Breaking News

ಸಚಿವ ಸಂಪುಟ ವಿಸ್ತರಣೆಗೆ ಸೋಮವಾರ ಶುಭ ಮುಹೂರ್ತ? – ಹೈಕಮಾಂಡ್ ಮುಂದೆ 2 ದಿನಾಂಕ ಪ್ರಸ್ತಾಪಿಸಿದ ಡಿಕೆಶಿ

ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ʻಕೈʼ ಶಾಸಕರ ದೆಹಲಿ  ಪರೇಡ್ ಶುರುವಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಹೈಕಮಾಂಡ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರೆ. ಈಗಾಗಲೇ 20 ಕ್ಕೂ ಹೆಚ್ಚು ಶಾಸಕರು ದೆಹಲಿಯಲ್ಲೇ ಬೀಡುಬಬಿಟ್ಟಿದ್ದು, ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ ದೆಹಲಿಯಲ್ಲಿ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿರುವ ಸಿಎಂ ಡಿಕೆ ಶಿವಕುಮಾರ್‌ ಅವರು ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದ್ದಾರೆ. ಸೋನಿಯಾ ಗಾಂಧಿ …

Read More »

ಹೊತ್ತಿ ಉರಿದ ಕೊಟ್ಟಿಗೆ – 12 ಜಾನುವಾರುಗಳು ಸಜೀವ ದಹನ

ಧಾರವಾಡ: ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ  ಹೊತ್ತಿ ಉರಿದ ಪರಿಣಾಮ 12 ಜಾನುವಾರುಗಳು ಸಜೀವ ದಹನಗೊಂಡ ಘಟನೆ ತಾಲೂಕಿನ  ಮುಮ್ಮಿಗಟ್ಟಿ ಗ್ರಾಮದಲ್ಲಿ ನಡೆದಿದೆ. ಬೆಂಕಿಗೆ ಆಹುತಿಯಾದ ಜಾನುವಾರುಗಳು ಸಾಗರ ಅಸುಂಡಿ, ಧರಣೇಂದ್ರ ಅಸುಂಡಿ ಎಂಬ ರೈತರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಅವಘಡದಲ್ಲಿ ಧರಣೇಂದ್ರ ಅಸುಂಡಿಯವರ ಎರಡು ಆಕಳು, ಮೂರು ಎಮ್ಮೆ, ಎರಡು ಆಕಳ ಕರು ಸಾವನ್ನಪ್ಪಿವೆ. ಸಾಗರ ಅಸುಂಡಿಯವರ ಮೂರು ಎಮ್ಮೆ, ಎರಡು ಎಮ್ಮೆ ಕರುಗಳು ಸಾವನ್ನಪ್ಪಿವೆ. ಅಲ್ಲದೇ …

Read More »

ಆಫ್ರಿಕಾದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಗಳ ಮಾರಾಟ – ಚಿಕ್ಕಮಗಳೂರು ಹಕ್ಕಿಪಿಕ್ಕಿ ದಂಪತಿಯಿಂದ ನೀಚ ಕೃತ್ಯ

ಚಿಕ್ಕಮಗಳೂರು: ಇಲ್ಲಿನ ಮಲ್ಲೇನಹಳ್ಳಿ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ ದಂಪತಿ ಹಣಕ್ಕಾಗಿ 20 ವರ್ಷದ ಮಗಳನ್ನೇ ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟ ಮಾಡಿದ ಘಟನೆ ನಡೆದಿದೆ. ಪಶ್ಚಿಮ ಆಫ್ರಿಕಾದ ಸೆನಗಲ್‌ಗೆ ದಂಪತಿ ಗಿಡಮೂಲಿಕೆ ವ್ಯಾಪಾರಕ್ಕೆಂದು ತೆರಳಿದ್ದರು. ಈ ವೇಳೆ 7 ಲಕ್ಷ ರೂ.ಗೆ ಮಗಳನ್ನು ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಿದ್ದಾರೆ. ಬಳಿಕ ಮಗಳು ಭಾರತಕ್ಕೆ ಹೋಗಿದ್ದಾಳೆ ಎಂದು ಜೊತೆಗಿದ್ದವರ ಬಳಿ ಕತೆ ಹೇಳಿದ್ದರು. ಕಷ್ಟಪಟ್ಟು ಸೆನೆಗಲ್‌ನಿಂದಲೇ ಪರಿಚಯದವರನ್ನು ಯುವತಿ ಸಂಪರ್ಕಿಸಿದ್ದಳು. ಈ ವೇಳೆ, ತಂದೆ, …

Read More »

ಅಣ್ಣನ ಪ್ರೀತಿ ನಿರಾಕರಿಸಿದ್ದಕ್ಕೆ ತಮ್ಮನಿಂದ ಕಾನೂನು ವಿದ್ಯಾರ್ಥಿನಿಯ ಹತ್ಯೆ – ವಿಚ್ಛೇದಿತ ಪ್ರಿಯಕರ ಸೇರಿ ಇಬ್ಬರು ಅಂದರ್‌

ಬೆಂಗಳೂರು: ಅಣ್ಣನ ಪ್ರೀತಿ  ನಿರಾಕರಿಸಿದ ಯುವತಿಯನ್ನು ಆತನ ತಮ್ಮ ಚಾಕು ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ  ಕೋಡಿಹಳ್ಳಿಯ ಹೆಚ್‌ಎಎಲ್ ರಸ್ತೆಯಲ್ಲಿ ನಡೆದಿದೆ. ಅಮೃತ ಚಾಕು ಇರಿತಕ್ಕೊಳಗಾಗಿ ಸಾವನ್ನಪ್ಪಿದ ಯುವತಿ. ಜು. 13 ರಂದು ಯುವತಿಗೆ ಚಾಕು ಇರಿಯಲಾಗಿತ್ತು. ರಕ್ತದ ಮಡುವಲ್ಲಿ ರಸ್ತೆಯಲ್ಲಿಯೇ ಬಿದ್ದು ಒದ್ದಾಡುತ್ತಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಆಕೆ ಜು.15ರ ಸಂಜೆ ಸಾವನ್ನಪ್ಪಿದ್ದಾಳೆ. ಓಂ ಶಕ್ತಿ ಮಾಲೆ ಹಾಕುವ ವೇಳೆ ಎರಡು ಕುಟುಂಬಗಳ ನಡುವೆ …

Read More »

ಅಶ್ಲೀಲ ಕಮೆಂಟ್ ಮಾಡೋ ಶೂರರಿಗೆ ಶಾಕ್ – 6 ತಿಂಗಳಿಂದ 1 ವರ್ಷ ಜಾಮೀನು ರಹಿತ ಜೈಲು ಶಿಕ್ಷೆ

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ  ಅಶ್ಲೀಲವಾಗಿ ಕಮೆಂಟ್ ಮಾಡುವವರ ಹಾವಳಿ ತಡೆಯುವ ಉದ್ದೇಶದಿಂದ ಇದೀಗ ಕಠಿಣ ಕಾಯ್ದೆಯೊಂದನ್ನು ಜಾರಿಗೆ ತರಲಾಗಿದ್ದು, ಕಮೆಂಟ್ ಶೂರರಿಗೆ ಶಾಕ್ ನೀಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಮೆಂಟ್  ಮಾಡಿ ಸಿಕ್ಕಿಬಿದ್ರೆ ಅಂತವರಿಗೆ 6 ತಿಂಗಳಿಂದ 1 ವರ್ಷದವರೆಗೆ ಜೈಲು ಶಿಕ್ಷೆ ನೀಡಲಾಗುವುದು. ಜೊತೆಗೆ 1 ವರ್ಷದವರೆಗೆ ಜಾಮೀನು ರಹಿತ ಕಠಿಣ ಕಾಯ್ದೆಯನ್ನು 2024ರ ಜುಲೈ 1ರಿಂದ ಜಾರಿಗೆ ಬಂದಿರುವ ಐಟಿ ಕಾಯ್ದೆಗಳನ್ವಯ ಜಾರಿಗೆ ತರಲಾಗಿದೆ. ಈ ಶಿಕ್ಷೆಯಾದ …

Read More »

ಆರೇಳು ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ – ಒಂದೂವರೆ ವರ್ಷದ ಕಂದಮ್ಮ ಸಾವು

ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದಾಗ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ರಾಯಚೂರಿನ  ಸಿಂಧನೂರು ತಾಲೂಕಿನ ಕೆ.ಹಂಚಿಕಾಳ ಕ್ಯಾಂಪಿನಲ್ಲಿ ನಡೆದಿದೆ. 18 ತಿಂಗಳ ಅನಂ ಬಲಿಯಾದ ಪುಟ್ಟ ಬಾಲಕಿ. ನಿದ್ದೆಯಿಂದ ಎದ್ದು ಹೊರಗಡೆ ಬಂದಿದ್ದ ಮಗು ಮನೆ ಮುಂದೆ ಆಟವಾಡುತ್ತಿತ್ತು. ಈ ವೇಳೆ ಆರೇಳು ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಮಗುವನ್ನು ಎಳೆದಾಡಿ ಮನಬಂದಂತೆ ಕಚ್ಚಿವೆ. ಕೂಡಲೇ …

Read More »

ಉಪಸಭಾಪತಿ ಪ್ರಾಣೇಶ್ ಪರಿಷತ್‌ ಸದಸ್ಯತ್ವ ರದ್ದು

ನವದೆಹಲಿ: ಉಪಸಭಾಪತಿ ಪ್ರಾಣೇಶ್  ಪರಿಷತ್‌ ಸದಸ್ಯತ್ವ ರದ್ದುಗೊಳಿಸಿ ಸುಪ್ರೀಂ ಕೋರ್ಟ್‌  ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಪ್ರಾಣೇಶ್‌ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಗಾಯತ್ರಿ ಶಾಂತೇಗೌಡ ಮೇಲುಗೈ ಸಾಧಿಸಿದ್ದಾರೆ. ಚಿಕ್ಕಮಗಳೂರು ಕ್ಷೇತ್ರದಿಂದ ಪರಿಷತ್‌ ಸ್ಥಾನಕ್ಕೆ 2021ರ …

Read More »

ಬುದ್ಧಿವಾದ ಹೇಳಿದ್ದಕ್ಕೆ ಅಜ್ಜಿಯನ್ನೇ ಕೊಂದ ಮೊಮ್ಮಗ

ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ಅಜ್ಜಿಯನ್ನೇ  ಮೊಮ್ಮಗ  ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬನ್ನೇರುಘಟ್ಟ  ಪೊಲೀಸ್ ಠಾಣಾ ವ್ಯಾಪ್ತಿಯ ಕಂಚಗಯ್ಯದೊಡ್ಡಿಯಲ್ಲಿ ನಡೆದಿದೆ. ಗೌರಮ್ಮ (65) ಮೃತ ವೃದ್ಧೆ. ಪ್ರಜ್ವಲ್ ಕೊಲೆ ಮಾಡಿದ ಮೊಮ್ಮಗ. ಪ್ರಜ್ವಲ್ ಎಲ್ಲಿಯೂ ಕೆಲಸಕ್ಕೆ ಹೋಗದೇ ಗಾಂಜಾ, ಕುಡಿತದ ವ್ಯಸನಿಯಾಗಿದ್ದ. ಮಗ ಕೈ ತಪ್ಪುತ್ತಿದ್ದಾನೆ ಎಂದು ಅಜ್ಜಿ ಆತನ ತಾಯಿಗೆ ಹೇಳಿದ್ದಾರೆ. ನಶೆಯಲ್ಲಿ ಮನೆಗೆ ಬಂದು ಗಲಾಟೆ ಮಾಡಿದಾಗ ಅಜ್ಜಿ ಆತನಿಗೆ ಬುದ್ಧಿ ಹೇಳಿದ್ದರು. ಇದರಿಂದ ರೊಚ್ಚಿಗೆದ್ದ ಮೊಮ್ಮಗ …

Read More »

ಚಾಕು ಇರಿದು ಪತಿಯ ಹತ್ಯೆ, ಮಗನ ಕೊಲೆಗೂ ಯತ್ನ – ಶವದ ಪಕ್ಕದಲ್ಲೇ ರಾಕ್ಷಸಿಯಂತೆ ಮೊಬೈಲ್ ನೋಡ್ತಿದ್ದ ಹಂತಕಿ ಪತ್ನಿ

ಧಾರವಾಡ: ಈ ಜಗತ್ತಿನಲ್ಲಿ ಕೆಟ್ಟ ಮಕ್ಕಳು ಇರಬಹುದು ಕೆಟ್ಟ ತಾಯಿ ಇರಲಾರಳು ಎಂಬ ಮಾತಿದೆ. ಆದರೆ, ಈ ಮಾತಿಗೆ ತದ್ವಿರುದ್ಧವಾದ ಘಟನೆಯೊಂದು ವಿದ್ಯಾಕಾಶಿ ಧಾರವಾಡದಲ್ಲಿ  ನಡೆದಿದೆ. ಧಾರವಾಡದ ಬಾರಾಕೊಟ್ರಿಯಲ್ಲಿರುವ ಅಪಾರ್ಟ್ಮೆಂಟ್‌ವೊಂದರಲ್ಲಿ ವಾಸವಾಗಿದ್ದ ಡಾ.ಕಿರಣ್ ಹೊನ್ನಣ್ಣವರ (45) ಎಂಬುವವರ ಭೀಕರ ಕೊಲೆ ನಡೆದಿದೆ. ಅಲ್ಲದೇ ಕಿರಣ್ ಅವರ ಪುತ್ರ ನಿಹಿತ್ ಎಂಬ ಎಂಟು ವರ್ಷದ ಮಗುವಿನ ಮೇಲೂ ಭೀಕರ ಚಾಕು ದಾಳಿ ನಡೆದಿದ್ದು, ಇದೀಗ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಈ …

Read More »

ಡಿಕೆ ಶಿವಕುಮಾರ್ ಸಿಎಂ ಆಗಿರೋದು ವಿಪಕ್ಷಗಳಿಗೆ ತಡೆಯಲು ಆಗ್ತಿಲ್ಲ: ಚಲುವರಾಯಸ್ವಾಮಿ

ಬೆಂಗಳೂರು: ಡಿಕೆ ಶಿವಕುಮಾರ್  ಸಿಎಂ ಆಗಿರೋದು ತಡೆಯಲು ಆಗದೇ ಬಿಡದಿ ಟೌನ್‌ಶಿಪ್  ವಿಚಾರದಲ್ಲಿ ದೇವೇಗೌಡ, ಕುಮಾರಸ್ವಾಮಿ, ಅಶೋಕ್ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ  ಕಿಡಿಕಾರಿದ್ದಾರೆ. ಮಂಗಳವಾರ ದೇವೇಗೌಡರು ಸುದ್ದಿಗೋಷ್ಟಿ ಮಾಡಿದ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ದೇವೇಗೌಡರು ನಿನ್ನೆ ಮಾತಾಡಿದ್ದಾರೆ. ದೇವೇಗೌಡರ ಬಗ್ಗೆ ನಮಗೆ ಅಪಾರ ಗೌರವ ಇದೆ. ಸತ್ಯಾಗ್ರಹ ಮಾಡ್ತೀನಿ ಅಂತಾರೆ.ನೀಟ್ ಲೋಪ ಆದಾಗ ಮಕ್ಕಳು ಆತ್ಮಹತ್ಯೆ ಮಾಡಿಕೊಂಡರು ದೇವೇಗೌಡ ಮಾತೇ ಆಡಲಿಲ್ಲ. ಇವತ್ತು …

Read More »