ನವದೆಹಲಿ: ವಿಶ್ವಾದ್ಯಂತ ಕಣ್ಣಿಗೆ ಕಾಣದ ಶತ್ರುವಿನಂತೆ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ಸೋಂಕಿನ ವಿರುದ್ಧ ನಾವು ಯಶಸ್ವಿಯಾಗಿ ಹೋರಾಡಿ ಜಯಗಳಿಸಲಿದ್ದೇವೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜೀವ್ ಗಾಂದಿ ಆರೋಗ್ಯ ವಿವಿಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ, ಮಾತನಾಡಿದ ಪ್ರಧಾನಿ ಮೋದಿ, ಕೊರೊನಾ ವಿರುದ್ಧದ ಯುದ್ಧದಲ್ಲಿ ನಾವು ಜಯಗಳಿಸುತ್ತೇವೆ. ವೈದ್ಯರು, ನರ್ಸ್, ಪೊಲೀಸರು ಸೇರಿದಂತೆ ಎಲ್ಲಾ ಕೊರೊನ ವಾರಿಯರ್ಸ್ ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ಅವರೆಲ್ಲರಿಗೂ …
Read More »ಕೊರೊನಾ ಸೋಂಕಿತ ಕಟಿಂಗ್ ಮಾಡಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಸಲೂನ್ ಶಾಪ್ ಮಾಲೀಕರಲ್ಲಿ ಆತಂಕ
ಕೋಲಾರ: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಸಲೂನ್ ಒಂದರಲ್ಲಿ ಕೊರೊನಾ ಸೋಂಕಿತ ಕಟಿಂಗ್ ಮಾಡಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಸಲೂನ್ ಶಾಪ್ ಮಾಲೀಕರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಮುಂದುವರಿದಿದ್ದು, ಜಿಲ್ಲೆಯಲ್ಲಿ ಈವರೆಗೆ 24 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದುವರೆಗೂ ಐವರು ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಕೋಲಾರ ಜಿಲ್ಲೆಗೆ ಹೊರ ರಾಜ್ಯ, ವಿದೇಶದಿಂದ ಬಂದವರಿಂದಲೇ ಕಂಟಕ ಎದುರಾಗುತ್ತಿದೆ. ಸದ್ಯಕ್ಕೆ ಮಲೇಷಿಯಾದಿಂದ ಬಂದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಂಡುಬಂದಿರುವುದು ಅಧಿಕಾರಿಗಳನ್ನು …
Read More »ಟಿಕೆಟ್ ಯಾರಿಗೆ ಕೊಡಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ: ಪ್ರಭಾಕರಕೋರೆ
ಬೆಳಗಾವಿ: ದೊಡ್ಡ ಪಕ್ಷದಲ್ಲಿ ಆಕಾಂಕ್ಷಿಗಳು ಸಂಖ್ಯೆ ಹೆಚ್ಚು ಇರುವುದು ಸಾಮಾನ್ಯ. ಆದ್ರೆ ಟಿಕೆಟ್ ಯಾರಿಗೆ ಕೊಡಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದ್ದಾರೆ. ಇಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಜಾರಿಯಾಗಿಲ್ಲ. ಬಿಜೆಪಿ ಪಕ್ಷದಲ್ಲಿ ತಂತ್ರಗಳು ನಡೆಯುವುದಿಲ್ಲ. ಪಕ್ಷದ ನಾಯಕರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದರು. ಬಿಜೆಪಿ ಅತೀ ದೊಡ್ಡ ಪಕ್ಷವಾಗಿದ್ದು, ಟಿಕೆಟ್ ಕೇಳುವವರ ಸಂಖ್ಯೆ ಹೆಚ್ಚು …
Read More »ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರ ಜನ್ಮ ದಿನ ಪ್ರಯುಕ್ತರಕ್ತದಾನ ಶಿಬಿರ
ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಜನ್ಮ ದಿನ ಪ್ರಯುಕ್ತ ಕೊಳ್ಳೆಗಾಲದ ಸತೀಶ ಜಾರಕಿಹೊಳಿ ವಿಚಾರ ವೇದಿಕೆಯ ಕಾರ್ಯಕರ್ತರು ಸೋಮವಾರ ರಕ್ತದಾನ ಶಿಬಿರ ಏರ್ಡಿಸಿದ್ದರು. ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯ ಘಟಕದ ಅಧ್ಯಕ್ಷ ಶಿವು ಸಂಕರ, ಜಿಯಾ ಸುಲ್ತಾನ್, ಸಿದ್ದಪ್ಪಾ ನಾಯಕ, ನಿತೀನ್ ಸೇರಿದಂತೆ ಇತರರು ಇದ್ದರು. https://youtu.be/OYEMtBeW6b0
Read More »ಕೊರೊನಾ ನಂತ್ರ ಗ್ಯಾಂಗ್ರೀನ್ ಕಾಣಿಸಿಕೊಂಡ ವ್ಯಕ್ತಿಗೆ ಕಿಮ್ಸ್ನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ಹುಬ್ಬಳ್ಳಿ: ಕೊರೊನಾ ಸೋಂಕು ತಗುಲಿ ದಾವಣಗೆರೆ ಆಸ್ಪತ್ರೆಗೆ ದಾಖಲಾಗಿ ಬಳಿಕ ಗ್ಯಾಂಗ್ರೀನ್ ಕಾಣಿಸಿಕೊಂಡಿದ್ದ ರೋಗಿಯೊಬ್ಬರಿಗೆ ಕಿಮ್ಸ್ ನಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಕೊರೊನಾ ಕಾರಣದಿಂದ 69 ವರ್ಷದ ವ್ಯಕ್ತಿಯನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ದಿನದ ಹಿಂದೆ ಕಾಲು ನೋವು ಕಾಣಿಸಿಕೊಂಡಿದ್ದರಿಂದ ಕಪ್ಪು ಬಣ್ಣಕ್ಕೆ ತಿರುಗಿತ್ತು. ಹೀಗಾಗಿ ಕಳೆದ ಗುರುವಾರ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ತಪಾಸಣೆ ಮಾಡಿದಾಗ ಗ್ಯಾಂಗ್ರೀನ್ ಆಗಿರುವುದು ಪತ್ತೆಯಾಗಿತ್ತು. ಹೀಗಾಗಿ ಇಲ್ಲಿನ ವೈದ್ಯರು …
Read More »ಕೊರೊನಾ ಸೋಂಕಿತ ಮಕ್ಕಳಲ್ಲಿ ನಗು ತರಿಸಿದ ಕೋವಿಡ್-19 ವೈದ್ಯ ………..
ಯಾದಗಿರಿ: ಜಿಲ್ಲೆಯಲ್ಲಿ ಸದ್ಯ ಕೊರೊನಾ ರುದ್ರ ತಾಂಡವಾಡುತ್ತಿದೆ. ಮಹಾರಾಷ್ಟ್ರದಿಂದ ಬಂದ ಕಾರ್ಮಿಕರಿಗೆ ಕೋವಿಡ್ ಎಂಬ ಬೇತಾಳ ಬೆನ್ನು ಬಿದ್ದಿದ್ದಾನೆ. ಹೀಗಾಗಿ ಯಾದಗಿರಿಯಲ್ಲಿ ಸೋಂಕಿತರ ಸಂಖ್ಯೆ 300ರ ಸಮೀಪ ಬಂದು ನಿಂತಿದೆ. ಈ 300ರಲ್ಲಿ ವೃದ್ಧರು, ಯುವಕರು, ಗರ್ಭಿಣಿ, ಬಾಣಂತಿಯರು ಹೀಗೇ ಎಲ್ಲಾ ವಯಸ್ಸಿನವರು ಇದ್ದಾರೆ. ಇದರ ಜೊತೆಗೆ ಹಾಲು ಕುಡಿಯುವ ಕಂದಮ್ಮಗಳಿಂದ 10 ವರ್ಷದ ವರೆಗಿನ ಮಕ್ಕಳು ಅತೀ ಹೆಚ್ಚಾಗಿರುವುದು, ಬಹಳಷ್ಟು ನೋವಿನ ಸಂಗತಿ. ಜಿಲ್ಲೆಯಲ್ಲಿ ಇದುವರೆಗೆ 55ಕ್ಕೂ …
Read More »ದಿನೇ ದಿನೇ ಬೆಂಗ್ಳೂರಲ್ಲಿ ಏರಿಕೆ ಆಗ್ತಿದೆ ಸೋಂಕು …………
ಬೆಂಗಳೂರು: ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಆರೋಗ್ಯಾಧಿಕಾರಿಗಳಿಗೆ ಮತ್ತು ಜನರಿಗೆ ಡೇಂಜರ್ ಅಲಾರಂ ಬಂದಿದೆ. ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂತು ಎಂಬ ಹೊತ್ತಲ್ಲೇ ಆಘಾತಕಾರಿ ಬೆಳವಣಿಗೆಯೊಂದು ಕಾಣಿತ್ತಿದೆ. ಬೆಂಗಳೂರಿನಲ್ಲಿ 8-10 ಬರುತ್ತಿದ್ದ ಪ್ರಕರಣಗಳು ಈಗ ದಿನಕ್ಕೆ 25-30 ಪ್ರಕರಣಗಳು ಬರಲು ಆರಂಭವಾಗುತ್ತಿವೆ. ಅದರಲ್ಲೂ ಹೊಸ ಏರಿಯಾಗಳಲ್ಲಿ ಕೊರೊನಾ ಪಾಸಿಟಿವ್ ಬರುತ್ತಿದೆ. ಈ ಮೂಲಕ ಕೊರೊನಾ ಪ್ರಕರಣಗಳು ಡೇಂಜರ್ ಅಲಾರಂ ಆಗಿವೆ. ಈ ಬೆಳವಣಿಗೆಯಿಂದ …
Read More »ರಾಜ್ಯ ಸಭೆ-ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಮಹತ್ವದ ಸಭೆ
ಬೆಂಗಳೂರು, ಜೂ.1-ಮುಂಬರುವ ರಾಜ್ಯ ಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರ ಹಾಗೂ ಪಕ್ಷದ ಪ್ರಮುಖರ ಮಹತ್ವದ ಸಭೆ ಸದ್ಯದಲ್ಲೆ ನಡೆಸಲು ಉದ್ದೇಶಿಸಲಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ. ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ತಾಂಡವವಾಡುತ್ತಿರುವ ಕೊರೋನಾ ವೈರಾಣು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯ, ಪಕ್ಷ ಸಂಘಟನೆ ಮೊದಲಾದ ವಿಚಾರಗಳ ಬಗ್ಗೆ …
Read More »ಬಿ.ಎಸ್.ಯಡಿಯೂರಪ್ಪ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ………
ಬೆಂಗಳೂರು, ಜೂ.1- ತಮ್ಮ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಪ್ರತ್ಯೇಕ ಸಭೆ ನಡೆಸಿರುವ ಭಿನ್ನಮತೀಯರ ನಡೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ಒಂದೆರಡು ದಿನಗಳಲ್ಲಿ ಶಾಸಕರು ಮತ್ತೆ ಸಭೆ ನಡೆಸಬಹುದೆಂಬ ಸುಳಿವು ದೊರೆತಿರುವ ಹಿನ್ನೆಲೆಯಲ್ಲಿ ಅಸಮಾಧಾನಿತ ಶಾಸಕರ ಜೊತೆ ಸಭೆ ನಡೆಸಿ ಅವರ ಬೇಕುಬೇಡುಗಳನ್ನು ಆಲಿಸಲಿದ್ದಾರೆ. ಮೂರ್ನಾಲ್ಕು ದಿನಗಳೊಳಗೆ ಯಡಿಯೂರಪ್ಪನವರು ತಮ್ಮ ನಿವಾಸ ಕಾವೇರಿಯಲ್ಲಿ ಶಾಸಕರ ಸಭೆ ನಡೆಸಲಿದ್ದು, ಕ್ಷೇತ್ರಗಳಿಗೆ ಬೇಕಾದ ಅನುದಾನ, ಅಧಿಕಾರಿಗಳ ವರ್ಗಾವಣೆ, ಮಂಜೂರಾಗಬೇಕಾದ …
Read More »ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿಯ ದೇವಸ್ಥಾನಕ್ಕೆ ನಿನ್ನೆ ಗಣ್ಯರು ಆಗಮಿಸಿದ್ದ ಹಿನ್ನೆಲೆಯಲ್ಲಿ ಮಹಾಮಂಗಳಾರತಿಯನ್ನು ಮಾಡಲಾಗುತ್ತಿತ್ತು.
ಮಂಡ್ಯ ಜಿಲ್ಲೆಯ ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿ ದೇವಸ್ಥಾನದ ಸೆಕ್ಯುರಿಟಿ ಗಾರ್ಡ್ ಮಹೇಂದ್ರ ಅವರ ಮೇಲೆ ಕಿಡಿಗೇಡಿಗಳಿಂದ ಮಾರಣಾಂತಿಕ ಹಲ್ಲೆ…ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲು. ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿರುವ ಪೋಲಿಸರು ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿಯ ದೇವಸ್ಥಾನಕ್ಕೆ ನಿನ್ನೆ ಗಣ್ಯರು ಆಗಮಿಸಿದ್ದ ಹಿನ್ನೆಲೆಯಲ್ಲಿ ಮಹಾಮಂಗಳಾರತಿಯನ್ನು ಮಾಡಲಾಗುತ್ತಿತ್ತು.
Read More »