Breaking News

ಸೋಮವಾರದಿಂದ ಮಂಗಳೂರಿನಿಂದ ಬೆಂಗಳೂರು ಮುಂಬೈ, ಚೆನ್ನೈಗೆ ವಿಮಾನಗಳ ಹಾರಾಟ ಆರಂಭ

ಮಂಗಳೂರು: ಕೊರೊನಾದಿಂದ ಸ್ಥಗಿತಗೊಂಡಿದ್ದ ವಿಮಾನ ಸೇವೆ ಮತ್ತೆ ಆರಂಭಿಸಲು ವಿಮಾನಯಾನ ಸಚಿವಾಲಯ ಸೂಚಿಸಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಮಂಗಳೂರಿನಿಂದ ಬೆಂಗಳೂರು ಮುಂಬೈ, ಚೆನ್ನೈಗೆ ವಿಮಾನಗಳ ಹಾರಾಟ ಆರಂಭವಾಗಲಿದೆ. ಮೇ 25ರಿಂದ ಮಂಗಳೂರಿನಿಂದ ಇಂಡಿಗೋದ 3 ವಿಮಾನಗಳು ಮುಂಬೈ, ಬೆಂಗಳೂರು, ಚೆನ್ನೈಗೆ ಸಂಚರಿಸಲಿದೆ. ಸ್ಪೈಸ್ ಜೆಟ್ 3 ವಿಮಾನಗಳು ಬೆಂಗಳೂರು, ಮುಂಬೈಗೆ ಸಂಚರಿಸಲಿದೆ. ಏರ್ ಇಂಡಿಯಾ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಬೆಂಗಳೂರಿನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 8.30ಕ್ಕೆ, ರಾತ್ರಿ 7 …

Read More »

ಸೀಲ್‍ಡೌನ್ ಪ್ರದೇಶದಲ್ಲಿ ವಾಕಿಂಗ್- ಪೊಲೀಸರ ಎಚ್ಚರಿಕೆಗೂ ಕ್ಯಾರೆ ಎನ್ನದ ಜನ…..

ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್‍ನ ಮಾರಪ್ಪನ ಪಾಳ್ಯದಲ್ಲಿ ಶನಿವಾರ ಪೊಲೀಸ್ ಪೇದೆಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಮಾರಪ್ಪನ ಪಾಳ್ಯದ ಶಂಕರ್ ನಗರದ 4ನೇ ಹಂತದ 1ನೇ ಕ್ರಾಸ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ಈ ಕುರಿತು ಪೊಲೀಸರು ಎಚ್ಚರಿಕೆ ನೀಡಿದರೂ ಜನ ವಾಕಿಂಗ್ ಮಾಡುತ್ತಿದ್ದಾರೆ. ಸೀಲ್‍ಡೌನ್ ಪ್ರದೇಶದ ರಸ್ತೆಯಲ್ಲಿ ವ್ಯಕ್ತಿಯೊಬ್ಬ ವಾಕ್ ಮಾಡುತ್ತಿದ್ದು, ಮನೆಯಿಂದ ಹೊರಗಡೆ ಬರಬೇಡಿ ಎಂದು ಪೊಲೀಸರು ಕೂಗಿ ಹೇಳಿದರೂ, ಕ್ಯಾರೇ ಅನ್ನದೆ ಓಡಾಟ ನಡೆಸಿದ್ದಾನೆ. ಸೀಲ್‍ಡೌನ್ ಆದ …

Read More »

ಇಂದು ದೇಶದ ಯಾವ ಭಾಗದಲ್ಲೂ ಚಂದ್ರ ದರ್ಶನವಾಗಿಲ್ಲ ಹೀಗಾಗಿ ರಮಜಾನ್ ಈದ್ ಸೋಮವಾರ ಆಚರರಿಸಲು ನಿರ್ಣಯ……..

ಬೆಳಗಾವಿ- ಪವಿತ್ರ ರಮಜಾನ್ ಈದ್ ಹಬ್ಬವನ್ನು ಸೋಮವಾರ ಆಚರಿಸಲು ಬೆಳಗಾವಿಯ ಅಂಜುಮನ್ ಇಸ್ಲಾಂ ಮತ್ತು ಚಾಂದ್ ಕಮೀಟಿ ನಿರ್ಧರಿಸಿದೆ ಇಂದು ದೇಶದ ಯಾವ ಭಾಗದಲ್ಲೂ ಚಂದ್ರ ದರ್ಶನವಾಗಿಲ್ಲ ಹೀಗಾಗಿ ರಮಜಾನ್ ಈದ್ ಸೋಮವಾರ ಆಚರರಿಸಲು ನಿರ್ಣಯಿಸಲಾಗಿದೆ ಬೆಳಗಾವಿಯ ಅಂಜುಮನ್ ಸಂಸ್ಥೆಯ ಅಧ್ಯಕ್ಷ ರಾಜು ಸೇಠ ಅಧ್ಯಕ್ಷತೆಯಲ್ಲಿ ನಡೆದ ಚಾಂದ್ ಕಮೀಟಿ ಇಂದು ಸಂಜೆ ಅಂಜುಮನ್ ಹಾಲ್ ನಲ್ಲಿ ಸಭೆ ಸೇರಿ ಈದ ಆಚರಣೆಯ ಕುರಿತು ಸಮಾಲೋಚನೆ ನಡೆಸಿತು .ಚಂದ್ರ ದರ್ಶನದ …

Read More »

ಬೆಳಗಾವಿ: ಎರಡು ದಿನ ರಜೆ ಹಿನ್ನೆಲೆ ಮದ್ಯ ಪ್ರಿಯರು ಬಾಕ್ಸ್‌ಗಟ್ಟಲೇ ಎಣ್ಣೆ ಖರೀದಿ……

ಬೆಳಗಾವಿ: ಎರಡು ದಿನ ರಜೆ ಹಿನ್ನೆಲೆ ಮದ್ಯ ಪ್ರಿಯರು ಬಾಕ್ಸ್‌ಗಟ್ಟಲೇ ಎಣ್ಣೆ ಖರೀದಿಸಿದ ಪ್ರಸಂಗ ನಗರದಲ್ಲಿ ಕಂಡುಬಂದಿತು. ಮಹಾಮಾರಿ ಕೊರೊನಾ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಶನಿವಾರ ಸಂಜೆ 7ರಿಂದ ಭಾನುವಾರದವರೆಗೆ ಕರ್ಫ್ಯೂ ಮಾದರಿಯ ಲಾಕ್‍ಡೌನ್ ಘೋಷಿಸಲಾಗಿದೆ. ಜೊತೆಗೆ ರಂಜಾನ್ ಹಿನ್ನೆಲೆ ಸೋಮವಾರ ಕೂಡ ಸರ್ಕಾರಿ ರಜೆ ಇದೆ. ಇದರಿಂದಾಗಿ ಎರಡು ದಿನಗಳ ಕಾಲ ಬಾರ್ ಬಂದ್ ಆಗಲಿವೆ. ಎರಡು ದಿನ ರಜೆ ಇರುವುದನ್ನು ಅರಿತ ಮದ್ಯ ಪ್ರಿಯರು ಶನಿವಾರ …

Read More »

ಗ್ರೀನ್ ಎನರ್ಜಿ ಸೋಲಾರ್ ಸಿಸ್ಟಂ ಪವರ್ ಕಂಪನಿಯು ಕೊರೋನಾ ಸಂಕಷ್ಠದ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತಕ್ಕೆ 50ಸಾವಿರ ರೂಪಾಯಿ ಬೆಲೆ ಬಾಳುವ ಆಹಾರ ಪದಾರ್ಥಗಳನ್ನು ವಿತರಿಸಿದರು

ಮಂಡ್ಯ:ಸಂತೇಬಾಚಹಳ್ಳಿ ಹೋಬಳಿಯ ಮಾವಿನಕಟ್ಟೆಕೊಪ್ಪಲಿನಲ್ಲಿರುವ ಅದಾನಿ ಗ್ರೀನ್ ಎನರ್ಜಿ ಸೋಲಾರ್ ಸಿಸ್ಟಂ ಪವರ್ ಕಂಪನಿಯು ಕೊರೋನಾ ಸಂಕಷ್ಠದ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತಕ್ಕೆ 50ಸಾವಿರ ರೂಪಾಯಿ ಬೆಲೆ ಬಾಳುವ ಆಹಾರ ಪದಾರ್ಥಗಳನ್ನು ತಹಶೀಲ್ದಾರ್ ಎಂ.ಶಿವಮೂರ್ತಿ ಅವರಿಗೆ ಹಸ್ತಾಂತರಿಸಿದರು. ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಇಡೀ ವಿಶ್ವವೇ ಇಂದು ಸಂಕಷ್ಠದಲ್ಲಿದೆ. ಜನಸಾಮಾನ್ಯರ ಸಂಕಷ್ಠಗಳು ಹಾಗೂ ನೋವು ನಲಿವುಗಳಿಗೆ ಪ್ರಾಮಾಣಿಕವಾದ ಸ್ಪಂದನೆಯಲ್ಲಿ ತೊಡಗಿಸಿಕೊಂಡಿರುವ ಅದಾನಿ ಗ್ರೀನ್ ಎನರ್ಜಿ ಸೋಲಾರ್ ಪವರ್ ಸಿಸ್ಟಂ ಕಂಪನಿಯು 50ಸಾವಿರ ರೂಪಾಯಿ …

Read More »

ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುತ್ತಿರುವ ತಾಲ್ಲೂಕು ಆಡಳಿತಕ್ಕೆ ಧನ್ಯವಾದಗಳನ್ನು ಸಮರ್ಪಿಸಿದ ಮುಂಬೈ ಕನ್ನಡಿಗರು.

ಮಂಡ್ಯ :ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೃಷ್ಣರಾಜಪೇಟೆ ತಾಲ್ಲೂಕಿನ 16 ಹೋಂ ಕ್ವಾರಂಟೈನ್ ಸೆಂಟರ್ ಗಳಲ್ಲಿರುವ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಿಗೆ ಹಾಲು ವಿತರಣೆ ಮಾಡಿದ ತಹಶೀಲ್ದಾರ್ ಎಂ.ಶಿವಮೂರ್ತಿ. ಮಕ್ಕಳಿಗೆ ನಂದಿನಿ ಬ್ರಾಂಡ್ ನ ಸುವಾಸಿತ ಬಾದಾಮಿ ಹಾಲಿನ ಪ್ಯಾಕೇಟ್ ಗಳು ಮತ್ತು ಗರ್ಭಿಣಿ ಮಹಿಳೆಯರಿಗೆ ಟೆಟ್ರಾ ಪ್ಯಾಕ್ ನಂದಿನಿ ವಿಶೇಷ ಹಾಲಿನ ಪ್ಯಾಕೇಟುಗಳನ್ನು ವಿತರಿಸಿ ಕ್ವಾರಂಟೈನ್ ಸೆಂಟರ್ ಗಳಲ್ಲಿರುವ ಮುಂಬೈ ಕನ್ನಡಿಗ ಬಂಧುಗಳ ಯೋಗಕ್ಷೇಮವನ್ನು ತಹಶೀಲ್ದಾರ್ ಶಿವಮೂರ್ತಿ ವಿಚಾರಿಸಿ …

Read More »

ಮಂಡ್ಯ ಮಾತನಾಡುವವರು ಮಾತಾಡಿಕೊಳ್ಳಲಿ. ಕೆಲಸ ಇಲ್ಲದವರು ಮಾತಾಡುತ್ತಾರೆ. ನಮಗೆ ಮಾಡಲು ಬೇಕಾದಷ್ಟು ಕೆಲಸವಿದೆ.

ಮಂಡ್ಯ :ಕೋವಿಡ್ -19 ತಡೆಗಟ್ಟುವ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ| ನಾರಾಯಣಗೌಡ ಹೇಳಿದ್ದಾರೆ. ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿ, ಐಬಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದೊಂದಿಗೆ ಅವರು ಮಾತನಾಡಿದ್ರು. ನಮ್ಮ ಮೇಲೆ ಆರೋಪ ಮಾಡಿದವರ ಕ್ಷೇತ್ರಕ್ಕೇ ಮುಂಬೈನಿಂದ ಹೆಚ್ಚಿನ ಜನ ಬರುತ್ತಿದ್ದಾರೆ. ಇದಕ್ಕೆ ಅವರು ಏನು ಹೇಳುತ್ತಾರೆ ಇಂಥ ಸಂದರ್ಭದಲ್ಲಿ ರಾಜಕೀಯ ಮಾಡಬಾರದು. ಬಂದವರಿಗೆ ಕ್ವಾರಂಟೈನ್ ಸೌಲಭ್ಯ ನೀಡುವುದು …

Read More »

ರಾಜ್ಯದಲ್ಲಿ ಇಂದು 196 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ

ಬೆಂಗಳೂರು – ರಾಜ್ಯದಲ್ಲಿ ಇಂದು 196 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸ್ವಲ್ಪ ಹೊತ್ತಿನ ಮೊದಲು ಸಚಿವ ಸುರೇಶ ಕುಮಾರ 130 ಜನರಿಗೆ ಇಂದು ಸೋಂಕು ತಗುಲಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ಆದರೆ ಅದು ತಪ್ಪು ಮಾಹಿತಿ ಎನ್ನುವುದು ದೃಢವಾಗಿದ್ದು, ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ 196 ಜನರಿಗೆ ಸೋಂಕು ಪತ್ತೆಯಾಗಿದೆ. ಇಂದು ಈವರೆಗಿನ ದಾಖಲೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 1939 ಆಗಿದೆ. ಬೆಳಗಾವಿಯಲ್ಲಿ ಇಂದು …

Read More »

ಕ್ವಾರಂಟೈನ್ ಕೇಂದ್ರದ ಬಳಿ ಬ್ರೆಡ್, ಮೊಟ್ಟೆ ಮಾರಾಟ: ಓಡಿ ಬಂದ ಜನ

ರಾಯಚೂರು: ನಗರದ ಹೊರವಲಯದ ಬೋಳಮಾನದೊಡ್ಡಿ ರಸ್ತೆಯಲ್ಲಿರುವ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದ ಜನ ಆಹಾರ ಪದಾರ್ಥಗಳಿಗಾಗಿ ಹೊರಬರುತ್ತಿದ್ದಾರೆ. ಬ್ರೆಡ್, ಮೊಟ್ಟೆ ಹಾಗೂ ತಿನಿಸು ಪದಾರ್ಥಗಳ ಖರೀದಿಸಲು ಕ್ವಾರಂಟೈನ್ ಕೇಂದ್ರದಿಂದ ಜನ ಹೊರಬರುತ್ತಿದ್ದಾರೆ. ಕ್ವಾರಂಟೈನ್ ಕೇಂದ್ರದ ಮುಂದೆಯೇ ವ್ಯಾಪಾರಿಗಳು ಬ್ರೆಡ್ ಸೇರಿ ಇತರೆ ಆಹಾರ ಪದಾರ್ಥಗಳನ್ನ ತಂದು ಮಾರಾಟ ಮಾಡುತ್ತಿದ್ದಾರೆ. ಆಂಧ್ರಪ್ರದೇಶ, ತೆಲಂಗಾಣದಿಂದ ಬಂದವರಿಗಾಗಿ ಮಾಡಿರುವ ಕ್ವಾರಂಟೈನ್ ಕೇಂದ್ರದಲ್ಲಿ ಜನರ ಓಡಾಟಕ್ಕೆ ಯಾವುದೇ ನಿರ್ಭಂದವಿಲ್ಲದಂತಾಗಿದೆ. ಕಾವಲಿಗೆ ಪೊಲೀಸರು ಇದ್ದರೂ ಕ್ವಾರಂಟೈನ್ ಕೇಂದ್ರದ ಗೇಟ್ …

Read More »

ಮೇ 29ರೊಳಗೆ SSLC ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ………

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಳ್ಳಲು ಬಯಸಿದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವ್ಯಾಸಂಗ ಮಾಡುತ್ತಿದ್ದ ಶಾಲೆಯ ಮುಖ್ಯ ಶಿಕ್ಷಕರನ್ನು ದೂರವಾಣಿಯ ಮೂಲಕ ಸಂಪರ್ಕಿಸಿ ತಾವು ಸದ್ಯ ವಾಸ ಮಾಡುತ್ತಿರುವ ಮನೆಯ ಹತ್ತಿರದ ಪರೀಕ್ಷಾ ಕೇಂದ್ರವನ್ನು ಗುರುತಿಸಿ ಮುಖ್ಯ ಶಿಕ್ಷಕರ ಲಾಗಿನ್ ಮೂಲಕ ಬದಲಿಸಿಕೊಳ್ಳಬಹುದು. ಪರೀಕ್ಷಾ ಕೇಂದ್ರ ಬದಲಾವಣೆಗೆ ಮೇ 29ರವರೆಗೆ ಅವಕಾಶ ನೀಡಲಾಗಿದೆ. ಬದಲಾವಣೆ ಮಾಡಿಕೊಳ್ಳದಿದ್ದರೆ ಮೂಲ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು. …

Read More »