಥರು ತಮ್ಮ ಸ್ವಂತ ಹಣದಲ್ಲಿ ಸೇತುವೆ ನಿರ್ಮಿಸಿಕೊಂಡಿದ್ದು, ಬ್ರಹ್ಮಪುತ್ರ ಉಪನದಿಯಿಂದ ಕಚುಮಾರ ಬಜರ್ಗೆ ಸಂಪರ್ಕ ಕಲ್ಪಿಸುವ 250 ಮೀಟರ್ ಉದ್ದದ ಸೇತುವೆಯನ್ನು ಕಟ್ಟಿಕೊಂಡಿದ್ದಾರೆ ಸೇತುವೆ ಇಲ್ಲದೆ ನಮಗೆ …
Read More »ಬಿಜೆಪಿ ಐಟಿ ಸೆಲ್ ಮುಖ್ಯಸ್ಥನಿಗೆ ಪ್ರಿಯಾಂಕ ವಾಸವಿದ್ದ ನಿವಾಸ
ನವದೆಹಲಿ,- ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಸವಿದ್ದ ಬಂಗಲೆಯನ್ನು ಕೇಂದ್ರ ಸರ್ಕಾರವು ಬಿಜೆಪಿ ಐಟಿ ಸೆಲ್ ಮುಖ್ಯಸ್ಥನಿಗೆ ನೀಡಿದೆ. ಪ್ರಿಯಾಂಕ ಗಾಂಧಿ ವಾಸವಿದ್ದ ಬಂಗಲೆ ತನಗೆ ಬೇಕು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅನಿಲ್ ಬಾಲುನಿ ಸರ್ಕಾರಕ್ಕೆ ಮನವಿ ಮಾಡಿದ್ದರು. ಅವರ ಬೇಡಿಕೆಯನ್ನು ಪರಿಗಣಿಸಿರುವ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿರುವುದರಿಂದ ಅನಿಲ್ ಇದೀಗ ಈ ಬಂಗಲೆಯನ್ನು ತಮದಾಗಿಸಿಕೊಂಡಿದ್ದಾರೆ. ಲೋಧಿ ಎಸ್ಟೇಟ್ ನಲ್ಲಿರುವ 35ನೇ ನಂಬರಿನ ಬಂಗಲೆಯನ್ನು ಪ್ರಿಯಾಂಕ …
Read More »ದೆಹಲಿ ಜನತೆ ಹೆದರಬೇಡಿ, ಪ್ಲಾಸ್ಮಾ ಬ್ಯಾಂಕ್ ಆರಂಭ: ಸಿಎಂ ಕೇಜ್ರಿವಾಲ್
ನವದೆಹಲಿ: ಕೊರೊನಾಗೆ ಹೆದರುವ ಅಗತ್ಯವಿಲ್ಲ ಎಂದು ದೆಹಲಿಯ ಜನತೆಗೆ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ದೇಶದ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿಯನ್ನು ದಾಟಿದೆ. ಆದ್ರೆ ಜನರು ಆತಂಕಕ್ಕೊಳಗಾಗೋದು ಬೇಡ. ಈಗಾಗಲೇ 1 ಲಕ್ಷ ಜನರಲ್ಲಿ ಅಂದಾಜು 72 ಸಾವಿರ ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೆಹಲಿಯಲ್ಲಿ ಪ್ಲಾಸ್ಮಾ ಬ್ಯಾಂಕ್ ಸಹ ಆರಂಭಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು …
Read More »81ನೇ ಹುಟ್ಟುಹಬ್ಬದಂದು 15 ಪುಶ್-ಅಪ್ ಮಾಡಿದ ಅಜ್ಜಿ- ವೈರಲ್ ವಿಡಿಯೋ
ನವದೆಹಲಿ: ಬಾಲಿವುಡ್ ನಟ, ಮಾಡೆಲ್ ಮಿಲಿಂದ್ ಸೋಮನ್ ಅವರ ತಾಯಿ ಉಷಾ ಸೋಮನ್ ಅವರು ಇತ್ತೀಚೆಗಷ್ಟೇ ತಮ್ಮ 81ನೇ ಹುಟ್ಟು ಹಬ್ಬವನ್ನು ಕುಟುಂಬದೊಂದಿಗೆ ಆಚರಿಸಿಕೊಂಡಿದ್ದು, ಇದೇ ವೇಳೆ 15 ಪುಶ್ ಅಪ್ ಮಾಡಿ ಅಚ್ಚರಿಗೊಳಿಸಿದ್ದಾರೆ. ಸದ್ಯ ಉಷಾ ಸೋಮನ್ ಅವರ ಪುಶ್ ಅಪ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮಿಲಿಂದ್ ಸೋಮನ್ ಅವರು ತಮ್ಮ ಫಿಟ್ನೆಸ್ ಹಿಂದಿನ ಪ್ರೇರಣೆಯಾದ ವಿಡಿಯೋವನ್ನು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ. ಉಷಾ ಸೋಮನ್ …
Read More »ಎಲ್ಲಿ ಎಷ್ಟು ಮಂದಿಗೆ ಸೋಂಕು?
ಬೆಂಗಳೂರು: ರಾಜ್ಯದಲ್ಲಿ ಇಂದು 1843 ಮಂದಿಗೆ ಸೋಂಕು ಬಂದಿದ್ದು, 30 ಮಂದಿ ಮೃತಪಟ್ಟು 680 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 981 ಮಂದಿಗೆ ಸೋಂಕು ಬಂದಿದೆ. ಒಟ್ಟು ರಾಜ್ಯದ ಸೋಂಕಿತರ ಸಂಖ್ಯೆ 25,317ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 401 ಮಂದಿ ಮೃತಪಟ್ಟಿದ್ದು 10,527 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 14,385 ಸಕ್ರಿಯ ಪ್ರಕರಣಗಳಿದ್ದು, 279 ಮಂದಿ ಐಸಿಯನಲ್ಲಿ ಚಿಕಿತ್ಸೆ ಪಡೆಯುತ್ತಿ ಎಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 981, …
Read More »ಚನ್ನರಾಯನಪಟ್ಟಣ 14 ದಿನ ಲಾಕ್ಡೌನ್- 3 ದಿನ ಮಾತ್ರ ಅಗತ್ಯವಸ್ತು ಖರೀದಿಗೆ ಅವಕಾಶ
ಹಾಸನ: ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಪಥವನ್ನು ವಿಸ್ತರಿಸಿಕೊಳ್ತಿದೆ. ಇದಕ್ಕೆ ಹಾಸನದ ಜನ ಮದ್ದು ಅರೆದಿದ್ದಾರೆ. ಸರ್ಕಾರದ ಆದೇಶ ಇಲ್ಲದಿದ್ದರೂ ಹಾಸನ ಜಿಲ್ಲೆ ಭಾಗಶಃ ಲಾಕ್ಡೌನ್ ಆಗುತ್ತಿದೆ. ಹೌದು. ಜಿಲ್ಲೆಯಲ್ಲಿ ಕೊರೊನಾ ನಾಗಾಲೋಟದಿಂದ ಓಡುತ್ತಿದ್ದು ಕೊರೊನಾ ವಾರಿಯರ್ಸ್ ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೂ 541 ಕೊರೊನಾ ಪ್ರಕರಣ ಪತ್ತೆಯಾಗಿದೆ. ಅದರಲ್ಲಿ 255 ಜನ ಗುಣಮುಖರಾಗಿದ್ರೆ 278 ಕೇಸ್ಗಳು ಆಕ್ಟೀವ್ ಆಗಿದ್ದು 8 ಜನ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲೇ ಅದರಲ್ಲೂ ಚನ್ನರಾಯಪಟ್ಟಣದಲ್ಲಿ …
Read More »ಕೊರೊನಾಗೆ ಮೃತಪಟ್ಟವರ ಗೌರವಯುತ ಸಂಸ್ಕಾರಕ್ಕೆ ಮುಂದಾಗಿರೋ ಸ್ವಯಂ ಸೇವಕರು….”
ಮಡಿಕೇರಿ: ಕೊರೊನಾ ಮಹಾಮಾರಿಗೆ ಮೃತಪಟ್ಟರೆಂದರೆ ಮುಗಿಯಿತು. ಅಂತ ಸಾವನ್ನು ಅತ್ಯಂತ ಕೀಳಾಗಿ ನೋಡಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರದ ಸಂದರ್ಭ ನಡೆದುಕೊಂಡ ರೀತಿ ಅದನ್ನು ಸಾಬೀತು ಪಡಿಸಿವೆ. ಹೀಗಾಗಿ ಎಂತಹದ್ದೇ ಸಾವಿಗೂ ಗೌರವಯುವಾದ ಅಂತ್ಯ ಸಂಸ್ಕಾರವನ್ನು ಮಾಡಬೇಕೆಂಬ ದೃಷ್ಟಿಯಿಂದ ಕೊಡಗಿನ ಸ್ವಯಂ ಸೇವಕರ ತಂಡಗಳು ಸಿದ್ಧವಾಗಿವೆ. ಕೊರೊನಾ ಡೆಡ್ಲಿ ವೈರಸ್ ನಿಂದ ಮೃತಪಟ್ಟ ವ್ಯಕ್ತಿಗಳಿಗೆ ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಮೂರು ಧರ್ಮಗಳ ಸ್ವಯಂ …
Read More »