Breaking News

ಪಬ್‌ನಲ್ಲಿ ಕುಡಿದ ಮತ್ತಿನಲ್ಲಿ ಅಬಕಾರಿ ಇನ್‌ಸ್ಪೆಕ್ಟರ್ ರಾದ್ಧಾಂತ

ಬೆಂಗಳೂರು: ಪಬ್‌ನಲ್ಲಿ ಕುಡಿದ ಮತ್ತಿನಲ್ಲಿ ಅಬಕಾರಿ ಇನ್‌ಸ್ಪೆಕ್ಟರ್  ರಾದ್ಧಾಂತ ಮಾಡಿರುವ ಘಟನೆ ಜೆ.ಪಿ.ನಗರದಲ್ಲಿ  ನಡೆದಿದೆ. ಮಲ್ಲಪ್ಪ ಎಸ್ ಕುಂದಗೋಳ ಕುಡಿದು ಕಿರಿಕ್ ಮಾಡಿದ ಅಬಕಾರಿ ಇನ್ಸಪೆಕ್ಟರ್. ಸರ್ಕಾರಿ ಐಡಿ ಕಾರ್ಡ್ ಹಾಕಿಕೊಂಡು ಇನ್‌ಸ್ಪೆಕ್ಟರ್ ಪಬ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಕಂಠಪೂರ್ತಿ ಕುಡಿದು ಸಿಕ್ಕಸಿಕ್ಕವರಿಗೆ ಅವಾಜ್ ಹಾಕಿದ್ದಾರೆ. ಇನ್‌ಸ್ಪೆಕ್ಟರ್ ರಾದ್ಧಾಂತದ ವೀಡಿಯೋ ಲಭ್ಯವಾಗಿದೆ. ಪಬ್‌ನಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿ ಜೊತೆಯೂ ಇನ್‌ಸ್ಪೆಕ್ಟರ್ ಕಿರಿಕ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ ಮ್ಯಾನೇಜರ್‌ಗೂ …

Read More »

ಚಾಮುಂಡಿ ಬೆಟ್ಟದಲ್ಲಿ ಜು.17 ರಿಂದ ಆಷಾಢ ಮಾಸದ ಪೂಜೆ – ಸಿದ್ಧತೆ ಪರಿಶೀಲಿಸಿದ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಸಂಭ್ರಮ ಕಳೆಗಟ್ಟಿದೆ, ವಿವಿಧ ಕಾರ್ಯಕ್ರಮಗಳಿಗೆ ಭರದ ಸಿದ್ಧತೆ ನಡೆಯುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ.  ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಭೇಟಿ ನೀಡಿ ಅಗತ್ಯ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದ್ದಾರೆ. ನಗರದ ಚಾಮುಂಡಿ ಬೆಟ್ಟಕ್ಕೆ  ಭೇಟಿ ನೀಡಿದ್ದ ಅವರಿಂದು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ. ಜು.17 ರಿಂದ ಶುರುವಾಗಲಿರುವ ಆಷಾಢ ಮಾಸದ ಸಿದ್ಧತೆಗಳನ್ನ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. …

Read More »

ಶಾಹಾಪುರದ ಚಿಂತಾಮಣರಾವ್ ಪ್ರೌಢಶಾಲೆಯಲ್ಲಿ ಉಚಿತ ಕೃತಕ ಬುದ್ಧಿಮತ್ತೆ (AI) ಹಾಗೂ ಕೋಡಿಂಗ್ ಪುಸ್ತಕಗಳ ವಿತರಣೆ

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಭಯ ಪಾಟೀಲ ಅವರ ಮಾರ್ಗದರ್ಶನದಲ್ಲಿ ಚಾಣಕ್ಯ ಎಜುಕೇಶನ್ ಅಂಡ್ ಸೋಶಿಯಲ್ ವೆಲ್ಫೇರ್ ಸೊಸೈಟಿ, ಬೆಳಗಾವಿ ವತಿಯಿಂದ ಶಾಹಾಪುರದ ಚಿಂತಾಮಣರಾವ್ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಕೋಡಿಂಗ್ ಪುಸ್ತಕಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲಾ ಅಧ್ಯಕ್ಷ  ಶ್ರೀಮತಿ ಗೀತಾ ಸುತಾರ, ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಕ್ಷ್ಮಿ ನಾಯಕ್, ಶ್ರೀಮತಿ ಚೇತನಾ ಸಾರಂಗ್ (CEO, ದತ್ತಾಂಶ), …

Read More »

ಆಗುಂಬೆಗೆ ಸತೀಶ್‌ ಜಾರಕಿಹೊಳಿ ಭೇಟಿ – ರಸ್ತೆ ಕಾಮಗಾರಿ, ಅಪಾಯಕಾರಿ ತಿರುವುಗಳ ಸ್ಥಿತಿ ಪರಿಶೀಲನೆ

ಉಡುಪಿ: ಜಿಲ್ಲೆಯ ಆಗುಂಬೆಗೆ  ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ  ಭೇಟಿ ನೀಡಿ ರಸ್ತೆ ಕಾಮಗಾರಿ ಹಾಗೂ ಅಪಾಯಕಾರಿ ತಿರುವುಗಳ ಸ್ಥಿತಿಯನ್ನು ಪರಿಶೀಲಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಸಚಿವ ಸಂಪುಟ ವಿಸ್ತರಣೆ, ಕೆಪಿಸಿಸಿ ಅಧ್ಯಕ್ಷರ ನೇಮಕ, ಆಗುಂಬೆ ಸುರಂಗ ಯೋಜನೆ ಹಾಗೂ ಕಾರ್ಕಳ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಹಲವು ರಾಜಕೀಯ ಮತ್ತು ಆಡಳಿತಾತ್ಮಕ ವಿಚಾರಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಆಗುಂಬೆ ಘಾಟ್ ರಸ್ತೆಯ ವಿವಿಧ ಭಾಗಗಳನ್ನು ವೀಕ್ಷಿಸಿದ ಲೋಕೋಪಯೋಗಿ ಸಚಿವ ಸತೀಶ್ …

Read More »

ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ – ಫಾರ್ಮ್‌ ವಿತರಣೆಗೆ ಆ. 8ರ ವರೆಗೆ ಅವಕಾಶ

ಬೆಂಗಳೂರು: ಕರ್ನಾಟಕ, ದೆಹಲಿ, ಪಂಜಾಬ್‌ ಮತ್ತು ತೆಲಂಗಾಣದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ  ಪ್ರಕ್ರಿಯೆಯನ್ನು ಕೆಲವು ದಿನಗಳವರೆಗೆ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಹಿನ್ನೆಲೆ ರಾಜ್ಯದಲ್ಲೂ ಫಾರ್ಮ್‌ (ನಮೂನೆ) ಹಿಂದಿರುಗಿಸಲು ಅವಧಿ ವಿಸ್ತರಿಸಿ ಚುನಾವಣಾ ಆಯೋಗ  ಆದೇಶ ಹೊರಡಿಸಿದೆ. ಈ ತಿಂಗಳ ಅಂತ್ಯದ ವರೆಗೆ ಬಿಎಲ್‌ಒಗಳಿಗೆ  ಎಸ್‌ಐಆರ್‌ ನಮೂನೆ ವಿಸ್ತರಣೆಗೆ ಸಮಯ ಇತ್ತು. ಇದೀಗ ಆಗಸ್ಟ್‌ 8 ರ ಅವಧಿ ವಿಸ್ತರಿಸಲಾಗಿದೆ. ಬಿಎಲ್‌ಒಗಳು …

Read More »

ಜು.17ರಂದು ಫ್ರೀಡಂ ಪಾರ್ಕಿನಲ್ಲಿ ಬಿಜೆಪಿ ಜನಪ್ರತಿನಿಧಿಗಳ ಧರಣಿ: ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ರೈತವಿರೋಧಿ, ಬಡವರ ವಿರೋಧಿ, ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದೇ 17ರಂದು ಶುಕ್ರವಾರ ಬೆಳಗ್ಗೆಯಿಂದ ಸಂಜೆವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ  ಬಿಜೆಪಿಯ  ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು ಧರಣಿ ಹಮ್ಮಿಕೊಳ್ಳಲಿದ್ದೇವೆ. ರೈತರ ವಿರುದ್ಧ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯಲು ಆಗ್ರಹಿಸಲಾಗುವುದು. …

Read More »

ಬಿಡದಿ ಟೌನ್‌ಶಿಪ್ ಜಟಾಪಟಿ – ತೀವ್ರ ವಿರೋಧದ ಮಧ್ಯೆ 4 ಗ್ರಾಮಗಳ 5,000 ಎಕ್ರೆ ಸ್ವಾಧೀನಕ್ಕೆ ಅಧಿಸೂಚನೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ವಿರೋಧಿಸಿ ರೈತರ 500 ದಿನಗಳ ಹೋರಾಟ, ಸರ್ವೇಗೆ ಹೋದ ಅಧಿಕಾರಿಗಳು, ಲೀಸರ ಮೇಲೆ ಮಹಿಳೆಯರು ಪೊರಕೆ ದಾಳಿ ನಡೆಸಿದ್ದ ಬೆನ್ನಲ್ಲೇ, ಯೋಜನೆಯನ್ನ 2 ತಿಂಗಳು ಮಟ್ಟಿಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ರೈತರ ಅಭಿಪ್ರಾಯ ಸಂಗ್ರಹಕ್ಕಾಗಿ ಸಮಿತಿಯೊಂದನ್ನು ರಚನೆ ಮಾಡಲಾಗಿದ್ದು, ಇದು ಕೊಡುವ ವರದಿಯ ಮೇಲೆ ಮುಂದಿನ ಹೆಜ್ಚೆ ಇಡಲು ಸರ್ಕಾರ ತೀರ್ಮಾನಿಸಿದೆ. ಆದ್ರೆ, ಯಾವುದೇ ಕಾರಣಕ್ಕೂ ಯೋಜನೆ ನಿಲ್ಲಲ್ಲ ಅಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಯಾವುದೇ ರೈತರ …

Read More »

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ದಿಢೀರ್ ಏರುಪೇರು – ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ  ಅವರ ಪತ್ನಿ ಆರೋಗ್ಯದಲ್ಲಿ ದಿಢೀರ್‌ ಏರುಪೇರಾಗಿದೆ. ಅನಾರೋಗ್ಯ ಹಿನ್ನೆಲೆ ಪತ್ನಿ ಚೆನ್ನಮ್ಮ ಅವರನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ  ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ರಾತ್ರಿ 10 ಗಂಟೆ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ …

Read More »

78 ಕೋಟಿ ಭ್ರಷ್ಟಾಚಾರ ಆರೋಪ ಕೇಸ್‌ – ಕೊಪ್ಪಳದ KRIDL ಕಾರ್ಯನಿರ್ವಾಹಕ ಎಂಜಿನಿಯರ್ ಅರೆಸ್ಟ್‌

ಕೊಪ್ಪಳ: ವಿವಿಧ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತದ  ಕಾರ್ಯನಿರ್ವಾಹಕ ಎಂಜಿನಿಯರ್ ಅವರನ್ನ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಝರಣಪ್ಪ ಎಂ. ಚಿಂಚೋಳಿಕರ್ ಬಂಧಿತ ಆರೋಪಿ. ಇಲಾಖೆಯಲ್ಲಿ ಗ್ರೂಪ್ ಲೀಡರ್ ಆಗಿದ್ದ ದೇವರಾಜ ರೇಷ್ಮೆ ಎಂಬುವರನ್ನೂ ಬಂಧಿಸಿ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೊಪ್ಪಳದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ʻಪಬ್ಲಿಕ್ ಟಿವಿʼ ಬಯಲಿಗೆಳೆದಿತ್ತು. ಕೆಆರ್‌ಐಡಿಎಲ್ ಅಕ್ರಮದ ಬಗ್ಗೆ ಪಬ್ಲಿಕ್ ಟಿವಿ ನಿರಂತರ …

Read More »

ಶಿಥಿಲಗೊಂಡ ಶಾಲಾ ಕಟ್ಟಡದಲ್ಲಿಯೇ ಮಕ್ಕಳಿಗೆ ಶಿಕ್ಷಣ

ಬೆಳಗಾವಿ ಚಿಕ್ಕೋಡಿ ಶಿಕ್ಷಣ ಜಿಲ್ಲೆಯಲ್ಲಿ 1,438 ಶಾಲಾ ಕೊಠಡಿಗಳು ಶಿಥಿಲಗೊಂಡು, ಬೀಳುವ ಹಂತ ತಲುಪಿದರೂ ಕೈಗೊಳ್ಳದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಪಾಲಕರು ಮಕ್ಕಳಿಗೆ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿರುವುದು ಒಂದೆಡೆಯಾದರೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಹಿನ್ನಡೆ ಆಗಿರುವುದು ಮತ್ತೊಂದೆಡೆ. ಕೆಲ ಕೊಠಡಿಗಳ ಮೇಲ್ಛಾವಣಿ, ನೆಲಹಾಸು ಹಾಳಾಗಿವೆ. ಕಿಟಕಿ, ಬಾಗಿಲು ಮುರಿದಿವೆ. ಜಿಟಿಜಿಟಿ ಮಳೆಯಾದರೂ ಸಾಕು ಕೆಲ ಕೊಠಡಿಗಳು ಸೊರಿವೆ. ಗೋಡೆಗಳು ಬಿರುಕು ಬಿಟ್ಟಿವೆ. ಕೆಲ ಶಾಲೆಗಳ ಸ್ಥಿತಿಯಂತೂ ಹೇಳತೀರದ್ದಾಗಿದೆ. ಇಂತಹ ಕೊಠಡಿಗಳಲ್ಲೇ …

Read More »