Breaking News

ರಾಜ್ಯದ 100 ಬರಪೀಡಿತ ತಾಲೂಕುಗಳಲ್ಲಿ ಬರ ನಿಯಂತ್ರಣ ಜಲಾನಯನ ಅಭಿವೃದ್ಧಿ ಹೊಸ ಯೋಜನೆ

ಬೆಂಗಳೂರು, ಫೆ.17-ರಾಜ್ಯದಲ್ಲಿ ಹೆಚ್ಚುತ್ತಿರುವ ಬರಗಾಲವನ್ನು ತಗ್ಗಿಸಿ ಅಂತರ್ಜಲವನ್ನು ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯದ 100 ಬರಪೀಡಿತ ತಾಲೂಕುಗಳಲ್ಲಿ ಬರ ನಿಯಂತ್ರಣ ಜಲಾನಯನ ಅಭಿವೃದ್ಧಿ ಹೊಸ ಯೋಜನೆಯನ್ನು ಜಾರಿ ಮಾಡಲಾಗುವುದು ಎಂದು ರಾಜ್ಯಪಾಲ ವಿ.ಆರ್.ವಾಲಾ ಘೋಷಿಸಿದರು. ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಅವರು,ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಸಂಯೋಜನೆಗೊಳಿಸಿ 100 ಬರಪೀಡಿತ ತಾಲೂಕುಗಳಲ್ಲಿ ಬರ ನಿಯಂತ್ರಣ ಜಲಾನಯನ ಅಭಿವೃದ್ಧಿ ಯೋಜನೆಯನ್ನು …

Read More »

ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಇಂದುನಡೆದ ಒಂದು ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ

ಬೆಂಗಳೂರು, ಫೆ.17- ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಇಂದುನಡೆದ ಒಂದು ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನಿಲ್‍ಕುಮಾರ್ ಈಗಾಗಲೇ ಸ್ಪರ್ಧೆಯಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದರು. ಹೀಗಾಗಿ ಇಂದು ಕೇವಲ ನಾಮಕಾವಸ್ಥೆಗೆ ಚುನಾವಣೆ ನಡೆದಿದ್ದು, ಲಕ್ಷ್ಮಣ್ ಸವದಿ ಬಹುತೇಕ ಆಯ್ಕೆಯಾಗುವುದು ನೂರಕ್ಕೆ ನೂರರಷ್ಟು ಖಚಿತವಾಗಿದೆ. ಬೆಳಗ್ಗೆ 8.30ಕ್ಕೆ ವಿಧಾನಸೌಧದ ಮೊದಲ ಮಹಡಿಯ ಕೊಠಡಿ 106 ರಲ್ಲಿ ನಡೆದ ಮತದಾನದಲ್ಲಿಬಿಜೆಪಿಯ ಎಲ್ಲಾ ಸಚಿವರು, …

Read More »

 ಜಿಲ್ಲಯಲ್ಲಿ ಖಾಲಿ ಉಳಿದಿದ್ದ ಡಿಸಿಪಿ ಸ್ಥಾನಕ್ಕೆ ನೂತನ ಅಧಿಕಾರಿಗಳಾಗಿ ಐಪಿಎಸ್ ಪಿ. ಕೃಷ್ಣಕಾಂತ್ ನೇಮಕಗೊಂಡಿದ್ದಾರೆ.:ಹುಬ್ಬಳ್ಳಿ ಧಾರವಾಡ

ಹುಬ್ಬಳ್ಳಿ: ಜಿಲ್ಲಯಲ್ಲಿ ಖಾಲಿ ಉಳಿದಿದ್ದ ಡಿಸಿಪಿ ಸ್ಥಾನಕ್ಕೆ ನೂತನ ಅಧಿಕಾರಿಗಳಾಗಿ ಐಪಿಎಸ್ ಪಿ. ಕೃಷ್ಣಕಾಂತ್ ನೇಮಕಗೊಂಡಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಕಮೀಷನರ್ ಹಾಗೂ ಡಿಸಿಪಿಗಳ ಮಧ್ಯೆ ನಡೆದ ಜಟಾಪಟಿ ಸಾಕಷ್ಟು ಸುದ್ದಿಯಾಗಿತ್ತು. ಪೊಲೀಸ್ ಆಯುಕ್ತರು ಹಾಗೂ ಕೆಳ ಸಿಬ್ಬಂದಿ ಮಧ್ಯೆ ನಡೆದ ಜಗಳದ ನಂತರ ಡಿಸಿಪಿ ನಾಗೇಶ್ ವರ್ಗಾವಣೆ ಸಹ ಆಗಿದ್ದರು. ನಾಗೇಶ್ ವರ್ಗಾವಣೆ ನಂತರ ಐಪಿಎಸ್ ಪಿ. ಕೃಷ್ಣಕಾಂತ್ ಅವರು ಖಾಲಿಯಾಗಿದ್ದ ಡಿಸಿಪಿ ಸ್ಥಾನದ ಅಧಿಕಾರ …

Read More »

ಡ್ಯೂಟಿ ಸಮಯದಲ್ಲೇ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಮಹಿಳೆ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆ

ಬೆಂಗಳೂರು: ಡ್ಯೂಟಿ ಸಮಯದಲ್ಲೇ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಮಹಿಳೆ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಿಂದ ಹಾಸನಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಈ ಘಟನೆ ನಡೆದಿದ್ದು, ಕಂಡಕ್ಟರ್ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಹಿಳೆ ಹಾಸನದಿಂದ ಪುತ್ತೂರಿಗೆ ಹೊರಟಿದ್ದರು. ಈ ವೇಳೆ ಟಿಕೆಟ್ ನೀಡುವ ನೆಪದಲ್ಲಿ ಕಂಡಕ್ಟರ್ ಮಹಿಳೆಯ ಪಕ್ಕದಲ್ಲಿ ಬಂತು ಕೂತಿದ್ದನು. ನಂತರ ಪಕ್ಕದಲ್ಲಿ ಕೂತಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸುವುದಕ್ಕೆ ಶುರುಮಾಡಿದ್ದನು. ಮಹಿಳೆ ಎಷ್ಟೇ ವಿರೋಧ …

Read More »

ಸ್ವಚ್ಛತೆ ಕಾಪಾಡದಿದ್ದರೆ ಒದ್ದು ಬಿಹಾರಕ್ಕೆ ಓಡಿಸುತ್ತೇನೆ :ಶಾಸಕ ಉಮೇಶ್ ಕತ್ತಿ ತರಾಟೆ

ಚಿಕ್ಕೋಡಿ: ಸ್ವಚ್ಛತೆ ಕಾಪಾಡದಿದ್ದರೆ ಒದ್ದು ಬಿಹಾರಕ್ಕೆ ಓಡಿಸುತ್ತೇನೆ ಎಂದು ಸ್ವಚ್ಛತಾ ನೌಕರರನ್ನು ಹುಕ್ಕೇರಿ ಶಾಸಕ ಉಮೇಶ್ ಕತ್ತಿ ತರಾಟೆಗೆ ತೆಗೆದುಕೊಂಡಿದ್ದರು. ಬೆಳಗಾವಿ ಜಿಲ್ಲೆ ಹುಕ್ಕೇರಿ ಬಸ್ ನಿಲ್ದಾಣಕ್ಕೆ ಶಾಸಕ ಉಮೇಶ್ ಕತ್ತಿ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣದ ವ್ಯವಸ್ಥೆ ನೋಡಿ ಗರಂ ಆದ ಶಾಸಕ ಕತ್ತಿ ಅಧಿಕಾರಿಗಳನ್ನ ಹಾಗೂ ಸ್ವಚ್ಛತೆ ಮಾಡುತ್ತಿದ್ದ ಕಾರ್ಮಿಕರನ್ನ ತರಾಟೆಗೆ ತೆಗೆದುಕೊಂಡರು ಸ್ವಚ್ಛತೆ ಕಾಪಾಡದಿದ್ದರೆ ಒದ್ದು ಬಿಹಾರಕ್ಕೆ ಓಡಿಸುತ್ತೇನೆ ಎಂದು ಸ್ವಚ್ಛತಾ ನೌಕರನನ್ನ …

Read More »

ಜವಾರಿ ಊಟ, ಹಳ್ಳಿ ನೋಟ”……….

ಚಿಕ್ಕೋಡಿ(ಬೆಳಗಾವಿ): ದೇಶಿ ಸಂಸ್ಕೃತಿ ಮರೆಯಾಗುತ್ತಿರುವ ಸಂದರ್ಭದಲ್ಲಿ ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ವತಿಯಿಂದ “ಜವಾರಿ ಊಟ, ಹಳ್ಳಿ ನೋಟ” ಎಂಬ ವಿನೂತನ ಕಾರ್ಯಕ್ರಮವನ್ನು ರವಿವಾರ ಆಯೋಜಿಸಲಾಗಿತ್ತು. ಈ ಕಾರ್ಯಕ್ರ್ರಮದಲ್ಲಿ ಹಳ್ಳಿ ಸೊಗಡನ್ನ ಅನುಭವಿಸುವ ನಿಟ್ಟಿನಲ್ಲಿ ಮಹಿಳೆಯರು ಇಳಕಲ್ ಸೀರೆ ಹಾಗೂ ಪುರುಷರು ಹಳೆ ಕಾಲದ ಉಡುಪು ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ಮಹಿಳೆಯರು ಹಾಗೂ ಪುರುಷರು …

Read More »

ಪಾಕಿಸ್ತಾನ್ ಜಿಂದಾಬಾದ್ ಎಂದು ಪಾಕಿಸ್ತಾನದ ಸೇನೆಯ ಹಾಡಿಗೆ ಪಾಕ್ ಪರ ಘೋಷಣೆ ಕೂಗಿದ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಕೊನೆಗೂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಹುಬ್ಬಳ್ಳಿ:ಪಾಕಿಸ್ತಾನ್ ಜಿಂದಾಬಾದ್ ಎಂದು ಪಾಕಿಸ್ತಾನದ ಸೇನೆಯ ಹಾಡಿಗೆ ಪಾಕ್ ಪರ ಘೋಷಣೆ ಕೂಗಿದ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಕೊನೆಗೂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಮೂರನೇ ಜೆಎಂಎಫ್‍ಸಿ ನ್ಯಾಯಾಧೀಶರ ಮುಂದೆ ಹಾಜರಾದ ಮೂವರು ಆರೋಪಿಗಳಿಗೆ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಭಾನುವಾರ ಪೊಲೀಸರು ಸಿಆರ್ ಪಿ 169 ಬಾಂಡ್ ಮೇಲೆ ಬಿಡುಗಡೆ ಮಾಡಿದರು. ತದನಂತರ ಹಿಂದೂಪರ ಸಂಘಟನೆಗಳು ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ …

Read More »

 ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರ ಬಿಡುಗಡೆಗೆ ಸಿದ್ಧಗೊಳ್ಳುತ್ತಿದೆ.

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರ ಬಿಡುಗಡೆಗೆ ಸಿದ್ಧಗೊಳ್ಳುತ್ತಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಮೋಷನ್ ಪೋಸ್ಟರ್ ಸಖತ್ ಸದ್ದು ಮಾಡಿದ್ದು, ಈಗ ಚಿತ್ರ ತಂಡ ಟೀಸರ್ ರಿಲೀಸ್ ಮಾಡಲು ರೆಡಿಯಾಗಿದೆ. ಹೌದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನೀರಿಕ್ಷಿತ ಚಿತ್ರ ಕೋಟಿಗೊಬ್ಬ-3 ಚಿತ್ರದ ಟೀಸರ್ ಅನ್ನು ಫೆಬ್ರವರಿ 21 ರಂದು ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಮೂಲಕ ಶಿವರಾತ್ರಿ ಹಬ್ಬಕ್ಕೆ ಕಿಚ್ಚನ ಅಭಿಮಾನಿಗಳಿಗೆ ಬಂಪರ್ …

Read More »

ದೇವಸ್ಥಾನ ನಿರ್ಮಾಣಕ್ಕಾಗಿ ಸರ್ಕಾರಿ ಶಾಲಾ ಕಟ್ಟಡ ಧ್ವಂಸ

ಯಾದಗಿರಿ: ದೇವಸ್ಥಾನ ನಿರ್ಮಾಣಕ್ಕಾಗಿ ಸರ್ಕಾರಿ ಶಾಲಾ ಕಟ್ಟಡ ಧ್ವಂಸ ಮಾಡಿದ ಘಟನೆ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ರಾಮನಾಯಕನ ತಾಂಡದಲ್ಲಿ ನಡೆದಿದೆ. ರಾಮನಾಯಕ ತಾಂಡದಲ್ಲಿ ಇರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೆ ಕಟ್ಟಡವನ್ನು ದೇವಸ್ಥಾನ ಕಟ್ಟುವ ಸಲುವಾಗಿ ಕೆಡವಿ ಹಾಕಲಾಗಿದೆ. ಆದರೆ ಸರ್ಕಾರದ ಕಟ್ಟಡ ಕೆಡವಲು ಸರ್ಕಾರದಿಂದ ಯಾವುದೇ ಅನುಮತಿ ಪಡೆಯದೆ ಈ ಕೃತ್ಯ ನಡೆಸಲಾಗಿದೆ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ. ಹೊಸ ಕಟ್ಟಡಕ್ಕೆ ಶಾಲೆಯನ್ನು ವರ್ಗಾಯಿಸದ ಮೇಲೆ …

Read More »

ಅಭಿಮಾನಿಯನ್ನು ತಳ್ಳಿದ ವ್ಯಕ್ತಿಯೊಬ್ಬರಿಗೆ ತಲೆ ಮೇಲೆ ದರ್ಶನ್ ಬಾರಿಸಿದ ವಿಡಿಯೋವೊಂದು ವೈರಲ್ ಆಗಿದೆ.

ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ತಮ್ಮ 43 ನೇ ಹುಟ್ಟುಹಬ್ಬವನ್ನು ಅಚರಿಸಿಕೊಳ್ಳುತ್ತಿದ್ದಾರೆ. ಈ ವೇಳೆ ಅಭಿಮಾನಿಯನ್ನು ತಳ್ಳಿದ ವ್ಯಕ್ತಿಯೊಬ್ಬರಿಗೆ ತಲೆ ಮೇಲೆ ದರ್ಶನ್ ಬಾರಿಸಿದ ವಿಡಿಯೋವೊಂದು ವೈರಲ್ ಆಗಿದೆ. ದರ್ಶನ್ ಅವರ ಹುಟ್ಟುಹಬ್ಬವನ್ನು ಅವರು ಅಭಿಮಾನಿಗಳು ಪ್ರತೀ ವರ್ಷ ಹಬ್ಬದಂತೆ ಆಚರಣೆ ಮಾಡುತ್ತಾರೆ. ಇಂದು ಕೂಡ ದರ್ಶನ್ ಅವರಿಗೇ ಶುಭಾಶಯ ಕೋರಲು ಅವರ ಸಾವಿರಾರು ಅಭಿಮಾನಿಗಳು ಅವರ ಮನೆ ಮುಂದೆ ಜಮಾಯಿಸಿದ್ದರು. ಈ ವೇಳೆ …

Read More »