ಬೆಳಗಾವಿಯ ಕ್ಲಬ್ ರಸ್ತೆಯಲ್ಲಿರುವ ಈಫಾ ಹೋಟೆಲ್ ನಲ್ಲಿ ಆಶೀರ್ವಾದ್ ಇಂಡಸ್ಟ್ರೀಸ್ ವತಿಯಿಂದ ಚನ್ನಮ್ಮನ ಕಿತ್ತೂರಿನಲ್ಲಿ ಆರಂಭಿಸಿರುವ ಬೆಲ್ ಮಿಕ್ಸ್ ಫುಡ್ ಪ್ರಾಡಕ್ಟ್ಸ್ ನ್ನು ಬಿಡುಗಡೆಗೊಳಿಸಿ, ಉದ್ಯಮಕ್ಕೆ ಶುಭ ಹಾರೈಸಿದೆ. ಯುವಕರು ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯೋಗ ಸ್ಥಾಪಿಸಿ ಹತ್ತಾರು ಯುವಕರಿಗೆ ಉದ್ಯೋಗ ನೀಡುವಂತಾಗಬೇಕು. ಇಂದು ಅನೇಕರು ಕಷ್ಟಪಟ್ಟು ಓದಿ ಶಿಕ್ಷಣ ಪಡೆದು, ಕೆಲಸ ಹುಡುಕುತ್ತಾ ಕುಳಿತುಕೊಳ್ಳುತ್ತಾರೆ. ಇಂಜಿನಿಯರಿಂಗ್ ಪದವೀಧರರಾದ ನವೀನ್ ಮೆಳವೆಂಕಿ, ಸುಮನ್ ಮೋದಿ ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯಮ …
Read More »ಯತ್ನಾಳ ಅವರು ಇದೀಗ ಮಹಾನ್ ಸಮಾಜಸುಧಾರಕ ವಿಶ್ವಗುರು ಬಸವಣ್ಣನವರನ್ನು ಬಿಡದೇ ಅಪಮಾನ ಮಾಡಿರುವುದು ಬಸವ ಜನ್ಮಭೂಮಿಗೆ ಮಾಡಿದ ಅವಮಾನವಾಗಿದೆ’ ಎಂದು ಅಹಿಂದ ಮುಖಂಡ ಎಂ.ಸಿ.ಮುಲ್ಲಾ ಹೇಳಿದರು.
ನಾಡಿನ ಮಠಾಧೀಶರು, ರಾಜಕಾರಣಿಗಳು, ಬುದ್ದಿಜೀವಿಗಳು, ಪ್ರಗತಿಪರ ಚಿಂತಕರು, ಸಾಹಿತಿಗಳನ್ನು ಇದುವರೆಗೆ ಬಾಯಿಗೆ ಬಂದಂತೆ ಟೀಕೆ ಮಾಡುತ್ತಿದ್ದ ಯತ್ನಾಳ ಅವರು ಇದೀಗ ಮಹಾನ್ ಸಮಾಜಸುಧಾರಕ ವಿಶ್ವಗುರು ಬಸವಣ್ಣನವರನ್ನು ಬಿಡದೇ ಅಪಮಾನ ಮಾಡಿರುವುದು ಬಸವ ಜನ್ಮಭೂಮಿಗೆ ಮಾಡಿದ ಅವಮಾನವಾಗಿದೆ’ ಎಂದು ಅಹಿಂದ ಮುಖಂಡ ಎಂ.ಸಿ.ಮುಲ್ಲಾ ಹೇಳಿದರು. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಬಸವಣ್ಣನವರ ಅನುಯಾಯಿಗಳಿಗೆ ಯತ್ನಾಳ ಹೇಳಿಕೆಯಿಂದ ತೀವ್ರ ನೋವುಂಟಾಗಿದೆ. ಅವರು ಬೇಷರತ್ತಾಗಿ ಕ್ಷಮೆ ಕೇಳಬೇಕು. ಇಲ್ಲವಾದರೆ ಅವರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ’ …
Read More »ಸರಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವೆ – ಅಲಂ ಶಾ ಮಕಾನದಾರ
ಹುಕ್ಕೇರಿ : ಸರಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವೆ – ಅಲಂ ಶಾ ಮಕಾನದಾರ. ಹುಕ್ಕೇರಿ ತಾಲೂಕಿನ ಸರಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವೆ ಎಂದು ಕರ್ನಾಟಕ ರಾಜ್ಯ ಸರಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೂತನ ಅದ್ಯಕ್ಷ ಅಲಮಷಾ ಮಕಾನದಾರ ಹೇಳಿದರು. ಅವರು ಇಂದು ಹುಕ್ಕೇರಿ ನಗರದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮುಸ್ಲಿಂ ನೌಕರರ ಚಿಕ್ಕೋಡಿ ಜಿಲ್ಲಾ ಸಂಘದ ಸಭೆಯಲ್ಲಿ ನೂತನವಾಗಿ ಹುಕ್ಕೇರಿ ಸಂಘದ ಅದ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದರು. …
Read More »ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಬಿಜೆಪಿ ನಾಯಕರ ನಿಯೋಗ
ಬಳ್ಳಾರಿ (Ballari) ಜಿಲ್ಲಾ ಆಸ್ಪತ್ರೆ ಈಗ ಬಾಣಂತಿಯರ ಸರಣಿ ಸಾವಿನ ಮನೆಯಾಗಿದೆ. ಒಂದು ತಿಂಗಳ ಅಂತರದಲ್ಲಿ 6 ಬಾಣಂತಿಯರು ಸಾವನ್ನಪ್ಪಿದ್ದಾರೆ. ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಬಿಜೆಪಿ ನಾಯಕರ ನಿಯೋಗ ಇಂದು ದೂರು ಕೂಡ ನೀಡಿದೆ. ಇದರ ಬೆನ್ನಲ್ಲೇ ಇದೀಗ ಆಹಾರ ಇಲಾಖೆ ಜೊತೆ ಔಷಧ ನಿಯಂತ್ರಣ ಮಂಡಳಿ ವಿಲೀನಕ್ಕೆ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ. ಆ ಮೂಲಕ ಔಷಧ ನಿಯಂತ್ರಣ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ.ವಿಧಾನಸೌಧದಲ್ಲಿ …
Read More »ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣ ದೇಶದಾದ್ಯಂತ ಸದ್ದು ಮಾಡುತ್ತಿದೆ: ಪ್ರಲ್ಹಾದ್ ಜೋಶಿ
ಕಳಪೆ ಗುಣಮಟ್ಟದ ಐವಿ ದ್ರಾವಣ ಕೊಟ್ಟಿದ್ದೇ ಬಾಣಂತಿಯರ ಸಾವಿಗೆ ಕಾರಣ: ಪ್ರಲ್ಹಾದ್ ಜೋಶಿ ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣದ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕಳಪೆ ಗುಣಮಟ್ಟದ ಐವಿ ದ್ರಾವಣ ಕಾರಣವೆಂದು ಹೇಳಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವುದನ್ನು ಖಂಡಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಗ್ಯ ಸಚಿವರು ವಿಫಲರಾಗಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ .ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣ ದೇಶದಾದ್ಯಂತ ಸದ್ದು ಮಾಡುತ್ತಿದೆ. ಮನೆ …
Read More »ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರಿಕಾಗೋಷ್ಠಿ…
ಬೆಳಗಾವಿ ಡಿ.7 : ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಿಗಾಲ ಅಧಿವೇಶನ ಯಶಸ್ವಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ. ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆಯ ನಂತರ ಸಂಪೂರ್ಣ ಕಿತ್ತೂರ ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚಿಂತನೆ ನಡೆಸಲು ಸದಸ್ಯರಿಗೆ ಸಲಹೆ ನೀಡಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶನಿವಾರ (ಡಿ.7) …
Read More »ರಸ್ತೆ ಡಿವೈಡರ್ ಮೇಲೆ ನಿಂತು ಯುವತಿಯ ಅಸಭ್ಯ ನೃತ್ಯ
ವಿಶೇಷವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಿತಿ ಮೀರಿ ವರ್ತಿಸುವುದು ಸರಿಯಲ್ಲ. ಈ ವಿಷಯ ಗೊತ್ತಿದ್ದರೂ ಕೂಡಾ ಕೆಲವೊಬ್ಬರು ಸಾರ್ವಜನಿಕ ಸ್ಥಳಗಳಲ್ಲಿ ಲಂಗು ಲಗಾಮಿಲ್ಲದೆ ಅಸಭ್ಯ ರೀತಿಯ ವರ್ತನೆಯನ್ನು ತೋರುತ್ತಿರುತ್ತಾರೆ. ಇದಕ್ಕೆ ಉದಾಹರಣೆಯಂತಿರುವ ಸಾಕಷ್ಟು ಘಟನೆಗಳು ಈ ಹಿಂದೆಯೂ ಕೂಡಾ ನಡೆದಿವೆ. ಮೊನ್ನೆಯಷ್ಟೇ ರೂಪದರ್ಶಿಯೊಬ್ಬಳು ಬರೀ ಬಾತ್ ಟವೆಲ್ ಸುತ್ತಿ ಇಂಡಿಯಾ ಗೇಟ್ ಬಳಿ ಡ್ಯಾನ್ಸ್ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಳು. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ಓರ್ವ ಯುವತಿ ತುಂಡುಡುಗೆ …
Read More »ಭೂಗತ ಪಾತಕಿ ಬನ್ನಂಜೆ ರಾಜಾ ಸಹಚರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.
ಅಂಕೋಲಾದಲ್ಲಿ ಉದ್ಯಮಿ ಆರ್. ಎನ್. ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂಡಲಗಾ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ ರಾಜಾ ಸಹಚರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಅಂಕೋಲಾದಲ್ಲಿ ಉದ್ಯಮಿ ಆರ್. ಎನ್. ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂಡಲಗಾ ಜೈಲಿನಲ್ಲಿ ಕಳೆದ 9 ವರ್ಷಗಳಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಭೂಗತ ಪಾತಕಿ ಬನ್ನಂಜೆ ರಾಜಾ ಸಹಚರ ಕೆ. ಎಂ. ಇಸ್ಮಾಯಿಲ್ ಇಂದು ಏಕಾಏಕಿ ಉಸಿರಾಟದ ಸಮಸ್ಯೆಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಕೂಡಲೇ ಹಿಂಡಲಗಾ …
Read More »ಐಗಳಿ ಪೊಲೀಸ್ ಠಾಣೆ ಎಎಸ್ಐ ಆತ್ಮಹತ್ಯೆ
ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣೆ ಎಎಸ್ಐ ಆತ್ಮಹತ್ಯೆ ಶರಣಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸ್ವಗ್ರಾಮ ಅನಂತಪೂರದ ತನ್ನ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಇನ್ನು, ಸೂಸೈಡ್ ಮಾಡಿಕೊಂಡ ಎಎಸ್ಐ (50) ಶಂಭು ಮೆತ್ರಿ. ಇವರು ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿವರ್ಹಿಸುತ್ತಿದ್ದರು. ಕಳೆದ ಹಲವು ತಿಂಗಳಿಂದ ಶಂಭು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಜೀವನದ ಮೇಲೆ ಜಿಗುಪ್ಸೆ ಬಂದು ಪ್ರಾಣಬಿಟ್ಟಿದ್ದಾರೆ ಎನ್ನುತ್ತಿವೆ …
Read More »ವಿನೋದ್ ಕಾಂಬ್ಳಿ ನೆರವಿಗೆ 1983 ವಿಶ್ವಕಪ್ ವಿಜೇತ ತಂಡ ಸಿದ್ಧ ಎಂದ ಗವಾಸ್ಕರ್
ಟೀಂ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಅವರ ಆರ್ಥಿಕ ಮತ್ತು ವೈಯಕ್ತಿಕ ಸಂಕಷ್ಟಕ್ಕೆ 1983ರ ವಿಶ್ವಕಪ್ ವಿಜೇತ ತಂಡ ಸಹಾಯ ಮಾಡಲು ಮುಂದಾಗಿದೆ. ಸುನಿಲ್ ಗವಾಸ್ಕರ್ ಮತ್ತು ಕಪಿಲ್ ದೇವ್ ಅವರು ಕಾಂಬ್ಳಿಗೆ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಕಾಂಬ್ಳಿಗೆ ನೆರವು ನೀಡಬೇಕೆಂದರೆ ಅವರು ಮೊದಲು ಕುಡಿದತ ಚಟದಿಂದ ಮುಕ್ತರಾಗಬೇಕು ಎಂದು ಕಪಿಲ್ ದೇವ್ ಷರತ್ತು ವಿಧಿಸಿದ್ದಾರೆ. ಅನಾರೋಗ್ಯ ಹಾಗೂ ಆರ್ಥಿಕ ಸಂಕಷ್ಟದಿಂದ ಜೀವನ ನಿರ್ವಹಣೆಗೂ …
Read More »