Breaking News

ಕೆಎಸ್ಆರ್‌ಟಿಸಿಯ ಮಿಡಿ ಬಸ್ಸುಗಳು ಈಗ ಅಂಬುಲೆನ್ಸ್………..

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಮಾಣ ಹೆಚ್ಚುತ್ತಿರುವ ಕಾರಣ ಕೆಎಸ್‍ಆರ್‍ಟಿಸಿಯ ಮಿಡಿ ಬಸ್ಸುಗಳನ್ನು ಅಂಬುಲೆನ್ಸ್ ಗಳನ್ನಾಗಿ ಬಳಸಿಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ.ಇದರ ಬಗ್ಗೆ ಮಾಹಿತಿ ನೀಡಿ ಸುತ್ತೋಲೆ ಹೊರಡಿಸಿರುವ ಕೆ.ಎಸ್.ಆರ್.ಟಿ.ಸಿ. ಈ ಅಂಬುಲೆನ್ಸ್ ಗಳಲ್ಲಿ ತುರ್ತುಸ್ಥಳದಿಂದ ರೋಗಿಯನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ವರ್ಗಾಹಿಸಲು ಮತ್ತು ಆಸ್ವತ್ರೆಯನ್ನು ತಲುಪಿದ ನಂತರ ತುರ್ತುಕೋಣಿಗೆ ರೋಗಿಯನ್ನು ತ್ವರಿತವಾಗಿ ಮತ್ತು ಆರಾಮದಾಯಕವಾಗಿ ತೆಗೆದುಕೊಂಡು ಹೋಗಲು ಅನುಕೂಲವಾಗುವಂತೆ 2 ಸ್ಟ್ರೆಚರ್ ಗಳನ್ನು ನಿರ್ಮಾಣ ಮಾಡಲಾಗಿದೆ. ಬ್ಯಾಂಡೇಜ್, ಕ್ರಿಮಿನಾಶಕ, …

Read More »

ನಿರಂತರ ಸುರಿದ ಮಳೆಗೆ ಮನೆಗೋಡೆ ಕುಸಿದು ಪಕ್ಕದಲ್ಲಿ ನಿಲ್ಲಿಸಿದ ಕಾರ್ ಮೇಲೆ ಬಿದ್ದಿದೆ.

ಬೆಳಗಾವಿ: ನಿರಂತರ ಸುರಿದ ಮಳೆಗೆ ಮನೆಗೋಡೆ ಕುಸಿದು ಪಕ್ಕದಲ್ಲಿ ನಿಲ್ಲಿಸಿದ ಕಾರ್ ಮೇಲೆ ಬಿದ್ದಿದ್ದು, ಕಾರು ಜಖಂಗೊಂಡ ಘಟನೆ  ನಗರದಲ್ಲಿ ಬಸವನಗಲ್ಲಿಯಲ್ಲಿ ನಡೆದಿದೆ.  ಮಹಾವೀರ ಕೊಟಾರಿ ಎಂಬುವವರಿಗೆ ಸೇರಿದ ಕಾರು ಜಖಂಗೊಂಡಿದೆ. ಜಿಲ್ಲೆಯಾದ್ಯಂತ ಮಳೆಯಿಂದ  ಪ್ರವಾಹದ ಭೀತಿ ಉಂಟಾಗಿದೆ. ನಗರದ ರಸ್ತೆ ಜಲಾವೃತವಾಗಿದ್ದು, ನೀರುತುಂಬಿದ ರಸ್ತೆಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ. ಹಾಗೂ ಖಾನಾಪೂರದ ಕೆಲ ಬಡಾವಣೆಗಳಿಗೂ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಗರದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, …

Read More »

ಶಾಸಕಿ ಅಂಜಲಿ ನಿಂಬಾಳಕರ ಮಲಪ್ರಭಾ ನದಿ ಸೇತುವೆಗೆ ಭೇಟಿ

ಕಕ್ಕೇರಿ: ಖಾನಾಪುರ ತಾಲ್ಲೂಕಿನಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಂಜಲಿ ನಿಂಬಾಳಕರ ಅವರು ಮಲಪ್ರಭಾ ನದಿ ಸೇತುವೆಗೆ ಭೇಟಿ ನೀಡಿ ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಿದರು. ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳ, ನದಿ ತುಂಬಿ ಹರಿಯುತ್ತಿವೆ. ಜತೆಗೆ ರೈತರ ಭತ್ತದ ಜಮೀನಿಗೂ,  ನದಿ ದಡದ ಜನರ ವಾಸಸ್ಥಳಿಗೂ ನೀರು  ನುಗ್ಗುತ್ತಿವೆ. ಇದರಿಂದ ಶಾಸಕ ಕೆಲವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನದಿಗೆ ಅಡ್ಡಲಾಗಿ ನಿರ್ಮಿತ  ಬಹುಗ್ರಾಮಗಳ ರಸ್ತೆಗಳು ಸಂಪರ್ಕ ಕಡಿದುಕೊಂಡಿದ್ದು,  …

Read More »

ಆಗಸ್ಟ್ 7 ರಿಂದ ಆಗಸ್ಟ್ 10 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ರಮೇಶ ಜಾರಕಿಹೊಳಿ

ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಆಗಸ್ಟ್ 7 ರಿಂದ ಆಗಸ್ಟ್ 10 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.    ಅ. 7ರಂದು ಬೆಳಗ್ಗೆ 11 ಗಂಟೆಗೆ ನಗರದ ಪರಿವೀಕ್ಷಣಾ ಮಂದಿರರದಲ್ಲಿ ಕೋವಿಡ್-19 ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ತುರ್ತು ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಲಿದ್ದಾರೆ. ಅ.8 ರಂದು ಬೆಳಗ್ಗೆ 10.30ಕ್ಕೆ ಚಿಕ್ಕೋಡಿಯಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ನಡೆಸಿದ ಬಳಿಕ …

Read More »

ಬಾಬ್ರಿ ಮಸೀದಿ ಇತ್ತು, ಮುಂದೆಯೂ ಇರಲಿದೆ: ಭೂಮಿ ಪೂಜೆಗೂ ಮುನ್ನ ಓವೈಸಿ ಟ್ವೀಟ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿದ್ದಾರೆ. ಇದಕ್ಕೂ ಮೊದಲು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಟ್ವೀಟ್ ಮಾಡಿದ್ದಾರೆ.ಟ್ವೀಟ್‍ನಲ್ಲಿ ”ಬಾಬ್ರಿ ಮಸೀದಿ ಇತ್ತು. ಇನ್ನು ಮುಂದೆಯೂ ಇರಲಿದೆ ಇನ್ಷಾ ಅಲ್ಲಾಹ್” ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಬಾಬ್ರಿ ಮಸೀದಿ ಹಾಗೂ ಅದರ ಧ್ವಂಸಕ್ಕೆ ಕುರಿತಾದ ಎರಡು ಫೋಟೋಗಳನ್ನು ಕೂಡ ಹಂಚಿಕೊಂಡಿದ್ದಾರೆ. ಈ ಹಿಂದೆ ಟ್ವೀಟ್ ಮಾಡಿದ್ದ ಓವೈಸಿ, ಕರ್ತವ್ಯದಲ್ಲಿದ್ದಾಗ ಪ್ರಧಾನಮಂತ್ರಿಗಳು ಭೂಮಿ ಪೂಜೆಗೆ ಹಾಜರಾದರೆ …

Read More »

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಭೂಮಿ ಪೂಜೆಯ ವೇದಿಕೆಯ ಕಾರ್ಯಕ್ರಮದಲ್ಲಿ ಕರ್ನಾಟಕದ ಕಂಪು ಮೊಳಗಿದೆ.

ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಭೂಮಿ ಪೂಜೆಯ ವೇದಿಕೆಯ ಕಾರ್ಯಕ್ರಮದಲ್ಲಿ ಕರ್ನಾಟಕದ ಕಂಪು ಮೊಳಗಿದೆ. ಮಧ್ಯಾಹ್ನ ಗರ್ಭಗುಡಿ ಇರುವ ಜಾಗದಲ್ಲಿ ಭೂಮಿ ಪೂಜೆ ನಡೆದ ಬಳಿಕ ವೇದಿಕೆಯ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮೂರು ಬಾರಿ ಕರ್ನಾಟಕ ಪ್ರಸ್ತಾಪವಾಯಿತು. ವೇದಿಕೆಯಲ್ಲಿ ಬಟನ್‌ ಒತ್ತುವ ಮೂಲಕ ಮೋದಿ ಶಿಲಾಫಲಕವನ್ನು ಅನಾವರಣಗೊಳಿಸಿದರು. ಇದಾದ ಬಳಿಕ ಪ್ರಧಾನಿಯನ್ನು ಕೋದಂಡರಾಮನ ವಿಗ್ರಹವನ್ನು ನೀಡುವ ಮೂಲಕ ಗೌರವಿಸಲಾಯಿತು. ಈ ವೇಳೆ ನಿರೂಪಕರು ಕರ್ನಾಟಕದಿಂದ ಈ ವಿಗ್ರಹವನ್ನು …

Read More »

ಊದು ಬತ್ತಿ ಕಡ್ಡಿಗಳನ್ನು ಉಪಯೋಗಿಸಿ ಐದು ಇಂಚು ಎತ್ತರದ ಸುಂದರಶ್ರೀರಾಮ ಮಂದಿರ ನಿರ್ಮಿಸಿದ್ದಾರೆ.

ಮಂಗಳೂರು: ಇತಿಹಾಸ ಪ್ರಸಿದ್ಧ ಶ್ರೀರಾಮಮಂದಿರ ನಿರ್ಮಾಣಕ್ಕೆ ದೇಶದಾದ್ಯಂತ ಪೂಜೆ, ಪುನಸ್ಕಾರ, ಪ್ರಾರ್ಥನೆಗಳು ನಡೆಯುತ್ತಿದೆ. ರಾಮಮಂದಿರ ನಿರ್ಮಾಣದ ಸಾರ್ಥಕ ಸಂಭ್ರಮದಲ್ಲಿ ಇಲ್ಲೊಬ್ಬರು ತಮ್ಮ ಕಲ್ಪನೆಯ ರಾಮ ಮಂದಿರ ನಿರ್ಮಾಣ ಮಾಡಿ ವಿಸ್ಮಯ ಸೃಷ್ಟಿಸಿದ್ದಾರೆಗಡಿನಾಡು ಕಾಸರಗೋಡಿನ ಮಂಜೇಶ್ವರದ ಕಡಂಬಾರ್ ಚೆಂಬಪದವು ನಿವಾಸಿ ಮೌನೇಶ್ ಆಚಾರ್ಯ ಉರಿದ ಊದುಬತ್ತಿಯ ಉಳಿದ ತುಂಡು ಕಡ್ಡಿಯಿಂದ ರಾಮ ಮಂದಿರದ ಕಲ್ಪನೆಗೆ ರೂಪ ನೀಡಿದ್ದಾರೆ. ಅಂಗೈಯೊಳಗೆ ಅಡಕವಾಗುವ ಅತೀ ಚಿಕ್ಕ ರಾಮಮಂದಿರ ನೋಡುಗರಿಗೆ ವಿಸ್ಮಯ ಸೃಷ್ಟಿಸುತ್ತಿದೆ. ರಾಮ ಮಂದಿರ …

Read More »

ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಲ್ಲಿ ಶಾಸಕ ಬಿ.ಸತ್ಯನಾರಾಯಣ್ ಅಂತ್ಯಕ್ರಿಯೆ

ತುಮಕೂರು, ಆ.5-ನಿನ್ನೆ ನಿಧನರಾದ ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ್ ಅವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಭುವನಹಳ್ಳಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಿತು. ಪತ್ನಿ ಅಮ್ಮಾಜಮ್ಮ, ಪುತ್ರ ಎಸ್.ಪ್ರಕಾಶ್ ಹಾಗೂ ಐವರು ಹೆಣ್ಣುಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗದವರು ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡು ಅಗಲಿದ ತಂದೆಗೆ ಅಂತಿಮ ವಿದಾಯ ಹೇಳಿದರು. ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ರಾಜ್ಯ ಯುವಘಟಕದ ಅಧ್ಯಕ್ಷ ನಿಖಿಲ್‍ಕುಮಾರ್, ಶಾಸಕರಾದ ಡಿ.ಸಿ.ಗೌರಿಶಂಕರ್, ವೀರಭದ್ರಯ್ಯ, ಜಿಲ್ಲಾ ಜೆಡಿಎಸ್ …

Read More »

ಉತ್ತಮ ಮಳೆ,ಅರ್ಧದಷ್ಟು ಭರ್ತಿಯಾಗಿಲ್ಲ ಜಲಾಶಯಗಳು

ಬೆಂಗಳೂರು, ಆ.5-ಪ್ರಸಕ್ತ ಮುಂಗಾರಿನಲ್ಲಿ ರಾಜ್ಯದ ಪ್ರಮುಖ ಜಲಾಶಯಗಳು ಇನ್ನೂ ಅರ್ಧದಷ್ಟು ಭರ್ತಿಯಾಗಿಲ್ಲ. ಮುಂಗಾರು ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ನೀರು ಜಲಾಶಗಳಿಗೆ ಬಂದಿಲ್ಲ. ಕೃಷ್ಣಾ ಕೊಳ್ಳದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳು ಮಾತ್ರ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಹಂತಕ್ಕೆ ತಲುಪಿವೆ. ಉಳಿದ ಜಲಾಶಯಗಳು ನೀರಿನ ಕೊರತೆಯನ್ನು ಎದುರಿಸುತ್ತಿವೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದೆರಡು ದಿನಗಳಿಂದ ನಿರಂತರವಾಗಿ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದ್ದು, ಈ ವಾರ ಒಳ ಹರಿವು …

Read More »

ಸಿದ್ದರಾಮಯ್ಯ ಅವರ ಸ್ಥಿತಿಯಲೆಟಿನ್ ಬಿಡುಗಡೆಗೊಳಿಸಿದ ಮಣಿಪಾಲ್ ಆಸ್ಪತ್ರೆ

ಬೆಂಗಳೂರು:  ವಿರೋಧ ಪಕ್ಷದ  ನಾಯಕ ಸಿದ್ದರಾಮಯ್ಯ ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದಾರೆ  ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. “ಪ್ರಸ್ತುತ ಅವರಿಗೆ ಜ್ವರವಿಲ್ಲ ಮತ್ತು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸೂಕ್ತವಾದ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ ಮತ್ತು ಅವರನ್ನು ನಮ್ಮ ತಜ್ಞರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಆಸ್ಪತ್ರೆಗೆ ಬಂದ  ನಂತರ ಅವರ ಲಕ್ಷಣಗಳು ಸುಧಾರಿಸಿದೆ ಮತ್ತು ಪ್ರಸ್ತುತ ಅವರು ಆರಾಮವಾಗಿದ್ದಾರೆ” ಎಂದು ಮಣಿಪಾಲ್ ಆಸ್ಪತ್ರೆ ಆರೋಗ್ಯ ಬುಲೆಟಿನ್ ನಲ್ಲಿ ತಿಳಿಸಿದೆ. …

Read More »