Breaking News

ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ

ಬೆಂಗಳೂರು: ಪಿಯುಸಿ ಮೌಲ್ಯಮಾಪನಕ್ಕೂ ಕೊರೊನಾ ಭೀತಿ ತಟ್ಟಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ ಮಾಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ಆಯಾ ಜಿಲ್ಲೆಗಳಲ್ಲಿ ವಿಕೇಂದ್ರಿಕರಣಗೊಳಿಸುವಂತೆ ಉಪನ್ಯಾಸಕರ ಸಂಘ ಮನವಿ ಮಾಡಿತ್ತು. ಕೊರೊನಾ ಸಮುದಾಯಕ್ಕೆ ಹರಡುತ್ತಿದೆ ಎಂದು ಈ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಉಪನ್ಯಾಸಕರ ಬೇಡಿಕೆಗೆ ಈಡೇರಿಸದ ಕಾರಣ ನಾಳೆಯಿಂದ ಪ್ರಾರಂಭವಾಗಬೇಕಿದ್ದ ವಿಜ್ಞಾನ ವಿಷಯದ ಮೌಲ್ಯಮಾಪನ ಮಾಡದೇ ಇರಲು ಉಪನ್ಯಾಸಕರ ಸಂಘದಿಂದ ನಿರ್ಧಾರ …

Read More »

ಸಾಲ ಪಡೆದು ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಶೀಘ್ರದಲ್ಲೇ ಭಾರತಕ್ಕೆ

ನವದೆಹಲಿ: ಭಾರತದ ಬ್ಯಾಂಕ್‍ಗಳಿಂದ 9 ಸಾವಿರ ಕೋಟಿ ರೂ. ಸಾಲ ಪಡೆದು ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರಲಾಗುವುದು. ರಾಜತಾಂತ್ರಿಕ ರಂಗದಲ್ಲಿ ಭಾರತಕ್ಕೆ ಯಶಸ್ಸು ಸಿಕ್ಕಿದ್ದು, ವಿಜಯ್ ಮಲ್ಯ ಅವರನ್ನು ಹಸ್ತಾಂತರಿಸುವ ಬಗ್ಗೆ ಬ್ರಿಟಿಷ್ ನ್ಯಾಯಾಲಯ ಈಗಾಗಲೇ ಮುದ್ರೆ ಹಾಕಿದೆ. ವಿಜಯ್ ಮಲ್ಯ ಬ್ಯಾಂಕ್ ವಂಚನೆ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಈ ಸಂಬಂಧ ಬ್ರಿಟನ್‍ನಲ್ಲಿ ಎಲ್ಲಾ ಕಾನೂನು ವಿಧಿವಿಧಾನಗಳು ಪೂರ್ಣಗೊಂಡಿವೆ. …

Read More »

ಕೊರೊನಾ ಮಧ್ಯೆ ಶಾಲೆ ಆರಂಭ, ಸರ್ಕಾರಕ್ಕೆ 10 ‘ಪಬ್ಲಿಕ್’ ಪ್ರಶ್ನೆ – ಎಷ್ಟು ಮಕ್ಕಳಿಗೆ ಸೋಂಕು ಬಂದಿದೆ?

ಬೆಂಗಳೂರು: ಕೊರೋನಾ ತಾಂಡವವಾಡ್ತಿದೆ. ಖುದ್ದು ಕೇಂದ್ರ ಸರ್ಕಾರವೇ, ಮನೆಯಿಂದ ಹೊರಬರಬೇಡಿ ಎಂದು ಮಕ್ಕಳಿಗೆ, ವೃದ್ಧರಿಗೆ ಲಾಕ್‍ಡೌನ್ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆದರೆ ಇದ್ಯಾವುದನ್ನು ಕಿವಿಗೆ ಹಾಕಿಕೊಳ್ಳದ ರಾಜ್ಯ ಸರ್ಕಾರ, ಜುಲೈ 1ರಿಂದ ಶಾಲೆಗಳನ್ನು ತೆರೆಯಲು ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. 4ರಿಂದ ಏಳನೇ ತರಗತಿಯ ಮಕ್ಕಳಿಗೆ ಜುಲೈ 1ರಿಂದ, 1ನೇ ತರಗತಿಯಿಂದ 3ನೇ ತರಗತಿವರೆಗಿನ ಮಕ್ಕಳಿಗೆ, 8ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಜುಲೈ 15ರಿಂದ ಶಾಲೆ ನಡೆಸಲು ಪ್ಲಾನ್ ಮಾಡ್ತಿದೆ. ಇನ್ನು …

Read More »

ಲಾಕ್‌ಡೌನ್‌ ಕಾರಣದಿಂದಾಗಿ ರಾಜ್ಯ ಸಾರಿಗೆ ನಿಗಮಗಳಿಗೆ ಬರೋಬ್ಬರಿ 1,200 ಕೋಟಿಗೂ ಅಧಿಕ ನಷ್ಟ………

ಬೆಂಗಳೂರು; ಕೊರೋನಾ ಲಾಕ್‌ಡೌನ್‌ ಕಾರಣದಿಂದಾಗಿ ರಾಜ್ಯ ಸಾರಿಗೆ ನಿಗಮಗಳಿಗೆ ಬರೋಬ್ಬರಿ 1,200 ಕೋಟಿಗೂ ಅಧಿಕ ನಷ್ಟವಾಗಿದೆ ಎಂದು ಹೇಳಲಾಗುತ್ತಿದ್ದು, ಇದರ ಸುಧಾರಣೆ ಕುರಿತಂತೆ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಚರ್ಚೆ ನಡೆಸಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಇಲಾಖೆಯ ಅಧಿಕಾರಿ ಗಳು ನಿಗಮದ ನಷ್ಟದ ಬಗ್ಗೆ ವಿವರಿಸಿದ್ದಾರೆ.  ಸಾರಿಗೆ ನಿಗಮದಲ್ಲಿ 1 ಲಕ್ಷದ 17 …

Read More »

ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸುರೇಶಗೌಡ ಚಾಲನೆ.

ಮಂಡ್ಯ ಜಿಲ್ಲೆನಾಗಮಂಗಲ: ತಾಲೂಕಿನ ವಿವಿಧ ಗ್ರಾಮಗಳಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸುರೇಶ್ ಗೌಡ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು. ಮಂಡ್ಯ ನಾಗಮಂಗಲದ ಬೆಳ್ಳೂರು ಪಟ್ಟಣದ ಉಮರ್ ನಗರದಲ್ಲಿ 75 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ನಿರ್ಮಾಣ ಕಾಮಗಾರಿ. ಹಾಗೂ ನಾಗಮಂಗಲ ಪುರಸಭೆ ವ್ಯಾಪ್ತಿಯ ಮಾಯಣ್ಣ ಗೌಡನ ಕೊಪ್ಪಲು 25 ಲಕ್ಷ ರೂ …

Read More »

ಕೆ ಆರ್ ಪೇಟೆ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಿಗೆ ಪ್ರೀತಿಯ ವಿಶ್ವಾಸದ ಸನ್ಮಾನ

ನೂತನವಾಗಿ ಮಂಡ್ಯ ಕೆ ಆರ್ ಪೇಟೆ ತಾಲ್ಲೂಕು ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಗಂಜಿಗೆರೆ ಮಹೇಶ ರವರಿಗೆ ಜನಪ್ರಿಯ ಮಾಜಿ ಶಾಸಕರು ಮತ್ತು ಮಂಡ್ಯ ಕೆಪಿಸಿಸಿ ಅಧ್ಯಕ್ಷರಾದ ಸಿ ಡಿ ಗಂಗಾಧರ್ ಅವರ ನೇತೃತ್ವದಲ್ಲಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಕಿಕ್ಕೇರಿ ರವರ ಸಮ್ಮುಖದಲ್ಲಿ ಮಹೇಶ್ ರವರಿಗೆ ಪ್ರೀತಿ-ವಿಶ್ವಾಸದ ಸನ್ಮಾನ ನೆರವೇರಿಸಿ ಪಕ್ಷ ಸಂಘಟನೆಯ ಮತ್ತಷ್ಟು ಬಲಗೊಳಿಸಿ ಪಾದರಸದಂತೆ ಸಂಘಟನೆ ಮಾಡಿ ಎಂದು ಶುಭಹಾರೈಸಿ ತುಂಬು ಹೃದಯದಿಂದ ಅಭಿನಂದಿಸಿದರು. …

Read More »

ರಾಜ್ಯ ಸರ್ಕಾರದ ಪ್ರಕಾರ ೦ಸೋಂಕು ಬೆಳಗಾವಿ ಜಿಲ್ಲೆಯ ಹೆಲ್ತ್ ಬುಲೆಟಿನ್ ಪ್ರಕಾರ 12 …!???

ಬೆಂಗಳೂರು – ರಾಜ್ಯ ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಬುಲಿಟಿನ್ ನಲ್ಲಿ ರಾಜ್ಯದಲ್ಲಿ 267 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ. ಇದರಿಂದಾಗಿ ಕರ್ನಾಟಕದಲ್ಲಿ ಒಟ್ಟೂ 4063 ಜನರಿಗೆ ಸೋಂಕು ತಗುಲಿದಂತಾಗಿದೆ. ಇದರಲ್ಲಿ ಕಲಬುರಗಿಯಲ್ಲಿ 105, ಉಡುಪಿಯಲ್ಲಿ 62, ರಾಯಚೂರಿನಲ್ಲಿ 35, ಬೆಂಗಳೂರು ನಗರದಲ್ಲಿ 20 ಜನರಿಗೆ ಸೋಂಕು ತಗುಲಿರುವುದಾಗಿ ತಿಳಿಸಲಾಗಿದೆ. ಬೆಳಗಾವಿಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಆದರೆ ಬೆಳಗಾವಿ ಜಿಲ್ಲಾ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯಲ್ಲಿ …

Read More »

ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ 12 ಸೊಂಕಿತರ ಸಂಖ್ಯೆ ಹೆಚ್ಚಾಗಿದೆ.

ಬೆಳಗಾವಿ-ಇಂದು ಬುಧವಾರದ ರಾಜ್ಯ ಹೆಲ್ತ್ ಬುಲೀಟಿನ್ ಬಿಡುಗಡೆ ಆಗಿದೆ ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಸೊಂಕಿತರ ಸಂಖ್ಯೆ ಶೂನ್ಯ ಆದ್ರೆ ಜೊತೆಗೆ ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ 12 ಸೊಂಕಿತರ ಸಂಖ್ಯೆ ಹೆಚ್ಚಾಗಿದೆ. ಬೆಳಗಾವಿ ಜಿಲ್ಲಾ ಹೆಲ್ತ್‌ ಬುಲಿಟೀನ್ ನಲ್ಲಿ ನಿನ್ನೆ ಸೊಂಕಿತರ ಸಂಖ್ಯೆ 204 ಇತ್ತು ಇಂದು ಬಿಡುಗಡೆಯಾದ ಬುಲೆಟಿನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 216 ಇದೆ ಅಂದ್ರೆ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಹುಕಾಲದ ದೊಡ್ಡ ಕನಸೊಂದು ಈಗ ನನಸಾಗುವ ಹಂತಕ್ಕೆ…….

ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಹುಕಾಲದ ದೊಡ್ಡ ಕನಸೊಂದು ಈಗ ನನಸಾಗುವ ಹಂತಕ್ಕೆ ಬಂದು ನಿಂತಿದೆ. ರಾಜಹಂಸಗಡದಲ್ಲಿ, ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ  ನಿರ್ಮಾಣವಾಗುತ್ತಿದ್ದು, ಸ್ಥಳಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ​  ಐತಿಹಾಸಿಕ ಹಿನ್ನೆಲೆಯ ಸ್ಥಳವಾಗಿರುವ ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಮೂರ್ತಿಯನ್ನು  ನಿರ್ಮಾಣ ಮಾಡಬೇಕೆನ್ನುವ ಬೇಡಿಕೆ ಇಂದು ನಿನ್ನೆಯದಲ್ಲಿ. ಇದಕ್ಕಾಗಿ  ಹಲವಾರು ವರ್ಷಗಳಿಂದ ಗಣ್ಯ ನಾಯಕರುಗಳು, …

Read More »

ಜಮೀರ್‌ 420, ಗುಜರಿ ವ್ಯಾಪಾರ ಮಾಡಿ ರಾಜಕಾರಣದಲ್ಲಿ ನಾಟಕ‌ ಮಾಡ್ತಿದ್ದಾನೆ; ರೇಣುಕಾಚಾರ್ಯ

ಬೆಂಗಳೂರು (ಜೂನ್‌ 03); ಚಾಮರಾಜಪೇಟೆ ಶಾಸಕ ಜಮೀರ್‌ ಅಹಮದ್‌ ಓರ್ವ 420, ಗುಜರಿ ವ್ಯಾಪಾರ ಮಾಡಿ ಇದೀಗ ರಾಜಕಾರಣದಲ್ಲಿ ನಾಟಕ ಮಾಡುತ್ತಿದ್ದಾನೆ ಎಂದು ಮಾಜಿ ಸಚಿವ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಏಕ ವಚನದಲ್ಲಿ ದಾಳಿ ನಡೆಸಿದ್ದಾರೆ. ಶಾಸಕ ಜಮೀರ್‌ ಅಹಮದ್‌ ಪಾದರಾಯನಪುರ ಗಲಾಟೆಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳ ಜಾಮೀನಿಗೆ ಸಹಕರಿಸಿದ್ದಾರೆ. ಅಲ್ಲದೆ, ಬಿಡುಗಡೆಗೊಂಡವರನ್ನು ಇಂದು ಪಾದರಾಯನಪುರದಲ್ಲಿ ಅದ್ದೂರಿಯಾಗಿ ಸ್ವಾಗತ ಮಾಡಲಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ” ಪಾದರಾಯನಪುರ ಗೂಂಡಾಗಳಿಗೆ …

Read More »