ಬೆಂಗಳೂರು: ಮೂರನೇ ಹಂತದ ಲಾಕ್ ಡೌನ್ ಅವಧಿ ಮುಗಿಯುತ್ತಾ ಬಂದರೂ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನದಲ್ಲಿ 42 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಬಾಗಲಕೋಟೆ ಜಿಲ್ಲೆಯೊಂದರಲ್ಲೇ ಇಂದು ಬರೋಬ್ಬರಿ 15 ಜನರಲ್ಲಿ ಸೋಂಕು ದೃಢವಾಗಿದೆ. ಧಾರವಾಡದಲ್ಲಿ 9, ಹಾಸನ …
Read More »ಶಿವಮೊಗ್ಗ, ಚಿತ್ರದುರ್ಗದಲ್ಲಿ ಕ್ವಾರಂಟೈನ್ಗೆ ತೀವ್ರ ವಿರೋಧ- ಪೊಲೀಸರ ಜೊತೆ ಜನತೆ ವಾಗ್ವಾದ
ಶಿವಮೊಗ್ಗ/ಚಿತ್ರದುರ್ಗ: ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಲ್ಲಿಯೇ ಲಾಕ್ ಆಗಿದ್ದ ಕಾರ್ಮಿಕರು, ಜನರು ಇದೀಗ ತಮ್ಮ ತಮ್ಮ ಊರುಗಳತ್ತ ಬರುತ್ತಿದ್ದಾರೆ. ಇದೀಗ ಹೊರ ರಾಜ್ಯಗಳಿಂದ ಬರುತ್ತಿರುವ ಕಾರ್ಮಿಕರಿಗೆ ತಮ್ಮ ಗ್ರಾಮಗಳಲ್ಲಿ ಕ್ವಾರಂಟೈನ್ ಮಾಡಬೇಡಿ ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಬೇರೆಬೇರೆ ರಾಜ್ಯಗಳಿಂದ ಕಾರ್ಮಿಕರು ಬರುತ್ತಿದ್ದಾರೆ. ಹೊರ ರಾಜ್ಯಗಳಿಂದ ಬರುತ್ತಿರುವ ಕಾರ್ಮಿಕರಿಗೆ ಜಿಲ್ಲಾಡಳಿತ ಸರ್ಕಾರಿ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡಲು ಸಿದ್ಧತೆ …
Read More »ಸಕ್ಕರೆ ನಾಡಿಗೆ ಮತ್ತೆ ಕೊರೊನಾ ಶಾಕ್ – ಜಿಲ್ಲೆಗೆ ತಲೆನೋವಾದ ಮುಂಬೈ ನಂಟು!
ಮಂಡ್ಯ: ಮಹಾಮಾರಿ ಕೊರೊನಾ ಅಬ್ಬರದಿಂದ ಸಕ್ಕರೆ ನಾಡು ದಿನೇ ದಿನೇ ಸುಧಾರಿಸಿಕೊಳ್ಳುವಷ್ಟರಲ್ಲೇ ಮತ್ತೆ ಕೊರೊನಾ ಶಾಕ್ ಕೊಟ್ಟಿದೆ. ಸೋಮವಾರ ಜಿಲ್ಲೆಯ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾತಂಕ ತಂದೊಡ್ಡಿದ್ದ ತಬ್ಲಿಘಿ ಹಾಗೇ ಜ್ಯುಬಿಲಿಯಂಟ್ ನಂಟಿಂದ ದಿನೇ ದಿನೇ ಮಂಡ್ಯ ಜಿಲ್ಲೆ ಸುಧಾರಿಸಿಕೊಳುತ್ತಿತ್ತು. ಆದರೆ ಈ ಮಧ್ಯೆ ಕೊರೊನಾ ಮತ್ತೆ ಜನರ ನಿದ್ದೆಗೆಡಿಸಿದೆ. ತಬ್ಲಿಘಿ, ಜ್ಯುಬಿಲಿಯಂಟ್ ಬಳಿಕ ಈ ಮುಂಬೈ ನಂಟು ಜಿಲ್ಲೆಯಲ್ಲಿ ಹೊಸದೊಂದು ತಲೆನೋವಾಗಿದೆ. ಸೋಮವಾರ ಪಾಸಿಟಿವ್ ಆಗಿರುವ ಎರಡು …
Read More »ಕಲಬುರಗಿಗೆ ಹೊಸ ಟೆನ್ಶನ್ – ಮುಂಬೈನಿಂದ 1,200ಕ್ಕೂ ಹೆಚ್ಚು ಕಾರ್ಮಿಕರು ರಿಟರ್ನ್
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ಹೆಚ್ಚಾದ ಹಿನ್ನೆಲೆಯಲ್ಲಿ ಜನ ಚಿಂತೆಗೀಡಾಗಿದ್ದಾರೆ. ಹೀಗಿರುವಾಗಲೇ ಮುಂಬೈನಿಂದ ಸಾವಿರಾರು ಕೂಲಿ ಕಾರ್ಮಿಕರು ವಿಶೇಷ ರೈಲು ಮೂಲಕ ಕಲಬುರಗಿಗೆ ತಡರಾತ್ರಿ ಆಗಮಿಸಿದ್ದಾರೆ. ಇದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಹಾಟ್ಸ್ಪಾಟ್ ಕಲಬುರಗಿಗೆ ಹೊಸ ಟೆನ್ಶನ್ ಶುರುವಾಗಿದೆ. ಮುಂಬೈನಿಂದ ಸಾವಿರಾರು ವಲಸೆ ಕಾರ್ಮಿಕರು ಶ್ರಮಿಕ್ ಸ್ಪೆಷಲ್ ರೈಲಿನ ಮೂಲಕ ಕಲಬುರಗಿಗೆ ತಡರಾತ್ರಿ 2 ಗಂಟೆಗೆ ಬಂದಿಳಿದಿದ್ದಾರೆ. ಮುಂಬೈನಿಂದ ಬಂದಿಳಿದ ವಲಸಿಗ ಕಾರ್ಮಿಕರನ್ನು ಕಲಬುರಗಿ ಸಂಸದ …
Read More »ತುಂಬು ಗರ್ಬಿಣಿಯಾದರೂ ಹಗಲಿರುಳು ದುಡಿಯುತ್ತಿದ್ದ ಆಶಾ ಕಾರ್ಯಕರ್ತೆಗೆ ಸೀಮಂತ ಮಾಡಿ ಕೃತಜ್ಞತೆ:ಶಾಸಕ ಗೌರಿಶಂಕರ
ತುಮಕೂರು: ದೇಶಾದ್ಯಂತ ಕೊರೊನಾ ವಾರಿಯರ್ಸ್ಗೆ ಅನೇಕ ರೀತಿಯಲ್ಲಿ ಸನ್ಮಾನ ಮಾಡಲಾಗುತ್ತಿದೆ. ಇದೀಗ ತುಮಕೂರು ಗ್ರಾಮಾಂತರದ ಕೊರೊನಾ ವಾರಿಯರ್ಸ್ಗೆ ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಲಾಗಿದೆ. ತುಂಬು ಗರ್ಬಿಣಿಯಾದರೂ ಹಗಲಿರುಳು ದುಡಿಯುತ್ತಿದ್ದ ಆಶಾ ಕಾರ್ಯಕರ್ತೆಗೆ ಸೀಮಂತ ಮಾಡಿ ಕೃತಜ್ಞತೆ ಸಲ್ಲಿಸಲಾಗಿದೆ. ಗ್ರಾಮಾಂತರ ಶಾಸಕ ಗೌರಿಶಂಕರ ನೇತೃತ್ವದಲ್ಲಿ ಈ ಅಭಿನಂದನಾ ಕಾರ್ಯಕ್ರಮ ನೆರವೇರಿದೆ. ಆಶಾ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಮನೆ ಮನೆಗೂ ತೆರಳಿ ಕೊರೊನಾ ತಡೆಗಟ್ಟುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ. ಅಂತವರ ಸೇವೆಯನ್ನು …
Read More »ಮೇ 17ರ ಬಳಿಕ ಸಿಗುತ್ತಾ ಬಿಗ್ ರಿಲೀಫ್?
ನವದೆಹಲಿ/ಬೆಂಗಳೂರು: ಲಾಕ್ ಡೌನ್ ವಿಸ್ತರಣೆ, ವಿನಾಯ್ತಿ ಸಂಬಂಧ ಸೋಮವಾರ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ದೀರ್ಘಕಾಲದ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಅಭಿಪ್ರಾಯ ಪಡೆದಿರುವ ಪ್ರಧಾನಿ ಮೋದಿ, ಕೇಂದ್ರ ಆರೋಗ್ಯ ಇಲಾಖೆಯ ಟಾಸ್ಕ್ ಫೋರ್ಸ್, ನೀತಿ ಆಯೋಗ ಸೇರಿ ಹಲವು ಟಾಸ್ಕ್ ಫೋರ್ಸ್ ಗಳ ಅಭಿಪ್ರಾಯ ಸಂಗ್ರಹಿಸಿ ಒಂದೆರಡು ದಿನಗಳಲ್ಲಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ. ಲಾಕ್ ಡೌನ್ ನಿಯಮಗಳನ್ನು ಕಂಟೈನ್ಮೆಂಟ್ ಝೋನ್ ಗಳಿಗೆ ಸೀಮಿತಗೊಳಿಸಿ ಲಾಕ್ ಡೌನ್ ನಿಂದ ವಿನಾಯ್ತಿ ನೀಡುವಂತೆ …
Read More »ಕೊರೊನಾ ಸೋಂಕಿತನ ಏರಿಯಾವನ್ನು ಕಂಟೈನ್ಮೆಂಟ್ ಝೋನ್ ಆಗಿ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಇದಕ್ಕೆ ಜನರು ವಿರೋಧ ವ್ಯಕ್ತ
ದಾವಣಗೆರೆ: ಕೊರೊನಾ ಸೋಂಕಿತನ ಏರಿಯಾವನ್ನು ಕಂಟೈನ್ಮೆಂಟ್ ಝೋನ್ ಆಗಿ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಇದಕ್ಕೆ ಜನರು ವಿರೋಧ ವ್ಯಕ್ತಪಡಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಿವನಗರದಲ್ಲಿ ಕಂಟೈನ್ಮೆಂಟ್ ಝೋನ್ ಮಾಡಲು ಜನರು ವಿರೋಧ ಮಾಡುತ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಯುವಕನ ಏರಿಯಾವನ್ನು ಕಂಟೈನ್ಮೆಂಟ್ ವಲಯವನ್ನಾಗಿ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಈ ವೇಳೆ ಕಂಟೈನ್ಮೆಂಟ್ ಝೋನ್ ಮಾಡಬೇಡಿ ಎಂದು ನೂರಾರು ಜನರು ತಡೆದಿದ್ದಾರೆ. ಅಜ್ಮೀರ್ನಿಂದ ದಾವಣಗೆರೆಗೆ ಆಗಮಿಸಿದ್ದ 22 ವರ್ಷದ ಯುವಕನಿಗೆ …
Read More »ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಅಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ಆದೇಶ
ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಮತ್ತಷ್ಟು ಸಡಿಲವಾಗಿ ಸಿಲಿಕಾನ್ ಸಿಟಿಯಲ್ಲಿ ಶೀಘ್ರವೇ ಬಿಎಂಟಿಸಿ ಬಸ್ ಓಡಾಟ ಶುರುವಾಗುತ್ತಾ ಅನ್ನೋ ಸುಳಿವೊಂದು ಸಿಕ್ಕಿದೆ. ಹೌದು. 48 ದಿನಗಳ ಲಾಕ್ಡೌನ್ ಬಳಿಕ ಇಂದಿನಿಂದ ಬಿಎಂಟಿಸಿಯ ಎಲ್ಲಾ ನೌಕರರು ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿ ಸೂಚಿಸಿದೆ. ಸಾರಿಗೆ ಸಂಸ್ಥೆಯು ತುರ್ತು ಸೇವೆಗೆ ಒಳಪಡುವುದರಿಂದ ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಅಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ಸಿಬ್ಬಂದಿಗೆ ಆದೇಶ ನೀಡಿದೆ. ಪ್ರಮುಖ ಸೂಚನೆಯೆಂದರೆ ಕೆಲಸಕ್ಕೆ …
Read More »ಮಹಾರಾಷ್ಟ್ರದಲ್ಲಿ ಸಿಲುಕಿದ್ದ ನೂರಾರು ಕನ್ನಡಿಗರಿಗೆ ಬಸ್ ವ್ಯವಸ್ಥೆ ಕಲ್ಪಿಸಿದ ಸೋನು ಸೂದ್
ಮುಂಬೈ: ಕೊರೊನಾ ಲಾಕ್ಡೌನ್ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತೆರಳಲು ಬಾಲಿವುಡ್ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ. ಸೋನು ಸೂದ್ ಅವರು ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳ ಜೊತೆಗೆ ಚರ್ಚಿಸಿ ಕಲಬುರಗಿಯಿಂದ ಮಹಾರಾಷ್ಟ್ರದ ಥಾಣೆಗೆ ಬಂದಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ಅನುಮತಿ ಪಡೆದಿದ್ದರು. ಈ ಮೂಲಕ ತಮ್ಮ ಸ್ವಂತ ಖರ್ಸಿನಲ್ಲಿ ಒಟ್ಟು ಹತ್ತು ಬಸ್ಗಳ ವ್ಯವಸ್ಥೆ …
Read More »ಚಿಕ್ಕೋಡಿ:ಕೊಳವೆ ಬಾವಿಗೆ ಬಿದ್ದು ರೈತ ಸಾವು,……..
ಚಿಕ್ಕೋಡಿ (ಬೆಳಗಾವಿ): ಕೊಳವೆ ಬಾವಿಗೆ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಸುಲ್ತಾನಪೂರ ಗ್ರಾಮದ ಲಕ್ಕಪ್ಪ ಸಂಗಪ್ಪ ದೊಡಮನಿ (38) ಕೊಳವೆ ಬಾವಿಯಲ್ಲಿ ಸಿಲುಕಿ ಮೃತಪಟ್ಟ ರೈತ. ಕೊಳವೆ ಬಾವಿಗೆ ಸಿಲುಕಿದ್ದ ಮಾಹಿತಿ ತಿಳಿಯುತ್ತಿದ್ದಂತೆ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ತಕ್ಷಣವೇ 2 ಜೆಸಿಬಿಗಳನ್ನು ಕರೆಯಿಸಿ ಕಾರ್ಯಾಚರಣೆ ಆರಂಭಿಸಿದರು. ಸುಮಾರು 18ರಿಂದ 20 …
Read More »