Breaking News

ಹತ್ತನೇ ಮದುವೆಯಾಗಲು ಮುಂದಾಗಿದ್ದ ಪತ್ನಿಯನ್ನ ಕೊಂದ 9ನೇ ಪತಿ

ಹೈದರಾಬಾದ್: ಹತ್ತನೇ ಮದುವೆಯಾಗಲು ಮುಂದಾಗಿದ್ದ 30 ವರ್ಷದ ಮಹಿಳೆಯನ್ನು ಆಕೆಯ ಒಂಬತ್ತನೇ ಪತಿಯೇ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪಹಾಡಿ ಶರೀಫ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ವರಲಕ್ಷ್ಮಿ (30) ಕೊಲೆಯಾದ ಮಹಿಳೆ. ಆರೋಪಿಯನ್ನು ನಾಗರಾಜು ಎಂದು ಗುರುತಿಸಲಾಗಿದೆ. ಇದೀಗ ಈತನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಮಾಡುತ್ತಿದ್ದಾರೆ. ಏನಿದು ಪ್ರಕರಣ? ಆರೋಪಿ ನಾಗರಾಜು ಕರ್ನೂಲ್ ಜಿಲ್ಲೆಯ ಜಲ್‍ಪಲ್ಲಿ ಮೂಲದವನಾಗಿದ್ದು, ಶ್ರೀರಾಮ ಕಾಲೋನಿಯಲ್ಲಿ ವಾಸಿಸುತ್ತಿದ್ದನು. ಈತ ಕ್ಯಾಬ್ …

Read More »

ಬಾಹುಬಲಿ ನಿರ್ದೇಶಕ ಎಸ್.ಎಸ್.ರಾಜಮೌಳಿಗೆ ಕೊರೊನಾ ಸೋಂಕು

ಹೈದರಾಬಾದ್: ಬಾಹುಬಲಿ ಸಿನಿಮಾ ಖ್ಯಾತಿಯ ನಿರ್ದೇಶಕ ಎಸ್.ಎಸ್.ರಾಜಮೌಳಿ ಹಾಗೂ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ರಾಜಮೌಳಿ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದು, ನನಗೆ ಹಾಗೂ ಕುಟುಂಬದ ಸದಸ್ಯರಿಗೆ ಕೆಲ ದಿನಗಳಿಂದ ಸ್ವಲ್ಪ ಮಟ್ಟಿನ ಶೀತ, ಜ್ವರ ಕಾಣಿಸಿಕೊಂಡಿತ್ತು. ನಂತರ ಅದು ಕಡಿಮೆಯಾಯಿತು. ಆದರೂ ನಾವು ಪರೀಕ್ಷೆಗೆ ಒಳಗಾದೆವು. ಪರೀಕ್ಷೆ ವೇಳೆ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇವೆ ಎಂದು …

Read More »

ಸೋಂಕಿತರಿಂದ ಸುಲಿಗೆ- ಖಾಸಗಿ ಆಸ್ಪತ್ರೆಗಳ ಮೇಲೆ ಅಧಿಕಾರಿಗಳ ದಾಳಿ

ಬೆಂಗಳೂರು: ಕೊರೊನಾ ಸೋಂಕಿತರಿಂದ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಆಸ್ಪತ್ರೆಗಳ ಮೇಲೆ ಅಧಿಕಾರಿಗಳು ದಾಳಿ ಮುಂದುವರಿಸಿದ್ದು, ಇಂದೂ ಸಹ ಹಲವು ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ. ಎಡಿಜಿಪಿ ಸುನೀಲ್ ಅಗರ್‍ವಾಲ್, ಐಎಎಸ್ ಉಮಾ ಮಹಾದೇವನ್ ತಂಡದಿಂದ ಪರಿಶೀಲನೆ ನಡೆಸಲಾಗಿದ್ದು, ಸರ್ಜಾಪುರ ರಸ್ತೆಯ ಕೊಲಂಬಿಯಾ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಂದ ಹೆಚ್ಚುವರಿ ಹಣ ಪಡೆದಿರುವುದು ಪತ್ತೆಯಾಗಿದೆ. 14 ಸೋಂಕಿತರಿಂದ 5,02,245 ರೂ.ಗಳನ್ನ ಪಡೆದಿದ್ದು, ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು …

Read More »

ತೆಂಗಿನ ಎಣ್ಣೆಯಿಂದ ಸ್ಯಾನಿಟೈಸರ್ ಸಂಶೋಧಿಸಿದ ವಿದ್ಯಾರ್ಥಿ……

ತುಮಕೂರು: ಕೊರೊನಾ ತಡೆಗೆ ಈಗ ಸ್ಯಾನಿಟೈಸರ್ ಕೂಡ ಒಂದು ಮದ್ದಾಗಿದೆ. ಹೀಗಾಗಿ ಕಲ್ಪತರು ನಾಡಿನ ವಿದ್ಯಾರ್ಥಿಯೋರ್ವ ತೆಂಗಿನ ಎಣ್ಣೆ ಬಳಸಿಕೊಂಡು ಸ್ಯಾನಿಟೈಸರ್ ಸಂಶೋಧಿಸಿದ್ದಾರೆ. ಜಗತ್ತನೇ ನಡುಗಿಸುತ್ತಿರೋ ಕೊರೊನಾ ವೈರಸ್ ತಡೆಗಟ್ಟೋಕೆ ಮತ್ತೊಂದು ರೀತಿಯ ಸ್ಯಾನಿಟೇಸರ್ ಹೊರತರೋಕೆ ವಿದ್ಯಾರ್ಥಿ ಕಾಯುತ್ತಿದ್ದಾರೆ. ತುಮಕೂರು ನಗರದ ಎಸ್‍ಐಟಿ ಕಾಲೇಜಿನ ಎಂಜಿನಿಯರಿಂಗ್ ಬಯೋಕೆಮಿಕಲ್ ವಿಭಾಗದ ವಿಧ್ಯಾರ್ಥಿ ಎಚ್.ಎನ್.ಚಿದಾನಂದ್ ಹೊಸ ಸ್ಯಾನಿಟೈಸರ್ ಸಂಶೋಧಿಸಿದ್ದು, ಆ ಮೂಲಕ ಗಮನ ಸೆಳೆದಿದ್ದಾರೆ. ಅಂದುಕೊಂಡಂತೆ ಆದರೆ ಕೆಲವೇ ದಿನಗಳಲ್ಲಿ ‘ಕಲ್ಪಶುದ್ಧಿ’ ಎಂಬ …

Read More »

1.5 ಲಕ್ಷಕ್ಕೆ 15 ದಿನದ ಮಗು ಮಾರಾಟಕ್ಕೆ ಯತ್ನ-ನಾಲ್ವರ ಬಂಧನ

ಶಿವಮೊಗ್ಗ : ಹಣಕ್ಕಾಗಿ 15 ದಿನದ ಗಂಡು ಮಗುವನ್ನು ಮಾರಾಟ ಮಾಡಲು ಸಿದ್ಧಗೊಂಡಿದ್ದ ಜಾಲವೊಂದನ್ನು ಬಂಧಿಸುವಲ್ಲಿ ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಟಿಪ್ಪುನಗರದ ನಿವಾಸದ ಮೇಲೆ ದಾಳಿ ನಡೆಸಿದ್ದರು. ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆ ತನ್ನ ನಿವಾಸದಲ್ಲಿ ಸ್ಥಳೀಯ ಮಹಿಳೆಯ ಸಹಾಯದೊಂದಿಗೆ 15 ದಿನಗಳ ಮಗುವೊಂದನ್ನು ಮಾರಾಟ ಮಾಡಲು ಸಿದ್ಧವಾಗಿದ್ದಳು. ಈ ವೇಳೆ ಮಹಿಳೆ ಮನೆ ಮೇಲೆ …

Read More »

ಚೀನಾಕ್ಕೆ ಮತ್ತೊಂದು ಪೆಟ್ಟು ನೀಡಲು ಮುಂದಾದ ಭಾರತ

ಬೆಂಗಳೂರು: ಗಡಿ ಸಂಘರ್ಷದ ಬೆನ್ನಲ್ಲೇ ಚೀನಾದ ಅನೇಕ ಆಯಪ್‌ಗಳನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರವು, ಈಗ ಆ ರಾಷ್ಟ್ರಕ್ಕೆ ಆರ್ಥಿಕವಾಗಿ ಮತ್ತೊಂದು ಪೆಟ್ಟು ನೀಡಲು ಮುಂದಾಗಿದೆ. ಸರ್ಕಾರವು ತನ್ನ ನೆರೆಯ ರಾಷ್ಟ್ರಗಳ ಮೇಲೆ ಹೊಸ ವ್ಯಾಪಾರ ನಿರ್ಬಂಧ ಹೇರಿದೆ. ಭಾರತದ ಜೊತೆ ಗಡಿ ಹಂಚಿಕೊಂಡಿರುವ ರಾಷ್ಟ್ರಗಳ ಕಂಪನಿಗಳು ಕೈಗಾರಿಕಾ ಇಲಾಖೆಯಲ್ಲಿ ಹೆಸರು ನೋಂದಾಯಿ ಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ನೋಂದಣಿ ಮಾಡಿಸಿಕೊಳ್ಳದ ಕಂಪನಿಗಳು ಸರ್ಕಾರಿ ಬಿಡ್‌ ಸಲ್ಲಿಸುವ ಅವಕಾಶ ಕಳೆದುಕೊಳ್ಳಲಿವೆ. ಸರಕು ಮತ್ತು ಸೇವಾ ವಲಯದಲ್ಲಿ …

Read More »

ಭಾರತೀಯರ ಮನ ಗೆದ್ದಿದ್ದ ನಟ ಸೋನು ಸೂದ್ ಅವರು ಈಗ ಐಸಿಯುನಲ್ಲಿರುವ ಬಾಲಿವುಡ್‍ನ ಹಿರಿಯ ನಟರೊಬ್ಬರಿಗೆ ಸಹಾಯ

ಮುಂಬೈ: ಕೊರೊನಾ ವೈರಸ್ ಬಿಕ್ಕಟ್ಟಿನ ನಡುವೆ ಕಷ್ಟದಲ್ಲಿ ಸಿಲುಕಿದವರಿಗೆ ಸಹಾಯ ಮಾಡಿ ಭಾರತೀಯರ ಮನ ಗೆದ್ದಿದ್ದ ನಟ ಸೋನು ಸೂದ್ ಅವರು ಈಗ ಐಸಿಯುನಲ್ಲಿರುವ ಬಾಲಿವುಡ್‍ನ ಹಿರಿಯ ನಟರೊಬ್ಬರಿಗೆ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ಸೋನು ಸೂದ್ ಅವರು ಕೊರೊನಾ ವೈರಸ್ ಲಾಕ್‍ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ತಮ್ಮ ಗ್ರಾಮಕ್ಕೆ ವಾಪಸ್ ಆಗಲು ಬಸ್ ವ್ಯವಸ್ಥೆ ಮಾಡಿಕೊಟ್ಟಿದ್ದರು. ಜೊತೆಗೆ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಮುಂಬೈ ಪೊಲೀಸರಿಗೆ 25 ಸಾವಿರ ಮಾಸ್ಕ್ …

Read More »

ಮಹಾರಾಷ್ಟ್ರದಲ್ಲಿ ಆಗಸ್ಟ್ 31ರವರೆಗೂ ಲಾಕ್‌ಡೌನ್ ವಿಸ್ತರಣೆ

ಮುಂಬೈ: ಕೊರೊನಾ ಸೋಂಕಿತರ ಸಂಖ್ಯೆ ಇನ್ನೂ ಕಡಿಮೆಯಾಗದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಆಗಸ್ಟ್ 31ರವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಬುಧವಾರಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಮಹಾರಾಷ್ಟ್ರದಲ್ಲಿ ನಾಲ್ಕು ಲಕ್ಷ ದಾಟಿದೆ. ಆಗಸ್ಟ್ 5 ರಿಂದ ಮಾಲ್‌ಗಳು, ವಾಣಿಜ್ಯ ಕಟ್ಟಡಗಳು ತೆರೆದಿರಲಿವೆ. ಚಿತ್ರಮಂದಿರಗಳು ಬಂದ್ ಇರಲಿವೆ. ಫುಡ್ ಕೋರ್ಟ್, ರೆಸ್ಟೋರೆಂಟ್‌ಗಳು ಬೆಳಗ್ಗೆ 9 ರಿಂದ ಸಂಜೆ 7ರವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಮಹಾರಾಷ್ಟ್ರದಲ್ಲಿ ಕೊವಿಡ್-19 ಸೋಂಕಿತರಿಗಿಂತ ಗುಣಮುಖರೇ ಹೆಚ್ಚು ಮಹಾರಾಷ್ಟ್ರ ಸರ್ಕಾರವು ಕಳೆದ …

Read More »

ಅನ್‌ಲಾಕ್‌ 3′ ಮಾರ್ಗಸೂಚಿ ಬಿಡುಗಡೆ: ಆಗಸ್ಟ್‌ ಅಂತ್ಯದವರೆಗೂ ಶಾಲಾ, ಕಾಲೇಜು ಇಲ್ಲ

ನವದೆಹಲಿ : ಕೊರೊನಾ ಸೋಂಕು ಹೆಚ್ಚುತ್ತಲೇ ಇರುವುದರಿಂದ ಆಗಸ್ಟ್‌ ಅಂತ್ಯದವರೆಗೂ ಶಾಲಾ, ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಗೃಹ ಸಚಿವಾಲಯವು ಬುಧವಾರ ಮೂರನೇ ಹಂತದ (ಅನ್‌ಲಾಕ್‌-3) ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಆಗಸ್ಟ್‌ 1ರಿಂದ ಇವು ಜಾರಿಗೆ ಬರಲಿವೆ. ಸೋಂಕು ಪಸರಿಸದಂತೆ ತಡೆಯುವ ಸಲುವಾಗಿ ಈ ಹಿಂದೆ ಜಾರಿಗೊಳಿಸಿದ್ದ ‘ರಾತ್ರಿ ಕರ್ಫ್ಯೂ’ ರದ್ದುಪಡಿಸಲಾಗಿದೆ. ಕಂಟೈನ್‌ಮೆಂಟ್‌ ವಲಯವನ್ನು ಬಿಟ್ಟು ಉಳಿದೆಡೆ ಆಗಸ್ಟ್‌ 5ರಿಂದ ಜಿಮ್‌ ಹಾಗೂ ಯೋಗ ಕೇಂದ್ರಗಳನ್ನು …

Read More »

ಡೀಲಗೆ ಬೇಡಿಕೆ ಇಟ್ಟಿದು ಐದು ಲಕ್ಷ ಸಿಕ್ಕಿದು ಬಗಣಿ ಘೂ ಟ,ಹನಿಟ್ರ್ಯಾಪ್ ಮಾದರಿಯಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಐವರ ಬಂಧನ

  ಬೆಳಗಾವಿ :ಮಾಳಮಾರುತಿ ಪೋಲಿಸರ ಕಾರ್ಯಾಚರಣೆ ಮಹಿಳೆಯರನ್ನ ಮುಂದೆ ಬಿಟ್ಟು ಹನಿಟ್ರ್ಯಾಪ್ ಮಾದರಿಯಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಐವರ ಬಂಧನ ಮೂವರು ಮಹಿಳೆಯರು ಸೇರಿದಂತೆ ಐವರ ಬಂಧನ ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಬಸವರಾಜ್ ಖಾನಗೊಂಡ ಎಂಬುವವರನ್ನ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಖದೀಮರು 5 ಲಕ್ಷ ಹಣಕ್ಕಾಗಿ ಬ್ಲ್ಯಾಕಮೇಲ್ ಮಾಡುತ್ತಿದ್ದ ಸಂದರ್ಭದಲ್ಲಿ ಮಾಳಮಾರುತಿ ಪೋಲಿಸರ ದಾಳಿ ಎಸಿಪಿ ನಾರಾಯಣ ಭರಮನಿ ಹಾಗೂ ಇನ್ಸ್ಪೆಕ್ಟರ್ ಗಡ್ಡೇಕರ್ ನೇತೃತ್ವದಲ್ಲಿ ಕಾರ್ಯಾಚರಣೆ ಬಂಧಿತರಿಂದ ಪ್ರೈಮ್ …

Read More »