ನವದೆಹಲಿ,ಮೇ2-ದೇಶವನ್ನು ಕಾಡುತ್ತಿರುವ ಕೊರೊನಾ ಸಂಕಷ್ಟದಲ್ಲಿ ದೇಶವನ್ನು ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ಪ್ರಧಾನಿ ನರೇಂದ್ರ ಮೋದಿ ಅನೇಕ ಮಾರ್ಗೋಪಾಯಗಳನ್ನು ಅನುಷ್ಠಾನಗೊಳಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಇಡೀ ವಿಶ್ವಕ್ಕೆ ಕೊರೊನಾ ವೈರಸ್ ಕೊಡುಗೆ ನೀಡಿ ಅಪಾರ ಸಾವುನೋವಿಗೆ ಕಾರಣವಾಗಿರುವ ಚೀನಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಮೆರಿಕ, ಜಪಾನ್ ಸೇರಿದಂತೆ ಅನೇಕ ದೇಶಗಳು ಕಮ್ಯುನಿಸ್ಟ್ ರಾಷ್ಟ್ರದಿಂದ ತನ್ನ ಕಂಪನಿಗಳನ್ನು ಹಿಂದಕ್ಕೆ ಕರೆಸಿಕೊಂಡಿವೆ. ಇದರ ಸದಾವಕಾಶ ಪಡೆಯುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಚತುರ ನಡೆ ಅನುಸರಿಸಿದ್ದಾರೆ. …
Read More »ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕನಿಗೆ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಣೆ….:ಲಕ್ಷ್ಮಣ ಸವದಿ..
ಬೆಂಗಳೂರು : ಇಂಧನ ಕ್ಷಮತೆಗೆ ವಿಶೇಷ ಒತ್ತು ನೀಡಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯೂ ನಿಗಮಗಳಲ್ಲಿ ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕನಿಗೆ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಣೆ ಮಾಡಿದೆ.ನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ, ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಂದ ವಿಡಿಯೋ ಕಾನ್ಫರೆನ್ಸ್ ನಡೆಸಲಾಯಿತು. ಈ ವೇಳೆ ಬಿಎಂಟಿಸಿ ಅಧ್ಯಕ್ಷ ಎನ್.ಎಸ್. ನಂದೀಶ್ ರೆಡ್ಡಿ, ನಿರ್ದೇಶಕಿ ಶಿಖಾ ಹಾಗೂ ಕೆಎಸ್ಆರ್ಟಿಸಿಯ …
Read More »ಇರೋಕೆ ಊಟ ಇಲ್ಲ, ಹೋಗೋಕೆ ಕಾಸಿಲ್ಲ : ಅಡಕತ್ತರಿಯಲ್ಲಿ ಅಂತರ ರಾಜ್ಯ ಕಾರ್ಮಿಕರ ಭವಿಷ್ಯ..!
ಬೆಂಗಳೂರು : ಅಂತರ ರಾಜ್ಯ ವಲಸಿಗರ ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅಸ್ತು ಎಂದಿದೆ. ರಾಜ್ಯದಲ್ಲೂ ಅನ್ಯ ರಾಜ್ಯದ ಸಾವಿರಾರು ವಲಸಿಗರು ಸಿಲುಕಿಕೊಂಡಿದ್ದು, ತಮ್ಮ ಊರುಗಳಿಗೆ ಹೋಗಲು ಹಾತೊರೆಯುತ್ತಿದ್ದಾರೆ. ಆದರೆ, ಹಲವು ವಲಸಿಗರಿಗೆ ತಮ್ಮ ತವರು ರಾಜ್ಯಕ್ಕೆ ಹೋಗುವ ರಹದಾರಿ ಕಠಿಣವಾಗಿದೆ. ಕೊರೊನಾ ಲಾಕ್ಡೌನ್ನಿಂದ ವಲಸಿಗರು ಅತಂತ್ರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಒಂದು ಕಡೆ ಕೆಲಸ ಇಲ್ಲ, ಇನ್ನೊಂದೆಡೆ ವಸತಿ, ಆಹಾರ ಇಲ್ಲದೇ ಸಾಕಷ್ಟು ಸಂಕಷ್ಟಕ್ಕೊಳಗಾಗಿದ್ದಾರೆ. ಆಯಾ ರಾಜ್ಯ ಸರ್ಕಾರ ವಲಸಿಗರಿಗೆ …
Read More »ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸಲು ಸಿಎಂ ಬಿಎಸ್ವೈ ಮಾಸ್ಟರ್ ಪ್ಲಾನ್..!
ಬೆಂಗಳೂರು : ಕೊರೊನಾ ಲಾಕ್ಡೌನ್ನಿಂದಾಗಿ ರಾಜ್ಯ ಸರ್ಕಾರದ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ. ಹೀಗಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರವು ಭರ್ಜರಿ ಪ್ಲಾನ್ ರೂಪಿಸಿದೆ. ಮೇ 3ರ ನಂತರ ಆರ್ಥಿಕ ಮಿತವ್ಯಯಕ್ಕಾಗಿ ಇಲಾಖೆಗಳಿಗೆ ಮೇಜರ್ ಸರ್ಜರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಇಲಾಖೆಗಳ ವಿಲೀನ, ಮತ್ತೆ ಕೆಲವು ಬರ್ಖಾಸ್ತು ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಸಚಿವ ಸಂಪುಟ ಉಪಸಮಿತಿಯ …
Read More »ವಿದ್ಯಾರ್ಥಿಗಳಿಗೆ ಬಿಗ್ ಶಾಕ್..! ದಂತ-ವೈದ್ಯಕೀಯ ಕೋರ್ಸ್ಗಳ ಶುಲ್ಕ ಹೆಚ್ಚಳ ……
ಬೆಂಗಳೂರು : ರಾಜ್ಯ ಸರ್ಕಾರವು ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಸ್ನಾತಕೋತ್ತರ ಮತ್ತು ದಂತವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿದೆ. ದಿಢೀರನೇ ಸರ್ಕಾರ ಪಿಜಿ ಮೆಡಿಕಲ್ ಮತ್ತು ಡೆಂಟಲ್ ಸೀಟುಗಳ ಶುಲ್ಕವನ್ನು ಹೆಚ್ಚಳ ಮಾಡಿದೆ.ಪ್ರತಿ ವರ್ಷ 10-15% ಶುಲ್ಕ ಹೆಚ್ಚಳ ಆಗುತ್ತಿತ್ತು. ಆದರೆ ಈ ಬಾರಿ ಸರ್ಕಾರ ಮತ್ತಷ್ಟು ಶುಲ್ಕ ಹೆಚ್ಚಳ ಮಾಡಿದೆ. ಇನ್ನೆರಡು ದಿನಗಳಲ್ಲಿ ಸಿಟಿಇ ಕೌನ್ಸಿಲಿಂಗ್ …
Read More »ಕಾರ್ಮಿಕರನ್ನು ಕರೆತರಲು-ಕಳಿಸುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ………….
ಬೆಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ವಿವಿಧ ರಾಜ್ಯಗಳ ಕಾರ್ಮಿಕರು ಸಿಲುಕಿದ್ದಾರೆ. ಬೇರೆ-ಬೇರೆ ರಾಜ್ಯಗಳಲ್ಲಿ ಕರ್ನಾಟಕದ ಕಾರ್ಮಿಕರು ಇದ್ದಾರೆ. ಅವರನ್ನು ವಾಪಸ್ ಕರೆತರುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಕಾರ್ಮಿಕರನ್ನು ಕರೆತರಲು ಮತ್ತು ಕಳುಹಿಸಲು ವಿವಿಧ ರಾಜ್ಯಗಳ ಜೊತೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಪ್ರಕ್ರಿಯೆಯನ್ನು ಇಬ್ಬರು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ನೋಡಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳ ಪ್ರಯಾಣಕ್ಕೆ …
Read More »ಮೇ.17ರ ವರೆಗೂ ಲಾಕ್ಡೌನ್ ಮುಂದುವರಿಕೆ, ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ನವದೆಹಲಿ : ಕೊರೊನಾ ಮಹಾಮಾರಿಯನ್ನು ಸಂಪೂರ್ಣವಾಗಿ ನಿಯಂತ್ರಣ ತರುವ ಉದ್ದೇಶದಿಂದ ದೇಶದಲ್ಲಿ ಮತ್ತೆ 2 ವಾರಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಈ ಬಾರಿ ಪ್ರಧಾನಿ ಭಾಷಣ ಇಲ್ಲದೇ ಗೃಹ ಇಲಾಖೆ ಅಧಿಕಾರಿಗಳೇ ಈ ವಿಷಯವನ್ನು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ. ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಎರಡು ಬಾರಿ ಲಾಕ್ ಡೌನ್ ಘೋಷಿಸಿತ್ತು. ಇದೀಗ ಮೂರನೇ ಬಾರಿಗೆ 2 ವಾರಗಳವರೆಗೂ ಲಾಕ್ ಡೌನ್ ವಿಸ್ತರಿಸಿ …
Read More »ರಾಜ್ಯದ ಮೂರು ಜಿಲ್ಲೆ ಹೊರತುಪಡಿಸಿ ಎಲ್ಲ ಕಡೆ ಎಣ್ಣೆ ಸಿಗುತ್ತೆ- ಆದ್ರೆ ಷರತ್ತು ಅನ್ವಯ..
ನವದೆಹಲಿ: ಹಸಿರು, ಕಿತ್ತಳೆ ವಲಯದ ಜಿಲ್ಲೆಯಲ್ಲಿರುವ ಮದ್ಯಪ್ರಿಯರಿಗೆ ಗುಡ್ನ್ಯೂಸ್. ಕೊರೊನಾ ಲಾಕ್ಡೌನ್ನಿಂದ ಕಂಗೆಟ್ಟಿದ್ದ ಮದ್ಯಪ್ರಿಯರಿಗೆ ಮೇ 4 ರಿಂದ ಎಣ್ಣೆ ಸಿಗಲಿದೆ. ಕೇಂದ್ರ ಸರ್ಕಾರ ಮತ್ತೆ ಮೂರು ವಾರಗಳ ಕಾಲ ಲಾಕ್ಡೌನ್ ವಿಸ್ತರಿಸಿದ್ದು, ಮೇ 17ರವರೆಗೆ ಲಾಕ್ಡೌನ್ ಮುಂದುವರಿಯಲಿದೆ. ಈ ಅವಧಿಯಲ್ಲಿ ಕಿತ್ತಾಳೆ, ಹಸಿರು ವಲಯದ ಜಿಲ್ಲೆಗಳಲ್ಲಿ ಮದ್ಯ ಮಾರಾಟದ ಜೊತೆ ಪಾನ್ ಅಂಗಡಿ ತೆರೆಯಲು ಅನುಮತಿ ನೀಡಿದೆ. ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿದರೂ ಷರತ್ತು ವಿಧಿಸಿದೆ. ಅಂಗಡಿಯಲ್ಲಿ ಕುಡಿಯುವಂತಿಲ್ಲ. …
Read More »ಬೀಗ ಬೀಳುವ ಭೀತಿಯಲ್ಲಿದೆ ಬೆಂಗಳೂರಿನ ಅತಿ ದೊಡ್ಡ ಖಾಸಗಿ ಆಸ್ಪತ್ರೆ………..
ಬೆಂಗಳೂರು: ನಗರದ ಅತಿ ದೊಡ್ಡ ಖಾಸಗಿ ಆಸ್ಪತ್ರೆಗೆ ಬೀಗ ಬೀಳುವ ಭೀತಿ ನಿರ್ಮಾಣವಾಗಿದೆ. ಕೊರೊನಾ ಸೋಂಕಿತೆ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ಕೊಟ್ಟಿದ್ದು, ಈ ಮಾಹಿತಿ ಜಿಲ್ಲಾಡಳಿತಕ್ಕೆ ಸಿಕ್ಕ ಹಿನ್ನೆಲೆಯಲ್ಲಿ ಸದ್ಯ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ. ನಗರದ ಬಿಳೆಕಲ್ಲಹಳ್ಳಿ ವಾರ್ಡಿನ ಕೋಡಿಚಿಕ್ಕನಹಳ್ಳಿಯ ನಿವಾಸಿಯಾಗಿದ್ದ ವೃದ್ಧೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕಳೆದ 10 ದಿನಗಳಿಂದ ಶೀತ, ಜ್ವರ, ನೆಗಡಿ, ಕೆಮ್ಮು ಕಾಣಿಸಿಕೊಂಡ ಕಾರಣ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ನಡೆಸಲಾಗಿತ್ತು. ಆದರೆ ಇದಕ್ಕೂ …
Read More »ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಈ ದಿಸೆಯಲ್ಲಿ ಅರಭಾಂವಿ ಮತ ಕ್ಷೇತ್ರದ ಎಲ್ಲ 76 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಹಂಚುತ್ತಿರುವ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಈ ದಿಸೆಯಲ್ಲಿ ಅರಭಾಂವಿ ಮತ ಕ್ಷೇತ್ರದ ಎಲ್ಲ 76 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಹಂಚುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ. ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಕಲಿಯುಗದ ದಾನ ಶೂರ ಕರ್ಣ ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಕುಟುಂಬಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …
Read More »