Breaking News

ರಾಜ್ಯಪಾಲರನ್ನು ಭೇಟಿ ಮಾಡಿದ ಸಿಎಂ ಅಶೋಕ್ ಗೆಹ್ಲೋಟ್- ರಾಜಭವನದಲ್ಲಿ ಘೋಷಣೆ ಕೂಗಿದ ಕಾಂಗ್ರೆಸ್ ಶಾಸಕರು

ಜೈಪುರ: ರಾಜಸ್ಥಾನ ಕಾಂಗ್ರೆಸ್ ಪಕ್ಷದ ಬಂಡಾಯದ ಮುನಿಸು ಮುಂದುವರಿದಿದ್ದು, ಇಂದು ಸಿಎಂ ಅಶೋಕ್ ಗೆಹ್ಲೋಟ್ ತಮ್ಮ ಪಕ್ಷದ ಶಾಸಕರೊಂದಿಗೆ ರಾಜಭವನಕ್ಕೆ ಭೇಟಿ ನೀಡಿ ಶಕ್ತಿ ಪ್ರದರ್ಶನ ನಡೆಸಿದರು. ಗವರ್ನರ್ ಭೇಟಿ ಮಾಡಿದ ಅಶೋಕ್ ಗೆಹ್ಲೋಟ್ ವಿಶೇಷ ಶಾಸನ ಸಭೆಯನ್ನು ಸಮಾವೇಶ ನಡೆಸಲು ಮನವಿ ಮಾಡಿದರು. ಇದಕ್ಕೂ ಮುನ್ನ ಫೈರ್ ಮೊಂಟ್ ಹೋಟೆಲ್ ನಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರು ಹೋಟೆಲ್‍ನಿಂದ ಬಸ್ ಮೂಲಕ ರಾಜಭವನಕ್ಕೆ ಆಗಮಿಸಿದ್ದರು. ರಾಜಭವನದಲ್ಲಿ ರಾಜ್ಯಪಾಲ ಕಲ್‍ರಾಜ್ ಮಿಶ್ರಾ …

Read More »

ಕೆಎಂಸಿಯಲ್ಲಿ ಕೊರೊನಾ ಚಿಕಿತ್ಸೆ ನಡುವೆ ಪುತ್ತಿಗೆ ಶ್ರೀಗಳಿಂದ ಪ್ರತಿದಿನ ಪೂಜೆ

ಉಡುಪಿ: ಪುತ್ತಿಗೆ ಸ್ವಾಮೀಜಿಗೆ ಕೊರೊನಾ ಸೋಂಕು ಹರಡಿದ್ದು, ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಸ್ವಾಮೀಜಿ ವಿಶ್ರಾಂತಿಯ ಜೊತೆಗೆ ನಿರಂತರ ಪೂಜೆ ಪುನಸ್ಕಾರದಲ್ಲಿ ತೊಡಗಿದ್ದಾರೆ. ಅನುಷ್ಠಾನಗಳನ್ನು ಮಾಡುತ್ತಿದ್ದಾರೆ. ಆaಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೂ ನಿತ್ಯ ಜಪ ಅನುಷ್ಠಾನಗಳಲ್ಲಿ ಪುತ್ತಿಗೆ ಶ್ರೀಗಳು ತೊಡಗಿಸಿಕೊಂಡಿರುವುದು ಗಮನಸೆಳೆದಿದೆ. ಉಡುಪಿ ಮಾತ್ರವಲ್ಲ ಅಮೆರಿಕ ಸೇರಿದಂತೆ ಹಲವಾರು ದೇಶಗಳಲ್ಲಿ ತಮ್ಮ ಶಾಖಾಮಠಗಳನ್ನು ಹೊಂದಿರುವ ಸ್ವಾಮೀಜಿ ಈ ಬಾರಿ ಉಡುಪಿಯಲ್ಲೇ ಚಾತುರ್ಮಾಸ್ಯ ವೃತ ಕೈಗೊಂಡಿದ್ದರು.ಚಾತುರ್ಮಾಸ್ಯಕ್ಕೆ ಸಂಕಲ್ಪ ಮಾಡಿದ್ದ ಸಮಯದಲ್ಲಿ …

Read More »

ಮೃತಪಟ್ಟು ಒಂದು ದಿನವಾದ್ರೂ ಶವ ಕೊಟ್ಟಿಲ್ಲ – ಬರೋಬ್ಬರಿ 9 ಲಕ್ಷ ಬಿಲ್ ಕೊಟ್ಟ ಆಸ್ಪತ್ರೆ

ಬೆಂಗಳೂರು: ಕುಟುಂಬಕ್ಕೆ ಮೃತದೇಹ ನೀಡಲು 9 ಲಕ್ಷ ಬಿಲ್ ಮುಂದಿಟ್ಟು ಬೆಂಗಳೂರಿನ ಆಸ್ಪತ್ರೆ ಸತಾಯಿಸಿದ್ದು, ಈಗ ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಮೃತದೇಹವನ್ನು ನೀಡಲು ಆಸ್ಪತ್ರೆ ಒಪ್ಪಿಕೊಂಡಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 46 ವರ್ಷದ ಮಹಿಳೆ ನಗರದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ್ದಾರೆ. ಇದೀಗ ಮೃತದೇಹ ಕೊಡಲು ಆಸ್ಪತ್ರೆ ಕುಟುಂಬಕ್ಕೆ 9 ಲಕ್ಷ ಬಿಲ್ ಮುಂದಿಟ್ಟಿದೆ. ಏನಿದು ಘಟನೆ? ಜುಲೈ 13 ರಂದು ಉಸಿರಾಟದ ಸಮಸ್ಯೆಯಿಂದ ಮಹಿಳೆಯನ್ನು …

Read More »

ನಾಗರ ಹಾವು ಗೆ, ಮಾಸ್ಕ್ ಹಾಕಿ,ಮಾಸ್ಕ್ ಸೇಫ್, ಎಂದು ಬರೆದ ವಿದ್ಯಾರ್ಥಿನಿ

  ಮೂಡಲಗಿ : ಇಂದು ನಾಗ ಚತುರ್ಥಿ,ನಾಗರಹಾವು ಗಳು ಗೆ ಹಾಲು ಹಾಕುವ ಹಬ್ಬ ಗಳು, (ಶ್ರಾವಣ ಮಾಸ.) ಬಹುತೇಕ ಹಿಂದುಗಳು,ಶ್ರಾವಣ ಮಾಸವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲ್ಪಡುತ್ತದೆ. ಇಂತಹ ಸಂದರ್ಭದಲ್ಲಿ ಮೂಡಲಗಿ ನಗರದಲ್ಲಿ ಒಬ್ಬ ವಿದ್ಯಾರ್ಥಿ ಕೊರೋನಾ ನಿಯಂತ್ರಣ ದಲ್ಲಿ ಒಂದು ಪ್ರಮುಖವಾದ ಮಾಸ್ಕ್ ಧರಿಸಲು ಪಟ್ಟಣದ ವಿಧ್ಯಾರ್ಥಿ ಸುಪ್ರಿಯಾ ಕಮ್ಮಾರ ತಮ್ಮ ಮನೆಯ ಮುಂದೆ ನಾಗರಹಾವಿನ, ಚಿತ್ರವನ್ನು ಬಿಡಿಸಿ. ಅದಕ್ಕೆ ಮಾಸ್ಕ್ ಹಾಕಿ.ಮಾಸ್ಕ್ ಸೇಫ್ ಎಂದು ಬರೆದಿದ್ದಾಳೆ. ಜನರು …

Read More »

ಕೊರೊನಾ ಪಾಸಿಟಿವ್ ಬಂದ ಸಂದರ್ಭದಲ್ಲಿ ಏರಿಯಾ ಸೀಲ್ ಮಾಡುವ ಬದಲು ಮನೆ ಬಾಗಿಲನ್ನೇ ಸೀಲ್‍ಡೌನ್

ಬೆಂಗಳೂರು: ಕೊರೊನಾ ಪಾಸಿಟಿವ್ ಬಂದ ಸಂದರ್ಭದಲ್ಲಿ ಏರಿಯಾ ಸೀಲ್ ಮಾಡುವ ಬದಲು ಮನೆ ಬಾಗಿಲನ್ನೇ ಸೀಲ್‍ಡೌನ್ ಮಾಡಿರುವ ಘಟನೆ ಬೆಂಗಳೂರಿನ ಶಾಂತಿನಗರದಲ್ಲಿ ನಡೆದಿದೆ. ಬಿಬಿಎಂಪಿಯ ಮಹಾ ಎಡವಟ್ಟು ಮಾಡಿಕೊಂಡಿದ್ದು, ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಯ ಮನೆ ಬಾಗಿಲಿಗೆ ಅಡ್ಡಲಾಗಿ ಕಬ್ಬಿಣದ ಶೀಟ್ ಅಳವಡಿಕೆ ಮಾಡಿದ್ದರು. ಆ ಮೂಲಕ ಸೋಂಕಿತ ವ್ಯಕ್ತಿ ಮನೆಯಿಂದ ಹೊರಬರದಂತೆ ಸೀಲ್‍ಡೌನ್ ಮಾಡಲಾಗಿತ್ತು. ಶಾಂತಿನಗರದ ಅಪಾರ್ಟ್‍ಮೆಂಟ್ ಒಂದರಲ್ಲಿ ಘಟನೆ ನಡೆದಿದೆ.ಅಧಿಕಾರಿಗಳ ಯಡ್ಡವಟ್ಟು ಮಾಡಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು …

Read More »

ವಿಡಿಯೋ: ನಡುರಸ್ತೆಯಲ್ಲೇ ಮಹಿಳೆಯನ್ನು ಏಕವಚನದಲ್ಲಿ ನಿಂದಿಸಿದ ಕುಮಾರ್ ಬಂಗಾರಪ್ಪ

ಶಿವಮೊಗ್ಗ: ಜಿಲ್ಲೆಯ ಸೊರಬ ಕ್ಷೇತ್ರದ ಶಾಸಕ ಕುಮಾರ್ ಬಂಗಾರಪ್ಪ ನಡು ರಸ್ತೆಯಲ್ಲೇ ಮಹಿಳೆಯನ್ನು ಏಕ ವಚನದಲ್ಲಿ ನಿಂದಿಸಿ ಅವಾಜ್ ಹಾಕಿರುವ ವಿಡಿಯೋ ಸಖತ್ ವೈರಲ್ ಆಗಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೊರಬ ಸಾಗರ ರಸ್ತೆಯಲ್ಲಿರುವ ಸಿಮೆಂಟ್ ಅಂಗಡಿಯೊಂದರ ಮುಂದೆ ರಸ್ತೆಗೆ ವಾಹನವನ್ನು ಅಡ್ಡಲಾಗಿ ನಿಲ್ಲಿಸಲಾಗಿತ್ತು. ಇದೇ ರಸ್ತೆಯಲ್ಲಿ ಶಾಸಕರು ಸಾಗುವಾಗ ರಸ್ತೆಗೆ ವಾಹನ ಅಡ್ಡಲಾಗಿ ನಿಲ್ಲಿಸಿದ್ದಕ್ಕೆ ತಮ್ಮ ಕಾರಿನಿಂದ ಇಳಿದು, ಮೊದಲು …

Read More »

ಮಕ್ಕಳ ಅಶ್ಲೀಲ ಫೋಟೋವನ್ನ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡ್ತಿದ್ದ ರೌಡಿಶೀಟರ್ ಬಂಧನ

ಬೆಂಗಳೂರು: ಮಕ್ಕಳ ಅಶ್ಲೀಲ ಚಿತ್ರಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ರೌಡಿಶೀಟರ್‌ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಜುನಾಥ್ ಅಲಿಯಾಸ್ ಕೋಳಿ ಮಂಜ ಬಂಧಿತ ರೌಡಿಶೀಟರ್. ಆರೋಪಿ ಚಾಮರಾಜಪೇಟೆ ಮೂಲದವನಾಗಿದ್ದು, ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದನು. ಬಂಧಿತ ಆರೋಪಿ ಮಕ್ಕಳ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಿ ಲೈಂಗಿಕ ಅಪರಾಧ ಮಾಡುತ್ತಿದ್ದನು. ಆರೋಪಿ ವಿರುದ್ಧ ಕ್ರಮ ಜರಗಿಸುವಂತೆ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಸಾರ್ವಜನಿಕರು ದೂರು …

Read More »

ಆ.15ರಂದು ಕೊರೊನಾ ವಾರಿಯರ್ಸ್‍ಗೆ ವಿಶೇಷ ಗೌರವ………

ನವದೆಹಲಿ: ಮಹಾಮಾರಿ ಕೋವಿಡ್-19 ವಿರುದ್ಧ ಮೊದಲ ಸಾಲಿನಲ್ಲಿ ನಿಂತು ಹೋರಾಟ ನಡೆಸಿದ್ದ ಕೊರೊನಾ ವಾರಿಯರ್ಸ್‍ಗೆ ಈ ಬಾರಿಯ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆ ಭಾಗವಹಿಸಲು ಅಹ್ವಾನ ನೀಡಲಾಗಿದ್ದು, ಆ ಮೂಲಕ ವೈದ್ಯರು, ಪೌರಕಾರ್ಮಿಕರು, ಪೊಲೀಸರು, ಇತರ ಅಧಿಕಾರಿಗಳಿಗೆ ವಿಶೇಷ ಗೌರವ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದು, ಕೋವಿಡ್ ಸಂದರ್ಭದಲ್ಲಿ ವಿಶೇಷ ಸೇವೆ ಮಾಡಿದ್ದ ವಾರಿಯರ್ಸ್‍ಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು …

Read More »

ಸಿಲಿಕಾನ್ ಸಿಟಿಯಲ್ಲಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿ ಪ್ರಾಣಬಿಟ್ಟ ಸರ್ಕಾರಿ ವೈದ್ಯ ಸಾವು

ಬೆಂಗಳೂರು: ಕೋವಿಡ್ 19 ವರದಿ ಇಲ್ಲದೆ ಮೂರು ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸಿದ ಪರಿಣಾಮ ಸರ್ಕಾರಿ ವೈದರೊಬ್ಬರು ಮೃತಪಟ್ಟ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೌದು. ಮೃತ ದುರ್ದೈವಿಯನ್ನು ಡಾ. ಮಂಜುನಾಥ್ ಎಂದು ಗುರುತಿಸಲಾಗಿದೆ. ಇವರು ಕೋವಿಡ್ 19 ವಾರಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಅನಾರೋಗ್ಯ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಗಳು ನಿರಾಕರಿಸಿದವು. ಮಂಜುನಾಥ್ ಅವರು ರಾಮನಗರ ಜಿಲ್ಲೆಯಲ್ಲಿರುವ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ …

Read More »

ವರುಣನ ಆರ್ಭಟಕ್ಕೆ ಹತ್ತಿ ಬೆಳೆ ನಾಶ

ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದ ಮಲ್ಲಪ್ಪ ಕಲ್ಮನಿ 7ಎಕರೆ ಜಮೀನು ಮಳೆಯಿಂದ ಜಲಾವೃತಗೊಂಡಿದೆ ವಡಗೇರಾ : ತಾಲೂಕಾದ್ಯಂತ ಗುರುವಾರ ಬೆಳಗಿನ ಜಾವ ಸುರಿದ ಅತಿಹೆಚ್ಚು 73.ಮಿ.ಮೀ.ಪುಷ್ಯ ಮಳೆಯಾಗಿದ್ದು ಮಳೆಯಿಂದಾಗಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ ವಾಹನ ಸವಾರರ ಪರದಾಟ ಹೇಳತೀರದು ಕಳೆದ ಎರಡು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ರೈತರ ಬದುಕು ಅಕ್ಷರಶಃ ಕಣ್ಣಿರಲ್ಲಿ ಕೈ ತೊಳೆಯುವಂತಾಗಿದೆ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ರಾಜ್ಯದಲ್ಲಿ ಮುಂದುವರಿದಿದ್ದು ಇನ್ನೊಂದೆಡೆ ಮಳೆಯ ಅಬ್ಬರ ನಡುವೆ …

Read More »