Breaking News

ಉಚಿತವಾಗಿ ಕೋಳಿ ಹಂಚಿಕೆ – ಭೀತಿ ನಡುವೆಯೂ ಕೋಳಿ ಒಯ್ಯಲು ಮುಗಿಬಿದ್ದ ಜನ

ಚಿಕ್ಕೋಡಿ/ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕೊರೊನಾ ವೈರಸ್ ಭೀತಿಯಿಂದ ಕೋಳಿ ವ್ಯಾಪಾರ ನೆಲಕಚ್ಚಿರುವ ಹಿನ್ನೆಲೆಯಲ್ಲಿ ಉಚಿತವಾಗಿ ಕೋಳಿಗಳ ಹಂಚಿಕೆ ಮಾಡಲಾಗಿದೆ. ಕೋಳಿಗಳ ಜೀವಂತ ಸಮಾಧಿ ಬಳಿಕ ಈಗ ಫಾರಂ ಮಾಲೀಕರು ಚಿಕನ್ ಪ್ರಿಯರಿಗೆ ಉಚಿತವಾಗಿ ಕೋಳಿಗಳನ್ನ ಹಂಚಿಕೆ ಮಾಡಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ವಿವಿಧ ಕಾಲೋನಿಗಳಲ್ಲಿ ಲಾರಿಗಳಲ್ಲಿ ಕೋಳಿ ತಂದು ಜನರಿಗೆ ಉಚಿತವಾಗಿ ನೀಡಲಾಗಿದೆ. ಕೊರೊನಾ ಭೀತಿ ನಡುವೆಯೂ ಉಚಿತ ಕೋಳಿ ತೆಗೆದುಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು ಒಬ್ಬರು ಎರಡು …

Read More »

ಮಹಾಮಾರಿ ಕೊರೊನಾ ಭೀತಿ- ಮಣಿಪಾಲ ವಿವಿಗೆ 15 ದಿನ ರಜೆ

ಉಡುಪಿ: ಕರೊನಾ ವೈರಸ್ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಒಂದು ವಾರ ಹೈ ಅಲರ್ಟ್ ಘೋಷಿಸಿದೆ. ಇದೀಗ ಜಿಲ್ಲೆಯ ಮಣಿಪಾಲ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಎರಡು ವಾರಗಳ ಕಾಲ ರಜೆ ಘೋಷಿಸಿದೆ. ವಿವಿಯ ಸಾವಿರಾರು ವಿದ್ಯಾರ್ಥಿಗಳು ವಿದೇಶದ ಸಂಪರ್ಕ ಹೊಂದಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶವನ್ನು ಹೊರಡಿಸಿದೆ. ಹೊರ ರಾಜ್ಯದ ವಿದ್ಯಾರ್ಥಿಗಳು ಮಣಿಪಾಲದಿಂದ ತಮ್ಮ ರಾಜ್ಯಗಳಿಗೆ ತೆರಳಿದ್ದು, ವಿದೇಶದ ವಿದ್ಯಾರ್ಥಿಗಳು ಮಣಿಪಾಲದಲ್ಲೇ ಉಳಿದುಕೊಳ್ಳುವ ಸೂಚನೆಯನ್ನು ವಿವಿ ಕೊಟ್ಟಿದೆ. ಇಂಗ್ಲಿಷ್ ಮಾತನಾಡುವ ಐವತ್ನಾಲ್ಕು …

Read More »

ಶಿಕ್ಷಣ ಸಚಿವರ ಸಂದೇಶ ದ್ವಿತೀಯ ಪಿಯುಸಿ ವಿದ್ಯಾಥಿಗಳಿಗೆ

ಬೆಂಗಳೂರು, ಮಾ.16- ಮಾರ್ಚ್ 4ರಿಂದ ಪ್ರಾರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆ ಈವರೆಗೆ ಸುಲಲಿತವಾಗಿ ನಡೆದಿದ್ದು, ಇನ್ನೂ ಏಳು ದಿನಗಳ ಕಾಲ ನಡೆಯಲಿರುವ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಎದುರಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಹೇಳಿದ್ದಾರೆ. ಈಗಾಗಲೇ 39 ವಿಷಯಗಳ ಪರೀಕ್ಷೆ ಮುಗಿದಿದೆ. ಇನ್ನೂ 7 ಪರೀಕ್ಷೆಗಳು ನಡೆಯಬೇಕಿದೆ. ವಿದ್ಯಾರ್ಥಿಗಳು ನಿರ್ಭಯದಿಂದ ಪರೀಕ್ಷೆ ಬರೆಯಿರಿ. ವಿಜಯಪುರದಲ್ಲಿ ಯಾರೋ ಇಬ್ಬರು ಕಿಡಿಗೇಡಿಗಳು ಮಾಡಿದ ಕೃತ್ಯದಿಂದ ಸಾಮಾಜಿಕ ಜಾಲತಾಣದಲ್ಲಿ ಕೆಲವು ವದಂತಿ …

Read More »

ದೇಶದಲ್ಲಿ ಕೊರೊನಾ ಎಫೆಕ್ಟ್ ನಿಂದಾಗಿ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೂ ಕರಿಛಾಯೆ ಬೀರಿದೆ

ಹನೂರು, ಮಾ.16- ದೇಶದಲ್ಲಿ ಕೊರೊನಾ ಎಫೆಕ್ಟ್ ನಿಂದಾಗಿ ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೂ ಕರಿಛಾಯೆ ಬೀರಿದೆ. ಇದೇ ತಿಂಗಳು 21 ರಿಂದ 25ರ ವರೆಗೆ ಅದ್ಧೂರಿಯಾಗಿ ನಡೆಯಬೇಕಾಗಿದ್ದ ಯುಗಾದಿ ಹಬ್ಬದ ಜಾತಾ ಮಹೋತ್ಸವವನ್ನು ಸಂಪ್ರದಾಯದಂತೆ ಸ್ಥಳೀಯರಿಗೆ ಮಾತ್ರ ಸೀಮಿತಗೊಳಿಸಿದೆ. ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಬರುತ್ತಿದ್ದ ಮಾದಪ್ಪನ ಭಕ್ತರು ಮ.ಬೆಟ್ಟಕ್ಕೆ ಬಾರದಂತೆ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ನಿರ್ಬಂಧ ಹೇರಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ …

Read More »

ಕೊರೊನಾ ಹರಡದಂತೆ ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚುವರಿ ವೇತನ

ಬೆಂಗಳೂರು, ಮಾ.16- ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಾಮಾರಿ ಕೊರೊನಾ ಸೋಂಕು ಹಬ್ಬದಂತೆ ಹಗಲಿರುಳು ಯೋಧರ ರೀತಿ ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚುವರಿ ವೇತನ ಹಾಗೂ ಪಾಲಿಸಿ (ವಿಮೆ) ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸರ್ಕಾರಿ ವೈದ್ಯರು ಯೋಧರ ರೀತಿ ಕೊರೊನಾ ವೈರಸ್ ತಡೆಗಟ್ಟಲು ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ನಾನು ಅವರಿಗೆ ವಿಶೇಷವಾದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದ ಅವರು, ಸಿಬ್ಬಂದಿಗಳಿಗೆ ಆರ್ಥಿಕ ಬೆಂಬಲ ಹೆಚ್ಚಿಸುವ ನಿಟ್ಟಿನಲ್ಲಿ ವೇತನ ಹೆಚ್ಚಳ …

Read More »

ಯೆಸ್ ಬ್ಯಾಂಕ್‍ನಿಂದ 12,800 ಕೋಟಿ ರೂ. ಸಾಲ ಸುಸ್ತಿ : ಅನಿಲ್ ಅಂಬಾನಿಗೆ ಇಡಿ ಸಮನ್ಸ್

ಯೆಸ್ ಬ್ಯಾಂಕ್‍ನಿಂದ 12,800 ಕೋಟಿ ರೂ. ಸಾಲ ಸುಸ್ತಿ : ಅನಿಲ್ ಅಂಬಾನಿಗೆ ಇಡಿ ಸಮನ್ಸ್ ನವದೆಹಲಿ, ಮಾ.16-ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ(ಇಡಿ) ರಿಲಾಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಸಮನ್ಸ್ ಜಾರಿಗೊಳಿಸಿದೆ. ಉದ್ಯಮದಲ್ಲಿ ಭಾರೀ ನಷ್ಟ ಅನುಭವಿಸಿ ಕಂಗೆಟ್ಟಿರುವ ಅನಿಲ್ ಅಂಬಾನಿಗೆ ಇಡಿ ನೀಡಿರುವ ಸಮನ್ಸ್‍ನಿಂದಾಗಿ ಮತ್ತೊಂದು ಕಂಟಕ ಎದುರಾದಂತಾಗಿದೆ. ತೀವ್ರ ಆರ್ಥಿಕ …

Read More »

ಖಾನಾಪುರ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕರಡಿ ದಾಳಿಯಿಂದ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವೀಸ್ಟ್

ಖಾನಾಪುರ: ವಾರದ ಹಿಂದೆ ಖಾನಾಪುರ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕರಡಿ ದಾಳಿಯಿಂದ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವೀಸ್ಟ್ ದೊರೆತಿದ್ದು, ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಾನಾಪುರ ತಾಲೂಕಿನ ಅಮಟೆ ಗ್ರಾಮದ ದೇವಿದಾಸ ಗಾವಕರ್, ಸಂತೋಷ ಸೋಮಾ ಗಾವಕರ, ವಿಠ್ಠಲ ನಾಯಕ, ವಿಠ್ಠಲ ಗಣಪತಿ ನಾಯಕ, ರಾಮಾ ಗಣಪತಿ ನಾಯಕ, ಪ್ರಶಾಂತ ಗಣಪತಿ ಸುತಾರ ಬಂಧಿತರು. ಮಾ. 11 ರಂದು ಅಮಟೆ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ …

Read More »

ಭಾರತದಲ್ಲಿ ಅದೂ 72 ಗಂಟೆಗಳಲ್ಲೇ ಕೊ’ರೋ’ನಾಗೆ ಮೂರನೆ ಬ’ಲಿ

ಮುಂಬೈ: ಕೊ’ರೋ’ನಾ ದ ಹಾವಳಿ ಹೆಚ್ಚಾಗುತ್ತಿದೆ‌. ಮಹಾರಾಷ್ಟ್ರದಲ್ಲಿ ಕೊ’ರೋ’ನಾ ವೈ’ರಸ್ ನಿಂದ 71 ವರ್ಷದ ರೋಗಿಯೊಬ್ಬ ಮೃ’ತಪಟ್ಟಿ’ರುವ ಸುದ್ದಿ ವರದಿಯಾಗಿದೆ. ಮೂಲಗಳ ಪ್ರಕಾರ ವ್ಯಕ್ತಿಯೊಬ್ಬ ಸೌದಿ ಅರಬ್ ನಿಂದ ಭಾರತಕ್ಕೆ ವಾಪಸ್ಸಾಗಿದ್ದ.‌ ಆತನನ್ನ ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಲಾಗಿತ್ತು. ‌ಆತನಲ್ಲಿ ಡಯಾಬಿಟಿಸ್ ಹಾಗು ಹೈಪರ್‌ಟೆನ್ಶನ್ ಕೂಡ ಇತ್ತು. ಆದರೆ ಮೃತನ ಸ್ಯಾಂಪಲ್‌ನ್ನ ಸದ್ಯ ನಾಗಪುರಕ್ಕೆ ಕಳಿಸಲಾಗಿದೆ‌. ಇನ್ನೂ ಕೊ’ರೋ’ನಾ ದಿಂದ ಸಾವನ್ನಾಗಿದೆ ಎಂಬ ಸ್ಪಷ್ಟನೆ ಸಿಕ್ಕಿಲ್ಲ. ಭಾರತದಲ್ಲಿ‌ ಇದುವರೆಗೆ ಈ …

Read More »

ದಾವಣಗೆರೆಯಲ್ಲಿ ಕರೋನಾಕ್ಕೆ ಲಸಿಕೆ, ಹಾಕಿಸಿಕೊಂಡವರೇ ಪುಣ್ಯವಂತರು!

ದಾವಣಗೆರೆ ಖಾಸಗಿ ಶಾಲೆಯೊಂದರಲ್ಲಿ ಕರೋನಾಕ್ಕೆ ಲಸಿಕೆ ಸಿಕ್ಕಿದೆ. ಆಯುರ್ವೇದ ವೈದ್ಯರೊಬ್ಬರು ಅನೇಕ ಜನರಿಗೆ ಲಸಿಕೆ ಹಾಕಿದ್ದಾರೆ.ಜಿಲ್ಲಾಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಇದಾದ ಮೇಲೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಒಟ್ಟಿನಲ್ಲಿ ಕರೋನಾ ಭೀತಿ ನಡುವೆ ಇದೊಂದು ಸುದ್ದಿ ಒಂದಿಷ್ಟು ಹಲ್ ಚಲ್ ಗೆ ಕಾರಣವಾಗಿತ್ತು.

Read More »

ಮೊದಲು ₹18 ಕೋಟಿ, ನಂತರ 12 ಕೋಟಿಗೆ ಮನವಿ; ಸುನೀಲ್​ ಪುರಾಣಿಕ್​ಗೆ ಸಿಎಂ ತರಾಟೆ

ಕರ್ನಾಟಕ ಚಲನಚಿತ್ರ ಅಕಾಡೆಮಿ ಒಂದಕ್ಕೇ ಬರೋಬ್ಬರಿ 18 ಕೋಟಿ ರೂಪಾಯಿ ಅನುದಾನ ಕೇಳಿದ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್‌ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತರಾಟೆ ತೆಗೆದುಕೊಂಡಿದ್ದಾರೆ. ಸುನೀಲ್ ಪುರಾಣಿಕ್ ಸಿಎಂ ಬಳಿ ಒಂದು ವರ್ಷಕ್ಕೆ ₹18 ಕೋಟಿಯನ್ನ ಚಲನಚಿತ್ರ ಅಕಾಡೆಮಿಗೆ ಬಿಡುಗಡೆ ಮಾಡಿ ಎಂದು ಕೇಳಿದ್ದಾರಂತೆ.. 18 ಕೋಟಿ ರೂಪಾಯಿಗಳ ಮನವಿ ಪತ್ರ ತೆಗೆದುಕೊಂಡು ಸಿಎಂ ಬಳಿ ಹೋದ ಸುನೀಲ್ ಪುರಾಣಿಕ್ ಅದಕ್ಕೂ ಮುನ್ನ ಬಿಎಸ್​ವೈ ಪುತ್ರ ಬಿ.ವೈ ವಿಜಯೇಂದ್ರರನ್ನು ಭೇಟಿ …

Read More »