ಬೆಂಗಳೂರು: ಕೇಂದ್ರ ಸರ್ಕಾರದ ಬುಧವಾರ ನೀಡಿದ್ದ ಮಾರ್ಗಸೂಚಿಗಳ ಅನ್ವಯ ಒಂದಿಷ್ಟು ಕೊರೊನಾ ಲಾಕ್ಡೌನ್ ನಿಯಮಗಳನ್ನು ಸಡಿಲ ಮಾಡಿದ್ದ ರಾಜ್ಯ ಸರ್ಕಾರ, ಇವತ್ತು ಇನ್ನೊಂದಿಷ್ಟು ವಿನಾಯಿತಿ ನೀಡಿ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ಬೆಂಗಳೂರು ಸೇರಿದಂತೆ ನಗರ ಹಲವು ನಗರಗಳಲ್ಲಿ ಕೊರೊನಾ ಸೋಂಕಿನ ತೀವ್ರತೆ ಕಡಿಮೆ ಆಗದಿದ್ದರೂ ರಾಜ್ಯ ಸರ್ಕಾರ ರಿಸ್ಕ್ ತೆಗೆದುಕೊಂಡಂತೆ ಕಾಣುತ್ತಿದೆ. ಮೊಬೈಲ್ ಅಂಗಡಿ, ಜ್ಯೂಸ್ ಅಂಗಡಿ, ಕಟ್ಟಡ ನಿರ್ಮಾಣ ಹೀಗೆ ಹಲವುಗಳಿಗೆ ಮಹಾನಗರ, ನಗರಸಭೆಗಳ ವ್ಯಾಪ್ತಿಯಲ್ಲಿ ಷರತ್ತುಬದ್ಧ ಅನುಮತಿ …
Read More »ಹೊಂಗಸಂದ್ರದಲ್ಲಿ ವ್ಯಕ್ತಿಯೊಬ್ಬ ಮನೆ,ಅಂಗಡಿಗಳ ಮುಂದೆ ಉಗುಳುವುದು, ಅನುಮಾನಾಸ್ಪದ
ಬೆಂಗಳೂರು: ಕೊರೊನಾ ಭೀತಿಯ ನಡುವೆಯೇ ಬೆಂಗಳೂರಿನ ಹೊಂಗಸಂದ್ರದಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಓಡಾಡಿ ಜನರಲ್ಲಿ ಮತ್ತಷ್ಟು ಭಯ ಹುಟ್ಟಿಸಿದ್ದಾನೆ. ಹೊಂಗಸಂದ್ರದ ಕೊರೊನಾ ಪೀಡಿತ ಪ್ರದೇಶ ವಿದ್ಯಾಜ್ಯೋತಿ ನಗರದ ಸುತ್ತಮುತ್ತ ವ್ಯಕ್ತಿ ಓಡಾಟ ನಡೆಸುತ್ತಿದ್ದಾನೆ. ಅಲ್ಲಿ ಈಗಾಗಲೇ 9 ಜನರಿಗೆ ಪಾಸಿಟಿವ್ ಬಂದಿದ್ದು, ಪರಿಣಾಮ ಹೊಂಗಸಂದ್ರ ಸಂಪೂರ್ಣ ಸೀಲ್ ಡೌನ್ ಆಗಿದೆ. ಇದರ ಮಧ್ಯೆ ಈತನ ವರ್ತನೆ ಕಂಡು ಹೊಂಸಂದ್ರದ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಈ ಅನುಮಾನಸ್ಪದ ವ್ಯಕ್ತಿ ಉಗುಳುವುದು, ಮನೆಗಳ ಮುಂದೆ, …
Read More »ಟ್ರೆಂಡ್ ಆಯ್ತು ಪಿಲ್ಲೋ ಚಾಲೆಂಜ್ – ಬೆತ್ತಲ ಮೈಗೆ ದಿಂಬು ಕಟ್ಟಿ ಸೆಲೆಬ್ರಿಟಿ ಫೋಟೋ ಪೋಸ್ಟ್
ಮುಂಬೈ: ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರವಾದ ಹೊಸ ಹೊಸ ಚಾಲೆಂಜ್ಗಳು ಟ್ರೆಂಡ್ ಆಗುತ್ತಲೇ ಇರುತ್ತೆ. ಕೆಲವೊಂದು ಚಾಲೆಂಜ್ಗಳು ಸಿಕ್ಕಾಪಟ್ಟೆ ವೈರಲ್ ಆಗಿಬಿಡುತ್ತದೆ. ಆದೇ ಪಟ್ಟಿಗೆ ಈಗ ಪಿಲ್ಲೋ ಚಾಲೆಂಜ್ ಕೂಡ ಸೇರಿಕೊಂಡಿದೆ. ಸದ್ಯ ಲಾಕ್ಡೌನ್ ಅಲ್ಲಿ ‘ಬಿ ದ ರಿಯಲ್ ಮ್ಯಾನ್ ಚಾಲೆಂಜ್’, ‘ಡಾಲ್ಗೊನಾ ಕಾಫಿ ಚಾಲೆಂಜ್’, ‘ಹೋಂ ಗಾರ್ಡನ್ ಚ್ಯಾಲೆಂಜ್’ ಹೀಗೆ ಅನೇಕ ಚಾಲೆಂಜ್ಗಳು ಟ್ರೆಂಡ್ ಆಗುತ್ತಿದೆ. ಈ ಮಧ್ಯೆ ಸಿಕ್ಕಾಪಟ್ಟೆ ವೈರಲ್ ಆಗಿರೋದು ಪಿಲ್ಲೋ ಚಾಲೆಂಜ್. ಈ ಚಾಲೆಂಜ್ಗೆ …
Read More »ಮೇ 3ರವರೆಗೆ ಭಟ್ಕಳದಲ್ಲಿ ನಿಯಮ ಸಡಿಲಿಕೆ ಇಲ್ಲ: ಶಿವರಾಮ್ ಹೆಬ್ಬಾರ್
ಕಾರವಾರ: ಮೇ 3ರ ತನಕ ಭಟ್ಕಳದಲ್ಲಿ ಕಟ್ಟುನಿಟ್ಟಿನ ನಿಯಮ ಮುಂದುವರಿಯಲ್ಲಿದ್ದು, ರಂಜಾನ್ ಹಬ್ಬಕ್ಕೂ ಇದರಿಂದ ವಿನಾಯಿತಿ ಇಲ್ಲ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಇಂದು ಸಂಜೆ ಭಟ್ಕಳಕ್ಕೆ ಆಗಮಿಸಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದರು. ಭಟ್ಕಳದ ತಂಜೀಂ ಸಂಸ್ಥೆ ರಂಜಾನ್ ಹಬ್ಬಕ್ಕಾಗಿ ತಮಗೆ ದಿನದಲ್ಲಿ ಕನಿಷ್ಟ 2 ಗಂಟೆಯಾದರೂ ವಿನಾಯಿತಿ ನೀಡಬೇಕು ಎಂದು ಮನವಿ ಸಲ್ಲಿಸಿದ್ದರು. ಮನವಿಯನ್ನು ನಯವಾಗಿ ತಿರಸ್ಕರಿಸಿದ …
Read More »ಬಿಹಾರಿ ಕಾರ್ಮಿಕನಿಂದ ಮತ್ತೆ ನಾಲ್ವರಿಗೆ ಕೊರೊನಾ – ನಂಜನಗೂಡಂತೆ ಆಗುತ್ತಾ ಬೆಂಗ್ಳೂರಿನ ಹೊಗಸಂದ್ರ
ಬೆಂಗಳೂರು: ಕೊರೊನಾ ಕೇಸ್ನಲ್ಲಿ ಬೆಂಗಳೂರಿನ ಹೊಗಸಂದ್ರ ನಂಜನಗೂಡು ಆಗುತ್ತಿದಿಯಾ ಅನ್ನೋ ಆತಂಕ ಎದುರಾಗಿದೆ. ಕಾರಣ ಬಿಹಾರ ಮೂಲದ ಕಾರ್ಮಿಕನೊಬ್ಬನಿಂದಲೇ ಈ ಏರಿಯಾದಲ್ಲಿ ಒಂದೇ ದಿನ ಬರೋಬ್ಬರಿ 13 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬಿಹಾರ ಮೂಲದ ಕಾರ್ಮಿಕ ಬೊಮ್ಮನಹಳ್ಳಿ ವಲಯಕ್ಕೆ ಬರುವ ಹೊಗಸಂದ್ರದಲ್ಲಿ ವಾಸಿಸುತ್ತಿದ್ದ. ಈತ ನಮ್ಮ ಮೆಟ್ರೋ ಕಾಮಗಾರಿಗೆ ಕೆಲಸ ಮಾಡುತ್ತಿದ್ದು, ಬರೋಬ್ಬರಿ 13 ಮಂದಿಗೆ ಕೊರೊನಾ ಹಬ್ಬಿರುವುದು ಬೆಂಗಳೂರಲ್ಲಿ ಆತಂಕ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಇಡೀ …
Read More »ಬೆಂಗ್ಳೂರಿಗೆ ಲಾಕ್ಡೌನ್ನಿಂದ ಸದ್ಯಕ್ಕಿಲ್ಲ ರಿಲೀಫ್………
ಬೆಂಗಳೂರು: ಸರ್ಕಾರ ಮಹಾಮಾರಿ ಕೊರೊನಾ ವೈರಸ್ ಅನ್ನು ಹೊಡೆದೊಡಿಸಲು ಲಾಕ್ಡೌನ್ ಅಸ್ತ್ರವನ್ನು ಪ್ರಯೋಗಿಸಿದೆ. ಈ ಲಾಕ್ಡೌನ್ ಇಡೀ ದೇಶಾದ್ಯಂತ 3ರವರೆಗೂ ಮುಂದುವರಿಯಲಿದೆ. ಆದರೆ ಸಿಲಿಕಾನ್ ಸಿಟಿಗೆ ಮಾತ್ರ ಲಾಕ್ಡೌನ್ನಿಂದ ಮೇ 3ರಂದು ರಿಲೀಫ್ ಇಲ್ಲ. ರಾಜ್ಯದಲ್ಲೇ ಅತೀ ಹೆಚ್ಚು ಪ್ರಕರಣಗಳು ರಾಜಧಾನಿ ಬೆಂಗಳೂರಲ್ಲಿ ದಾಖಲಾಗಿವೆ. ಈ ಕೊರೊನಾ ಪಾಸಿಟಿವ್ ಪ್ರಕರಣಗಳ ನಿಯಂತ್ರಣಕ್ಕೆ ಬಿಬಿಎಂಪಿ 19 ಕಂಟೈನ್ಮೆಂಟ್ ಝೋನ್ಗಳೆಂದು ವಿಂಗಡಿಸಿ, ಬಿಗಿ ಭದ್ರತೆ ಒದಗಿಸುತ್ತಿದೆ. ಆದರೆ ಈ ಕಂಟೈನ್ಮೆಂಟ್ ಝೋನ್ಗಳು ನಾರ್ಮಲ್ …
Read More »ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು
ಬೆಂಗಳೂರು: ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು ಬಂದಿದೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆರೋಗ್ಯ ಇಲಾಖೆ ಭೀತಿಗೊಂಡಿದ್ದು, ಇಬ್ಬರನ್ನು ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗಿದೆ. ತುರ್ತು ಅವಶ್ಯಕತೆ ಇದ್ದರೆ ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಈಗಾಗಲೇ ಆರೋಗ್ಯ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿದ್ದು ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗ ಇವರನ್ನು ಬಂಧಿಸಿದ್ದ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. …
Read More »ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ……….
ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಮೂರು ದಿನಗಳ ಕಾಲ ಪೂರ್ವಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇಂದು ಮುಂಜಾನೆಯಿಂದಲೇ ಗುಡುಗು ಮತ್ತು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ ಸೇರಿದಂತೆ ಅನೇಕ ಕಡೆ ಏಕಾಏಕಿ ಗುಡುಗು ಸಹಿತ ಮಳೆಯ ಅಬ್ಬರ ಶುರುವಾಗಿದೆ. ಇಂದು ಮೆಜೆಸ್ಟಿಕ್, ಚಿಕ್ಕಪೇಟೆ, ಎಂಜಿ ರಸ್ತೆ, ಸದಾಶಿವನಗರ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ …
Read More »ಅಣ್ಣಾವ್ರ ಹುಟ್ಟುಹಬ್ಬಕ್ಕೂ ತಟ್ಟಿದ ಕೊರೊನಾ ಎಫೆಕ್ಟ್ –
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ನಿಂದ ಈಗಾಗಲೇ ಸಭೆ, ಸಮಾರಂಭ ಮತ್ತು ಕಾರ್ಯಕ್ರಮಗಳಿಗೆ ಬ್ರೇಕ್ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಡಾ.ರಾಜ್ಕುಮಾರ್ ಹುಟ್ಟುಹಬ್ಬಕ್ಕೂ ಕೊರೊನಾ ಎಫೆಕ್ಟ್ ತಟ್ಟಿದೆ. ಇಂದು ಡಾ.ರಾಜ್ಕುಮಾರ್ ಅವರಿಗೆ 92ನೇ ವರ್ಷದ ಹುಟ್ಟುಹಬ್ಬದ ದಿನ. ಆದರೆ ಕೊರೊನಾ ಲಾಕ್ಡೌನ್ನಿಂದ ಯಾವುದೇ ಅದ್ಧೂರಿ ಆಚರಣೆ ಇಲ್ಲ. ಆದ್ದರಿಂದ ಕುಟುಂಬಸ್ಥರು ಸರಳವಾಗಿ ಪೂಜೆ ಮಾಡಿ ಕಾರ್ಯ ಮಾಡಲಿದ್ದಾರೆ. ಹೀಗಾಗಿ ಇದೇ ಮೊದಲ ಬಾರಿಗೆ ಅಭಿಮಾನಿಗಳಿಲ್ಲದೆ ಡಾ.ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿದೆ. ನಟ …
Read More »ಕೊರೋನಾ ವೈರಸ್ ಯಾವುದೆ ಒಂದು ಕೋಮಿಗೆ ಬರುವದಿಲ್ಲ ಎಲ್ಲ ಧರ್ಮದವರಿಗೂ ಬರುತ್ತದೆ, ಕೋಮು ಸೌಹಾರ್ದತೆ ಕಾಪಾಡಿಕೊಳ್ಳಬೇಕು : ಜಿಲ್ಲಾಧಿಕಾರಿ ಕೆ. ರಾಜೇಂದ್ರ
ಜಮಖಂಡಿ. ಏ. 23 : ಬಾಗಲಕೋಟೆ ಜಿಲ್ಲೆಯಲ್ಲಿ ಮೂರುದಿಂದ ಯಾವುದೆ ಪಾಸಿಟಿವ್ ರೋಗಿಗಳ ಕಂಡು ಬಂದಿಲ್ಲ, ಚಿಕಿತ್ಸೆ ಪಡೆದುಕೊಂಡ ಗುಣಮುಖರಾಗಿರುವ 6 ಜನರನ್ನು ಡಿಸ್ಸಾರ್ಜ್ ಮಾಡುವ ಪ್ರಕ್ರೀಯೆ ನಡೆದಿದೆ ವರದಿಗಾಗಿ ಕಾಯುತಿದ್ದೆವೆ ಎಂದು ಜಿಲ್ಲಾಧಿಕಾರಿ ಕ್ಯಾ ಕೆ. ರಾಜೇಂದ್ರ ಹೇಳಿದರು. ನಗರದ ಬಾರ್ಪೆಟ್ಗಲ್ಲಿಯ ನಿಷೇಧಿತ ವಲಯಕ್ಕೆ ಭೆಟ್ಟಿ ನೀಡಿ ನಂತರ ಸುದ್ದಿಗಾರರ ಜೋತೆ ಮಾತನಾಡಿದರು. ಜಿಲ್ಲೆ ರೆಡ್ ಜೋನ್ನಲ್ಲಿರುವದರಿಂದ ಕೃಷಿ ಯೇತರ ಚಟುವಟಿಕೆ ಹೊರತು ಪಡಿಸಿ ಎಲ್ಲವನ್ನು ಬಂದ ಇಡಲಾಗುವುದು …
Read More »