Breaking News

ತವರು ಜಿಲ್ಲೆಯಲ್ಲಿ ಬಿಗ್‍ಬಾಸ್ ವಿನ್ನರ್ ಶೈನ್‍ಗೆ ಅದ್ಧೂರಿ ಸ್ವಾಗತ

ಉಡುಪಿ: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ವಿನ್ನರ್ ಶೈನ್‍ಶೆಟ್ಟಿ ಗೆದ್ದ ನಂತರ ತವರು ಜಿಲ್ಲೆ ಉಡುಪಿಗೆ ಪ್ರಪ್ರಥಮ ಬಾರಿಗೆ ಆಗಮಿಸಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ. ಶೈನ್ ಶೆಟ್ಟಿ ಬಿಗ್‍ಬಾಸ್ ಗೆದ್ದ ಬಳಿ ಮೊದಲ ಬಾರಿಗೆ ಉಡುಪಿಗೆ ಮಂಗಳವಾರ ಆಗಮಿಸಿದ್ದರು. ಹೀಗಾಗಿ ಶೈನ್ ಶೆಟ್ಟಿಯನ್ನು ನಗರದ ಜೋಡುಕಟ್ಟೆಯಿಂದ ಅದ್ಧೂರಿ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗಿತ್ತು. ಶೈನ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ನೂರಾರು ಅಭಿಮಾನಿಗಳು ಮುಗಿಬಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿ …

Read More »

ಶಾಸಕಿಯೊಬ್ಬರ ಸಹೋದರನಿಗೆ ನಕಲಿ ಪ್ರ-ಪತ್ರ ನೀಡಿದ ವ್ಯಕ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ CEO ಆದೇಶ.

ಶಾಸಕಿಯೊಬ್ಬರ ಸಹೋದರನಿಗೆ ನಕಲಿ ಪ್ರ-ಪತ್ರ ನೀಡಿದ ವ್ಯಕ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ CEO ಆದೇಶ..! ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ ಹಟ್ಟಿಹೊಳಿಗೆ ಮೋದಗಾ ಗ್ರಾಮದ ಸುಳ್ಳು ರಹವಾಸಿ ಪ್ರಮಾಣ ಪತ್ರ ನೀಡಿದ ಗ್ರಾಮ ಪಂಚಾಯತಿ ಸದಸ್ಯ ಬಾಬು ಕಾಳೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮೋದಗಾ ಗ್ರಾಮ ಪಂಚಾಯತಿಯ ಪಿಡಿಓಗೆ ಆದೇಶ ನೀಡಿದ್ದಾರೆ. ಚನ್ನರಾಜ ಹಟ್ಟಿಹೊಳಿ ಮೋದಗಾ ಗ್ರಾಮದ …

Read More »

ನಾನು ರಾಜ್ಯದ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ಸ್ವೀಕರಿಸಿದಾಗಲೇ ಹೇಳಿದಂತೆ ಜನತೆ ಹರಿಸುವುದು ಮತ್ತು ರಾಜ್ಯ ರೈತರ ಕಣ್ಣೀರು ಒರೆಸುವುದೇ ನನ್ನ ಆದ್ಯತೆಯಾಗಿದೆ

ಜಂಟಿ ಅಧಿವೇಶದಲ್ಲಿ ರಾಜ್ಯಪಾಲರ ಭಾಷಣ ಬಳಿಕ ನೀರಾವರಿ ಇಲಾಖೆ ಬಗ್ಗೆ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ ಬೆಂಗಳೂರು: ರಾಜ್ಯದ ಮಧ್ಯಮ ಮತ್ತು ಬೃಹತ್ ನೀರಾವರಿ ಯೋಜನೆಗಳಿಗಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 4050 ಕೋಟಿ ರೂ.ಗಳ ಮೀಸಲಿಡಲಾಗುತ್ತಿದೆ. ಈ ವಿಷಯವಾಗಿ ನಾನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದಿಸುತ್ತೇನೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಜಂಟಿ ಸದನ ಉದ್ದೇಶಿಸಿ ರಾಜ್ಯಾಪಾಲರು ಭಾಷಣ ಮಾಡಿದ ಬಳಿಕ ಜಲಸಂಪನ್ಮೂಲ ಇಲಾಖೆ …

Read More »

5ನೇ ಮಗಳ ಜನನದ ಖುಷಿ ಹಂಚಿಕೊಂಡ ಅಫ್ರಿದಿ ಕಾಲೆಳೆದ ನೆಟ್ಟಿಗರು

ಇಸ್ಲಾಮಾಬಾದ್: ಪಾಕಿಸ್ತಾನದ ಕ್ರಿಕೆಟ್ ತಂಡದ ಮಾಜಿ ಆಲ್‍ರೌಂಡರ್ ಶಾಹಿದ್ ಅಫ್ರಿದಿ ತಮಗೆ ಐದನೇ ಹೆಣ್ಣು ಮಗು ಜನಿಸಿರುವ ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅಫ್ರಿದಿ ಅವರು 2018ರಲ್ಲಿ ತಮ್ಮ ತಾಯಿಯ ಸೋದರಸಂಬಂಧಿ ನಾಡಿಯಾ ಅಫ್ರಿದಿ ಅವರೊಂದಿಗೆ ಮದುವೆಯಾಗಿದ್ದು, ಅಫ್ರಿದಿ ದಂಪತಿಗೆ ಅಕ್ಸಾ, ಅನ್‍ಷಾ, ಅಜ್ವಾ ಹಾಗೂ ಅಸ್ಮರಾ ಎಂಬ ನಾಲ್ಕು ಜನ ಹೆಣ್ಣು ಮಕ್ಕಳಿದ್ದಾರೆ. ಈಗ ನಾಡಿಯಾ ಅವರು 5ನೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಫೋಟೋ ಟ್ವೀಟ್ ಮಾಡಿರುವ …

Read More »

ನಾಯಿ ಬಿಸ್ಕೆಟ್ ತಿಂದಿದ್ದ ರಶ್ಮಿಕಾ…………… ನಿತಿನ್ ರಶ್ಮಿಕಾರ ಸೀಕ್ರೆಟ್‍ಯನ್ನು ರಿವೀಲ್ ಮಾಡಿದ್ದಾರೆ.

ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ನಾಯಿ ಬಿಸ್ಕೆಟ್ ತಿಂದಿದ್ದಾರೆ ಎಂದು ಟಾಲಿವುಡ್ ನಟ ನಿತಿನ್ ರಶ್ಮಿಕಾರ ಸೀಕ್ರೆಟ್‍ಯನ್ನು ರಿವೀಲ್ ಮಾಡಿದ್ದಾರೆ. ನಿತಿನ್ ಮತ್ತು ರಶ್ಮಿಕಾ ಅಭಿನಯದ ‘ಭೀಷ್ಮ’ ಸಿನಿಮಾ ಫೆ.21 ರಂದು ರಿಲೀಸ್ ಆಗಲಿದೆ. ಹೀಗಾಗಿ ಸಿನಿಮಾದ ಪ್ರಚಾರ ಕಾರ್ಯಕ್ರಮಗಳಲ್ಲಿ ನಿತಿನ್ ಮತ್ತು ರಶ್ಮಿಕಾ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಅಂದರೆ ಪ್ರೇಮಿಗಳ ದಿನಾಚರಣೆಯಂದು ಇಬ್ಬರೂ ಸಂದರ್ಶನವೊಂದನ್ನು ನೀಡಿದ್ದರು. ಆ ಸಂದರ್ಶನದಲ್ಲಿ ನಿತಿನ್, ರಶ್ಮಿಕಾ ಬಗ್ಗೆ ಯಾರಿಗೂ ತಿಳಿಯದ ಸೀಕ್ರೆಟ್ ಒಂದನ್ನು ಬಿಚ್ಚಿಟ್ಟಿದ್ದಾರೆ. ನಿತಿನ್ …

Read More »

ರಾಜ್ಯಪಾಲರ ಭಾಷಣದ ಹೈಲೈಟ್ಸ್ ಇಲ್ಲಿದೆ

ಬೆಂಗಳೂರು, ಫೆ.17-ದೇಶದಲ್ಲೇ ಆರ್ಥಿಕ ಸಂಪನ್ಮೂಲಗಳ ವೃದ್ಧಿಗಾಗಿ ಆರ್ಥಿಕ ಕ್ರೋಢೀಕರಣದ ಮಾರ್ಗನಕ್ಷೆಯನ್ನು ರೂಪಿಸಿದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ನಿಗದಿಪಡಿಸಲಾದ ಆರ್ಥಿಕ ಮತ್ತು ಸಾಲ ಕ್ರೋಢೀಕರಣದ ಗುರಿಯನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಸಾಧಿಸಿದೆ ಎಂದು ರಾಜ್ಯಪಾಲ ವಿ.ಆರ್.ವಾಲಾ ಅವರು ರಾಜ್ಯಸರ್ಕಾರಕ್ಕೆ ಬಹುಪರಾಕ್ ಹೇಳಿದ್ದಾರೆ. ತಮ್ಮ 20 ಪುಟಗಳ ಭಾಷಣದಲ್ಲಿ ರಾಜ್ಯಪಾಲರು ಹಿಂದಿನ ಮೈತ್ರಿ ಸರ್ಕಾರ ಕೈಗೊಂಡಿದ್ದ ಕಾರ್ಯಕ್ರಮಗಳು ಹಾಗೂ ಈಗಿನ ಬಿಜೆಪಿ ಸರ್ಕಾರದ ಹೊಸ ಯೋಜನೆಗಳು ಸೇರಿದಂತೆ ರಾಜ್ಯವನ್ನು ಸರ್ವಾಂಗೀಣ ಅಭಿವೃದ್ಧಿಯತ್ತ ಕೊಂಡೊಯ್ಯುವ ಬಗ್ಗೆ …

Read More »

ಸರ್ಕಾರಿ ಬಸ್ ತಪಾಸಣೆ ಮಾಡುತ್ತಿದ್ದ ನಕಲಿ ಸಾರಿಗೆ ಅಧಿಕಾರಿಯನ್ನು ಕಂಡಕ್ಟರ್ ಪತ್ತೆ ಹಚ್ಚಿ ಮೇಲಾಧಿಕಾರಿಗಳಿಗೆ ಒಪ್ಪಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ: ಸರ್ಕಾರಿ ಬಸ್ ತಪಾಸಣೆ ಮಾಡುತ್ತಿದ್ದ ನಕಲಿ ಸಾರಿಗೆ ಅಧಿಕಾರಿಯನ್ನು ಕಂಡಕ್ಟರ್ ಪತ್ತೆ ಹಚ್ಚಿ ಮೇಲಾಧಿಕಾರಿಗಳಿಗೆ ಒಪ್ಪಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ತಾಲೂಕಿನ ಹುಲಗಿಯಿಂದ ಗಂಗಾವತಿ ಕಡೆ ಹೊರಟಿದ್ದ ಬಸ್‍ನ್ನು ತಪಾಸಣೆ ಮಾಡುವ ನೆಪದಲ್ಲಿ ಬಂದ ಆತ, ಟಿಕೆಟ್ ಮತ್ತು ಕ್ಯಾಶ್ ತಪಾಸಣೆ ಮಾಡಿದ್ದಾನೆ. ಈ ವೇಳೆ ಬಸ್ ಕಂಡೆಕ್ಟರ್ ಗೆ ಸಂಶಯ ಬಂದು ವಿಚಾರಣೆ ಮಾಡಿದಾಗ ನಕಲಿ ಅಧಿಕಾರಿ ಎಂದು ತಿಳಿದು ಬಂದಿದೆ. ಬಸ್ ಪ್ರಯಾಣಿಕನ ಸೋಗಿನಲ್ಲಿ ಬಸ್ …

Read More »

ರೈತರ ಜಮೀನುಗಳಿಗೆ ಭೇಟಿ ನೀಡಿ ಉದ್ಯೋಗಖಾತ್ರಿ ಯೋಜನೆಯ ವಿವಿಧ ಪ್ರಯೋಜನಗಳ ಕುರಿತು ಮನವರಿಕೆ ಮೂಡಿಸುವ ಕಾರ್ಯ ನಡೆಸಿದ್ದಾರೆ.

ಬಾಗಲಕೋಟೆ: ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಗಂಗೂಬಾಯಿ ಮಾನಕರ್ ರೈತರ ಜಮೀನುಗಳಿಗೆ ಭೇಟಿ ನೀಡಿ ಉದ್ಯೋಗಖಾತ್ರಿ ಯೋಜನೆಯ ವಿವಿಧ ಪ್ರಯೋಜನಗಳ ಕುರಿತು ಮನವರಿಕೆ ಮೂಡಿಸುವ ಕಾರ್ಯ ನಡೆಸಿದ್ದಾರೆ. ಉದ್ಯೋಗ ಖಾತ್ರಿ ಯೋಜನೆ ಅಡಿ ಕೇವಲ ಗ್ರಾಮದಲ್ಲಿ ರಸ್ತೆ, ಕೆರೆ, ಸೇತುವೆ ನಿರ್ಮಾಣ ಮಾಡುವುದಕ್ಕೆ ಅಷ್ಟೇ ಸಿಮೀತವಲ್ಲ. ರೈತರು ತಮ್ಮ ಜಮೀನಿನಲ್ಲಿ ಕೆಲಸ ಮಾಡುವುದಕ್ಕೂ ಬಳಕೆ ಮಾಡಿಕೊಳ್ಳಬಹುದು. ಈ ಬಗ್ಗೆ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಂಗೂಬಾಯಿ …

Read More »

ಪಾಕ್ ಪರ ಕಾಶ್ಮೀರಿ ವಿದ್ಯಾರ್ಥಿಗಳ ಘೋಷಣೆ : ಪೊಲೀಸರಿಂದ ವರದಿ ಕೇಳಿದ ಗೃಹಸಚಿವ ಬೊಮ್ಮಾಯಿ

ಬೆಂಗಳೂರು, ಫೆ.17- ಹುಬ್ಬಳ್ಳಿಯ ಕೆಎಲ್‍ಇ ಶಿಕ್ಷಣ ಸಂಸ್ಥೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ ಬಿಡುಗಡೆಯಾಗಿರುವ ಪ್ರಕರಣ ಸಂಬಂಧ ಡಿಜಿ, ಐಜಿಪಿ ಯಿಂದ ವರದಿ ಕೇಳಲಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕ್ ಪರ ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳನ್ನು ಹೇಳಿಕೆ ಆಧಾರದ ಮೇಲೆ ಮುಚ್ಚಳಿಕೆ ಪತ್ರ ಬರೆಸಿಕೊಂಡು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ನಾನು ರಾಜ್ಯ …

Read More »

ಕಾನೂನು ಸುವ್ಯವಸ್ಥೆ ಪಾಲನೆ ಮಾಡಬೇಕಾದ ರಾಜ್ಯಸರ್ಕಾರವೇ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಶಾಂತಿ ಕದಡುವ ಪ್ರಯತ್ನ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು, ಫೆ.17- ಕಾನೂನು ಸುವ್ಯವಸ್ಥೆ ಪಾಲನೆ ಮಾಡಬೇಕಾದ ರಾಜ್ಯಸರ್ಕಾರವೇ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಶಾಂತಿ ಕದಡುವ ಪ್ರಯತ್ನ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಶಾಸಕಾಂಗ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಹೀನ್ ಶಾಲೆ ವಿಷಯದಲ್ಲಿ ರಾಜ್ಯ ಸರ್ಕಾರ ಕಾನೂನನ್ನು ಸಂಪೂರ್ಣವಾಗಿ ದುರುಪಯೋಗಪಡಿಸಿಕೊಂಡಿರುವುದು ಸ್ಪಷ್ಟವಾಗಿದೆ. ಶಾಲೆಯ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಪೊಲೀಸರ ಮೂಲಕ ಬೆದರಿಸಲಾಗುತ್ತಿದೆ. ಕಾನೂನು ಎಲ್ಲರಿಗೂ ಒಂದೇ ಇರಬೇಕು. ಬಿಜೆಪಿ ತನ್ನ …

Read More »