ಚಾಮರಾಜನಗರ: ಸಾಮಾಜಿಕ ಜಾಲ ತಾಣದಲ್ಲಿ ಶಾಸಕ ಎನ್.ಮಹೇಶ್ ನಿಂದಿಸಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ 7 ಜನರ ವಿರುದ್ಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಶ್ರೀಕಾಂತ್ ಅಪ್ಪಗೆರೆ, ಪ್ರಜ್ವಲ್, ಮುರುಳೀಧರ ಮೌರ್ಯ, ರವಿಕುಮಾರ್, ಮೋಹನ್ ಮೂಕನಾಯಕ, ಸದಾಶಿವ ರಾವಣ್ ಸೇರಿದಂತೆ 7 ಜನರ ವಿರುದ್ಧ ಕೋರ್ಟ್ ಅನುಮತಿಯನ್ನು ಪಡೆದು ಪ್ರಕರಣ ದಾಖಲಿಸಲಾಗಿದೆ. ಕಳೆದ ಒಂದು ವರ್ಷದಿಂದ ವಾಟ್ಸ್ ಆಯಪ್, ಫೇಸ್ಬುಕ್ಗಳಲ್ಲಿ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ಗೆ ಕೆಟ್ಟ ಪದಗಳಿಂದ ನಿಂದನೆ ಮಾಡಲಾಗುತ್ತಿತ್ತು. …
Read More »ಚಿನ್ನಕ್ಕಾಗಿ ಭೂಮಿ ನೀಡಿ, ನಿತ್ಯ ಮನೆಗಳನ್ನು ಕಳೆದುಕೊಳ್ಳುತ್ತಿರುವ ಗ್ರಾಮಸ್ಥರು
ರಾಯಚೂರು : ಆಭರಣಕ್ಕಾಗಿ ಚಿನ್ನವನ್ನು ಗಣಿಯಿಂದ ತೆಗೆಯಬೇಕು, ಈ ಚಿನ್ನವನ್ನು ತೆಗೆಯುವುದರಿಂದಾಗಿ ಈ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ ಇವರ ಮನೆಗಳು ಸಂಪೂರ್ಣವಾಗಿ ಬಿರುಕು ಬಿಟ್ಟಿವೆ. ಇವರ ಭೂಮಿಯಲ್ಲಿಯ ನೀರು ವಿಷವಾಗಿದೆ, ಈ ಮಧ್ಯೆ ಚಿನ್ನಕ್ಕಾಗಿ ಭೂಮಿ ನೀಡಿದ ಗ್ರಾಮದ ಎಲ್ಲರಿಗೂ ಉದ್ಯೋಗ ನೀಡಿ ಎಂದು ಆಗ್ರಹಿಸಿ ಕಳೆದ ಆರು ದಿನಗಳಿಂದ ಧರಣಿ ಆರಂಭಿಸಿದ್ದಾರೆ. ರಾಜ್ಯದಲ್ಲಿ ಚಿನ್ನವನ್ನು ಹೊರತೆಗೆಯುವ ಗಣಿಗಾರಿಕೆ ಇರುವುದು ಈಗ ಕೇವಲ ಹಟ್ಟಿ ಚಿನ್ನದ ಗಣಿಯಲ್ಲಿ ಮಾತ್ರ, ಹಟ್ಟಿ …
Read More »ವೈದ್ಯರ ನಿರ್ಲಕ್ಷ್ಯದಿಂದ ನನ್ನ ಪತ್ನಿ ಮೃತಪಟ್ಟಿದ್ದಾಳೆ -ವೈದ್ಯರ ವಿರುದ್ಧ BJP ಮುಖಂಡನ ಆರೋಪ
ಉಡುಪಿ: ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಮೃತಪಟ್ಟಿರುವ ಆರೋಪ ಉಡುಪಿ ನಗರದ ಮಿಷನ್ ಆಸ್ಪತ್ರೆ ವೈದ್ಯರ ವಿರುದ್ಧ ಕೇಳಿ ಬಂದಿದೆ. ಸ್ಥಳೀಯ ಬಿಜೆಪಿ ಮುಖಂಡನ ಪತ್ನಿ ಶ್ರೀರಕ್ಷಾ(26) ಮೃತ ಮಹಿಳೆ. ಬಿಜೆಪಿ ಮುಖಂಡನ ಪತ್ನಿ ಶ್ರೀರಕ್ಷಾ ತಲೆನೋವೆಂದು ಮಿಷನ್ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ವೈದ್ಯರು ಅಸ್ವಸ್ಥ ಮಹಿಳೆಗೆ ಇಂಜೆಕ್ಷನ್ ಕೊಟ್ಟು ಕಳುಹಿಸಿದ್ದರು. ಮನೆಗೆ ತೆರಳುತ್ತಿದ್ದಂತೆ ಅಸ್ವಸ್ಥಗೊಂಡಿದ್ದ ಶ್ರೀರಕ್ಷಾ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಸ್ಥಳೀಯ ಬಿಜೆಪಿ ಮುಖಂಡ, ಪತಿ …
Read More »ಪ್ರವಾಹದಿಂದ ಆಗಿರುವ ಹಾನಿ ಬಗ್ಗೆ ಬೆಳಗಾವಿ ಜಿಲ್ಲೆಯ ನಾಲ್ಕು ಸಚಿವರಿಗೆ ಇಲ್ಲ ಕಾಳಜಿ…!
ಬೆಳಗಾವಿ : ಮಹಾರಾಷ್ಟ್ರ ಪಶ್ಚಿಮ ಘಟಗಳ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ಸಂಕಷ್ಟ ಎದುರಾಗಿದೆ. ಕಷ್ಟು ಪಟ್ಟ ಬೆಳೆದ ಬೆಳೆ ಹಾನಿಯಾಗಿದ್ದು, ಇನ್ನೂ ಅನೇಕರು ಮನೆಯಗಳನ್ನು ಕಳೆದುಕೊಂಡಿದ್ದಾರೆ. ಆದರೆ, ಈವರೆಗೆ ಜಿಲ್ಲೆಯ ನಾಲ್ವರು ಸಚಿವರ ಪೈಕಿ ಒಬ್ಬರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎನ್ನವುದು ಜನರ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ. ರಾಜ್ಯದಲ್ಲಿಯೇ ಬೆಳಗಾವಿ ರಾಜಕಾರಣ ಅತ್ಯಂತ ಪ್ರಖ್ಯಾತಿಯನ್ನು ಗಳಿಸಿದೆ. ಸರ್ಕಾರವನ್ನು ಬಿಳಿಸುವ ಶಕ್ತಿಯನ್ನು …
Read More »ಸಚಿವರು ರಮೇಶ್ ಜಾರಕಿಹೊಳಿ ಬಗ್ಗೆ ಸಿಎಂ ಬಿಎಸ್ವೈ ಹರ್ಷ
ಶ್ರೀರಂಗಪಟ್ಟಣ : ಮಹಾರಾಷ್ಟ್ರದ ಘಟ್ಟಪ್ರದೇಶಗಳಲ್ಲಿ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಭವಿಸಬಹುದಾದ ವಿಪತ್ತನ್ನು ಕಡಿಮೆ ಮಾಡುವಲ್ಲಿ ಸಚಿವ ರಮೇಶ್ ಜಾರಕಿಹೊಳಿ ಪಾತ್ರ ದೊಡ್ಡದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಲ್ಲಿ ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಗಳ ಕಿರುಹೊತ್ತಿಗೆ ಜಲಯಜ್ಞ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿವರ್ಷ ಮಹಾರಾಷ್ಟ್ರ ಭಾಗದಲ್ಲಿ ಕುಂಭದ್ರೋಣ ಮಳೆ ಆದಾಗಲೆಲ್ಲಾ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿ ಪ್ರವಾಹ …
Read More »ಮಾರ್ಕಂಡೇಯ ನದಿ ಪ್ರವಾಹಕ್ಕೆ 5 ಸಾವಿರ ಹೆಕ್ಟೇರ್ ಜಲಾವೃತ, ಕಬ್ಬು ಮತ್ತು ಭತ್ತ ಹಾನಿ
ಬೆಳಗಾವಿ: ಮಾರ್ಕಂಡೇಯ ನದಿ ಪ್ರವಾಹಕ್ಕೆ ಮತ್ತೆ ಬೆಳೆ ಕಳೆದುಕೊಂಡು ಬೆಳಗಾವಿ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ನದಿ ಪಾತ್ರದ ಐದು ಸಾವಿರ ಹೆಕ್ಟೇರ್ಗೂ ಅಧಿಕ ಬೆಳೆ ಜಲಾವೃತಗೊಂಡಿದೆ. ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆ ಹಾನಿಯಾಗಿದೆ. ಕಳೆದ ವರ್ಷವೂ ಇದೇ ಭಾಗದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ವರ್ಷ ಕೂಡ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಬೆಳಗಾವಿ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ಜಮೀನುಗಳು ಹೆಚ್ಚು ಹಾನಿಗೊಳಗಾಗಿವೆ. …
Read More »ಮಳೆ ಹಾನಿ ಪ್ರದೇಶಗಳಲ್ಲಿ ಮಂಗಳವಾರ ಸಿಎಂ ವೈಮಾನಿಕ ಸಮೀಕ್ಷೆ
ಬೆಂಗಳೂರು: ಆಗಸ್ಟ್ 25ರಂದು (ಮಂಗಳವಾರ) ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಈ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ 9 ಗಂಟೆಗೆ ಹೆಚ್ಎಎಲ್ನಿಂದ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿ ಬೆಳಿಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧ ಸಭೆ ನಡೆಸಿ ಸಮಾಲೋಚನೆ ನಡೆಸಲಿದ್ದಾರೆ. ಕಾರ್ಯಕರ್ತೆಯರಿಗಷ್ಟೇ ಪ್ರೋತ್ಸಾಹಧನ ಕೊಡಬೇಕಿದೆ: ಎಸ್..ಟಿ. ಸೋಮಶೇಖರ್ 11.15 …
Read More »ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ಡಿಕೆಶಿ.
ಬೆಳಗಾವಿ: ರಮೇಶ್ ಜಾರಕಿಹೊಳಿಗೆ ಠಕ್ಕರ್ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಡಿಕೆಶಿ ಭೇಟಿ ನೀಡಲಿದ್ದು, ಸೋಮವಾರ ಆಗಸ್ಟ್ 24 ರಂದು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿ.ಕೆ ಶಿವಕುಮಾರ್ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಮತ್ತು ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯಾಗಿದೆ. ಆದ್ರೂ ಅತೀ ಹೆಚ್ಚು ಹಾನಿಯಾದ ಪ್ರದೇಶ ಬಿಟ್ಟು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿಕೆಶಿ ಪ್ರವಾಸ …
Read More »ಸರ್ಕಾರದ ನಿರ್ಲಕ್ಷ್ಯ 2 ಲಕ್ಷದ 50 ಸಾವಿರದ ಗಡಿ ದಾಟಿದೆ.. ಕೊರೊನಾ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾಕ್ಷಸಿ ಕೊರೊನಾ 1 ಲಕ್ಷದ ಗಡಿ ದಾಟಿದೆ. ಕೊರೊನಾ ತಡೆಗೆ ಮಾದರಿ ಆಗಿದ್ದ ಕರ್ನಾಟಕದಲ್ಲಿ ಆಗಸ್ಟ್ ನಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಆಗಸ್ಟ್ ನಲ್ಲೇ ಅರ್ಧ ಲಕ್ಷದಷ್ಟು ಹೊಸ ಸೋಂಕಿತರು ಪತ್ತೆ ಆಗಿದ್ದಾರೆ.ಇಡೀ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ 50 ಸಾವಿರದ ಗಡಿ ದಾಟಿ ಈಗ 3 ಲಕ್ಷದತ್ತ ಹೋಗುತ್ತಿದೆ. ಆರಂಭದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ ಎಂದಿದ್ದ ಸರ್ಕಾರ ಆಮೇಲೆ ದೇವರ ಮೇಲೆ …
Read More »ದೇಶದೆಲ್ಲೆಡೆ ವಿಘ್ನ ವಿನಾಯಕನಿಗೆ ಪೂಜೆ ಪುನಸ್ಕಾರ
ಬೆಂಗಳೂರು: ಇಂದು ಗಣೇಶ ಚತುರ್ಥಿ ಹಿನ್ನೆಲೆ ದೇಶದೆಲ್ಲೆಡೆ ವಿಘ್ನ ವಿನಾಯಕನಿಗೆ ಪೂಜೆ ಪುನಸ್ಕಾರಗಳು ನಡೆದಿವೆ. ಜನರು ಗಣೇಶನ ವಿಗ್ರಹ ತಂದು ಮನೆಯಲ್ಲಿ ಪ್ರತಿಷ್ಠಾಪನೆ ಮಾಡಿ ವಿಘ್ನಗಳನ್ನು ನಿವಾರಿಸುವ ಎಂದು ಪ್ರಾರ್ಥಿಸುತ್ತಿದ್ದಾರೆ. ಕೊರೊನಾ ಗಣೇಶ ಹಬ್ಬದ ಅರ್ಧಕ್ಕಿಂತ ಹೆಚ್ಚು ಸಂಭ್ರಮವನ್ನು ಕಿತ್ತುಕೊಂಡಿದೆ. ಕೊರೊನಾ ಹಿನ್ನೆಲೆ ಭಕ್ತಾದಿಗಳು ಸರಳವಾಗಿ ಗಣೇಶ ಹಬ್ಬವನ್ನ ಆಚರಿಸುತ್ತಿದ್ದಾರೆ. ದೇವಸ್ಥಾನಗಳು ತೆರೆದಿದ್ರೂ ಭಕ್ತರ ಸಂಖ್ಯೆ ಅಷ್ಟಿಲ್ಲ. ಹಬ್ಬದ ದಿನಗಳಲ್ಲಿ ಭಕ್ತರಿಂದ ತುಂಬಿರುತ್ತಿದ್ದ ದೇವಸ್ಥಾನಗಳು ಖಾಲಿ ಖಾಲಿ ಅನ್ನಿಸುತ್ತಿವೆ. ಕೊರೊನಾ …
Read More »
Laxmi News 24×7