Breaking News

ಕಾಡಿಗೆ ಬೆಂಕಿಯಿಟ್ಟು ಬೇಟೆಯಾಡುತ್ತಿದ್ದ ಖದೀಮರ ಬಂಧನ………..

ಚಾಮರಾಜನಗರ: ಕಾಡಿಗೆ ಬೆಂಕಿಯಿಟ್ಟು ಬೇಟೆಯಾಡುತ್ತಿದ್ದ ನಾಲ್ವರು ಖದೀಮರನ್ನು ಕಾವೇರಿ ವನ್ಯಧಾಮದ ಕೊತ್ತನೂರು ವಲಯದಲ್ಲಿ ಬಂಧಿಸಲಾಗಿದೆ. ಕೊಳ್ಳೇಗಾಲ ತಾಲೂಕಿನ ಜಾಗೇರಿ ಗ್ರಾಮದ ವಿನ್ಸೆಂಟ್, ಸಗಾಯ್ ರಾಜ್, ಚಾರ್ಲಿಸ್ ಸವರಿನಾಥನ್ ಹಾಗೂ ಜ್ಞಾನಪ್ರಕಾಶ್ ಬಂಧಿತ ಬೇಟೆಗಾರರು. ಕಾಡಿಗೆ ಬೆಂಕಿಯಿಟ್ಟು ಅರಣ್ಯ ಇಲಾಖೆ ಸಿಬ್ಬಂದಿಗಳ ಗಮನ ಬೇರೆಡೆಗೆ ಸೆಳೆದು ಬೇಟೆಯಾಡುತ್ತಿದ್ದರು ಎನ್ನಲಾಗಿದ್ದು, ಈ ಹಿಂದೆಯೂ ಬೇಟೆಯಾಡಿ ಇವರು ಸಿಕ್ಕಿಬಿದ್ದಿದ್ದರು ಎಂದು ಡಿಎಫ್‍ಒ ಡಾ.ಎಸ್. ರಮೇಶ್ ತಿಳಿಸಿದ್ದಾರೆ. ಬಂಧಿತರಿಂದ ನಾಡಬಂದೂಕು, ಮದ್ದುಗುಂಡು, ಚಾಕುಗಳು, ಸಾಂಬಾರ ಪದಾರ್ಥಗಳು, …

Read More »

ಕ್ವಾರಂಟೈನ್ ಮಾಡಿದ್ದಕ್ಕೆ ಕುಟುಂಬದಿಂದ ಆತ್ಮಹತ್ಯೆ ಬೆದರಿಕೆ

ಕೋಲಾರ: ಕೊರೊನಾ ಮಹಾಮಾರಿ ಹರಡುವ ನಿಟ್ಟಿನಲ್ಲಿ ಶಂಕಿತರನ್ನು ಹೋಂ ಕ್ವಾರಂಟೈನ್ ಮಾಡಿದ್ದಕ್ಕೆ ಆಕ್ರೋಶಗೊಂಡ ಕುಟುಂಬವೊಂದು ಪೆಟ್ರೋಲ್ ಬಾಟಲ್ ನೊಂದಿಗೆ ಗ್ರಾಮ ಪಂಚಾಯ್ತಿಯ ಒಳಗೆ ನುಗ್ಗಿ ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಸಂತೆಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಈ ಘಟನೆ ನಡೆದಿದ್ದು, ಪೆಟ್ರೋಲ್ ಬಾಟಲ್ ಹಿಡಿದು ಆತ್ಮಹತ್ಯೆ ಮಾಡುವ ಬೆದರಿಕೆ ಹಾಕಿದ್ದಾರೆ. ಸಂತೇಹಳ್ಳಿ ಗ್ರಾಮದ ಮಂಜುನಾಥ್ ಹಾಗೂ ಕುಟುಂಬದವರನ್ನು ಕಳೆದ ಎರಡು ದಿನದ ಹಿಂದೆ …

Read More »

ಸೈಲೆಂಟಾಗಿದೆ ಪಾದರಾಯನಪುರ, ಸ್ಥಳದಲ್ಲಿ 800 ಪೊಲೀಸರ ಮೊಕ್ಕಾಂ

ಬೆಂಗಳೂರು, ಏ.22- ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಈವರೆಗೂ 126 ಮಂದಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರದ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಅಂದಿನ ಘಟನೆಗೆ ಸಂಬಂಧಿಸಿದಂತೆ ಇನ್ನೂ ಕೆಲವರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಶೋಧ ಮಾಡುತ್ತಿದ್ದೇವೆ ಎಂದು ಹೇಳಿದರು. ಅಂದಿನ ಘಟನೆಯಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಸಂಘಟನೆಯೊಂದರ ಕಾರ್ಯಕರ್ತನಾಗಿದ್ದು, ಈತನಿಗಾಗಿ ವ್ಯಾಪಕ ಶೋಧ ಮಾಡಲಾಗುತ್ತಿದೆ. ಬಂಧಿತ ಆರೋಪಿಗಳಲ್ಲಿ ಮಹಿಳೆ …

Read More »

ಕೋವಿಡ್-19ಗೆ ಸಂಬಂಧಿಸಿದಂತೆ ಆಪ್ತಮಿತ್ರ ಸಹಾಯವಾಣಿ ಮತ್ತು ಆ್ಯಪ್‍ಗೆ ಸಿಎಂ ಚಾಲನೆ …..

ಬೆಂಗಳೂರು,ಏ.22- ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಾರಕ ರೋಗ ಕೊರೊನಾ ವೈರಸ್ ಹರಡುವಿಕೆ ಶೀಘ್ರದ ಲ್ಲೇ ನಿಯಂತ್ರಣಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೋವಿಡ್-19ಗೆ ಸಂಬಂಧಿಸಿದಂತೆ ಆಪ್ತಮಿತ್ರ ಸಹಾಯವಾಣಿ ಮತ್ತು ಆ್ಯಪ್‍ಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು, ಸಾರ್ವಜನಿಕರು ಮನೆಯಲ್ಲೇ ಇದ್ದು ಸಹಕರಿಸಬೇಕು. ಕೊರೊನಾ ಹೋರಾಟದಲ್ಲಿ ಈಗ ಮತ್ತೊಂದು ಹೆಜ್ಜೆ ಇಡಲಾಗಿದೆ ಎಂದರು. ಸಹಾಯವಾಣಿಯ ಉದ್ದೇಶ ರಾಜ್ಯದ ಎಲ್ಲಾ ನಿವಾಸಿಗಳಿಗೆ …

Read More »

ಲಾಕ್‍ಡೌನ್ ನಿಂದ ಕೆಎಸ್‌ಆರ್‌ಟಿಸಿಗೆ 816 ಕೋಟಿ ಲಾಸ್..!

ಬೆಂಗಳೂರು, ಏ.22- ಲಾಕ್‍ಡೌನ್ ಜಾರಿಯಾದ ನಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 816 ಕೋಟಿ ಲಾಸ್ ಆಗಿದೆ. ಕೊರೊನಾ ಸೋಂಕು ಹರಡದಂತೆ ಎಚ್ಚರ ವಹಿಸುವ ಉದ್ದೇಶದಿಂದ ಸರ್ಕಾರ ಲಾಕ್‍ಡೌನ್ ಜಾರಿಗೆ ತಂದ ನಂತರ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ರಾಜ್ಯದಲ್ಲಿ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಇಲ್ಲಿಯವರೆಗೆ ಸಂಸ್ಥೆಗೆ 816.23 ಕೋಟಿ ನಷ್ಟ ಸಂಭವಿಸಿದೆ ಎಂದು ಕೆಎಸ್‍ಆರ್‍ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 314.89, ವಾಣಿಜ್ಯ …

Read More »

ಆಹಾರದ ಕಿಟ್ ಹಂಚಿಕೆಯಲ್ಲೂ ತಾರತಮ್ಯ : ಸಿದ್ದರಾಮಯ್ಯ ಆರೋಪ

ಬೆಂಗಳೂರು, ಏ.22- ಲಾಕ್ ಡೌನ್ ಸಂದರ್ಭದಲ್ಲಿ ಬಡವರಿಗೆ, ಕಾರ್ಮಿಕರಿಗೆ ಹಂಚುವ ಆಹಾರದ ಪೊಟ್ಟಣದಲ್ಲೂ ತಾರತಮ್ಯ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಬಿಟಿಎಂ ಲೇಔಟ್ ಕ್ಷೇತ್ರದಲ್ಲಿ ಶಾಸಕ ರಾಮಲಿಂಗಾ ರೆಡ್ಡಿ ಅವರು ಬಡವರಿಗೆ ಹಂಚಲು ತಯಾರಿಸುತ್ತಿರುವ ಆಹಾರ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಆದಾಗಿನಿಂದ ಪ್ರತಿ ದಿನ 48 ಸಾವಿರ ನಿರ್ಗತಿಕ ಕಾರ್ಮಿಕ ವರ್ಗಕ್ಕೆ ಆಹಾರ ಮತ್ತು ದಿನ ನಿತ್ಯ ಆಹಾರ …

Read More »

ಪೆನ್ಷನ್ ಹಣ ಸಿಗದೆ ಸಂಕಷ್ಟದಲ್ಲಿ ವಿಕಲಚೇತನೆ – ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಹಾಸನ: ಸರ್ಕಾರ ವಿಕಲಚೇತನರಿಗೆ ನೀಡುತ್ತಿದ್ದ 1400 ರೂಪಾಯಿ ಪೆನ್ಷನ್ ಹಣ 9 ತಿಂಗಳುಗಳಿಂದ ಬಾರದ ಕಾರಣ ಎರಡು ಕಾಲಿನಲ್ಲಿ ಸ್ವಾಧೀನವಿಲ್ಲದ ಮಹಿಳೆಯೊಬ್ಬಳು ಓರ್ವ ಮಗನೊಂದಿಗೆ ಸರಿಯಾಗಿ ಊಟವಿಲ್ಲದೆ ಸಂಕಟ ಪಡುತ್ತಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದ ಮಲ್ಲೇಶ್ವರ ನಗರದಲ್ಲಿ ನಡೆದಿದೆ. ವಿಕಲಚೇತನೆ ಭಾಗ್ಯಲಕ್ಷ್ಮಿ ತನ್ನ ಮಗನೊಂದಿಗೆ ಅರಸೀಕೆರೆ ಪಟ್ಟಣದಲ್ಲಿ ವಾಸವಿದ್ದು ಹೂಕಟ್ಟಿ ಜೀವನ ಸಾಗಿಸುತ್ತಿದ್ದರು. ಕೊರೊನಾ ಲಾಕ್‍ಡೌನ್ ಆದ ನಂತರ ಹೂ ಕಟ್ಟುವ ಕಾಯಕಕ್ಕೂ ಕುತ್ತು ಬಿದ್ದಿದೆ. ಪರಿಣಾಮ …

Read More »

ಧಾರವಾಡ ಜಿಲ್ಲೆಯಲ್ಲಿ ನರೇಗಾ ಚಟುವಟಿಕೆಗಳು ಪ್ರಾರಂಭ…..

ಧಾರವಾಡ: ಎಲ್ಲೆಡೆ ಹರಡುತ್ತಿರುವ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಜಾರಿಯಲ್ಲಿರುವ ಅವಧಿಯಲ್ಲಿ ಗ್ರಾಮೀಣ ಜನರಿಗೆ ಉದ್ಯೋಗ ಸಮಸ್ಯೆಗಳು ಉಂಟಾಗಬಾರದು ಎಂಬ ಮಹತ್ವಾಕಾಂಕ್ಷೆಯೊಂದಿಗೆ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳನ್ನು(ನರೇಗಾ) ಮುಂದುವರೆಸಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶನದ ಮೇರೆಗೆ ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಪಂಚಾಯತ್‍ಗಳಲ್ಲಿ ನರೇಗಾ ಚಟುವಟಿಕೆಗಳು ಪ್ರಾರಂಭವಾಗವೆ. ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ಚಟುವಟಿಕೆಗಳು ಈಗಾಗಲೇ ಪ್ರಾರಂಭವಾಗಿದ್ದು, ದೇವಲಿಂಗಿಕೊಪ್ಪದ ಕೆರೆಗೆ ನೀರಿನ ಕಾಲುವೆ …

Read More »

ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ರೆ 7 ವರ್ಷ ಜೈಲು……..

ನವದೆಹಲಿ: ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಆಗಲಿದೆ. ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಇಲ್ಲಿಯವರೆಗಿದ್ದ 6 ತಿಂಗಳ ಶಿಕ್ಷೆಯ ಪ್ರಮಾಣವನ್ನು 7 ವರ್ಷಕ್ಕೆ ಏರಿಸಿದೆ. ದೇಶದ ಹಲವೆಡೆ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಈ ವಾರದಲ್ಲಿ ಬೆಂಗಳೂರಿನ ಪಾದರಾಯನಪುರ, ಮೈಸೂರಿನಲ್ಲಿ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿತ್ತು. …

Read More »

ಗುರುವಾರದಿಂದ ಕರ್ನಾಟಕದಲ್ಲಿ ಲಾಕ್‍ಡೌನ್ ಭಾಗಶಃ ಸಡಿಲ- ಏನಿದೆ, ಏನಿಲ್ಲ? – ಮದ್ಯ ಪ್ರಿಯರಿಗೆ ಸಿಗಲ್ಲ ಎಣ್ಣೆ

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್‍ನಿಂದಾಗಿ ಹೇರಿದ್ದ ಲಾಕ್‍ಡೌನ್ ಗುರುವಾರದಿಂದ ಭಾಗಶಃ ಸಡಿಲಗೊಳ್ಳಲಿದೆ. ನಾಳೆಯಿಂದ ಕಟೈಂನ್‍ಮೆಂಟ್ ವಲಯ ಹೊರತು ಪಡಿಸಿ ಉಳಿದ ಕಡೆಯಲ್ಲಿ ಲಾಕ್‍ಡೌನ್ ನಿಯಮ ಸಡಿಲಗೊಳ್ಳಲಿದೆ. ಈ ಮೂಲಕ ಕಟ್ಟಡ ನಿರ್ಮಾಣ, ಅಗತ್ಯ ವಸ್ತುಗಳ ಕೈಗಾರಿಕೆ, ಕೆಲ ಸರ್ಕಾರಿ ಕಚೇರಿಗಳು ತೆರೆಯಲಿವೆ. ಆದರೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯ. ಸಾರ್ವಜನಿಕ ಸ್ಥಳದಲ್ಲಿ 5ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಎಂದು ಸರ್ಕಾರ ಸೂಚಿಸಿದೆ. ಏನಿರುತ್ತೆ?: ಸೇಫ್ ಝೋನ್‍ನಲ್ಲಿ ಕಟ್ಟಡ ನಿರ್ಮಾಣ, …

Read More »