ನಟ ದರ್ಶನ್ ಮತ್ತೊಮ್ಮೆ ಪರಪ್ಪನ ಅಗ್ರಹಾರದ ಪಾಲಾಗಿ 187 ದಿನಗಳಾಗಿವೆ. ಕೊರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ ಇದೀಗ ಪೊಲೀಸರ ತನಿಖೆಯ ಮೇಲೆಯೇ ಹಲವರು ಅನುಮಾನಗಳು ಮೂಡುತ್ತಿವೆ. ಮೊದಲೇ ಷಡ್ಯಂತ್ರ ಮತ್ತು ಪಿತೂರಿ ನಡೆದಿದೆ ಎನ್ನುವ ವಾದ ನಡೆಯುತ್ತಿತ್ತು. ಪಾರದರ್ಶಕವಾದ ತನಿಖೆಯನ್ನು ಪೊಲೀಸರು ಮಾಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದ್ದು,ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆಯನ್ನು ಕೂಡ ಮಾಡುತ್ತಿದ್ದರು. ಇದೀಗ ಬಹಿರಂಗವಾಗಿ ನ್ಯಾಯಾಲಯಕ್ಕೆ ಸುಳ್ಳು ಸಾಕ್ಷಿಗಳನ್ನು ನೀಡಲಾಗಿದೆ. ಸ್ಥಳ ಮಹಜರು ವೇಳೆ …
Read More »ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ: ಯಶವಂತರಾಯಗೌಡ ಪಾಟೀಲ
ಇಂಡಿ: ‘ಬಿಸಿಲು ಹೆಚ್ಚಾಗುತ್ತಿದೆ. ಬೇಸಿಗೆ ಆರಂಭಗೊಂಡಿದ್ದು ಪಟ್ಟಣವೂ ಸೇರಿದಂತೆ ಹಳ್ಳಿಗಳಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ನಗರದಲ್ಲಿ ಕುಡಿಯುವ ನೀರಿನ ಕುರಿತು ಶನಿವಾರ ನಡೆದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ ಭೀಮಾ ನದಿಯಲ್ಲಿ ನೀರಿನ ಕೊರತೆ ಎದ್ದು ಕಾಣುತ್ತಿದೆ. ತಾಲ್ಲೂಕಿನಾದ್ಯಂತ ಅನೇಕ ಕೆರೆಗಳು …
Read More »ರಾಜ್ಯದ ಸರ್ಕಾರಿ ನೌಕರರಿಗೆ `ಹಳೆಯ ಪಿಂಚಣಿ ಮರು ಜಾರಿ’ಗೆ ಕ್ರಮ: CM ಸಿದ್ದರಾಮಯ್ಯ ಭರವಸೆ
ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (OPS) ಮರು ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಿಕ್ಷಕರು ದೇಶದ ಭವಿಷ್ಯವನ್ನು ರೂಪಿಸುವವರು. …
Read More »ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ನಾಮಕರಣಕ್ಕೆ ಶೀಘ್ರ ಕ್ರಮ: ಸಚಿವ ರಾಮಲಿಂಗಾರೆಡ್ಡಿ
ಬೆಳಗಾವಿ: ರಾಜ್ಯ ಸರಕಾರದ ವತಿಯಿಂದ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ರಾಜ್ಯದ ಜನರ ಜೀವನಮಟ್ಟ ಸುಧಾರಿಸುವ ಕಾರ್ಯವಾಗುತ್ತಿದೆ. ವಾ.ಕ.ರ.ಸಾ.ಸಂಸ್ಥೆಗೆ ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ಎಂದು ನಾಮಕರಣಕ್ಕೆ ಶೀಘ್ರವೇ ಕ್ರಮ ವಹಿಸಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ (ಫೆ.28) ಜರುಗಿದ ವಾ.ಕ.ರ.ಸಾ.ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ, ನೂತನ ಬಸ್ಸುಗಳ ಲೋಕಾರ್ಪಣೆ, ಬೆಳಗಾವಿ-1ನೇ ಘಟಕದ ನವೀಕರಣ ಕಾಮಗಾರಿ ಶಂಕುಸ್ಥಾಪನೆ, …
Read More »ನಶಾ ಮುಕ್ತ ಕ್ಯಾಂಪಸ್, ಅಂಗಾಂಗ ದಾನ ಜಾಗೃತಿ ಅಭಿಯಾನಕ್ಕೆ ಚಾಲನೆ
ಬೆಳಗಾವಿ ಜಿಲ್ಲಾ ವ್ಯಾಪ್ತಿಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಗೆ ಸಂಯೋಜನೆಗೊಂಡಿರುವ ಕಾಲೇಜುಗಳ ಸಂಘ, ವಿಶ್ವವಿದ್ಯಾಲಯ, ಕರ್ನಾಟಕ ದಿಶಾ ಭೋದ್ ಫೌಂಡೇಶನ್ ಹಾಗೂ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅವರ ಸಹಯೋಗದಲ್ಲಿ ‘ಸ್ವಾಸ್ಥ್ಯ ಭಾರತ – ಶ್ರೇಷ್ಠ ಭಾರತ’ ಎಂಬ ಘೋಷಣೆಯಡಿ ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್, ಅಂಗಾಂಗ ದಾನ ಜಾಗೃತಿ ಅಭಿಯಾನ ಮತ್ತು ಜಾಥಾ (ವಾಕಥಾನ್) ಕಾರ್ಯಕ್ರಮವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು …
Read More »ಪರೀಕ್ಷೆಗೆ ಹೆದರಿ ವಸತಿ ಶಾಲೆಯಿಂದ 5 ಜನ SSLC ವಿದ್ಯಾರ್ಥಿಗಳು ಪರಾರಿ
ಹಾವೇರಿ: ರಾಜ್ಯದಲ್ಲಿ ಮಾರ್ಚ್ 18ರಿಂದ SSLC ಪರೀಕ್ಷೆಗಳು ಆರಂಭವಾಗಲಿದ್ದು, ಪೂರ್ವ ಸಿದ್ಧತಾ ಪರೀಕ್ಷೆ ಸೇರಿ ಅಂತಿಮ ಹಂತದ ತಯಾರಿ ನಡೆಯುತ್ತಿವೆ. ಉತ್ತಮ ಅಂಕಗಳೊಂದಿಗೆ ವಿದ್ಯಾರ್ಥಿಗಳು ತೇರ್ಗಡೆ ಹೊಂದಬೇಕೆಂಬ ಉದ್ದೇಶದಿಂದ ಶಿಕ್ಷಕರು ಮಾತ್ರವಲ್ಲದೆ ಶಿಕ್ಷಣ ಅಧಿಕಾರಿಗಳು, ತಹಶೀಲ್ದಾರ್ಗಳೂ ಕೆಲವೆಡೆ ತಮ್ಮದೇ ಆದ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಕೆಲಸ ಮಾಡುತ್ತಿದ್ದಾರೆ. ಪರೀಕ್ಷೆ ಬಗ್ಗೆ ಮಕ್ಕಳು ಆತಂಕಕ್ಕೆ ಒಳಗಾಗಬಾರದು ಎಂದು ಹಲವು ಕಾರ್ಯಕ್ರಮಗಳನ್ನು ನಡೆಸಿ ಅವರಿಗೆ ಧೈರ್ಯ ತುಂಬುವ ಕೆಲಸ ಆಗುತ್ತಿವೆ. ಹೀಗಿದ್ದರೂ ಹತ್ತನೇ …
Read More »ಕತ್ತು ಕೊಯ್ದು ಯುವಕನ ಕೊ*ಲೆ -ಹೊಲದಲ್ಲಿ ಶವ ಪತ್ತೆ
ಗದಗ: ಜಿಲ್ಲೆಯ ಲಕ್ಷ್ಮೀಶ್ವರ ಸಮೀಪದ ಶಿಗ್ಲಿ ಗ್ರಾಮದ ಯುವಕನನ್ನು ಕತ್ತು ಕೊಯ್ದು ಕ್ರೂರವಾಗಿ ಹ*ತ್ಯೆ ಮಾಡಿರುವ ದುರ್ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಮಹಮ್ಮದ ಫಾರೋಕ್ ಶೇಖ್ ಸನದಿ (25) ಎಂದು ಗುರುತಿಸಲಾಗಿದೆ ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹರ್ಲಾಪುರ ಗ್ರಾಮದ ನಿವಾಸಿ ಆಗಿರುವ ಫಾರೋಕ್ ಸದ್ಯ ಶಿಗ್ಲಿ ಗ್ರಾಮದಲ್ಲಿ ವಾಸವಾಗಿದ್ದ ಇದೀಗ ಲಕ್ಷ್ಮೀಶ್ವರ ಸಮೀಪದ ಜಮೀನೊಂದರಲ್ಲಿ ಆತನ ಶವ ಪತ್ತೆಯಾಗಿದೆ.ಅಪರಿಚಿತರು ಕತ್ತು ಕೊಯ್ದು ಹ*ತ್ಯೆ ನಡೆಸಿ ಬಳಿಕ …
Read More »ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಶಶಿಕಲಾ ಜೊಲ್ಲೆ ಚಾಲನೆ
ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಮಾಜಿ ಸಚಿವೆ ಶಾಸಕಿ ಶಶಿಕಲಾ ಜೊಲ್ಲೆ ಯವರು ಚಾಲನೆ ನೀಡಿ ಮಾತನಾಡಿದರು.ಇದಕ್ಕೂ ಮೊದಲು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. 1.ಗ್ರಾಮದ ಸ್ಟ್ರೀಟ್ ಲೈಟ್ ಹಾಗೂ ಹೈಮಾಸ್ಕ ಲೈಟಿಂಗ ಲೋಕಾರ್ಪಣೆ 42 ಕಂಬಗಳು 1ಹೈಮಾಸ್ಕ (ಬಂಗಾಲಿ ಬಾಬಾ ದೇವಸ್ಥಾನದಿಂದ ಅಂಬೇಡ್ಕರ ಚೌಕ ದವರಗೆ) 56.74 ಲಕ್ಷ. 2.ಡೋಣೆವಾಡಿ- ಕಾರದಗಾ ಮುಖ್ಯ ರಸ್ತೆಯಿಂದ …
Read More »ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ
ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ. ಸರ್ಕಾರಿ ನೌಕರರು, ದೊಡ್ಡ, ದೊಡ್ಡ ಐಟಿ ಕಂಪೆನಿಗಳಲ್ಲಿ ಕೆಲಸ ಮಾಡುತ್ತಾ ಇರುವವರು – ಹೀಗೆ ಬಹಳ ಜನ ನಮಗೆ ಗ್ಯಾರಂಟಿ ಯೋಜನೆಗಳು ಬೇಡ ಎಂದಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಉತ್ತರಿಸಿದರು. ಸಿರಿವಂತರು ಗ್ಯಾರಂಟಿ ಯೋಜನೆಗಳ ಫಲಾನುಭವದಿಂದ ಹೊರಬರಲಿ ಎಂದು ಒಂದಷ್ಟು ಸಚಿವರು ಹೇಳುತ್ತಿರುವ ಬಗ್ಗೆ ಕೇಳಿದಾಗ, “ಒಂದಷ್ಟು ಸಿರಿವಂತರು ನಮಗೆ ಅವಶ್ಯಕತೆ ಇಲ್ಲ …
Read More »ಚಿಕ್ಕೋಡಿ:ಭೀಕರ ಅಪಘಾತ ಯುವಕ ಸಾವು
ಚಿಕ್ಕೋಡಿ:ಬೇಡಕಿಹಾಳ-ಬೋರಗಾಂವ ರಸ್ತೆಯಲ್ಲಿರುವ ಶಿರದವಾಡ ಗ್ರಾಮದ ವ್ಯಾಪ್ತಿಯಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ನಿಖಿಲ್ ಸದಾನಂದ ಸಾವಂತ (25 ವಯಸ್ಸು ಸಂಕೇಶ್ವರದ ಬಸವೇಶ್ವರ ಗಲ್ಲಿ ನಿವಾಸಿ). ಬುಧವಾರ ಈ ಅಪಘಾತ ನಡೆದಿದೆ. ಘಟನೆಯನ್ನು ಸದಲಗಾ ಪೊಲೀಸರಿಗೆ ದಾಖಲಿಸಲಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯೆಂದರೆ ನಿಖಿಲ್ ಸಾವಂತ್ ಬೆಡ್ಕಿಹಾಲ್ ಬೋರ್ಗಾಂವ್ ರಸ್ತೆಯಲ್ಲಿ ಬೈಕ್ ಸವಾರ ಮಾಡುತ್ತಿದ್ದರು. ಈ ಮಧ್ಯೆ, ಶಿರದ್ವಾಡ ಗ್ರಾಮದ ವ್ಯಾಪ್ತಿಗೆ ತಲುಪಿದಾಗ, ಬೈಕ್ ನಿಯಂತ್ರಣ ತಪ್ಪಿ …
Read More »
Laxmi News 24×7