Breaking News

ಆರೋಗ್ಯ ಸಿಬ್ಬಂದಿ ಕರೆದರೂ ಸೋಂಕಿತರ ಶವ ಸಂಸ್ಕಾರಕ್ಕೆ ಬಾರದ ಸಂಬಂಧಿಕರು

ಹಾವೇರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಆಗಮಿಸುವಂತೆ ಪಿಪಿಇ ಕಿಟ್ ತಯಾರು ಮಾಡಿಕೊಂಡು ಆರೋಗ್ಯ ಇಲಾಖೆ ಸಿಬ್ಬಂದಿ ಕಾದು ಕುಳಿತರೂ ಯಾರು ಬಂದಿಲ್ಲ. ಹೀಗಾಗಿ ಆರೋಗ್ಯ ಇಲಾಖೆಯ ಸಿಬ್ಬದಿಯೇ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಮಂಗಳವಾರ ಬೆಳಗ್ಗೆ 6-30ಕ್ಕೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ಜಿಲ್ಲೆಯ ಶಿಗ್ಗಾವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿ 75 ವರ್ಷದ ವೃದ್ಧೆ ಮತ್ತು ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ ನಿವಾಸಿ 60 ವರ್ಷದ ವೃದ್ಧೆಯರ ಅಂತ್ಯ ಸಂಸ್ಕಾರವನ್ನು …

Read More »

ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ

ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಈ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಕೊರೊನಾ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳೋಣ. ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂಬುದನ್ನು ಅರಿಯೋಣ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಬೇಸರದಿಂದಲೇ ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಅಂತ್ಯ …

Read More »

ಅಧ್ಯಕ್ಷರಾಗಿ ಶ್ರೀಪತಿ ಗಣೇಶವಾಡಿ ಹಾಗೂ ಉಪಾಧ್ಯಕ್ಷರಾಗಿ ಕೆಂಚಪ್ಪ ಸಕ್ರೆಪ್ಪಗೋಳ ಆಯ್ಕೆ

ಗೋಕಾಕ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರಾಗಿ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಗಣೇಶವಾಡಿ ಗ್ರಾಮದ ಶ್ರೀಪತಿ ಹಾಲಪ್ಪ ಗಣೇಶವಾಡಿ ಹಾಗೂ ನಾಗನೂರಿನ ಕೆಂಚಪ್ಪ ಕೃಷ್ಣಪ್ಪ ಸಕ್ರೆಪ್ಪಗೋಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ತಲಾ ಒಬ್ಬೊಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಎರಡೂ …

Read More »

ಬೆಳಗಾವಿನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕಾರ ಸ್ವೀಕರಿಸಿದರು.

ಬೆಳಗಾವಿ -: ನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಂಗಳವಾರ (ಜೂ.30) ಅಧಿಕಾರ ಸ್ವೀಕರಿಸಿದರು. ಸೇವಾ ನಿವೃತ್ತಿ ಹೊಂದಿದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಅಧಿಕಾರವನ್ನು ಹಸ್ತಾಂತರಿಸಿದರು. ಬೆಳಗಾವಿ ದೊಡ್ಡ ಮತ್ತು ಸೂಕ್ಷ್ಮ ಜಿಲ್ಲೆಯಾಗಿದೆ. ಆದರೆ ನಾನು ಮೂಲತಃ ಬೆಳಗಾವಿ ಜಿಲ್ಲೆಯವನಾಗಿರುವುದರಿಂದ ಕೆಲಸ ಸುಲಭವಾಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಗದಗ ಜಿಲ್ಲೆಯಲ್ಲಿ ಪ್ರವಾಹ ನಿರ್ವಹಿಸಿದ ಅನುಭವವಿದೆ. ಕೊರೊನಾ, ನೆರೆ, ಬರ ಸೇರಿದಂತೆ ಎಲ್ಲ ಪರಿಸ್ಥಿತಿಯನ್ನು ನಿಭಾಯಿಸಿದ ಅನುಭವವಿದೆ. ಅದು ಇಲ್ಲಿ …

Read More »

ಕಾರ್ಯನಿರ್ವಹಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ವರ್ಗಾವಣೆ,ನಿತೇಶ್ ಪಾಟೀಲ್ ಅವರು ಇವತ್ತು ಅಧಿಕಾರ

ಧಾರವಾಡ: ಕೊರೊನಾ ಸಂದರ್ಭದಲ್ಲಿ ಧಾರವಾಡ ಜಿಲ್ಲಾಧಿಕಾರಿಗಳ ವರ್ಗಾವಣೆಯಾಗಿದೆ. ದೀಪಾ ಚೋಳನ್ ಅವರು ಕಳೆದ ಎರಡು ವರ್ಷಗಳಿಂದ ಧಾರವಾಡ ಜಿಲ್ಲಾಧಿಕಾರಿಗಳಾಗಿದ್ದರು. ರಾಜ್ಯ ಸರ್ಕಾರ ದೀಪಾ ಚೋಳನ್ ಅವರನ್ನು ಸರ್ವ ಶಿಕ್ಷಣ ಅಭಿಯಾದ ಯೋಜನಾ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿದೆ. ಧಾರವಾಡ ನೂತನ ಜಿಲ್ಲಾಧಿಕಾರಿಗಳಾಗಿ ನಿತೇಶ್ ಪಾಟೀಲ್ ಅವರು ಇವತ್ತು ಅಧಿಕಾರ ವಹಿಸಿಕೊಂಡರು. ಇತ್ತ ಕೊರೊನಾ ದಿನೇ ದಿನೇ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಸೋಂಕು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನು ನಾವು ತಡೆಯುವ …

Read More »

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸಾವಿನ ಖಾತೆಯನ್ನು ತೆರೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿಯಾಗಿದ್ದ 75 ವರ್ಷದ ವೃದ್ಧೆ (ರೋಗಿ-8295) ಮೃತಪಟ್ಟಿದ್ದಾರೆ. ಮೃತ ವೃದ್ಧೆಗೆ ರೋಗಿ-6832ರ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿತ್ತು. ಜೂನ್ 19ರಂದು ಕೋವಿಡ್ ಆಸ್ಪತ್ರೆಗೆ ವೃದ್ಧೆಯನ್ನು ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಸಾವನ್ನಪ್ಪಿದ್ದಾರೆ. ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ 60 ವರ್ಷದ …

Read More »

ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಸರ್ಕಾರದ ತೀರ್ಮಾನದಿಂದ ಇಡೀ ಪಟ್ಟಣದ ಜನರೇ ಬೀದಿಗೆ ಬರುವ ಸ್ಥಿತಿ

ಚಿಕ್ಕೋಡಿ(ಬೆಳಗಾವಿ): ಒಂದು ಕಡೆ ಆ ಗ್ರಾಮಸ್ಥರಿಗೆ ಸರ್ಕಾರನೇ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಿದೆ ಅಲ್ಲದೇ ಸರ್ಕಾರದ ಯೋಜನೆಯಡಿ ಆಶ್ರಯ ಮನೆಗಳನ್ನು ನಿರ್ಮಿಸಿ ಕೊಟ್ಟಿದೆ. ಆದರೆ ಈಗ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಸರ್ಕಾರದ ತೀರ್ಮಾನದಿಂದ ಇಡೀ ಪಟ್ಟಣದ ಜನರೇ ಬೀದಿಗೆ ಬರುವ ಸ್ಥಿತಿ ಬಂದಿದೆ. ಕಳೆದ 40 ವರ್ಷಗಳಿಂದ ನೆಮ್ಮದಿಯಿಂದ ಇದ್ದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕನವಾಡಿ ಗ್ರಾಮಸ್ಥರ ಜನರ ಪರಿಸ್ಥಿತಿ ಈಗ ಸರ್ಕಾರದ ಒಂದು …

Read More »

ಶಾಸಕ ದುರ್ಯೋಧನ ಐಹೊಳೆಯನ್ನುಶಾಸಕನ ನಡೆಯಿಂದ ಬೇಸತ್ತುತರಾಟೆಗೆ ತೆಗೆದುಕೊಂಡು, ಘೇರಾವ್ ಹಾಕಿದ್ದಾರೆ.

ಚಿಕ್ಕೋಡಿ: ಜನರ ಸಮಸ್ಯೆ ಕೇಳಲು ಬಂದು ಬೆಂಬಲಿಗರ ಮನೆಯಲ್ಲಿ ಕುಳಿತ ಶಾಸಕನ ನಡೆಯಿಂದ ಬೇಸತ್ತು ಜನರು ರಾಯಬಾಗ ಕ್ಷೇತ್ರದ ಬಿಜೆಪಿ ಶಾಸಕ ದುರ್ಯೋಧನ ಐಹೊಳೆಯನ್ನು ತರಾಟೆಗೆ ತೆಗೆದುಕೊಂಡು, ಘೇರಾವ್ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಗೈರಾಣು ಜಮೀನಿನ ಸಮಸ್ಯೆ ಆಲಿಸಲು ಬಂದಿದ್ದ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಕಂಕನವಾಡಿ ಗ್ರಾಮದ ತಮ್ಮ ಬೆಂಬಲಿಗರ ಮನೆಯಲ್ಲೆ ಕುಳಿತು, ಜನರನ್ನು ಅಲ್ಲಿಗೇ ಕರೆಸಿ ಎಂದಿದ್ದಾರೆ. …

Read More »

ಬಳಕೆದಾರರ ಗೌಪ್ಯತೆ, ಭಾರತದ ಸಮಗ್ರತೆಗೆ ದಕ್ಕೆ ಉಂಟುಮಾಡಿಲ್ಲ – ಬ್ಯಾನ್ ಬಳಿಕ ಟಿಕ್‍ಟಾಕ್ ಪ್ರತಿಕ್ರಿಯೆ

ನವದೆಹಲಿ: ಭಾರತದಲ್ಲಿನ ಕಾನೂನುಗಳನ್ನು ಪಾಲಿಸುತ್ತಿದ್ದೇವೆ. ಬಳಕೆದಾರರ ವೈಯಕ್ತಿಕ ಮಾಹಿತಿ ಮತ್ತು ಭಾರತದ ಭದ್ರತೆ, ಸಮಗ್ರತೆಗೆ ದಕ್ಕೆ ಉಂಟು ಮಾಡುವುದಿಲ್ಲ ಎಂದು ಟಿಕ್ ಟಾಕ್ ಸ್ಪಷ್ಟನೆ ನೀಡಿದೆ. ಸೋಮವಾರ ಭಾರತದಲ್ಲಿ ಟಿಕ್‍ಟಾಕ್ ಸೇರಿ 59 ಚೀನಾ ಆ್ಯಪ್‍ಗಳನ್ನು ಬ್ಯಾನ್ ಮಾಡಿದ ಬಳಿಕ ಇಂದು ಟಿಕ್‍ಟಾಕ್ ಮೊದಲ ಪ್ರತಿಕ್ರಿಯೆ ಪ್ರಕಟಿಸಿದೆ. ಕೇಂದ್ರ ಸರ್ಕಾರದ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿ ಮಾಡಿ ಸ್ಪಷ್ಟನೆ ನೀಡಲಿದ್ದೇವೆ ಎಂದು ಹೇಳಿದೆ. ಸರ್ಕಾರ ಅವಕಾಶ ನೀಡಿದರೆ ನಾವು ಸ್ಪಷ್ಟೀಕರಣ ನೀಡಲಿದ್ದೇವೆ …

Read More »

ಕೊರೊನಾ ಮಹಾಮಾರಿಗೆ ವಿಧಾನಸೌಧದ ನೌಕರನೊಬ್ಬ ಕಳೆದ ರಾತ್ರಿ ಬಲಿಯಾಗಿದ್ದಾನೆ

ಬೆಂಗಳೂರು,ಜೂ.30- ಕೊರೊನಾ ಮಹಾಮಾರಿಗೆ ವಿಧಾನಸೌಧದ ನೌಕರನೊಬ್ಬ ಕಳೆದ ರಾತ್ರಿ ಬಲಿಯಾಗಿದ್ದಾನೆ. ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ(ಡಿಪಿಎಆರ್) ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 36 ವರ್ಷ ನೌಕರನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ನೌಕರನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಜೆ ತೆಗೆದುಕೊಳ್ಳಲು ಸೂಚನೆ ಕೊಡಲಾಗಿತ್ತು. ಅದರಂತೆ ಆತ ಮೈಸೂರಿಗೆ ತೆರಳಿ ಕೋವಿಡ್-19 ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಸೋಂಕಿತ ವ್ಯಕ್ತಿ ಸಾವನ್ನಪ್ಪಿರುವುದರಿಂದ ಆತನ …

Read More »