Breaking News

ಗ್ರಾಮೀಣ ವಸತಿ ನಿಗಮನಿಂದ ಕೂಡಲೇ ಹಣ ಬಿಡುಗಡೆಗೊಳಿಸಬೇಕೆಂದು ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾದವ ಅವರಿಗೆ ಮನವಿ ಸಲ್ಲಿಸಿದರು.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಗ್ರಾಮಸ್ಥರಿಂದ ರಾಜೀವಗಾಂಧೀ ಗ್ರಾಮೀಣ ವಸತಿ ನಿಗಮನಿಂದ ಕೂಡಲೇ ಹಣ ಬಿಡುಗಡೆಗೊಳಿಸಬೇಕೆಂದು ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾದವ ಅವರಿಗೆ ಮನವಿ ಸಲ್ಲಿಸಿದರು. ರಬಕವಿಯಲ್ಲಿ ಸುಮಾರು 224 ಫಲಾನುಭವಿಗಳಿಗೆ ರಾಜೀವಗಾಂಧೀ ಗ್ರಾಮೀಣ ವಸತಿ ನಿಗಮ ದಿಂದ ಬರಬೇಕಾದ ಹಣವು ಮೂರು ವರ್ಷಗಳ ಕಳೆದರೂ ಹಣ ಬಂದಿಲ್ಲ ಬಡ ಫಲಾನುಭವಿಗಳ ಪರಿಸ್ಥಿತಿ ಕಂಗಾಲಾಗಿದೆ. ನಮಗೆ ಬರಬೇಕಾದ ಹಣ ಕೊಡಿ ಸ್ವಾಮಿ ನಮ್ಮ ಪರಿಸ್ಥಿತಿ ಹದಗೆಟ್ಟು …

Read More »

ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಕರೆತರುವ ಕೆಲಸ ನಿರ್ವಹಿಸಿದ ಸಾರಿಗೆ ಇಲಾಖೆಯ ಸಿಬ್ಬಂದಿಗಳಿಗೆ ಬಡಸ ಹಾಗೂ ಬೆಂಡಿಗೇರಿ ಗ್ರಾಮದ ವಿದ್ಯಾರ್ಥಿಗಳು ಶುಕ್ರವಾರ ಸನ್ಮಾನಿಸಿ, ಗೌರವಿಸಿದ್ದಾರೆ…

ಬೆಳಗಾವಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಕರೆತರುವ ಕೆಲಸ ನಿರ್ವಹಿಸಿದ ಸಾರಿಗೆ ಇಲಾಖೆಯ ಸಿಬ್ಬಂದಿಗಳಿಗೆ ಬಡಸ ಹಾಗೂ ಬೆಂಡಿಗೇರಿ ಗ್ರಾಮದ ವಿದ್ಯಾರ್ಥಿಗಳು ಶುಕ್ರವಾರ ಸನ್ಮಾನಿಸಿ, ಗೌರವಿಸಿದ್ದಾರೆ. ಕೊರೊನಾ ಆತಂಕದ ನಡುವೆಯೇ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದಾರೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಪರೀಕ್ಷೆ ಕೇಂದ್ರಕ್ಕೆ ತೆರಳಲು ಸಹಕಾರಿಯಾದ ಸಾರಿಗೆ ಇಲಾಖೆಯ ಸಿಬ್ಬಂದಿಗಳ ಕಾರ್ಯವನ್ನು ಗ್ರಾಮಸ್ಥರು, ವಿದ್ಯಾರ್ಥಿಗಳು ಬಣ್ಣಿಸಿ, ಸನ್ಮಾನಿಸಿದ್ದರು. ಈ ವೇಳೆ ಮಾಸ್ಕ್, ಸ್ಯಾನಿಟೈಸರ್ ಬಳಸುವ ಮೂಲಕ ಸರ್ಕಾರದ ನಿಯಮಗಳನ್ನು …

Read More »

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ ತರಬೇತಿ

ಗೋಕಾಕ: ನೀರಿನ ಸ೦ರಕ್ಷಣೆ ನಮ್ಮೆಲ್ಲರ ಹೊಣೆ,  ನೀರು ಅಮೂಲ್ಯವಾದ ಸ೦ಪತ್ತು ಅದನ್ನು ಸ೦ರಕ್ಷಿಸುವದು ನಮ್ಮೆಲ್ಲರ ಹೊಣೆ.ಹಾಗಾಗಿ ನೀರು ನ್ನು ಪೋಲು ಮಾಡದೆ.ನೀರುನ್ನು ಕಲುಷಿತಗೊಳಿಸದ೦ತೆ ಸಹಕರಿಸಬೇಕು. ಎ೦ದು ಗ್ರಾಮೀಣ ಕುಡಿಯುವ ನೀರು ಮತ್ತು ನೈಮ೯ಲೈ ಉಪವಿಭಾಗ ಗೋಕಾಕ ಗ್ರಾಮೀಣ ಕುಡಿಯುವ ನೀರು ಉಪವಿಭಾಗ ಕಿರಿಯ ಅಭಿಯ೦ತರರಾದ . ನಿಲಮ್ಮ ಎಸ್.ಲಮಾಣಿ, ಹೇಳಿದರು. ತಾಲ್ಲೂಕು ಪ೦ಚಾಯತ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣ ಕುಡಿಯುವ ನೀರು ವಿಭಾಗ ಚಿಕ್ಕೋಡಿ, ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ …

Read More »

ಬೆಳ್ಳಂಬೆಳಗ್ಗೆ ಕೊರೊನಾ ಸೋಂಕಿತ ಕಳ್ಳ ಆಸ್ಪತ್ರೆಯಿಂದ ಎಸ್ಕೇಪ್!

ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಿಂದ ಕೊರೊನಾ ಸೋಂಕಿತ (ರೋಗಿ-14,537) ಎಸ್ಕೇಪ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಉಪನಗರ ಠಾಣೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಆರೋಪಿತನಾಗಿದ್ದ ವ್ಯಕ್ತಿಗೆ ಸೋಂಕು ದೃಢಪಟ್ಟಿತ್ತು. ಹೀಗಾಗಿ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ 5:30ಕ್ಕೆ ಕಿಮ್ಸ್ ಕೋವಿಡ್ ವಾರ್ಡಿನಿಂದ ಎಸ್ಕೇಪ್ ಆಗಿದ್ದಾನೆ. ಸೋಂಕಿತ ವ್ಯಕ್ತಿ ಕಿಮ್ಸ್ ನಿಂದ ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಬ್ಬರು ಪೊಲೀಸ್ ಸಿಬ್ಬಂದಿ ಕಾವಲಿಗಿದ್ದರೂ ಖದೀಮ ಎಸ್ಕೇಪ್ ಆಗಿದ್ದಾನೆ. …

Read More »

ಕಂಪ್ಲಿ ಪಟ್ಟಣದ ಪೊಲೀಸ್ ಠಾಣೆಯ 51 ವರ್ಷದ ಸಿಪಿಐಗೆ ಕೊರೊನಾ ಸೋಂಕಿರುವುದು ದೃಢ

ಬಳ್ಳಾರಿ: ಜಿಲ್ಲೆಯ ಕಂಪ್ಲಿ ಪಟ್ಟಣದ ಪೊಲೀಸ್ ಠಾಣೆಯ 51 ವರ್ಷದ ಸಿಪಿಐಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಸೋಂಕಿತ ಸಿಪಿಐ ಅವರನ್ನು ಕೋವಿಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಳೆದ ಒಂದು ವಾರದ ಹಿಂದೆ ಕಂಪ್ಲಿ ಪೊಲೀಸ್ ಠಾಣೆ ಪಿಎಸ್‍ಐ ಅವರಿಗೆ ಗಂಡು ಮಗು ಜನಿಸಿತ್ತು. ಹೀಗಾಗಿ ನಗರದ ಹೊರ ವಲಯದ ಸಮುದಾಯ ಭವನದಲ್ಲಿ ಭರ್ಜರಿ ಪಾರ್ಟಿ ಕೊಟ್ಟಿದ್ದರು. ಅದೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಕಂಪ್ಲಿ ಪೊಲೀಸ್ ಠಾಣೆಯ ಪೇದೆಗೆ ಕೊರೊನಾ ಪಾಸಿಟಿವ್ ಬಂದಿತ್ತು. …

Read More »

ತಮ್ಮ ಗ್ರಾಮದ ರಸ್ತೆಗಳಿಗೆ ಸ್ವಂತ ಖರ್ಚಿನಲ್ಲಿ ಸ್ಯಾನಿಟೈಸ್ ಮಾಡಿದ ಯುವಕರು

ಕೊಡಗು: ಕೊರೊನಾ ಮಹಾಮಾರಿ ಸೋಂಕು ತಡೆಯುವ ಉದ್ದೇಶದಿಂದ ಗ್ರಾಮದ ಯುವಕರೇ ಸ್ವಯಂ ಪ್ರೇರಿತರಾಗಿ ರಸ್ತೆಗಳಿಗೆ ಸ್ಯಾನಿಟೈಸರ್ ಮಾಡುತ್ತಿರುವ ಘಟನೆ ವಿರಾಜಪೇಟೆ ತಾಲೂಕಿನ ಚಯ್ಯನಕೋಟೆ ಗ್ರಾಮದಲ್ಲಿ ನಡೆದಿದೆ. ಕೊರೊನಾ ವೈರಸ್ ಹರಡುವ ಮುನ್ನ ಎಚ್ಚರಿಕೆ ವಹಿಸಿದ ಯುವಕರು, ಒಂದು ವಾಟ್ಸಾಪ್ ಗ್ರೂಪ್ ಮಾಡಿಕೊಂಡು ಸ್ವಯಂ ಪ್ರೇರಿತರಾಗಿ ಗ್ರಾಮದ ಪ್ರತೀ ರಸ್ತೆಗಳಿಗೆ ಸ್ಯಾನಿಟೈಸರ್ ಸಿಂಪಡಿಸುತ್ತಿದ್ದಾರೆ. ಸ್ವಂತ ಖರ್ಚಿನಲ್ಲಿ ಸ್ಯಾನಿಟೈಸರ್ ಮಾಡಿರುವ ಯುವಕರ ಸಾಮಾಜಿಕ ಕಾಳಜಿಯ ಕೆಲಸಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗ್ರಾಮಕ್ಕೆ …

Read More »

ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ಯೋಧ ಚಿಕಿತ್ಸೆ ಫಲಕಾರಿಯಾಗದೆ ನಿಧನ

ಬೆಳಗಾವಿ/ಚಿಕ್ಕೋಡಿ: ಅಸ್ಸಾಂ ಗಡಿಯಲ್ಲಿ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸುನೀಲ ಸದಾಶಿವ ಖಿಲಾರೆ (36) ಮೃತ ಯೋಧ. ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದವರಾಗಿದ್ದು, ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಬಳಿಕ ಇವರನ್ನು ಗುವಾಹಾಟಿಯ ಆರ್ಮಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಸುನೀಲ ಸದಾಶಿವ ಖಿಲಾರೆ ವಿಧಿವಶರಾಗಿದ್ದಾರೆ. ಕಳೆದ 17 ವರ್ಷಗಳಿಂದ ಸೈನಿಕ ಸೇವೆಯಲ್ಲಿದ್ದ ಇವರು ಕೊರೊನಾ ಹೆಮ್ಮಾರಿ ಹಿನ್ನೆಲೆಯಲ್ಲಿ ಕಳೆದ 3 …

Read More »

ಮುಂದೆ ಯುದ್ಧ ಅಂತಹದ್ದೇನು ಜರುಗಲ್ಲ, ಗಾಬರಿಯಾಗುವ ಅವಶ್ಯಕತೆ ಇಲ್ಲ: ಕೋಡಿಮಠ ಶ್ರೀ

ಹಾಸನ: ಮುಂದೆ ಯುದ್ಧ ಅಂತಹದ್ದೇನು ಜರುಗಲ್ಲ, ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿರುವ ಕೋಡಿಮಠದಲ್ಲಿ ಮಾತನಾಡಿದ ಶ್ರೀಗಳು, ಜಗತ್ತಿನಾದ್ಯಂತ ಪ್ರಸಾರವಾಗಿರುವ ಈ ಮಾರಕ ರೋಗ ಮನುಕುಲಕ್ಕೆ ಕಂಟಕ ಪ್ರಾಯವಾಗಿದೆ. ಇದು ದಿನ ದಿನಕ್ಕೆ ಹೆಚ್ಚುತ್ತಿರುವುದು ಶೋಚನೀಯ ಪ್ರಸಂಗ ಎಂದು ಆತಂಕ ಹೊರಹಾಕಿದರು. ಮನುಷ್ಯ ಸ್ವಾರ್ಥದಿಂದ ತಂದುಕೊಳ್ಳುತ್ತಿರುವ ಈ ರೋಗ ಕೇವಲ ಮನುಕುಲ ಅಲ್ಲದೆ ಪ್ರಾಣಿ, ಪಕ್ಷಿ, ವೃಕ್ಷಗಳ ಮೇಲೆ …

Read More »

ಸಾರಿಗೆ ಸಿಬ್ಬಂದಿ ಕರ್ತವ್ಯ ಪ್ರಜ್ಞೆ- ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿಗಳು!

ಕಾರವಾರ: ಗಾಳಿ ಮಳೆಗೆ ದಾರಿಗೆ ಅಡ್ಡಲಾಗಿ ಬಿದ್ದಿದ್ದ ಮರವೊಂದನ್ನು ಸಾರಿಗೆ ಸಿಬ್ಬಂದಿಯೇ ತೆರವುಗೊಳಿಸಿದ್ದು, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳನ್ನು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪುವಂತೆ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗುರುವಾರದಿಂದ ಜಿಲ್ಲೆಯಾದ್ಯಂತ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾಣ ಮೂಲಕ ಕುಮಟಾ ತೆರಳುವ ರಸ್ತೆಯಲ್ಲಿ ಬೃಹತ್ ಮರವೊಂದು ಅಡ್ಡಲಾಗಿ ಬಿದ್ದಿತ್ತು. ಈ ವೇಳೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಮಕ್ಕಳನ್ನು …

Read More »

ಹಿಂಡಲಗಾ ಕೈದಿಗೆ ಕೊರೊನಾ ಸೋಂಕು……….

ಬೆಳಗಾವಿ: ಹಿಂಡಲಗಾ ಕೈದಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಹಿಂಡಲಗಾ ಹಾಗೂ ಕ್ಯಾಂಪ್ ಪೊಲೀಸ್ ಠಾಣೆಯ ಸಿಬ್ಬಂದಿಯಲ್ಲಿ ಆತಂಕ ಶುರುವಾಗಿದೆ. ಈಚೇಗೆ ಕುಖ್ಯಾತ ರೌಡಿಯನ್ನು ಕ್ಯಾಂಪ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದರು.  ಬಳಿಕ ಮೂರು ದಿನಗಳ ಹಿಂದೆಷ್ಟೇ ಹಿಂಡಲಗಾ ಜೈಲಿಗೆ ಕಳಿಸಲಾಗಿತ್ತು. ಆದ್ರೆ ಇಂದು ಕೈದಿಗೆ ಕೊರೊನಾ ಸೋಂಕು ಶಂಕೆ ವ್ಯಕ್ತವಾಗಿದೆ. ಇದರಿಂದ ಕ್ಯಾಂಪ್ ಹಾಗೂ ಹಿಂಡಲಗಾ ಪೊಲೀಸ ಸಿಬ್ಬಂದಿಗೆ ಆತಂಕ ಮನೆ ಮಾಡಿದೆ. ಜತೆಗೆ ಹಿಂಡಲಗಾ ಜೈಲಿನಲ್ಲಿ …

Read More »