ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರ ಸಂಪೂರ್ಣ ಲಾಕ್ಡೌನ್ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಗಾಗ ಬೀಳುತ್ತಿರುವ ಮಳೆ ಕೂಡ ಜನರು ಹೊರಗಡೆ ಓಡಾಡದಂತೆ ತಡೆ ಒಡ್ಡುತ್ತಿದೆ. ಸಾರಿಗೆ ಬಸ್, ಆಟೊರಿಕ್ಷಾಗಳು ರಸ್ತೆಗಿಳಿಯಲಿಲ್ಲ. ನಗರ ಹಾಗೂ ಕೇಂದ್ರ ಸಾರಿಗೆ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ. ರಸ್ತೆಗಳಲ್ಲೂ ಜನ ಹಾಗೂ ವಾಹನ ಸಂಚಾರ ವಿರಳವಾಗಿದೆ. ತುರ್ತು ಕೆಲಸಗಳಿಗೆ ಹೋಗುವವರಿಗೆ ಮಾತ್ರ ಪೊಲೀಸರು ಅವಕಾಶ ಕೊಡುತ್ತಿದ್ದಾರೆ. ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ. …
Read More »24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.
ಹೊಸದಿಲ್ಲಿ: ದೇಶದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದ್ದು, ಒಂದೇ ದಿನ ದಾಖಲೆಯ 24,850 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. ಇನ್ನು 6,73,165 ಮಂದಿ ಸೋಂಕಿತರ ಪೈಕಿ 4,09,083 ಮಂದಿ ಗುಣಮುಖರಾಗಿದ್ದು, ಪ್ರಸ್ತುತ …
Read More »ಕೊರೋನಾ ಭಯ: ಪ್ರವಾಸಿಗರ ವಾಹನ ತಡೆದು ವಾಪಸ್ ಕಳುಹಿಸಿದ ಗ್ರಾಮಸ್ಥರು
ಮಂಡ್ಯ(ಜು.05): ಕೋವಿಡ್ ಆಸ್ಪತ್ರೆಗೆ ತೆರಳಲು ಜೆಡಿಎಸ್ ಮುಖಂಡ ರಂಪಾಟ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಸೋಂಕು ದೃಢವಾದ್ರೂ ಮಂಡ್ಯದ ಕೋವಿಡ್ ಆಸ್ಪತ್ರೆಗೆ ಬರಲು ಜೆಡಿಎಸ್ ಮುಖಂಡ ಕಿರಿಕ್ ಮಾಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಸೋಂಕಿತ ಮುಖಂಡ ನಾನು ಆಸ್ಪತ್ರೆಗೆ ಬರಲ್ಲ. ಮನೆಯಲ್ಲೇ ಐಸೋಲೇಷನ್ ಆಗುತ್ತೇನೆಂದು ಪಟ್ಟು ಹಿಡಿದಿದ್ದಾರೆ. ಕೊರೋನಾ ತಡೆಗಾಗಿ 15 ದಿನ ಲಾಕ್ಡೌನ್ಗೆ ಜೆಡಿಎಸ್ ಆಗ್ರಹ ಆರೋಗ್ಯ ಸಚಿವ ಶ್ರೀರಾಮುಲು ಅವರ ಜತೆ …
Read More »ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಕ್ರಿಕೆಟಿಗ ಕುಸಾಲ್ ಮೆಂಡಿಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲಂಬೊ: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಕ್ರಿಕೆಟಿಗ ಕುಸಾಲ್ ಮೆಂಡಿಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಜಾನೆ 5.30ರ ಸುಮಾರಿಗೆ ಪನುಡೊರಾದ ಹೊರೆತುದುವಾ ಪ್ರದೇಶದಲ್ಲಿ ಅಪಘಾತ ನಡೆದಿತ್ತು. ಈ ಘಟನೆಯಲ್ಲಿ ಸೈಕಲ್ ಸವಾರ 64 ವರ್ಷದ ವೃದ್ಧರೊಬ್ಬರು ಅಸುನೀಗಿದ್ದರು. ಘಟನೆಗೆ ಸಂಬಂಧಿಸಿದಂತೆ ಉತ್ತರ ಪೊಲೀಸರು ಇಂದು ಕುಸಾಲ್ ಮೆಂಡಿಸ್ ಅವರನ್ನು ಬಂಧಿಸಿದ್ದಾರೆ. ಕ್ರಿಕೆಟಿಗನ ಬಂಧನ ವಿಷಯವನ್ನು ಪೊಲೀಸ್ ವಕ್ತಾರ ಜಲಿಯ ಸೇನರತ್ನೆ ಖಚಿತಪಡಿಸಿದ್ದಾರೆ. 25 ವರ್ಷ ಪ್ರಾಯದ ಕುಸಾಲ್ ಮೆಂಡಿಸ್ …
Read More »ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ.
ಬೆಂಗಳೂರು: ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ. ಹೌದು.. ದಿನೇ ದಿನೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇದೇ ಕಾರಣಕ್ಕೆ ತೋಟಗಾರಿಕೆ ಇಲಾಖೆ ಲಾಲ್ ಭಾಗ್ ನಲ್ಲಿ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದು ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಲಾಲ್ ಭಾಗ್ ನ ಫಲಪುಷ್ಪ ಪ್ರದರ್ಶನ ವ್ಯಾಪಕ ಖ್ಯಾತಿ ಗಳಿಸಿದ್ದು, …
Read More »ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.
ನವದೆಹಲಿ: ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆ ಮೇ/ಜುಲೈ ತಿಂಗಳಿನಲ್ಲಿ ನಡೆಯಬೇಕಿತ್ತು. ಮೇ ಮತ್ತು ನವೆಂಬರ್ ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಸಂಯೋಜಿಸಿ ಈ ವರ್ಷದ ನವೆಂಬರ್ ನಲ್ಲಿ ನಡೆಸಲಾಗುವುದು. ಚಾರ್ಟರ್ಡ್ ಅಕೌಂಟೆಂಟ್ಸ್ ಪರೀಕ್ಷೆ ರದ್ದು ಮಾಡಿರುವ ಕುರಿತಾಗಿ ಐಸಿಎಐ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಮೊದಲು ಸಿಎ ಪರೀಕ್ಷೆಯನ್ನು ಮೇ …
Read More »ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ….
ಬೆಳಗಾವಿ: ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ. ಶನಿವಾರ ರಾತ್ರಿ 8 ಗಂಟೆಯಿಂದಲೆ ಲಾಕ್ ಡೌನ್ ಜಾರಿಗಿದ್ದರು ಸಹ ಸ್ವಲ್ಪ ಮಟ್ಟಿಗೆ ವಾಹನಗಳು ರಸ್ತೆ ಇಳಿದಿದ್ದವು. ಆದ್ರೆ ಭಾನುವಾರ ಬೆಳಗಿನ ಜಾವದಿಂದ ಬೆಳಗಾವಿ ಸ್ಥಬ್ಧವಾಗಿದೆ. ಪ್ರತಿ ದಿನ ಜನದಟ್ಟನೆ ಯಿಂದ ಕೂಡಿರುವ ಸಂಗೋಳಿ ರಾಮಣ್ಣ ವೃತ್ತ, ಬಸ್ ನಿಲ್ದಾಣ ರಸ್ತೆ, ಚನ್ನಮ್ಮ ವೃತ್ತ, ಖಡೇಬಜಾರ …
Read More »ಮೊದಲ ಸಂಡೇ ಲಾಕ್ಡೌನ್ ಜಾರಿ ರಸ್ತೆಗಳು ಖಾಲಿ ಖಾಲಿ…………..
ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊ ನಾ ಸ್ಫೋಟವಾಗುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಇದೇ ಮೊದಲ ಸಂಡೇ ಲಾಕ್ಡೌನ್ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್, ಮಲ್ಲೇಶ್ವರಂ, ತುಮಕೂರು, ಮೈಸೂರು ರಸ್ತೆ ಸೇರಿದಂತೆ ಬೆಂಗಳೂರಿನ ಬಹುತೇಕ ರಸ್ತೆಗಳು ಖಾಲಿ ಖಾಲಿರಸ್ತೆಗಳು ಖಾಲಿ ಖಾಲಿಯಾಗಿವೆ. ಬಳ್ಳಾರಿ ರೋಡ್ ಮತ್ತು ಮೇಕ್ರಿ ಸರ್ಕಲ್ ಸುತ್ತಮುತ್ತ ರಸ್ತೆಗಳು ಫುಲ್ ಖಾಲಿ ಖಾಲಿಯಾಗಿವೆ. ಪ್ರಮುಖ ಪ್ಲೈಓವರ್ಗೆ ಬ್ಯಾರಿಕೇಡ್ ಹಾಕಿ ಪೊಲೀಸರು ಮುಚ್ಚಿದ್ದಾರೆ. ಹೀಗಾಗಿ ರಸ್ತೆಗಳು ಖಾಲಿ ಖಾಲಿ …
Read More »ಸಂಡೇ ಲಾಕ್ಡೌನ್ ಸಂಚಾರ ಸಂಪೂರ್ಣ ಸ್ತಬ್ಧ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ಆರಂಭ
ಸಂಡೇ ಲಾಕ್ಡೌನ್ ಹಿನ್ನೆಲೆಯಲ್ಲಿ ಹಲವೆಡೆ ಸಂಚಾರ ಸಂಪೂರ್ಣ ಸ್ತಬ್ಧವಾಗಿದೆ. ಈ ಮಧ್ಯೆ ಹಾಸನ ಮತ್ತು ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ಆರಂಭವಾಗಿದೆ. ಹಾಸನ ನಗರ ಸೇರಿದಂತೆ ಹಲವೆಡೆ ಬೆಳಗ್ಗೆಯಿಂದಲೇ ಸೋನೆ ಮಳೆ ಆರಂಭವಾಗಿದೆ. ಈ ಮೂಲಕ ಸಂಡೇ ಲಾಕ್ಡೌನ್ಗೆ ಹಾಸನದಲ್ಲಿ ಮಳೆಯ ಸಪೋರ್ಟ್ ನೀಡಿದಂತಾಗಿದೆ. ಬೆಳ್ಳಂಬೆಳಗ್ಗೆಯೇ ಜಿಟಿಜಿಟಿ ಮಳೆ ಆರಂಭವಾಗಿರುವುದರಿಂದ ಮನೆಯಿಂದ ಜನರು ಹೊರಬರುತ್ತಿಲ್ಲ. ಇನ್ನೂ ಅಗತ್ಯ ವಸ್ತುಕೊಳ್ಳಲು ಮನೆಯಿಂದ ಹೊರಬಂದವರು ಮಳೆಯಿಂದಾಗಿ ಅಂಗಡಿಗಳ ಬಳಿಯೇ ವಾಸ್ತವ್ಯ ಮಾಡುತ್ತಿದ್ದಾರೆ. ಕೆಲವರು …
Read More »ಬೀದರ್ನಲ್ಲಿ ಕೊರೊನಾ ಸಾವಿನ ರಣಕೇಕೆ ಹಾಕಿದೆ. ಒಂದೇ ದಿನ 6 ಜನ ಬಲಿ…….
ಬೀದರ್: ಗಡಿ ಜಿಲ್ಲೆ ಬೀದರ್ನಲ್ಲಿ ಕೊರೊನಾ ಸಾವಿನ ರಣಕೇಕೆ ಹಾಕಿದೆ. ಒಂದೇ ದಿನ 6 ಜನರನ್ನು ಬಲಿ ಪಡೆದಿದ್ದು, ಜಿಲ್ಲೆಯ ಜನರನ್ನು ಭಯಭೀತರನ್ನಾಗಿಸಿದೆ. ಬೀದರ್ ನ ಹಳೆ ನಗರದ 55 ವರ್ಷದ ವ್ಯಕ್ತಿ ಹಾಗೂ 70 ವರ್ಷದ ವೃದ್ಧೆ ಕೊರೊನಾಗೆ ಬಲಿಯಾಗಿದ್ದಾರೆ. ಭಾಲ್ಕಿ ಪಟ್ಟಣದ 50 ಹಾಗೂ 31 ವರ್ಷದ ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಬಸವಕಲ್ಯಾಣ ಪಟ್ಟಣದ 24 ವರ್ಷದ ಯುವತಿ ಹಾಗೂ ಹುಮ್ನಬಾದ್ ಪಟ್ಟಣದ 70 ವರ್ಷದ ವೃದ್ಧೆ ಕೊರೊನಾ …
Read More »