Breaking News

ಮಂಗ್ಳೂರಿನಲ್ಲಿ ಸುರಕ್ಷತಾ ಕ್ರಮದೊಂದಿಗೆ ಸಲೂನ್, ಬ್ಯೂಟಿ ಪಾರ್ಲರ್ ಓಪನ್

ಮಂಗಳೂರು: ಹಲವು ಸುರಕ್ಷತಾ ಕ್ರಮಗಳನ್ನು ಕೈಗೊಂಡು ಮಂಗಳೂರಿನಲ್ಲಿ ಇಂದಿನಿಂದ ಸಲೂನ್, ಬ್ಯೂಟಿ ಪಾರ್ಲರ್‍ಗಳು ಕಾರ್ಯ ಆರಂಭಿಸಿವೆ. ಆರೋಗ್ಯ ಇಲಾಖೆ ನಿರ್ದೇಶನದಂತೆ ಹಲವು ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಮಂಗಳೂರಿನ ಬಳ್ಳಾಲ್ ಬಾಗ್‍ನ ಜನತಾ ಡಿಲಕ್ಸ್ ಹೋಟೆಲ್ ಬಳಿಯ ಡಿ ನೋವಾ ಯುನಿಸೆಕ್ಸ್ ಹೇರ್ ಸ್ಟುಡಿಯೋದಲ್ಲಿನ ಸಿಬ್ಬಂದಿ ಪಿಪಿಇ ಕಿಟ್ ಮಾದರಿಯ ಗಾರ್ಡ್ ಬಳಸಿ ಕಟ್ಟಿಂಗ್, ಶೇವಿಂಗ್ ಮಾಡುತ್ತಿದ್ದಾರೆ. ಗ್ರಾಹಕರು ಶಾಪ್ ಒಳಗೆ ಬರುವಾದ ಇಡೀ ದೇಹಕ್ಕೆ ಸ್ಯಾನಿಟೈಜರ್ ಸ್ಪ್ರೇ ಮಾಡಲಾಗುತ್ತಿದೆ. ಹ್ಯಾಂಡ್ ಸ್ಯಾನಿಟೈಜರ್ …

Read More »

ಟ್ರ್ಯಾಕ್ಟರ್ ನೇಗಿಲಿಗೆ ಸಿಲುಕಿ ಹಾವಿನ ಬೆನ್ನು ಮೂಳೆ ಮುರಿತ- ಶಸ್ತ್ರಚಿಕಿತ್ಸೆ ಮಾಡಿಸಿದ ರೈತ

ಚಿಕ್ಕಮಗಳೂರು: ಜಮೀನು ಉಳುಮೆ ಮಾಡುವಾಗ ಟ್ರ್ಯಾಕ್ಟರ್ ನೇಗಿಲಿಗೆ ಸಿಲುಕಿದ ಭಾರೀ ಗಾತ್ರದ ನಾಗರಹಾವಿಗೆ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ರೈತರೊಬ್ಬರು ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಗುಬ್ಬಿಗಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ರೈತ ಗೋಪಾಲಾಚಾರ್ ಅವರು ಜಮೀನಿನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ನೇಗಿಲಿಗೆ ಭೂಮಿಯೊಳಗಿದ್ದ ಬೃಹತ್ ಗಾತ್ರದ ನಾಗರಹಾವು ಸಿಲುಕಿಕೊಂಡಿದೆ. ನೇಗಿಲಿಗೆ ಸಿಕ್ಕ ನಾಗರಹಾವು ಬಿಡಿಸಿಕೊಳ್ಳಲಾಗದೆ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸಿದೆ. ಹಾವಿನ ಸ್ಥಿತಿ ಕಂಡ …

Read More »

ಇನ್ನು ಕೆಲವು ರಾಜ್ಯಗಳ ಗಡಿ ಬಂದ್ ಮಾಡಲು ಮುಂದಾದ ರಾಜ್ಯ ಸರ್ಕಾರ ……….

ಬೆಂಗಳೂರು, ಮೇ 20- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆಸ್ಪೋಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇನ್ನು ಕೆಲವು ರಾಜ್ಯಗಳ ಪ್ರವೇಶಕ್ಕೆ ನಿರ್ಬಂಧ ಹಾಕಲು ಮುಂದಾಗಿದೆ. ಈಗಾಗಲೇ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ಮತ್ತು ಕೇರಳ ರಾಜ್ಯಗಳ ಪ್ರವೇಶಕ್ಕೆ ಕರ್ನಾಟಕದಲ್ಲಿ ನಿರ್ಬಂಧವಿಧಿಸಲಾಗಿದೆ. ಈ ರಾಜ್ಯಗಳಿಂದ ಯಾರೇ ಬಂದರೂ ಕಡ್ಡಾಯವಾಗಿ ಕ್ವಾರಂಟೈನ್ ಒಳಗಾಗಬೇಕೆಂದು ಸೂಚನೆ ಕೊಡಲಾಗಿದೆ. ಇದರ ನಡುವೆ ಸೋಂಕು ಹೆಚ್ಚಿರುವ ಕೆಲ ರಾಜ್ಯಗಳಿಗೆ ಕರ್ನಾಟಕದಲ್ಲಿ ಕೆಲ ದಿನಗಳ ಮಟ್ಟಿಗೆ ಪ್ರವೇಶ …

Read More »

ಬೆಳಗ್ಗೆಯ ಬಸ್‍ಗೆ ಜನರು ರಾತ್ರಿಯೆಲ್ಲಾ ಮಕ್ಕಳ ಜೊತೆ ಬಸ್ ನಿಲ್ದಾಣದಲ್ಲಿ….

ಬೆಂಗಳೂರು: ಬೆಳಗ್ಗೆಯ ಬಸ್‍ಗೆ ಜನರು ರಾತ್ರಿ ಮಕ್ಕಳ ಜೊತೆ ಬಸ್ ನಿಲ್ದಾಣದಲ್ಲಿ ಕಳೆದಿದ್ದಾರೆ. ಸಂಜೆ ಆರು ಗಂಟೆಗೆ ಬಂದ ಬಹುತೇಕ ಜನಕ್ಕೆ ಬಸ್ ಸಿಕ್ಕಿರಲಿಲ್ಲ. ಇನ್ನು ವಾಪಸ್ ಮನೆಗೆ ಹೋಗಲು ಯಾವುದೇ ವಾಹನದ ವ್ಯವಸ್ಥೆ ಇಲ್ಲ. ಹಾಗಾಗಿ ಜನ ಬಸ್ ನಿಲ್ದಾಣದಲ್ಲಿಯೇ ರಾತ್ರಿ ಕಳೆದಿದ್ದಾರೆ. ಒಂದು ಬಸ್ ಗೆ ಕೇವಲ 30 ಜನರಿಗೆ ಮಾತ್ರ ಅವಕಾಶ ನೀಡಲಾಗ್ತಿದೆ. ಹಾಗಾಗಿ ಬಸ್ ಸಿಗದಿದ್ದರೆ ಹೇಗೆ ಅಂತ ಬಹುತೇಕರು ಪ್ರಯಾಣಿಕರು ನಿಲ್ದಾಣದಲ್ಲಿಯೇ ಇರುವಂತಾಯ್ತು. …

Read More »

ಏಳು ತಿಂಗಳ ಗರ್ಭಿಣಿಯ ಸಂಕಷ್ಟಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನಸ್ಸು ಕರಗಿದೆ.

ಉಡುಪಿ: ಏಳು ತಿಂಗಳ ಗರ್ಭಿಣಿಯ ಸಂಕಷ್ಟಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನಸ್ಸು ಕರಗಿದೆ. ಸೇವಾಸಿಂಧು ಆ್ಯಪ್ ಮೂಲಕ ನೋಂದಾಯಿಸದೆ ಮಹಾರಾಷ್ಟ್ರದಿಂದ ಹೊರಟು ಕಳೆದ ಮೂರು ದಿನಗಳಿಂದ ಕರ್ನಾಟಕದ ಗಡಿ ಭಾಗದಲ್ಲಿ ಸಿಕ್ಕಿಹಾಕಿಕೊಂಡಿದ್ದವವರ ಪೈಕಿ ಮಕ್ಕಳು, ಮಹಿಳೆಯರು ವೃದ್ಧರನ್ನ ರಾಜ್ಯದೊಳಗೆ ಬಿಡಲಾಗಿದೆ. ಅಧಿಕೃತ ಪಾಸ್ ಇಲ್ಲದೆ ಮಹಾರಾಷ್ಟ್ರ ಸರ್ಕಾರದ ಪಾಸ್ ಪಡೆದು ಮೂವತ್ತು ಮಂದಿ ಕರಾವಳಿ ಕರ್ನಾಟಕಕ್ಕೆ ಹೊರಟಿದ್ದರು. ನಿಪ್ಪಾಣಿಯಲ್ಲಿ 54 ಮಂದಿಯನ್ನು ಪೊಲೀಸರು ತಡೆದು ನಿಲ್ಲಿಸಿದ್ದರು. ವಾಪಸ್ ಮಹಾರಾಷ್ಟ್ರಕ್ಕೂ ಹೋಗದ ಸ್ಥಿತಿ …

Read More »

ದಕ್ಷಿಣ ರೈಲ್ವೇ ಬೆಂಗಳೂರು – ಬೆಳಗಾವಿ ಮತ್ತು ಬೆಂಗಳೂರು ಮೈಸೂರು ಮಧ್ಯೆ ಎಕ್ಸ್ ಪ್ರೆಸ್ ರೈಲು ಓಡಿಸಲು ಮುಂದಾಗಿದೆ

ಬೆಂಗಳೂರು: ದಕ್ಷಿಣ ರೈಲ್ವೇ ಬೆಂಗಳೂರು – ಬೆಳಗಾವಿ ಮತ್ತು ಬೆಂಗಳೂರು ಮೈಸೂರು ಮಧ್ಯೆ ಎಕ್ಸ್ ಪ್ರೆಸ್ ರೈಲು ಓಡಿಸಲು ಮುಂದಾಗಿದೆ. ಈ ರೈಲುಗಳ ಸೇವೆ ಮೇ 22ರಿಂದ ಆರಂಭವಾಗಲಿದ್ದು, ಭಾರತೀಯ ರೈಲ್ವೇ ವೆಬ್‍ಸೈಟ್ ಮೂಲಕ ಟಿಕೆಟ್ ಬುಕ್ ಮಾಡಿದವರಿಗೆ ಮಾತ್ರ ಈ ರೈಲುಗಳನ್ನು ಪ್ರಯಾಣಿಸಲು ಅನುಮತಿ ನೀಡಲಾಗುತ್ತದೆ. ನಿಲ್ದಾಣದಲ್ಲಿನ ಕೌಂಟರ್ ಗಳಲ್ಲಿ ಟಿಕೆಟ್ ನೀಡುವುದಿಲ್ಲ. ಭಾನುವಾರ ರೈಲುಗಳು ಸಂಚರಿಸುವುದಿಲ್ಲ ಎಂದು ದಕ್ಷಿಣ ರೈಲ್ವೇ ತಿಳಿಸಿದೆ. ಬೆಂಗಳೂರಿನಿಂದ ಬೆಳಗಾವಿಗೆ ಸೋಮವಾರ, ಬುಧವಾರ, …

Read More »

ಬಸ್‍ಗಳು ನಿಂತಲ್ಲೇ ನಿಂತಿದ್ದರೆ, ಇನ್ನೂ ಹಲವೆಡೆ ತಮ್ಮ ಊರಿಗೆ ತೆರಳಲು ಬಸ್‍ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.

ಚಿತ್ರದುರ್ಗ: ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಆರಂಭಿಸಿದ ಮೂರನೇ ದಿನವೂ ಸಮಸ್ಯೆಯಾಗುತ್ತಿದ್ದು, ಕೆಲವೆಡೆ ಪ್ರಯಾಣಿಕರಿಲ್ಲದೆ ಬಸ್‍ಗಳು ನಿಂತಲ್ಲೇ ನಿಂತಿದ್ದರೆ, ಇನ್ನೂ ಹಲವೆಡೆ ತಮ್ಮ ಊರಿಗೆ ತೆರಳಲು ಬಸ್‍ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಪ್ರತಿ ದಿನ ಪ್ರಯಾಣಿಕರು ವಿವಿಧೆಡೆಗೆ ತೆರಳಲು ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಮುಗಿಬೀಳುತ್ತಿದ್ದಾರೆ. ಗುರುವಾರ ಬೆಳಗ್ಗೆ ಸಹ ರಸ್ತೆಯುದ್ದಕ್ಕೂ ಜನ ಸಾಲುಗಟ್ಟಿ ನಿಂತಿದ್ದರು. ಮಕ್ಕಳು, ಮಹಿಳೆಯರು ಸೇರಿದಂತೆ ಪ್ರಯಾಣಿಕರೆಲ್ಲರೂ ಥಮರ್ಲ್ ಟೆಸ್ಟಿಂಗ್‍ಗಾಗಿ ಬಸ್ ನಿಲ್ದಾಣದ ಮುಂಭಾಗ ಸಾಲುಗಟ್ಟಿ …

Read More »

ಕ್ವಾರಂಟೈನ್‍ಗೆ ಅಡ್ಡಿಪಡಿಸಿ ಪೊಲೀಸರು ಮತ್ತು ಸ್ಥಳೀಯರ ನಡುವೇ ವಾಗ್ವಾದ……..

ಶಿವಮೊಗ್ಗ: ಮಹಾನಗರ ಪಾಲಿಕೆ ಉಪಮೇಯರ್ ಅವರೇ ಹೊರ ರಾಜ್ಯದಿಂದ ಬಂದವರ ಕ್ವಾರಂಟೈನ್‍ಗೆ ಅಡ್ಡಿಪಡಿಸಿರುವ ಘಟನೆ  ನಗರದಲ್ಲಿ ನಡೆದಿದೆ. ಪಾಲಿಕೆ ಉಪಮೇಯರ್ ಸುರೇಖಾ ಮುರಳೀಧರ್ ಅವರೇ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಮಾಡಲು ಸ್ಥಳೀಯರ ಜೊತೆ ಸೇರಿ ಅಡ್ಡಿಪಡಿಸಿದ್ದಾರೆ. ಬಾಪೂಜಿನಗರದಲ್ಲಿ ಈಗಾಗಲೇ ಎರಡು ಹಾಸ್ಟೆಲ್‍ಗಳಲ್ಲಿ ಕ್ವಾರಂಟೈನ್ ಕೇಂದ್ರ ತೆರೆಯಲಾಗಿದ್ದು, ಈಗ ಮತ್ತೊಂದು ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಕೇಂದ್ರ ತೆರೆಯಲು ಹೊರಟಿದ್ದಾರೆ. ಇಂದು ಸಹ ಅಧಿಕಾರಿಗಳು ಇಲ್ಲಿನ ಕೃಷ್ಣಪ್ಪ ಹಾಸ್ಟೆಲ್‍ಗೆ ಮಹಾರಾಷ್ಟ್ರದಿಂದ ಬಂದ 12 ಮಂದಿಯನ್ನು ಬಸ್ಸಿನಲ್ಲಿ …

Read More »

ರಾತ್ರಿ ಮನೆ ಮುಂದೆ ಮಲಗಿದ್ದ ವೇಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ……..

ಕೋಲಾರ: ರಾತ್ರಿ ಮನೆ ಮುಂದೆ ಮಲಗಿದ್ದ ವೇಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಆಲಗಾನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಹರೀಶ್(32) ಕೊಲೆಯಾದ ವ್ಯಕ್ತಿ, ಹೊಡೆತದ ರಭಸಕ್ಕೆ ತಲೆ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆರೋಪಿಗಳು ಬೃಹತ್ ಕಲ್ಲನ್ನು ಎತ್ತಿ ಹಾಕಿದ್ದಾರೆ. ಅಲ್ಲದೆ ಘಟನೆ ನಂತರ ಕಲ್ಲನ್ನು ಸ್ಥಳದಲ್ಲಿ ಬಿಡದೆ ಅದನ್ನೂ ಎತ್ತಿಕೊಂಡು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದು, …

Read More »

ಮಹಾಮಾರಿ ಕೊರೋನಾ ವೈರಸ್ ನಿಂದ ಸಂಕಷ್ಟಗೋಳಲಾದ ಕ್ಷೇತ್ರದ ಜನರಿಗೆ ಸಚಿವರು ವಯಕ್ತಿಕವಾಗಿ ಆಹಾರ ಕೀಟಗಳನ್ನು ನೀಡುತ್ತಿದ್ದಾರೆ.

ಗೋಕಾಕ :ಸಚಿವರಾದ ರಮೇಶ ಜಾರಕಿಹೊಳಿ ಅವರು ವಯಕ್ತಿಕವಾಗಿ ನೀಡಿದ ಆಹಾರದ ಕಿಟಗಳನ್ನು ಇನ್ನೇರೆಡು ದಿನಗಳಲ್ಲಿ ಗೋಕಾಕ ಮತಕ್ಷೇತ್ರದ ಪ್ರತಿ ಮನೆಗಳಿಗೆ ತಲುಪಿಸಲಾಗುವದೆಂದು ನಗರಸಭೆ ಸದಸ್ಯ ಎಸ್.ಎ ಕೊತವಾಲ ಹೇಳಿದರು ಬುಧವಾರದಂದು ನಗರದ ಸಚಿವರ ಕಾರ್ಯಾಲಯದಲ್ಲಿ ಕರೆದ ಆಹಾರ ಕಿಟ ವಿತರಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಾ ಮಹಾಮಾರಿ ಕೊರೋನಾ ವೈರಸ್ ನಿಂದ ಸಂಕಷ್ಟಗೋಳಲಾದ ಕ್ಷೇತ್ರದ ಜನರಿಗೆ ಸಚಿವರು ವಯಕ್ತಿಕವಾಗಿ ಆಹಾರ ಕಿಟಗಳನ್ನು ನೀಡುತ್ತಿದ್ದಾರೆ ಜನಪ್ರತಿನಿಧಿಗಳು , ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಗಳ …

Read More »