ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೋಲೀಸ್ ಭದ್ರತೆಯಲ್ಲಿ ಕೊಳಚೆ ಸಂಸ್ಕರಣ ಘಟಕ ಕಾಮಗಾರಿ ಆರಂಭಿಸಿದ್ದಾರೆ. ಹಲಗಾ ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಮಗಾರಿ ಆರಂಭವಾಗುತ್ತಿದ್ದಂತೆಯೇ,ರೈತರು ಅದಕ್ಕೆ ತೀವ್ರ ಪ್ರತಿರೋಧ ವ್ಯೆಕ್ತ ಪಡಿಸಿದ ಘಟನೆಯೂ ನಡೆಯಿತು. 50 ಕ್ಕೂ ಹೆಚ್ಚು ರೈತರು ಕಾಮಗಾರಿಗೆ ವಿರೋಧ ವ್ಯೆಕ್ತಪಡಿಸಿದಾಗ,ರೈತ ಮುಖಂಡರು ಹಾಗೂ ಪಾಲಿಕೆ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ನಾವು ನಮ್ಮ ಜಮೀನಿನಲ್ಲಿ ಮುಂಗಾರು ಬಿತ್ತನೆ ಮಾಡಿದ್ದೇವೆ.ಇಂತಹ ಸಂಧರ್ಭದಲ್ಲಿ ಕಾಮಗಾರಿ ಆರಂಭಿಸುವದು ಬೇಡ …
Read More »ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್,….
ನವದೆಹಲಿ: ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತನ್ನ ಸ್ಥಾನದ ಸಮರ್ಥನೆ ಮಾಡಿಕೊಳ್ಳಲು ಚೀನಾಕ್ಕೆ ಬಿಡಬಾರದು ಎಂದು ಹೇಳಿದ್ದಾರೆ. ತಪ್ಪು ಮಾಹಿತಿ ಕೊಡುವುದು ರಾಜತಾಂತ್ರಿಕತೆ ಅಥವಾ ನಿರ್ಣಾಯಕ ನಾಯಕತ್ವಕ್ಕೆ ಪರ್ಯಾಯವಲ್ಲ ಎಂದು ಹೇಳಿರುವ ಮಾಜಿ ಪ್ರಧಾನಿ, ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಿಕೊಂಡು ಗಡಿಭಾಗದಲ್ಲಿ ಮೊನ್ನೆ …
Read More »ಕೋಲಾರದಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 64ಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗಿದೆ.
ಕೋಲಾರ : ಕೋಲಾರದಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 64ಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗಿದೆ. ಸೊಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಸ್ಟಾಪ್ ನರ್ಸ್ ಸೇರಿ 8 ಜನರಲ್ಲಿ ಕೊರೋನಾ ಸೊಂಕು ಧೃಡವಾಗಿದ್ದು, ಕೋಲಾರ 3, ಬಂಗಾರಪೇಟೆ 3, ಮಾಲೂರು 1, ಮುಳಬಾಗಿಲು 1 ಪ್ರಕರಣ ದಾಖಲಾಗಿದೆ. ಸೊಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದೆ. ಜಿಲ್ಲೆಯಲ್ಲಿ 64 ಕೊರೋನಾ ಸೊಂಕಿತರ ಪ್ರಕರಣಗಳು ದಾಖಲಾಗಿದ್ದ 32 …
Read More »ಟಿವಿ ನೋಡಲು ಮನೆಗೆ ಬಂದ 11 ವರ್ಷದ ಬಾಲಕಿಯನ್ನು ಮನೆಯ ಮಾಲೀಕನ ಮಗ ಹಾಗೂ ಆತನ ಸ್ನೇಹಿತರು ಸೇರಿ ಅತ್ಯಾಚಾರ ಎಸಗಿದ ಘಟನೆ…
ಚೆನ್ನೈ : ಟಿವಿ ನೋಡಲು ಮನೆಗೆ ಬಂದ 11 ವರ್ಷದ ಬಾಲಕಿಯನ್ನು ಮನೆಯ ಮಾಲೀಕನ ಮಗ ಹಾಗೂ ಆತನ ಸ್ನೇಹಿತರು ಸೇರಿ ಅತ್ಯಾಚಾರ ಎಸಗಿದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಮಾಲೀಕನ ಮಗ 10ನೇ ತರಗತಿಯಲ್ಲಿ ಓದುತ್ತಿದ್ದ ಹಿನ್ನಲೆಯಲ್ಲಿ ಆನ್ ಲೈನ್ ಕ್ಲಾಸ್ ಗಾಗಿ ಮೊಬೈಲ್ ನೀಡಲಾಗಿತ್ತು. ಅದರಲ್ಲಿ ಆತ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದ. ಒಮ್ಮೆ ಬಾಲಕಿ ಯಾರು ಇಲ್ಲದ ವೇಳೆ ಮನೆಗೆ …
Read More »ಕೋವಿಡ್ ಸೋಂಕು ಮತ್ತು ಬಹು ಅಂಗಾಂಗ ವೈಫಲ್ಯದಿಂದ ಆದೋನಿ ಮೂಲದ ವ್ಯಕ್ತಿಯೊಬ್ಬರು ಸೋಮವಾರ ಬೆಳಗಿನ ಜಾವ ಮೃತಪಟ್ಟರು…
ಬಳ್ಳಾರಿ: ಕೋವಿಡ್ ಸೋಂಕು ಮತ್ತು ಬಹು ಅಂಗಾಂಗ ವೈಫಲ್ಯದಿಂದ ಆದೋನಿ ಮೂಲದ ವ್ಯಕ್ತಿಯೊಬ್ಬರು ಸೋಮವಾರ ಬೆಳಗಿನ ಜಾವ ಮೃತಪಟ್ಟರು. ವಿಮ್ಸ್ಗೆ ದಾಖಲಾಗಿದ್ದ ಅವರನ್ನು, ಸೋಂಕು ದೃಢಪಟ್ಟ ಬಳಿಕ ಜೂನ್ 17 ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅನಿಯಂತ್ರಿತ ಮಧುಮೇಹ, ಸೋಂಕು ತಗುಲಿದೆ ಎಂಬ ಆಘಾತ ಹಾಗೂ ಅಂಗಾಂಗ ವೈಫ್ಯಲ್ಯಕ್ಕೆ ಒಳಗಾಗಿದ್ದ ಅವರಿಗೆ ವೆಂಟಿಲೇಟರ್ ಸೌಕರ್ಯದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು …
Read More »ನವದೆಹಲಿಗೆ ತೆರಳಿದ್ದ ಕೃಷಿ ಇಲಾಖೆಯ ಅಧಿಕಾರಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ.
ಪಾಟ್ನಾ: ಪ್ರಧಾನಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಕೇಂದ್ರ ಸಚಿವರುಗಳಿಗೆ ಈ ತಿಂಗಳ ಆರಂಭದಲ್ಲಿ ಲಿಚ್ಚಿ ಹಣ್ಣು ಕೊಡುಗೆ ನೀಡಲು ನವದೆಹಲಿಗೆ ತೆರಳಿದ್ದ ಕೃಷಿ ಇಲಾಖೆಯ ಅಧಿಕಾರಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ. ಬಿಹಾರಕ್ಕೆ ಜೂನ್ 11ರಂದು ಮರಳಿದ್ದ, ಅವರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂನ್ 20ರಂದು ಸೋಂಕು ಇರುವುದು ದೃಢಪಟ್ಟಿದ್ದು, ಇಲ್ಲಿನ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಆದರೆ, ಮುಜಾಫರ್ಪುರ್ ಜಿಲ್ಲಾಡಳಿತವು ಸ್ಪಷ್ಟನೆ ನೀಡಿದ್ದು, ಈ ಅಧಿಕಾರಿಗೆ ಹೆಸರಾಂತ …
Read More »ತಮ್ಮ ಊರಿನಲ್ಲಿ ಮಗನ ಮೊದಲ ಹುಟ್ಟುಹಬ್ಬ ಆಚರಿಸಿದ ರಿಷಭ್ ಶೆಟ್ಟಿ ದಂಪತಿ
ಬೆಂಗಳೂರಿಗೆ ಮರಳುತ್ತಿದ್ದಂತೆಯೇ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅವರು ನಾಯಕನಾಗಿ ನಟಿಸುತ್ತಿರುವ ‘ಹರಿಕಥೆ ಅಲ್ಲಾ ಗಿರಿಕಥೆ’ ಸಿನಿಮಾದ ಮುಹೂರ್ತ ನೆರವೇರಿಸಿದ್ದಾರೆ. ನಟ ಹಾಗೂ ನಿರ್ದೇಶಕ ರಿಷಭ್ ಶೆಟ್ಟಿ ಅವರ ಅಭಿನಯದ ಹೊಸ ಸಿನಿಮಾ ‘ಹರಿಕಥೆ ಅಲ್ಲಾ ಗಿರಿಕಥೆ’ ಬಗ್ಗೆ ಕಳೆದ ಶನಿವಾರವಷ್ಟೆ ನಿಮಗೆ ತಿಳಿಸಿದ್ದೆವು. ಪ್ರತಿ ಸಲ ಏನಾದರೂ ಹೇಳಬೇಕಾದರೆ ಅದನ್ನು ವಿಡಿಯೋ ಮೂಲಕ ಹೇಳುವ ರಿಷಭ್ ಶೆಟ್ಟಿ, ಈ ಸಲವೂ ತಮ್ಮ ಚಿತ್ರದ ಕುರಿತು ಒಂದು ವಿಡಿಯೋ ತುಣುಕು …
Read More »ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ.
ನವದೆಹಲಿ: ವಿಶ್ವದೆಲ್ಲೆಡೆ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ನಡುವೆಯೇ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆ ನಿರಂತರವಾಗಿ ಹೆಚ್ಚಾಗುತ್ತಲೇ ಇದೆ. ಇಂದು 10 ಗ್ರಾಂ ಚಿನ್ನದ ಬೆಲೆ 47,950 ರೂನಿಂದ 47,960 ರೂಪಾಯಿಗೆ ಏರಿಕೆಯಾಗಿದೆ. ಇದೇ ವೇಳೆ ಬೆಳ್ಳಿ ದರದಲ್ಲಿ ಕೂಡ ಏರಿಕೆ ಕಂಡಿದ್ದು, 1 ಕೆ.ಜಿ ಬೆಳ್ಳಿಗೆ 48,670 ರೂಪಾಯಿ ಆಗಿದೆ. ಈ ಮೂಲಕ ದೇಶಾದ್ಯಂತ ಚಿನ್ನದ …
Read More »ಸರ್ಕಾರದಿಂದ ನಡೆಸಲ್ಪಡುವ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಮಕ್ಕಳ ನಿರಾಶ್ರಿತರ ಕೇಂದ್ರ (ಶೆಲ್ಟರ್ ಹೋಂ)ನಲ್ಲಿದ್ದ 57 ಅಪ್ರಾಪ್ತ ಯುವತಿಯರಿಗೆ ಕೊರೋನಾ ಸೋಂಕು ತಗುಲಿದೆ.
ಲಕ್ನೋ : ಸರ್ಕಾರದಿಂದ ನಡೆಸಲ್ಪಡುವ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಮಕ್ಕಳ ನಿರಾಶ್ರಿತರ ಕೇಂದ್ರ (ಶೆಲ್ಟರ್ ಹೋಂ)ನಲ್ಲಿದ್ದ 57 ಅಪ್ರಾಪ್ತ ಯುವತಿಯರಿಗೆ ಕೊರೋನಾ ಸೋಂಕು ತಗುಲಿದೆ. ಆ 57 ಅಪ್ರಾಪ್ತರಲ್ಲಿ ಐವರು ಗರ್ಭಿಣಿಯಾಗಿದ್ದಾರೆ. ಕೊರೋನಾ ಸೋಂಕಿತರಲ್ಲದ ಇನ್ನಿಬ್ಬರು ಯುವತಿಯರು ಕೂಡ ಗರ್ಭಿಣಿಯಾಗಿದ್ದಾರೆ ಎಂಬ ಆತಂಕಕಾರಿ ಸಂಗತಿ ವೈದ್ಯಕೀಯ ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಸರ್ಕಾರಿ ಶೆಲ್ಟರ್ ಹೋಂನಲ್ಲಿರುವ ಈ ಅಪ್ರಾಪ್ತ ಯುವತಿಯರಿಗೆ ಯಾರಿಂದ ಸಾಮೂಹಿಕವಾಗಿ ಕೊರೋನಾ ಸೋಂಕು ತಗುಲಿದೆ? ಅವರು …
Read More »ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸೀಲ್ಡೌನ್ ಶುರುವಾಗಲಿದೆ………..?
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ನಗರದಲ್ಲಿ ಸೀಲ್ಡೌನ್ ಶುರುವಾಗಲಿದೆ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಬೆಂಗಳೂರಿನ ಬಹುತೇಕ ಏರಿಯಾಗಳು ಸೀಲ್ಡೌನ್ ಆಗಲಿವೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಆಯ್ದ ಏರಿಯಾಗಳಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಇಂದು ಸಿಎಂ ಜೊತೆ ಈ ಬಗ್ಗೆ ಗಂಭೀರ ಚರ್ಚೆ ಮಾಡಲಾಗುತ್ತಿದೆ. ಒಂದು ವೇಳೆ ಹೀಗೆ ನಗರದಲ್ಲಿ ಸಡಲಿಕೆ ಮುಂದುವರಿಸಿದರೆ …
Read More »