Breaking News

ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್​ ಬಂದಿದೆ. ಈ ಮೂಲಕ ದೆಹಲಿಯಲ್ಲಿ

 ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್​ ಆರ್ಭಟ ಮುಂದುವರಿದದೆ. ಸೋಮವಾರ ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್​ ಬಂದಿದೆ. ಈ ಮೂಲಕ ದೆಹಲಿಯಲ್ಲಿ ಕೋವಿಡ್​​-19 ಸೋಂಕಿತರ ಸಂಖ್ಯೆ 42,829ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಆಪ್​ ಸರ್ಕಾರ ಬಿಡುಗಡೆ ಮಾಡಿದ ಹೆಲ್ತ್​​ ಬುಲೆಟಿನ್​​ನಿಂದ ತಿಳಿದು ಬಂದಿದೆ. ಇನ್ನು, ಮಹಾಮಾರಿ ಕೋವಿಡ್​​-19 ಸೋಂಕು ನಿನ್ನೆಯೂ 73 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಈ ಮೂಲಕ ಕೊರೋನಾ ವೈರಸ್​ನಿಂದ …

Read More »

ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ನಗರಗಳ ಗರಿಷ್ಠ, …

Read More »

ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಉಡುಪಿ: ಕರಾವಳಿ ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಟಣೆ ಹೊರಡಿಸಿದ್ದು, ಇಂದಿನಿಂದ ಜೂನ್ 20ರ ವರೆಗೂ ಬಿರುಸಿನ ಮುಂಗಾರು ಸಾಧ್ಯತೆ ಇದೆ. ಹೀಗಾಗಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ವಾರಾಂತ್ಯದವರೆಗೂ ಧಾರಾಕಾರ ಮಳೆ ಸುರಿಯಲಿದ್ದು, ಜಿಲ್ಲೆಯಲ್ಲಿ ಹಳದಿ ಅಲರ್ಟನ್ನು ಹವಾಮಾನ ಇಲಾಖೆ ಘೋಷಿಸಿದೆ. ಒಂದು ವಾರದ ಅಂತರದಲ್ಲಿ ಸುಮಾರು 500 …

Read More »

2 ದಿನ ರಜೆ ಹಾಕಿ ಆಸ್ಪತ್ರೆ ಹೋದ ಕಾನ್‍ಸ್ಟೇಬಲ್‍ಗೂ ಕೊರೊನಾ ಸೋಂಕು…………

ಹಾವೇರಿ: ಜಿಲ್ಲೆಗೆ ಮತ್ತೆ ಮಹಾಮಾರಿ ಕೊರೊನಾ ವಕ್ಕರಿಸಿದ್ದು, ಜಿಲ್ಲೆಯ ಇಬ್ಬರಲ್ಲಿ ಮತ್ತೆ ಕೊರೊನಾ ಸೋಂಕು ದೃಢಪಟ್ಟಿದೆ. 9 ವರ್ಷದ ಬಾಲಕ ಹಾಗೂ ಪೊಲೀಸ್ ಕಾನ್‍ಸ್ಟೇಬಲ್‍ ನಲ್ಲಿ ಸೋಂಕು ದೃಢಪಟ್ಟಿದೆ. 41 ವರ್ಷದ ಕಾನಸ್ಟೇಬಲ್ ಪಿ-7030ರಲ್ಲಿ ಸೋಂಕು ದೃಢಪಟ್ಟಿದ್ದು, ಹಾವೇರಿ ಜಿಲ್ಲೆ ಬ್ಯಾಡಗಿ ಠಾಣೆಯಲ್ಲಿ ಕಾನ್‍ಸ್ಟೇಬಲ್‍ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮೂಲತಃ ಕದರಮಂಡಲಿ ಗ್ರಾಮದ ನಿವಾಸಿಯಾಗಿದ್ದು, ಎರಡು ದಿನ ರಜೆ ಹಾಕಿ ದಾವಣಗೆರೆ ಜಿಲ್ಲೆ ಮಲೇಬೆನ್ನೂರಿಗೆ ಸಂಬಂಧಿಕರ ಮನೆಗೆ ಹೋಗಿದ್ದರು. ಅಲ್ಲದೇ …

Read More »

ಪ್ರತಿ ಕ್ವಿಂಟಾಲ್‍ಗೆ 10,300 ರೂ. ನಂತೆ ಬೆಂಬಲ ಬೆಲೆಯೊಂದಿಗೆ ಕೊಬ್ಬರಿ ಖರೀದಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚನೆ

ಹಾಸನ: ಪ್ರತಿ ಕ್ವಿಂಟಾಲ್‍ಗೆ 10,300 ರೂ. ನಂತೆ ಬೆಂಬಲ ಬೆಲೆಯೊಂದಿಗೆ ಕೊಬ್ಬರಿ ಖರೀದಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜೂ.11ರ ಸರ್ಕಾರಿ ಆದೇಶದಂತೆ ಕೊಬ್ಬರಿಯನ್ನು ಬೆಂಬಲ ಬೆಲೆಯೊಂದಿಗೆ ಖರೀದಿಸಲು ಖರೀದಿ ಕೇಂದ್ರಗಳನ್ನು ತರಬೇಕಿದೆ. ಕೇಂದ್ರ ಸರ್ಕಾರ ಬೆಂಬಲಬೆಲೆಯೊಂದಿಗೆ ಕೊಬ್ಬರಿ ಖರೀದಿಸಲು ನೆಫೆಡ್ ಸಂಸ್ಥೆಯನ್ನು ಗುರುತಿಸಿದ್ದು, ರಾಜ್ಯ ಸರ್ಕಾರ ಸಹಕಾರ ಮಾರಾಟ ಮಂಡಳಿ ಮೂಲಕ ಖರೀದಿಸಲು ಸೂಚನೆ ನೀಡಿದೆ. ಅದರಂತೆ …

Read More »

ಅಧಿಕಾರಿಗಳ ಎಡವಟ್ಟು- 10 ಹಳ್ಳಿಗಳಿಗೆ ಜೀವನಾಡಿಯಾಗಿದ್ದ ದಡ್ಡಿ ಗ್ರಾಮ ಸೀಲ್‍ಡೌನ್………

ಬೆಳಗಾವಿ: ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಹುಕ್ಕೇರಿ ತಾಲೂಕಿನ ದಡ್ಡಿ ಹತ್ತು ಹಳ್ಳಿ ಜನರ ಜೀವನಾಡಿಯಾಗಿತ್ತು. ಪ್ರತಿಯೊಂದು ವಸ್ತು ಖರೀದಿಗೂ ಜನರು ಈ ಗ್ರಾಮಕ್ಕೆ ಬರಬೇಕಿತ್ತು. ಆದರೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಇದೀಗ ಊರಿಗೆ ಊರೇ ಸ್ತಬ್ಧವಾಗಿದೆ. ಬಿತ್ತನೆ ಕಾರ್ಯ ಮಾಡಬೇಕಿದ್ದ ರೈತರು ಮನೆ ಸೇರುವಂತಾಗಿದೆ. ದಡ್ಡಿ ಗ್ರಾಮದಿಂದ ಕೇವಲ ಮೂರು ಕಿ.ಮೀ ಅಂತರದಲ್ಲಿ ಮಹಾರಾಷ್ಟ್ರ ಗಡಿಯಿದೆ. ಕೊರೊನಾ ಆರಂಭದಲ್ಲಿ ಮಹಾರಾಷ್ಟ್ರದ ಪಕ್ಕದಲ್ಲಿದ್ದರೂ ಈ ಗ್ರಾಮದಲ್ಲಿ ಒಂದೇ ಒಂದು ಪ್ರಕರಣ ಪತ್ತೆಯಾಗಿರಲಿಲ್ಲ. …

Read More »

ತರಕಾರಿ ಮಾರುವ ನೆಪದಲ್ಲಿ ಗೋಮಾಂಸ ಮಾರಾಟ……….

ಮಡಿಕೇರಿ: ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ವಾಹನವೊಂದರಲ್ಲಿ ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸೋಮಶೇಖರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಜೊತೆಗೆ ಬಷೀರ್ ಎಂಬಾತ ಮೈಸೂರು ಜಿಲ್ಲೆಯ ಕೆ.ಆರ್ ನಗರದಿಂದ ಅಕ್ರಮವಾಗಿ ಗೋಮಾಂಸ ತಂದು ಮಾರಾಟ ಮಾಡುತ್ತಿದ್ದನು. ತರಕಾರಿ ಕೊಳ್ಳಲು ಹೋದ ಸಂದರ್ಭ ವ್ಯಕ್ತಿಯೊಬ್ಬರು ಇದನ್ನು ಗಮನಿಸಿ ಗ್ರಾಮದವರಿಗೆ …

Read More »

ಮಹಾನಗರ ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಹುಬ್ಬಳ್ಳಿಯ ಬಸವ ವನದ 80 ವರ್ಷದ ಅಜ್ಜಿ ಮನೆಯಿಂದ ಹೊರ ಬಾರದಂತಾಗಿದೆ.

ಧಾರವಾಡ/ಹುಬ್ಬಳ್ಳಿ: ಮಹಾನಗರ ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಹುಬ್ಬಳ್ಳಿಯ ಬಸವ ವನದ 80 ವರ್ಷದ ಅಜ್ಜಿ ಮನೆಯಿಂದ ಹೊರ ಬಾರದಂತಾಗಿದೆ. 80 ವರ್ಷದ ಪ್ರೇಮಾ ಬಾಯಿ ಅಜ್ಜಿ ಏಕಾಂಗಿಯಾಗಿ ಬದುಕುತ್ತಿದ್ದಾರೆ. ಹುಬ್ಬಳ್ಳಿಯ ಬಸವ ವನದ ಬಳಿ ಇರುವ ಅಜ್ಜಿ ಮನೆ ಸಂಪೂರ್ಣವಾಗಿ ಜಲಾವೃತವಾಗಿದೆ. ಅಜ್ಜಿಯ ಮನೆಯ ಹಿಂಭಾಗದಲ್ಲಿ ಪೊಲೀಸ್ ವಸತಿ ನಿಲಯಗಳಿವೆ. ಇಲ್ಲಿಂದ ಹೊರಹೋಗಬೇಕಿದ್ದ ಚರಂಡಿ ನೀರು ಅಜ್ಜಿಯ ಮನೆಯಂಗಳದಲ್ಲಿ ಬಂದು ನಿಲ್ಲುತ್ತಿದೆ. ಇದರಿಂದಾಗಿ ಅಜ್ಜಿ ಮನೆ ಬಿಟ್ಟು ಹೊರ ಬರಲಾಗದ …

Read More »

ಸರ್ಕಾರಿ ಆದೇಶಕ್ಕೆ ಇಲ್ಲಕಿಮ್ಮತ್ತು…..ಆದೇಶ ಲೆಕ್ಕಿಸದೆ ಶಾಲೆ ತೆರೆದ ಖಾಸಗಿ ಸಂಸ್ಥೆಗಳು……….

ಮಂಡ್ಯ: ಜಿಲ್ಲೆಯಲ್ಲಿ ಸರ್ಕಾರಿ ಆದೇಶಕ್ಕೆ ಕಿಮ್ಮತ್ತು ಇಲ್ಲದಂತಾಗಿದ್ದು, ಬಹುತೇಕ ಖಾಸಗಿ ಶಾಲೆಗಳನ್ನು ತೆರೆಯಲಾಗಿದೆ. ಈ ಮೂಲಕ ಪರೀಕ್ಷೆ ಹೆಸರಿನಲ್ಲಿ ತರಗತಿ ಆರಂಭಿಸಿ ಮಕ್ಕಳ ಜೀವದ ಜೊತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಚೆಲ್ಲಾಟವಾಡುತ್ತಿವೆ. ಜೂ.25ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹಿನ್ನೆಲೆ ತರಗತಿಗಳನ್ನು ಆರಂಭಿಸಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ಮಂಡ್ಯ ಶಾಸಕ ಎಂ.ಶ್ರೀನಿವಾಸ್ ಒಡೆತನದ ವಿವೇಕ ವಿದ್ಯಾಸಂಸ್ಥೆಯನ್ನೂ ತೆರೆಯಲಾಗಿದ್ದು, ಮಕ್ಕಳನ್ನು ಕೂಡಿ ಹಾಕಿಕೊಂಡು ಪಾಠ ಮಾಡಲಾಗುತ್ತಿದೆ. ಅಲ್ಲದೆ ರೋಟರಿ ಎಜುಕೇಶನ್ ಸೊಸೈಟಿ, ಆದರ್ಶ ಪ್ರೌಢಶಾಲೆ …

Read More »

ಜೂನ್ 17ರಿಂದ ರಾಯಚೂರಿನಿಂದ ಮಂತ್ರಾಲಯಕ್ಕೆ ಬಸ್‍ಗಳ ಓಡಾಟ ಆರಂಭ

ರಾಯಚೂರು: ಜಿಲ್ಲೆಗೆ ಇಂದು ಸಹ ಕೊರೊನಾಘಾತವಾಗಿದ್ದು ಜಿಲ್ಲೆಯಲ್ಲಿ ಒಂದೇ ದಿನ 18 ಕೊರೊನಾ ಪಾಸಿಟಿವ್ ಪ್ರಕರಗಳು ದೃಢವಾಗಿವೆ. ಈ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 403ಕ್ಕೆ ಏರಿದೆ. ಇಂದು ಟ್ರಾವೆಲ್ ಹಿಸ್ಟರಿ ಇಲ್ಲದ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಕಂಟೈನ್ಮೆಂಟ್ ಝೋನ್ ನಿಂದ ಒಂದು ಪ್ರಕರಣ ದಾಖಲಾಗಿದೆ. ತೆಲಂಗಾಣದಿಂದ ಬಂದಿರುವ ಇಬ್ಬರು ಹಾಗೂ ತಮಿಳುನಾಡಿನಿಂದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಬಂದಿರುವ 10 ಜನರಲ್ಲಿ ಪಾಸಿಟಿವ್ ದೃಢವಾಗಿದೆ. ಮಹಾರಾಷ್ಟ್ರದಿಂದ ಬಂದಿರುವ 10 …

Read More »