ಬೆಂಗಳೂರು: ಬಿಎಂಟಿಸಿ ಟಿಕೆಟ್ ವ್ಯವಸ್ಥೆ ಮಾಡಬೇಕು ಎಂದು ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದು, ಬಿಎಂಟಿಸಿ ಇಂದಿನಿಂದ ಪ್ರಯಾಣಿಕರಿಗೆ ಟಿಕೆಟ್ ನೀಡಲು ಶುರು ಮಾಡಿದೆ. ಹೀಗಾಗಿ ಇವತ್ತಿನಿಂದ ಪ್ರಯಾಣಿಕರು ಬಿಎಂಟಿಸಿಯಲ್ಲಿ ಟಿಕೆಟ್ ಪಡೆದು ಪ್ರಯಾಣಿಸಬಹುದು. ಈಗಾಗಲೇ ಬಿಎಂಟಿಸಿ ಬಸ್ಗಳ ಓಡಾಟ ಶುರುವಾಗಿದ್ದು, ಪಾಸ್ ಇದ್ದವರಿಗಷ್ಟೇ ಅಲ್ಲ, ಟಿಕೆಟ್ ಪಡೆದೂ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಅಷ್ಟೇ ಅಲ್ಲದೇ ಇವತ್ತಿನಿಂದ ಹೆಚ್ಚುವರಿಯಾಗಿ 4 ಸಾವಿರ ಬಿಎಂಟಿಸಿ ಬಸ್ಗಳ ಸಂಚಾರ ಆರಂಭ ಮಾಡುತ್ತಿವೆ. ಲಾಕ್ಡೌನ್ ಬಳಿಕ ಪ್ರಯಾಣಿಕರಿಗೆ …
Read More »ಜುಲೈನಿಂದ ದೇಶಾದ್ಯಂತ ಶಾಲೆಗಳು ಆರಂಭವಾಗೋ ಸಾಧ್ಯತೆ………….
ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇತ್ತ ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಮುಚ್ಚಿದ್ದ ಶಾಲೆಗಳು ಜುಲೈನಿಂದ ದೇಶಾದ್ಯಂತ ಆರಂಭವಾಗುವ ಸಾಧ್ಯತೆ ಇದೆ. ಶೇಕಡಾ 30ರಷ್ಟು ಹಾಜರಾತಿಯೊಂದಿಗೆ ಶಾಲೆಗಳ ಆರಂಭಕ್ಕೆ ಶಿಕ್ಷಣ ಇಲಾಖೆ ಚಿಂತನೆ ಮಾಡಿದೆ. ಜೊತೆಗೆ ಗ್ರೀನ್, ಆರೆಂಜ್ಝೋನ್ಗಳಲ್ಲಿರುವ ಶಾಲೆಗಳ ಆರಂಭ ಮಾಡುವ ಸಾಧ್ಯತೆ ಇದೆ. ಆರಂಭದಲ್ಲಿ ಹೈಸ್ಕೂಲ್ ತರಗತಿಗಳಷ್ಟೇ ಶುರುವಾಗಲಿದ್ದು, ಉಳಿದ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ಮುಂದುವರಿಕೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ …
Read More »ಲಾಕ್ಡೌನ್ ಎಫೆಕ್ಟ್- ಮಲೆಮಹದೇಶ್ವರನಿಗೆ 15 ಕೋಟಿಗೂ ಹೆಚ್ಚು ನಷ್ಟ
ಚಾಮರಾಜನಗರ: ಕೊರೊನಾ ಲಾಕ್ ಡೌನ್ ಎಪೆಕ್ಟ್ ನಿಂದ ಮಲೆಮಹದೇಶ್ವರನಿಗೆ 15 ಕೋಟಿಗೂ ಹೆಚ್ಚು ನಷ್ಟವಾಗಿದೆ. ಚಾಮರಾಜನಗರ ಜಿಲ್ಲೆಯ ಹನೀರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ದೇವಾಲಯ ಕಳೆದ ಎರಡು ತಿಂಗಳಿಂದ ಮುಚ್ಚಿದೆ. ಹೀಗಾಗಿ ಭಕ್ತರಿಲ್ಲದೆ ಮಹದೇಶ್ವರನ ಆದಾಯದಲ್ಲಿ ಭಾರೀ ನಷ್ಟವಾಗಿದೆ. ಹುಂಡಿಯೊಂದರಲ್ಲೇ ಪ್ರತಿ ತಿಂಗಳು ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗುತ್ತಿತ್ತು. ಚಿನ್ನದ ತೇರು, ವಿವಿಧ ಸೇವೆ ಲಾಡು ಮಾರಾಟ ಹಾಗೂ ವಸತಿಗೃಹ ಮೊದಲಾದ ಮೂಲಗಳಿಂದ ಬರುತ್ತಿದ್ದ ಆದಾಯದಲ್ಲಿ ಇದೀಗ ಕೋಟಿಗಟ್ಟಲೆ ಕಡಿತವಾಗಿದೆ. …
Read More »ಬೆಳಗಾವಿ ಜಿಲ್ಲಾಡಳಿತ ಒಟ್ಟು 1009 ಜನರ ರಿಪೋರ್ಟ್ ಗಾಗಿ ಕಾಯುತ್ತಿದೆ.
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಬೆಂಬಿಡದೇ ಗಡಿನಾಡು ಬೆಳಗಾವಿ ಜಿಲ್ಲೆಯನ್ನು ನಡುಗಿಸಿದೆ,ಈವರೆಗೆ ಜಿಲ್ಲೆಯಲ್ಲಿ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ 130 ಸೊಂಕಿತರು ಪತ್ತೆಯಾಗಿದ್ದಾರೆ ಜೆಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ರವಾನಿಸಲಾಗಿದ್ದು ಇಂದು ಬರೊಬ್ಬರಿ 1009 ಜನರ ರಿಪೋರ್ಟ್ ಬಾಕಿ ಇದೆ . ಬೆಳಗಾವಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಈ ವರೆಗೆ ಹತ್ತು ಸಾವಿರದ 293 ಜನರ ಮೇಲೆ ನಿಗಾ ಇಟ್ಟಿದೆ. ಇದರಲ್ಲಿ ಹಲವಾರು ಜನ …
Read More »ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆತಂಕಕಾರಿ ಸಂಗತಿ ಅಂದರೆ ಬೆಂಗಳೂರಿನಲ್ಲಿ ಹೊಸ ಹೊಸ ಏರಿಯಾಗಳಿಗೆ ಸೋಂಕು ಹಬ್ಬಲು ಶುರುವಾಗಿದೆ. ಈ ಮೂಲಕ ಗ್ರೀನ್ಝೋನ್, ಸೇಫ್ ಏರಿಯಾಗಳೆಂದು ಅನ್ನಿಸಿಕೊಂಡಿರುವ ಏರಿಯಾಗಳು ಕೊರೊನಾ ಅಡ್ಡಾಗಳಾಗಿ ಬದಲಾಗ್ತಾವಾ ಅನ್ನೋ ಆತಂಕ ಎದುರಾಗಿದೆ. ಇದುವರೆಗೂ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಒಂದು ಎರಡು ದಾಖಲಾಗುತ್ತಿದ್ದವು. ಆದರೆ ಸೋಮವಾರ ಬರೋಬ್ಬರಿ 8 ಪ್ರಕರಣಗಳು ದಾಖಲಾಗಿವೆ. ಅಂತರಾಜ್ಯ ಪ್ರಯಾಣ ಮಾಡಿದವರಲ್ಲಿ, ಅಂತರರಾಷ್ಟ್ರೀಯ …
Read More »ಲಾಕ್ ಡೌನ್ ನಿಂದ ಜನರು ಸಂಕಷ್ಟದಲ್ಲಿರು ಕಾರಣ ಮುಸ್ಲಿಮ್ ಬಾಂಧವರು ಈ ಬಾರಿ ಹೊಸ ಬಟ್ಟೆ ಖರೀದಿಗೆ ಮುಂದಾಗಲಿಲ್ಲ ಬದಲಾಗಿ ಅದೇ ಹಣವನ್ನು ಬಡವರಿಗೆ ದಾನ ಮಾಡಲಾಯಿತು.
ಮುಸ್ಲೀಮರ ಪವಿತ್ರ ಹಬ್ಬವಾದ ಈದುಲ್ ಫಿತ್ರ್ (ರಂಝಾನ್) ವಿಶೇಷ ಪ್ರಾರ್ಥನೆಯನ್ನು ಲಾಕ್ ಡೌನ್ ಹಿನ್ನಲೇ ಮನೆಗಳಲ್ಲಿ ನಡೆಸಲಾಯಿತು. ಮನೆಯಲ್ಲೇ ಈದುಲ್ ಫಿತ್ರ್ ನಮಾಝ್ ಆಚರಣೆ. ಮುಸ್ಲಿಮರ ಪವಿತ್ರ ಹಬ್ಬವಾದ ಈದುಲ್ ಫಿತ್ರ್ ( ರಂಝಾನ್ ) ಹಬ್ಬದ ವಿಶೇಷ ಪ್ರಾರ್ಥನೆ ಯನ್ನು ಲಾಕ್ ಡೌನ್ ಹಿನ್ನಲೆ ಮನೆಗಳಲ್ಲೇ ಆಚರಿಸಲಾಯಿತು. ಈದ್ ನಮಾಜ್ ವಿಶೇಷವಾಗಿ ಈದ್ಗಾ ಮೈದಾನದಲ್ಲಿ ಅಥವಾ ಮಸೀದಿಗಳಲ್ಲಿ ಆಚರಿಸುವ ಸಂಪ್ರದಾಯವಿದ್ದು, ಲಾಕ್ ಡೌನ್ ಕಾರಣ ಇದಕ್ಕೆ ಅವಕಾಶವಿರಲಿಲ್ಲ. …
Read More »ಸಂಜೆ ಆರೋಗ್ಯ ಹೆಲ್ತ್ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 24 ಕೊರೊನಾ ಪಾಸಿಟಿವ್ ಕೇಸ್
ಬೆಂಗಳೂರು: ಸಂಜೆ ಆರೋಗ್ಯ ಹೆಲ್ತ್ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 24 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಸೋಮವಾರ ಒಟ್ಟಾರೆ 93 ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಂಜೆಯ ಜಿಲ್ಲಾವಾರು ವಿವರ ಬೆಂಗಳೂರು-2 ಹಾಸನ -1 ಉಡುಪಿ – 16 ಧಾರವಾಡ -1 ಕಲಬುರಗಿ- 2 ದಕ್ಷಿಣ ಕನ್ನಡ -1 ಉತ್ತರ ಕನ್ನಡ -1 https://youtu.be/PoGz3zwQdd8 ಮಧ್ಯಾಹ್ನ ರಾಜ್ಯದಲ್ಲಿ 69 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು, ಸಂಜೆ 24 ಒಟ್ಟು 93 ಕೊರೊನಾ …
Read More »ಸತೀಶ ಜಾರಕಿಹೊಳಿ ಅವರು ಇಂದು ತಮ್ಮ ಗೆಸ್ಟ್ ಹೌಸ್ ನಲ್ಲಿರುವ ಕ್ವಾರಂಟೈನ್ ನಿವಾಸಿಗಳ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.
ಯಮಕನಮರಡಿ ಕ್ಷೇತ್ರ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಸತೀಶ ಜಾರಕಿಹೊಳಿ ಅವರು ಇಂದು ತಮ್ಮ ಗೆಸ್ಟ್ ಹೌಸ್ ನಲ್ಲಿರುವ ಕ್ವಾರಂಟೈನ್ ನಿವಾಸಿಗಳ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು. ಯಮಕನಮರಡಿ ಮತಕ್ಷೇತ್ರದ ದಡ್ಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಶಾಸಕರ ಆಲ್ದಾಳ್ ಗೆಸ್ಟ್ ಹೌಸ್ ಸೇರಿದಂತೆ 10 ರಿಂದ 14 ಸ್ಥಳಗಳಲ್ಲಿ ಕ್ವಾರಂಟೈನ್ ಕೇಂದ್ರ ತೆರೆಯಲಾಗಿದೆ. ಮಹಾರಾಷ್ಟ್ರ ಹಾಗೂ ಬೇರೆ ರಾಜ್ಯ ದಿಂದ ಬಂದ ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ಆಸರೆ ಒದಗಿಸಲಾಗಿದೆ. ಕಳೆದ 9 …
Read More »ರಾಜ್ಯದಲ್ಲಿ ಗ್ರಾಮೀಣ ಪ್ರದೇಶಕ್ಕೂ ಲಗ್ಗೆಯಿಟ್ಟ ಹೆಮ್ಮಾರಿ ಕೊರೊನಾ..!
ತುಮಕೂರು/ಬೆಂಗಳೂರು, ಮೇ 25- ಮಹಾಮಾರಿ ಕೊರೊನಾ ಹಳ್ಳಿ ಹಳ್ಳಿಗೂ, ಗಲ್ಲಿ ಗಲ್ಲಿಗೂ ವಕ್ಕರಿಸಿದೆ. ನಗರ ಪ್ರದೇಶಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಈಗ ಗ್ರಾಮೀಣ ಪ್ರದೇಶಗಳಿಗೂ ಕಾಲಿಟ್ಟಿದೆ. ಲಾಕ್ಡೌನ್ ನಿಯಮಗಳನ್ನು ಚಾಚೂತಪ್ಪದೆ ಕಡ್ಡಾಯವಾಗಿ ಪಾಲಿಸುತ್ತ ಕೊರೊನಾ ಸೋಂಕಿತರನ್ನಾಗಲಿ, ಶಂಕಿತರನ್ನಾಗಲಿ ಒಳಗೆ ಬಿಟ್ಟುಕೊಳ್ಳದೆ ಗ್ರಾಮಗಳಲ್ಲಿ ಅತಿ ಎಚ್ಚರಿಕೆಯಿಂದ ನಿಗಾ ವಹಿಸಿದ್ದ ಹಿನ್ನೆಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಗ್ರಾಮಾಂತರ ಪ್ರದೇಶದಲ್ಲಿ ಪತ್ತೆಯಾಗಿರಲಿಲ್ಲ. ಆದರೆ, ಲಾಕ್ಡೌನ್ ಸಡಿಲಿಕೆಯಾಗಿ ಹಳ್ಳಿಗಳಿಗೆ ಬರುವವರು, ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ …
Read More »ಇನ್ನೂ 2 ತಿಂಗಳು ‘ಸಂಡೆ ಲಾಕ್ಡೌನ್’ ಮುಂದುವರಿಕೆ..!
ಬೆಂಗಳೂರು, ಮೇ 25- ಕೊರೊನಾ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹಬ್ಬುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ನಿನ್ನೆ ಪ್ರಾಯೋಗಿಕವಾಗಿ ಮೊದಲ ಭಾನುವಾರ ಲಾಕ್ಡೌನ್ ಗೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ಸಿಕ್ಕಿರುವ ಹಿನ್ನಲೆಯಲ್ಲಿ ಇನ್ನೂ ಎರಡು ತಿಂಗಳ ಕಾಲ ಮುಂದುವರೆಸಲು ಸರ್ಕಾರ ತೀರ್ಮಾನಿಸಿದೆ. ನಿನ್ನೆ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮನೆಯಿಂದ ಆಚೆ ಬಾರದೆ ತಮಗೆ ತಾವೇ ದಿಗ್ಬಂಧನ ಹಾಕಿಕೊಂಡು, ಕೊರೊನಾ ನಿಯಂತ್ರಿಸಲು ಸರ್ಕಾರ ತೆಗೆದುಕೊಳ್ಳುವ ತೀರ್ಮಾನಕ್ಕೆ ನಮ್ಮ ಬೆಂಬಲವಿದೆ ಎಂಬ ಸಂದೇಶ ಸಾರಿದ್ದರು. …
Read More »