Breaking News

5 ದಿನ ಸಿಸಿಬಿ ಕಸ್ಟಡಿಗೆಸಂಜನಾ

ಬೆಂಗಳೂರು:  ಡ್ರಗ್ಸ್ ಮಾಫಿಯಾ ಆರೋಪದಡಿ ನಟಿ ರಾಗಿಣಿ ಬಂಧನ ಬೆನ್ನಲ್ಲೇ ಇಂದು ಮತ್ತೊಬ್ಬ ಖ್ಯಾತ ನಟಿ ಸಂಜನಾಳನ್ನು  ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಸಿಸಿಬಿ ಅಧಿಕಾರಿಗಳು  ನಟಿ ಸಂಜನಾ ಗಿಲ್ರಾನಿ ಮನೆ ಮೇಳೆ ದಾಳಿ ನಡೆಸಿದ್ದರು. ನಂತರ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಬಳಿಕ 8 ನೇ ಎಸಿಎಂಎ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು.  ಇದೀಗ  ಸಂಜನಾ ಅವರನ್ನು 5 ದಿನ ಸಿಸಿಬಿ ಕಸ್ಟಡಿಗೆ ಒಪ್ಪಿಸಿ  ಕೋರ್ಟ್ ಆದೇಶ …

Read More »

ಕೊರೊನಾ ಸೋಂಕಿನಿಂದ ಧೃತಿಗೆಡಬೇಡಿ 2ನೇ ಬಾರಿ ಅರಭಾವಿ ಕ್ಷೇತ್ರದಲ್ಲಿ 2.50 ಲಕ್ಷ ಮಾಸ್ಕ್ ವಿತರಣೆ : ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯ ಸುರಕ್ಷತೆಗಾಗಿ ಅರಭಾವಿ ಕ್ಷೇತ್ರದ ಪ್ರತಿ ಮನೆ ಮಾಸ್ಕ್ ವಿತರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ‘ಕೊರೊನಾ ಜಾಗತಿಕ ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕ್ಷೇತ್ರದಲ್ಲಿರುವ ಪ್ರತಿ ಮನೆಗಳಿಗೆ ಮಾಸ್ಕ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಎರಡನೆಯ ಹಂತದಲ್ಲಿ 2.50 ಲಕ್ಷ ಮಾಸ್ಕ್ ಗಳನ್ನು …

Read More »

ನಟಿ ಸಂಜನಾ ಜತೆ ಶಾಸಕ ಜಮೀರ್ ಅಹಮ್ಮದ್ಹೆಸರು ಕೇಳಿ ಬಂದಿರುವ ವಿಚಾರವಾಗಿ ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

ಹುಕ್ಕೇರಿ : ಡ್ರಗ್ಸ್ ದಂಧೆ ಜಾಲದಲ್ಲಿ ನಟಿ ಸಂಜನಾ ಜೊತೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಹೆಸರು ಕೇಳಿ ಬಂದಿರುವ ವಿಚಾರವಾಗಿ ಶಾಸಕ ಸತೀಶ್ ಜಾರಕಿಹೊಳಿ  ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ ಜಮೀರ್ ಇಲ್ಲ. ಹೀಗಾಗಿ ಅವರೊಂದಿಗೆ ಹೊಲಿಕೆ ಮಾಡುವುದು ಸರಿಯಲ್ಲ. ನಟಿ ಸಂಜನಾ ಜತೆ ಶಾಸಕ ಜಮೀರ್ ಅಹಮ್ಮದ್ ಪಾರ್ಟಿಗೆ ಹೋದರೆ ಅಥವಾ ತಿರುಗಾಡಿದ್ರೆ ಏನೂ ಸಂಬಂಧವಿಲ್ಲ. ಡ್ರಗ್ಸ್ ತೆಗೆದುಕೊಂಡರೆ, ಮಾರಾಟ ಮಾಡಿದರೆ …

Read More »

ಮಾಜಿ ಸೈನಿಕನ ಕೈ ಕಾಲು ಕಟ್ಟಿ ಗ್ರಾಮಸ್ಥರು ಮನಬಂದಂತೆ ಒದೆ………..

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಲಗುಂಡಿ ಗ್ರಾಮದಲ್ಲಿ ಯುವಕನೊಬ್ಬನಿಗೆ ಚಾಕು ಇರಿದು ಕೊಲೆ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸೈನಿಕನ ಕೈ ಕಾಲು ಕಟ್ಟಿ ಗ್ರಾಮಸ್ಥರು ಮನಬಂದಂತೆ ಒದೆ ಕೊಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾಜಿ ಸೈನಿಕನಿಗೆ ಕೊಲೆಯಾದ ಯವಕನ ಸಂಬಂಧಿಕರು ಹಾಗೂ ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ. ಮಾಜಿ ಸೈನಿಕ ಗಂಗಾಧರ ನಿಂಗಪ್ಪ ನೂಲ್ವಿ ತಿಪ್ಪೆಗೆ ಕಸ ಹಾಕುವ ವಿಷಯಕ್ಕೆ ಸಂಬಂಧಿಸಿದಂತೆ ಶಾರದಾ ಪಾಟೀಲ್ ಎನ್ನುವ ಮಹಿಳೆಯ …

Read More »

ಜೋಯಿಡಾ ತಹಶೀಲ್ದಾರ್ ಕಚೇರಿಗೆ ಎಸಿಬಿ ದಾಳಿ – ಲಂಚ ಪಡೆಯುತ್ತಿದ್ದ ಅಧಿಕಾರಿ ಬಲೆಗೆ

ಕಾರವಾರ: ಲಂಚ ಸ್ವೀಕರಿಸುತಿದ್ದ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಮೇಲೆ ಎಸಿಬಿ ದಾಳಿ ನೆಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ.ಎಸಿಬಿ ಡಿವೈಎಸ್ಪಿ ಶ್ರೀಕಾಂತ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಜೋಯಿಡಾ ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಮಂಜುನಾಥ್ ಹುಚ್ಚಣ್ಣನವರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಆತನ್ನು ವಶಕ್ಕೆ ಪಡೆದು ತನಿಖೆ ಮಾಡಲಾಗುತ್ತಿದೆ. ಗೋಪಿಕಾ ಶಾಂತ ಸಾವಂತ್ ಇವರ ಹೆಸರು ಬದಲಾವಣೆಗೆ ಇವರ ಸಂಬಂಧಿ ಮೋಹನ್ ದೇಸಾಯಿ …

Read More »

ಈ ಬಾರಿಯ 2020ರ ದಸರಾವನ್ನು ಸರಳವಾಗಿ ಆಚರಿಸಲಾಗುವುದು

ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಈ ಬಾರಿಯ 2020ರ ದಸರಾವನ್ನು ಸರಳವಾಗಿ ಆಚರಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ. ದಸರಾ ಆಚರಣೆ ಕುರಿತು ಚರ್ಚಿಸಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು. ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಸಿಟಿ ರವಿ, ಚಾಮುಂಡಿ ಬೆಟ್ಟ, ಅರಮನೆಗೆ ಮಾತ್ರ ಈ ಬಾರಿ ದಸರಾ ಸೀಮಿತವಾಗಿರಬೇಕು ಎಂದು ಉನ್ನತ …

Read More »

ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನು ನಾಮಕರಣ ಮಾಡಿದೆ.

ಬೆಂಗಳೂರು: ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನು ನಾಮಕರಣ ಮಾಡಿದೆ. ಇಂದು ನಾಮಕರಣದ ಕಾರ್ಯಕ್ರಮವನ್ನು ಸಿಎಂ ಯಡಿಯೂರಪ್ಪನವರು ಉದ್ಘಾಟನೆ ಮಾಡಿದ್ದಾರೆ. ಯಲಹಂಕದ ಡೈರಿ ಸರ್ಕಲ್ ಬಳಿ ಇರುವ ಮೇಲ್ಸೇತುವೆಗೆ ವೀರ ಸಾವರ್ಕರ್ ಅವರ ಹೆಸರನ್ನು ಇಡಲಾಗಿದೆ. 388.35 ಮೀಟರ್ ಉದ್ದದ ಈ ಮೇಲ್ಸೇತುವೆಯನ್ನು ಬಿಬಿಎಂಪಿಯಿಂದ 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.   ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಕಾಂಗ್ರೆಸ್, ಜೆಡಿಎಸ್ ವಿರೋಧಿಸಿತ್ತು. ಹೀಗಾಗಿ …

Read More »

ಬರೋಬ್ಬರಿ 24 ಮಂದಿಯ ಹೆಸರನ್ನು ರಿಲೀವ್ ಮಾಡಿದ್ದಾರೆ:ಸಂಜನಾ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ಮಾಡುತ್ತಿದ್ದು, ಈ ವೇಳೆ ಸಂಜನಾ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ ಸಿಸಿಬಿ ಕಚೇರಿಯಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ಸಂಜನಾರನ್ನು ಅಧಿಕಾರಿಗಳು ಪ್ರಶ್ನೆ ಮಾಡುತ್ತಿದ್ದಾರೆ. ವಿಚಾರಣೆ ವೇಳೆ ಸಂಜನಾ ಬರೋಬ್ಬರಿ 24 ಮಂದಿಯ ಹೆಸರನ್ನು ರಿಲೀವ್ ಮಾಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಮೊದಲಿಗೆ ಸಂಜನಾ ಯಾವ ಪ್ರಶ್ನೆಗಳಿಗೂ ಸರಿಯಾಗಿ ಉತ್ತರ ಕೊಡುತ್ತಿರಲಿಲ್ಲ. ನಂತರ ಸಿಸಿಬಿ ಅಧಿಕಾರಿಗಳು …

Read More »

ಹೊಳೆನರಸೀಪುರದ ಒಂಟಿ ಮನೆಯಲ್ಲಿ ಹುಕ್ಕಾಬಾರ್ – ಏಳು ಮಂದಿ ಬಂಧನ

ಹಾಸನ: ಒಂಟಿ ಮನೆಯೊಂದರಲ್ಲಿ ನಡೆಯುತ್ತಿದ್ದ ಹುಕ್ಕಾಬಾರ್ ಪಾರ್ಟಿ ಮೇಲೆ ದಾಳಿ ನಡೆಸಿದ ಹೊಳೆನರಸೀಪುರ ಪೊಲೀಸರು, ಏಳು ಮಂದಿ ಯುವಕರನ್ನು ಬಂಧಿಸಿದ್ದಾರೆ. ಜೊತೆಗೆ ಗಾಂಜಾ ಹಾಗೂ ಹುಕ್ಕಾ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಅಡಿಕೆರೆ ಗ್ರಾಮದಲ್ಲಿ, ಚನ್ನರಾಯಪಟ್ಟಣ ತಾಲೂಕು ಮೂಲದ ಎಚ್.ವಿ.ಸುಹಾಸ್ ನೇತೃತ್ವದಲ್ಲಿ ಹುಕ್ಕಾಬಾರ್ ನಡೆಯುತ್ತಿತ್ತು. ಸುಹಾಸ್ ಸೇರಿ ಆರು ಜನರ ಬಂಧನವಾಗಿದೆ. ಒಂಟಿ ಮನೆಯನ್ನು ಬಾಡಿಗೆ ಪಡೆದು ಅಲ್ಲಿ ಹುಕ್ಕಾಬಾರ್ ನಡೆಸುತ್ತಿದ್ದ ಸುಹಾಸ್ ತನ್ನದೇ ಗ್ರಾಹಕರನ್ನು …

Read More »

ನಟಿ ರಾಗಿಣಿಗೆ ರಾಜಕೀಯ ಬೆಂಬಲ ಇದ್ದಿದ್ದರೆ ಅವರು ಅರೆಸ್ಟ್ ಆಗ್ತಿರಲಿಲ್

ಮಂಡ್ಯ: ನಟಿ ರಾಗಿಣಿಗೆ ರಾಜಕೀಯ ಬೆಂಬಲ ಇದ್ದಿದ್ದರೆ ಅವರು ಅರೆಸ್ಟ್ ಆಗ್ತಿರಲಿಲ್ಲ. ನಮ್ಮ ಯಾವುದೇ ಒಬ್ಬ ಮುಖಂಡ ಡ್ರಗ್ಸ್ ಮಾಫಿಯಾದಲ್ಲಿದ್ದರೆ ಅವರಿಗೆ ನಮ್ಮ ಸಹಕಾರ ಇಲ್ಲ. ಈ ವಿಚಾರದಲ್ಲಿ ಸರ್ಕಾರ ಹಿಟ್ ರನ್ ಮಾಡಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಯಾವುದೇ ಮುಖಂಡ ಡ್ರಗ್ ಮಾಫಿಯಾದಲ್ಲಿದ್ದರೆ ಅವರಿಗೆ ನಮ್ಮ ಸಹಕಾರ ಇಲ್ಲ. ಡ್ರಗ್ಸ್ ದಂಧೆಯನ್ನ ಬುಡಸಮೇತ ಕೀಳುವವರೆಗೆ …

Read More »