ಕೊಲ್ಲಾಪುರ – ಕೊಲ್ಲಾಪುರ ಜಿಲ್ಲೆಯ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೆಬ ಜೊಲ್ಲೆ ಪ್ರವಾಹದ ಕುರಿತು ಚರ್ಚಿಸಿದರು. ಕೊಲ್ಲಾಪುರ ಜಿಲ್ಲೆಯ ನೀರಾವರಿ ಇಲಾಖೆಯ ಸಿಂಚನ ಭವನಕ್ಕೆ ಭೇಟಿ ನೀಡಿದಾಗ ಅಲ್ಲಿನ ಅಧಿಕಾರಿಗಳು ಹೃತ್ಪೂರ್ವಕ ಸ್ವಾಗತಿಸಿದರು. ನಂತರ ಅಧಿಕಾರಿಗಳೊಂದಿಗೆ ಮಹಾಪುರದ ಕುರಿತು ಸುದೀರ್ಘ ಚರ್ಚೆನಡೆಸಿ, ಮುಖ್ಯವಾದ ಮಾಹಿತಿಗಳನ್ನು ಪಡೆದುಕೊಂಡು, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು. ಭಾರೀ ಮಳೆಯಿಂದ ಸಂಭವಿಸುತ್ತಿರುವ ಅನಾಹುತಗಳ ತೀವ್ರತೆಯನ್ನು ಮನಗಂಡು, ನಿತ್ಯ ಮಳೆಯ …
Read More »B.S.Y.ಅವರ ಸೂಚನೆಯಂತೆ, ನಗರದಲ್ಲಿ 665 ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗಿದೆ.
ಬೆಂಗಳೂರು: ನಗರದಲ್ಲಿ ಕೊರೊನಾ ರೋಗಿಗಳು ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಿಗೆ ಕರೆದೊಯ್ಯಲು 665 ಅಂಬುಲೆನ್ಸ್ ಗಳನ್ನು ನಿಯೋಜಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ, ನಗರದಲ್ಲಿ 665 ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗಿದೆ. ಕೊರೊನಾ ಸೋಂಕಿಗೊಳಗಾದ ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಕೇಂದ್ರಕ್ಕೆ ಕೊಂಡೊಯ್ಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಬಿಬಿಎಂಪಿಯ ಪೂರ್ವ ವಲಯದಲ್ಲಿ …
Read More »ಪತ್ನಿಗೆ ಕೊರೊನಾ ಬಂತೆಂದು ಗಂಡ ಪರಾರಿ,ಸ್ಥಳೀಯ ಕಾರ್ಪೋರೇಟರ್ ಶಿವರಾಜ್ ಸಹಾಯದಿಂದ ಅಂತ್ಯಕ್ರಿಯೆ
ಪ್ರೀತಿಸಿ ಮದ್ವೆಯಾಗಿದ್ದ ಪತ್ನಿಗೆ ಕೊರೊನಾ ಬಂತೆಂದು ಗಂಡ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತ್ನಿಯ ಅಂತ್ಯಕ್ರಿಯೆಗೂ ಬಾರದ ಪತಿ ಬೆಂಗಳೂರು: ಪ್ರೀತಿಸಿ ಮದ್ವೆಯಾಗಿದ್ದ ಪತ್ನಿಗೆ ಕೊರೊನಾ ಬಂತೆಂದು ಗಂಡ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಶಂಕರಮಠ ವಾರ್ಡ್ ಜೆ.ಸಿ ನಗರದಲ್ಲಿ ವಾಸಿಸುತ್ತಿದ್ದ ದಂಪತಿ 2 ವರ್ಷದ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಪತಿ ಕಾರು ಚಾಲಕ, ಪತ್ನಿ ಮಾಲ್ ವೊಂದರಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ರು. ಕಳೆದ 4-5 ದಿನಗಳಿಂದ …
Read More »ದೇವದುರ್ಗದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಮುಳುಗಡೆ ಭೀತಿ
ರಾಯಚೂರು: ಕಳೆದ ವರ್ಷದ ಪ್ರವಾಹಕ್ಕೆ ಮುಳುಗಡೆಯಾಗಿದ್ದ ರಾಯಚೂರಿನ ದೇವದುರ್ಗದ ಐತಿಹಾಸಿಕ ಕೊಪ್ಪರ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಈ ಬಾರಿಯೂ ಮುಳುಗಡೆ ಭೀತಿ ಎದುರಿಸುತ್ತಿದೆ ಈಗಾಗಲೇ ದೇವಾಲಯದ ಆಧಾರ ಸ್ಥಂಬಗಳು ಜಲಾವೃತವಾಗಿವೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಭಕ್ತರ ಸಂಖ್ಯೆಯೂ ಕಡಿಮೆಯಾಗಿದೆ. ಕಳೆದ ವರ್ಷ ದೇವಾಲಯ ಪಕ್ಕದಲ್ಲಿರುವ ಅರ್ಚಕರು ಹಾಗೂ ಗ್ರಾಮದ ಹಲವಾರು ಕುಟುಂಬಗಳು ಪ್ರವಾಹದ ಹೊಡೆತಕ್ಕೆ ನಲುಗಿದ್ದವು. ಈ ಬಾರಿ ನಾರಾಯಣಪುರ ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣದ …
Read More »ಕೋಯ್ನಾ ಡ್ಯಾಂನಿಂದ ನೀರು ಬಿಟ್ಟಿಲ್ಲ. ಸುಳ್ಳು ಸುದ್ದಿ ಹಬ್ಬಿಸಬೇಡಿ
ಬೆಂಗಳೂರು: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಕಳೆದ ಎರಡು ದಿನಕ್ಕೆ ಹೋಲಿಸಿದ್ರೆ ಮಳೆ ಪ್ರಮಾಣ ಕಡಿಮೆ ಆಗಿದೆ. ಆದ್ರೆ ಕೃಷ್ಣೆಯಲ್ಲಿ ಅಬ್ಬರ ಮಾತ್ರ ಕಡಿಮೆ ಆಗಿಲ್ಲ. ದೂದ್ಗಂಗಾ ಹಾಗೂ ಹೀರಣ್ಯಕೇಶಿ ನದಿಗಳು ಮಾತ್ರ ಸ್ವಲ್ಪ ಶಾಂತಗೊಂಡಿವೆ. ಕೋಯ್ನಾ ಡ್ಯಾಂನಿಂದ ನೀರು ಬಿಟ್ಟಿಲ್ಲ. ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ನೀರಾವರಿ ಅಧಿಕಾರಿಗಳು ಮನವಿ ಮಾಡ್ಕೊಂಡಿದ್ದಾರೆ. https://m.facebook.com/story.php?story_fbid=187610026057095&id=105350550949710 ಚಿಕ್ಕೋಡಿ ಉಪವಿಭಾಗದ ಎಂಟು ಸೇತುವೆಗಳು ಮುಳುಗಡೆಯಾಗಿವೆ ಇವೆ. ಇಲ್ಲಿ …
Read More »ರೈಲು ದೇಶದ ಪ್ರಗತಿಯ ಎಂಜಿನ್: ಸಚಿವ ಪಿಯುಷ್ ಗೋಯಲ್
ಬೆಳಗಾವಿ, ಆ.9(ಕರ್ನಾಟಕ ವಾರ್ತೆ): ಹುಬ್ಬಳ್ಳಿಯಲ್ಲಿ ಸ್ಥಾಪಿಸಲಾಗಿರುವ ಉತ್ತರ ಕರ್ನಾಟಕದ ಪ್ರಥಮ ರೈಲು ಮ್ಯೂಸಿಯಂ ಅನ್ನು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಇಲಾಖೆಯ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಭಾನುವಾರ ದೇಶಕ್ಕೆ ಸಮರ್ಪಿಸಿದರು. ನೈರುತ್ಯ ರೈಲ್ವೆ ವತಿಯಿಂದ ವರ್ಚುವಲ್ ವೇದಿಕೆಯ ಮೂಲಕ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಹುಬ್ಬಳ್ಳಿಯ ರೈಲು ಮ್ಯೂಸಿಯಂ ಅನ್ನು ದೇಶಕ್ಕೆ ಸಮರ್ಪಿಸಲಾಯಿತು. ನಂತರ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ ಅವರು, ಐತಿಹಾಸಿಕ ಮಹತ್ವ ಹೊಂದಿರುವ ಹುಬ್ಬಳ್ಳಿಯಲ್ಲಿ …
Read More »ಬೆಳಗಾವಿ ಜಿಲ್ಲೆಯಲ್ಲಿ 235 ಜನ ಸೊಂಕಿತರು ಪತ್ತೆ,ಇವತ್ತು ಒಂದೇ ದಿನ 455 ಜನ ಸೊಂಕಿತರು ಗುಣಮುಖ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಸಂಡೇ ಸಿಹಿ ಸುದ್ಧಿ ಹೊರಬಿದ್ದಿದೆ ಇವತ್ತೂ ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ ಸೊಂಕಿತರಕ್ಕಿಂತ ದುಪ್ಪಟ್ಟು ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಇಂದು ಭಾನುವಾರದ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಇವತ್ತು ಬೆಳಗಾವಿ ಜಿಲ್ಲೆಯಲ್ಲಿ 235 ಜನ ಸೊಂಕಿತರು ಪತ್ತೆಯಾಗಿದ್ದು,ಇವತ್ತು ಒಂದೇ ದಿನ 455 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವದು ಸಂತಸದ ಸಂಗತಿಯಾಗಿದೆ ನಿನ್ನೆ ಶನಿವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ ಸೊಂಕಿತರಕ್ಕಿಂತ ಹೆಚ್ಚು ಜನ …
Read More »ಬಳ್ಳಾರಿ ನಾಲಾದಲ್ಲಿ ಶನಿವಾರ ಸಂಜೆ ಕೊಚ್ಚಿ ಹೋದ ಯುವಕನ ಶವ ಭಾನುವಾರ ಸಂಜೆ ಪತ್ತೆಯಾಗಿದೆ.
ಬೆಳಗಾವಿ : ಕಾಲು ಜಾರಿ ಬಳ್ಳಾರಿ ನಾಲಾದಲ್ಲಿ ಶನಿವಾರ ಸಂಜೆ ಕೊಚ್ಚಿ ಹೋದ ಯುವಕನ ಶವ ಭಾನುವಾರ ಸಂಜೆ ಪತ್ತೆಯಾಗಿದೆ. ಗೋಕಾಕ್ ತಾಲ್ಲೂಕಿನ ಡುಮ್ಮ ಉರುಬಿನಟ್ಟಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಜಲಾವೃತಗೊಂಡ ಗದ್ದೆಯಲ್ಲಿ ಮುಳುಗಡೆಯಾದ ಪಂಪ್ ಸೆಟ್ ನೋಡಲು ಹೋಗಿದ್ದ ನಾಗರಾಜ್ ಹುಬ್ಬಳ್ಳಿ ( 18) ಎಂಬ ಯುವಕ ಕಾಲು ಜಾರಿ ಬಳ್ಳಾರಿ ನಾಲಾದಲ್ಲಿ ಕೊಚ್ಚಿ ಹೋಗಿದ್ದನು. ವಿಷಯ ತಿಳಿದ ಬಳಿಕ ಎಸ್ಡಿಆರ್ಎಫ್ ತಂಡ, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು …
Read More »ಹೊಗೇನಕಲ್ ಜಲವೈಭವ ಡ್ರೋನ್ ಕ್ಯಾಮೆರಾದಲ್ಲಿ ಸೆರೆ
ಚಾಮರಾಜನಗರ: ಕಬಿನಿ ಹಾಗೂ ಕೆಆರ್ಎಸ್ ಜಲಾಶಯಗಳಿಂದ ಒಂದೂವರೆ ಲಕ್ಷ ಕ್ಯೂಸೆಕ್ಗೂ ಹೆಚ್ಚು ಪ್ರಮಾಣದ ನೀರು ಬಿಡುಗಡೆ ಮಾಡಿರುವುದರಿಂದ ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿ ಹೊಗೇನಕಲ್ನಲ್ಲಿ ಜಲವೈಭವವೇ ಸೃಷ್ಟಿಯಾಗಿದೆ. ಈ ರಮಣೀಯ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆ, ವಿಶಾಲವಾಗಿ ಹರಿಯುತ್ತಾ ಹೊಗೇನಕಲ್ ಬಳಿ ಭೋರ್ಗೆರೆದು ಹಾಲ್ನೊರೆಯಂತೆ ಧುಮ್ಮಿಕ್ಕುವ ದೃಶ್ಯ ವರ್ಣನಾತೀತವಾಗಿದೆ. ಕೊಡಗಿನಲ್ಲಿ ಹುಟ್ಟಿ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹರಿದು ಹೊಗೇನಕಲ್ ಬಳಿ ತಮಿಳುನಾಡಿಗೆ ಪ್ರವೇಶಿಸುವ ಕಾವೇರಿಯ ಸೊಬಗು ಈಗ ಇಮ್ಮಡಿಗೊಂಡಿದೆ. …
Read More »ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು…………
ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಸಚಿವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಟ್ವೀಟ್: ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ. ಕೊರೊನಾ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ …
Read More »
Laxmi News 24×7