ಬೆಳಗಾವಿ – ಇಂದು ಕುಡಚಿಯ ಕೊರೋನಾ ಸೋಂಕಿತನೋರ್ವನನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 4ಕ್ಕೇರಿದೆ. ಬೆಳಗಾವಿಯಲ್ಲಿ ಈವರೆಗೆ 45 ಜನರಿಗೆ ಸೋಂಕು ದೃಢಪಟ್ಟಿದ್ದು, ಓರ್ವ ವೃದ್ದೆ ಸಾವಿಗೀಡಾಗಿದ್ದಾಳೆ. ಈವರೆಗೆ ಒಟ್ಟೂ 2697 ಜನರ ಮೇಲೆ ಜಿಲ್ಲಾಡಳಿತ ನಿಗಾ ಇಟ್ಟಿದೆ. ಇವರಲ್ಲಿ 681 ಜನರು ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. 41 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 865 ಜನರು 14 ದಿನದ ಮತ್ತು 1110 ಜನರು 28 ದಿನದ …
Read More »ಕೊರೊನಾ ಕೋಲಾಹಲ- ಕೆಪಿಎಸ್ಸಿ ಪರೀಕ್ಷೆಗಳು ಮುಂದೂಡಿಕೆ……….
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಯಬೇಕಿದ್ದ ವಿವಿಧ ವಿಭಾಗಗಳ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ಕೊರೊನಾ ಅವಾಂತರದಿಂದಾಗಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಮೇ, ಜೂನ್ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ನಾಲ್ಕು ವಿಭಾಗಗಳ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಲಾಕ್ಡೌನ್ ಮುಗಿದ ಬಳಿಕ ಪರೀಕ್ಷಾ ದಿನಾಂಕ ನಿಗದಿ ಮಾಡುವುದಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ ಹೊರಡಿಸಲಾದ ಪ್ರಕಟಣೆಯಲ್ಲಿ ತಿಳಿಸಿದಲಾಗಿದೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಹೀಗಾಗಿ ಅನಗತ್ಯವಾಗಿ ಸಂಚರಿಸುವುದನ್ನು ನಿಷೇಧಿಸಲಾಗಿದೆ. ಇವತ್ತು ಒಂದೇ …
Read More »ಆಸ್ಪತ್ರೆಗೆ ಕರೆದೊಯ್ದಿದ್ದ ಪೇದೆಯ ಹೆಸರನ್ನೇ ಮಗುವಿಗಿಟ್ಟ ತಾಯಿ………
ನವದೆಹಲಿ: ಲಾಕ್ಡೌನ್ ಸಮಯದಲ್ಲಿ ದೆಹಲಿ ಪೊಲೀಸರು ಅನೇಕ ಮಾನವೀಯ ಕೆಲಸಗಳಿಂದ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ದೇಶದ ವಿವಿಧೆಡೆ ಪೊಲೀಸರು ಅನೇಕ ಬಡವರ ಹಸಿವು ನೀಗಿಸಿದ್ದಾರೆ, ಮಹಿಳೆಯರು, ರೋಗಿಗಳಿಗೆ ಅಗತ್ಯ ವಸ್ತು, ಔಷಧಿ ತಲುಪಿಸುವ ಕೆಲಸ ಮಾಡಿದ್ದಾರೆ. ಅಂಥೆ ಲಾಕ್ಡೌನ್ ಸಮಯದಲ್ಲಿ ದೆಹಲಿಯ ಪೊಲೀಸ್ ಪೇದೆ ದಯಾವೀರ್ ಸಿಂಗ್ ಅವರು ಗರ್ಭಿಣಿಯನ್ನು ಹೆರಿಗೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಹಿಳೆಯು ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ದಯಾವೀರ್ ಸಿಂಗ್ …
Read More »ಮದ್ಯ ಸಿಗದೇ ಕಂಗಾಲಾಗಿ ಸ್ಯಾನಿಟೈಸರ್ ಕುಡಿದ ಮದ್ಯವ್ಯಸನಿ……….
ಧಾರವಾಡ: ಲಾಕ್ಡೌನ್ ಹಿನ್ನೆಲೆ ಮದ್ಯ ಸಿಗದಕ್ಕೆ ಕಂಗಾಲಾದ ಮದ್ಯವ್ಯಸನಿಯೊಬ್ಬ ಸ್ಯಾನಿಟೈಜರ್ ಕುಡಿದು ಆಸ್ಪತ್ರೆ ಸೇರಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಗಾಂಧಿಚೌಕ್ ಬಾಲಾಜಿ ಓಣಿ ನಿವಾಸಿ ದೀಪಕ್ ಶಿಂಧೆ ಸ್ಯಾನಿಟೈಜರ್ ಕುಡಿದು ಆಸ್ಪತ್ರೆ ಸೇರಿದ್ದಾನೆ. ಈತ ಮದ್ಯ ವ್ಯಸನಿಯಾಗಿದ್ದು, ಕುಡಿಯಲು ಮದ್ಯ ಸಿಗದಕ್ಕೆ ತನ್ನ ಕೈಗೆ ಸಿಕ್ಕ ಸ್ಯಾನಿಟೈಜರ್ ಗಳನ್ನೇ ಕುಡಿದು ಬಿಟ್ಟಿದ್ದಾನೆ. ಸ್ಯಾನಿಟೈಜರ್ ಕುಡಿದ ತಕ್ಷಣವೇ ಈತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ಶಹರ ಠಾಣೆ …
Read More »ಧಾರವಾಡ: ಮತ್ತೊಬ್ಬ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖನಾಗಿ ಡಿಸ್ಚಾರ್ಜ್……
ಧಾರವಾಡ: ಜಿಲ್ಲೆಯಲ್ಲಿ ಮತ್ತೊಬ್ಬ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖನಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯ ಇಬ್ಬರು ಕೊರೊನಾದಿಂದ ಗುಣಮುಖರಾದಂತಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ವ್ಯಕ್ತಿ ಗುಣಮುಖನಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿರುವ ಕುರಿತು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ. ದೆಹಲಿ ಪ್ರವಾಸದಿಂದ ಮರಳಿ ಬಂದಿದ್ದ ಹುಬ್ಬಳ್ಳಿ ಮುಲ್ಲಾ ಓಣಿಯ 27 ವರ್ಷದ ವ್ಯಕ್ತಿಗೆ (ರೋಗಿ ನಂ.194) ಕೊರೊನಾ ಸೋಂಕು ತಗುಲಿರುವುದು ಏಪ್ರಿಲ್ 9 ರಂದು …
Read More »ರ್ಕಾರ ಮನೆಯಲ್ಲೇ ಇರುವ ಬಡವರಿಗೆ ಕೊಡುತ್ತಿರುವ ಉಚಿತ ಅಕ್ಕಿಯಲ್ಲೂ ಸೊಸೈಟಿಯವರು ಗೋಲ್ಮಾಲ್ ಮಾಡುತ್ತಿದ್ದಾರೆ: ಸಿ.ಟಿ.ರವಿ
ಚಿಕ್ಕಮಗಳೂರು: ಕೊರೊನಾ ಆತಂಕದಿಂದ ಇಡೀ ದೇಶವೇ ಲಾಕ್ಡೌನ್ ಆಗಿದ್ದು, ಸರ್ಕಾರ ಮನೆಯಲ್ಲೇ ಇರುವ ಬಡವರಿಗೆ ಕೊಡುತ್ತಿರುವ ಉಚಿತ ಅಕ್ಕಿಯಲ್ಲೂ ಸೊಸೈಟಿಯವರು ಗೋಲ್ಮಾಲ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪಕ್ಕೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಗಲ್, ನಿಡುವಾಳೆ, ಕೂವೆ ಗ್ರಾಮಗಳ ಸೊಸೈಟಿಯಲ್ಲಿ ಅಕ್ರಮ ನಡೆಯುತ್ತಿದ್ದು, ನಿಗದಿಗಿಂತ ಕಡಿಮೆ ಪಡಿತರ ನೀಡುತ್ತಿದ್ದಾರೆ. ಜೊತೆಗೆ ಎಲ್ಲರಿಂದಲೂ …
Read More »ರಾಮನಗರ ಬಿಟ್ಟು ಬೇರೆ ಕಡೆ ಶಿಫ್ಟ್ ಮಾಡಿದ್ರೆ ತೊಂದರೆ ಆಗಲ್ವಾ:ಸಿಎಂ ಕುಮಾರಸ್ವಾಮಿಗೆ ತಿರುಗೇಟು ಜಗದೀಶ್ ಶೆಟ್ಟರ್
ಧಾರವಾಡ: ಬೆಂಗಳೂರಿನ ಪಾದರಾಯನಪುರದಲ್ಲಿ ಗಲಾಟೆ ಮಾಡಿದವರಿಗೆ ಎಲ್ಲಾದ್ರು ಒಂದು ಕಡೆ ಇಡಲೇಬೇಕಲ್ಲಾ. ಇಡೀ ರಾಜ್ಯದಲ್ಲಿ ರಾಮನಗರ ಒಂದೇ ಇದೆ ಎಂದು ಸೀಮಿತವಾಗಬೇಡಿ ಎಂದು ಸಚಿವ ಜಗದೀಶ್ ಶೆಟ್ಟರ್ ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಬಳಿ ಕೋವಿಡ್-19 ಪರೀಕ್ಷೆಯ ಗಂಟಲು ದ್ರವ ಮಾದರಿ ಸಂಚಾರ ವಾಹನ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಮನಗರ ಜೈಲು ಬಿಟ್ಟು ಬೇರೆ ಕಡೆ ಪಾದರಾಯನಪುರ ಆರೋಪಿಗಳನ್ನು ಇಟ್ಟರೆ, ಅಲ್ಲಿ ಕೂಡಾ …
Read More »ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳದ ಕೊರೊನಾ ಸೋಂಕಿತ ಗರ್ಭಿಣಿಯ ಡಿಸ್ಚಾರ್ಜ್ಹೂವು, ಹಣ್ಣು ಮತ್ತು ಸ್ವೀಟ್ಸ್ ಕೊಟ್ಟುಶುಭ ಹಾರೈಸಿ ಡಿಸ್ಚಾರ್ಜ್ ಮಾಡಿದರು.
ಉಡುಪಿ: ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳದ ಕೊರೊನಾ ಸೋಂಕಿತ ಗರ್ಭಿಣಿಯ ಡಿಸ್ಚಾರ್ಜ್ ಆಗಿದೆ. ಮಹಿಳೆಯ ಆರೋಗ್ಯದಲ್ಲಿ ಸಂಪೂರ್ಣ ಸುಧಾರಣೆಯಾಗಿದ್ದು, ಮಲ್ಲಿಗೆ ಹೂವು, ಹಣ್ಣು ಮತ್ತು ಸ್ವೀಟ್ಸ್ ಕೊಟ್ಟು ಡಿಸ್ಚಾರ್ಜ್ ಮಾಡಲಾಗಿದೆ. ಗರ್ಭಿಣಿಯ ಎರಡು ಕೋವಿಡ್ ತಪಾಸಣೆಯಲ್ಲೂ ನೆಗೆಟಿವ್ ಎಂದು ವರದಿ ಬಂದಿದೆ. ಹೀಗಾಗಿ ಟಿಎಂಎ ಪೈ ಕೋವಿಡ್ ಆಸ್ಪತ್ರೆಯ ವೈದ್ಯರು ಮತ್ತು ಜಿಲ್ಲಾಡಳಿತ ಮಹಿಳೆಯನ್ನು ವಿಶೇಷವಾಗಿ ಬೀಳ್ಕೊಟ್ಟರು. ಉಡುಪಿಯ ಶಂಕರಪುರ ಮಲ್ಲಿಗೆ, ಹಣ್ಣುಗಳು, ಸಿಹಿತಿಂಡಿಗಳನ್ನು ಕೊಟ್ಟು ಶುಭ ಹಾರೈಸಿ ಡಿಸ್ಚಾರ್ಜ್ …
Read More »ನಮ್ಗೆ ಚಿಕ್ಕ ಚಿಕ್ಕ ಮಕ್ಕಳಿದ್ದಾರೆ, ನಮ್ಮನ್ನ ಕ್ವಾರಟೆಂನ್ನಲ್ಲಿ ಇಡಬೇಡಿ – ಎಚ್ಡಿಕೆ ಬಳಿ ಜೈಲು ಸಿಬ್ಬಂದಿ ಅಳಲು
ರಾಮನಗರ: ರಾಮನಗರ ಜೈಲಿಗೆ ಶಿಫ್ಟ್ ಮಾಡಲಾಗಿದ್ದ 120 ಮಂದಿ ಪಾದರಾಯನಪುರ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮೂವರನ್ನು ಶಂಕಿತರು ಎಂದು ಗುರುತಿಸಲಾಗಿದೆ. ಹೀಗಾಗಿ ಜೈಲಿನ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲು ಚಿಂತಿಸಲಾಗುತ್ತಿದೆ. ಈ ಬಗ್ಗೆ ತಿಳಿದ ಸಿಬ್ಬಂದಿ ಮಾತ್ರ ನಮ್ಮನ್ನು ಕ್ವಾರಂಟೈನ್ ಮಾಡಬೇಡಿ. ನಮ್ಮನ್ನು ಕ್ವಾರಂಟೈನ್ ಮಾಡುವುದಾದರೆ ನಮ್ಮ ಕ್ವಾಟ್ರಸ್ನಲ್ಲೇ ಕ್ವಾರಂಟೈನ್ ಮಾಡಲು ಹೇಳಿ. ನಮಗೆ ಚಿಕ್ಕ ಚಿಕ್ಕ ಮಕ್ಕಳಿದ್ದಾರೆ ಎಂದು ಮಾಜಿ ಸಿಎಂ ಹೆಚ್ಡಿಕೆ ಬಳಿ ಅಳಲನ್ನು …
Read More »ಮಂಗಳೂರು:ನನ್ನ ಕ್ಷೇತ್ರದಲ್ಲಿ ಶವ ಸುಡಲು ಬಿಡಲ್ಲ ಶಾಸಕ ಡಾ.ವೈ.ಭರತ್ ಶೆಟ್ಟಿ ಪೊಲೀಸರಿಗೆ ಆವಾಜ್
ಮಂಗಳೂರು: ನನ್ನ ಕ್ಷೇತ್ರದಲ್ಲಿ ಶವ ಸುಡಲು ಬಿಡಲ್ಲ ಎಂದು ಮಂಗಳೂರಿನ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಪೊಲೀಸರಿಗೆ ಆವಾಜ್ ಹಾಕಿದ ಘಟನೆ ನಡೆದಿದ್ದು, ಸಾರ್ವಜನಿಕರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕೊರೊನಾದಿಂದ ಸಾವಿಗೀಡಾದ ವೃದ್ಧೆಯ ಶವ ಸುಡಲು ಜನರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿನ್ನೆ ತಡರಾತ್ರಿ ಪೇಚಾಟಕ್ಕೆ ಸಿಲುಕಿತ್ತು. ಆರಂಭದಲ್ಲಿ ಮಂಗಳೂರು ನಗರದ ಬೋಳೂರಿನ ವಿದ್ಯುತ್ ಚಿತಾಗಾರದಲ್ಲಿ ಶವ ಸಂಸ್ಕಾರಕ್ಕೆ ನಿಶ್ಚಯಿಸಲಾಗಿತ್ತು. ಆದರೆ ಸ್ಥಳೀಯ ಶಾಸಕ ವೇದವ್ಯಾಸ್ …
Read More »