ಬೆಂಗಳೂರು: ಕೊರೊನಾ ನಿಯಂತ್ರಿಸಲು ಲಾಕ್ಡೌನ್ ಒಂದೇ ಪರಿಹಾರವಲ್ಲ, ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಮೂಲಕ ಕೊರೊನಾ ನಿಯಂತ್ರಿಸಲು ಜನರು ಸಹಕಾರ ನೀಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ಡೌನ್ ಇರುವುದಿಲ್ಲ. ಜನರ ರಕ್ಷಣೆಯ ಜೊತೆ ಸರ್ಕಾರಕ್ಕೆ ಆರ್ಥಿಕ ಸಂಪನ್ಮೂಲ ಅಗತ್ಯವಿದೆ. ಹೀಗಾಗಿ ಬೆಂಗಳೂರು ಮಾತ್ರ ಅಲ್ಲ ರಾಜ್ಯದ ಎಲ್ಲೂ ಲಾಕ್ಡೌನ್ ಮಾಡುವುದಿಲ್ಲ. ಆದರೆ ಕಂಟೈನ್ಮೆಂಟ್ ವಲಯದಲ್ಲಿ ನಿಯಮ ಬಿಗಿ ಇರುತ್ತದೆ …
Read More »ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಕಾರವಾರ: ಕೊರೊನಾ ಸೋಂಕಿಗೆ ಒಳಗಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಕಾರವಾರ ಮೆಡಿಕಲ್ ಕಾಲೇಜಿನ ಕೋವಿಡ್-19 ವಾರ್ಡ್ ನಲ್ಲಿ ಶಿರಸಿ ತಾಲೂಕಿನ 76 ವರ್ಷದ ವೃದ್ಧ ಹಾಗೂ ಭಟ್ಕಳದ 65 ವರ್ಷದ ವೃದ್ಧೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಶಿರಸಿ ತಾಲೂಕಿನ 76 ವರ್ಷದ ವೃದ್ಧ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕೊರೊನಾ ದೃಢಪಟ್ಟಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿಯಿಂದ ಕ್ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು ಆದರೆ …
Read More »ಸಿದ್ದರಾಮ್ಯ ಅವರು ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿರುವ
ಬೆಂಗಳೂರು: ಕೊರೊನಾ ಎಂಬ ಚೀನಿ ವೈರಸ್ ರಾಜ್ಯಕ್ಕೆ ಕಾಲಿಟ್ಟ ಬಳಿಕ ಒಂದಲ್ಲ ಒಂದು ರೀತಿಯಲ್ಲಿ ವಿರೋಧ ಪಕ್ಷಗಳು ಸರ್ಕಾರದ ಕಾಲೆಳೆಯುತ್ತಲೇ ಇವೆ. ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮ್ಯ ಅವರು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ, ರಾಜ್ಯ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ವಿರೋಧ ಪಕ್ಷದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಸಿದ್ದು ಮಾಡಿದ ಸರಣಿ ಟ್ವೀಟ್: ಟ್ವೀಟ್ 1: ಅಂತಾರಾಷ್ಟ್ರೀಯ ಪ್ರದರ್ಶನ …
Read More »ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚ. ಸಾಲಾಗಿ ಹಬ್ಬಗಳು,ಕೊರೊನಾ ಸಂದರ್ಭದಲ್ಲಿ ಹೊಸ ಸವಾಲು ಎದುರಾಗಲಿದೆ.
ಬೆಂಗಳೂರು: ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ಒಂದು ವಾರಗಳ ಕಾಲ ಘೋಷಣೆ ಮಾಡಿದ್ದ ಲಾಕ್ಡೌನ್ ಇಂದು ಮುಗಿಯಲಿದೆ. ಇದೀಗ ಸಿಲಿಕಾನ್ ಸಿಟಿಗೆ ಕೊರೊನಾ ಸಂದರ್ಭದಲ್ಲಿ ಹೊಸ ಸವಾಲು ಎದುರಾಗಲಿದೆ. ಶ್ರಾವಣ ಮಾಸ ಆರಂಭದ ಬೆನ್ನಲ್ಲೆ ಹಬ್ಬಗಳ ಸೀಸನ್ ಆರಂಭವಾಗಲಿದೆ. ಈ ಹಬ್ಬಗಳ ಸೀಸನ್ ಬೆಂಗಳೂರಿಗೆ ಟೆನ್ಶನ್ ಆಗಿದೆ. ಈ ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಸಾಲಾಗಿ ಹಬ್ಬಗಳು ಶುರುವಾಗುತ್ತವೆ. ಇದರಿಂದ ಜನರ ವಲಸೆ ಹೆಚ್ಚಾಗುವ ಸಾಧ್ಯತೆ ಇದೆ. …
Read More »ಕೊವಿಡ್ ಅವ್ಯವಹಾರವನ್ನು ಗುರುವಾರ ದಾಖಲೆ ಸಮೇತ ಬಯಲು : ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಯಡಿಯೂರಪ್ಪ ಹೇಳಿದ್ದರು, ಬಿಐಇಸಿ(ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರ)ಯಲ್ಲಿ ದೊಡ್ಡ ಕೋವಿಡ್ ಸೆಂಟರ್ ಮಾಡಿದ್ದೇವೆ ಅಂತ, ಅದಕ್ಕೆ ಹೇಗಿದೆ ಅಂತ ನೋಡೋಕೆ ಬಂದಿದ್ದೆವು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಪ್ರಾರಂಭಿಸಿರುವ ಕೊವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಇನ್ನೂ ಸಂಪೂರ್ಣ ಕೆಲಸ ಆಗಿಲ್ಲ, ನಾವು ಮಾರ್ಚ್ನಲ್ಲೇ ಈ ಬಗ್ಗೆ ಸಲಹೆ ಕೊಟ್ಟಿದ್ದೆ. ಆದರೆ, …
Read More »ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 14 ದಿನ ಲಾಕ್ಡೌನ್?…………..
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ಡೌನ್ ಮುಂದುವರಿಯುವ ಸಾಧ್ಯತೆ ಇದೆ. ಕಳೆದ ಜುಲೈ 16 ರಿಂದ ಜಿಲ್ಲಾದ್ಯಂತ ಲಾಕ್ಡೌನ್ ಆರಂಭವಾಗಿದ್ದು ನಾಳೆಗೆ ಅಂತ್ಯವಾಗಲಿದೆ. ಆದರೆ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿಯುತ್ತಲೇ ಇದೆ. ಜಿಲ್ಲೆಯಲ್ಲಿ ಪ್ರತಿದಿನ 10-200 ಪಾಸಿಟಿವ್ ಕೇಸ್ ಗಳು ಪತ್ತೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನ ಹಾಗೂ ಜನಪ್ರತಿನಿಧಿಗಳು ಮತ್ತೆ ಲಾಕ್ ಡೌನ್ ಮುಂದುವರಿಸಬೇಕೆಂದು ಒತ್ತಾಯಿಸಿದ್ದಾರೆ. ಹೀಗಾಗಿ ರಾಜ್ಯದ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸಿ …
Read More »ಮಣಿಪಾಲ ಕೆಎಂಸಿಯ ಹದಿನೆಂಟು ವೈದ್ಯರಿಗೆ ಕೊರೊನಾ ಸೋಂಕು ದೃಢ:ಒಂದು ವಾರ ಒಪಿಡಿ ಬಂದ್
ಉಡುಪಿ: ಮಣಿಪಾಲ ಕೆಎಂಸಿಯ ಹದಿನೆಂಟು ವೈದ್ಯರಿಗೆ ಕೊರೊನಾ ಸೋಂಕು ದೃಢವಾಗಿದೆ. ಅಲ್ಲದೇ 20ಕ್ಕಿಂತಲೂ ಹೆಚ್ಚು ನರ್ಸ್, ಆಸ್ಪತ್ರೆಯ ಸಿಬ್ಬಂದಿಯಲ್ಲಿ ಕೋವಿಡ್ 19 ಕಾಣಿಸಿಕೊಂಡಿದೆ. ಹೀಗಾಗಿ ಒಂದು ವಾರ ಒಪಿಡಿ ಬಂದ್ ಮಾಡಲಾಗಿದೆ. ಕೊರೊನಾ ವಾರಿಯರ್ಗಳಿಗೆ ಒಂದು ವಾರ ಒಪಿಡಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಒಂದು ವಾರಗಳ ಕಾಲ ಆಸ್ಪತ್ರೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಿ ಎಲ್ಲಾ ಸಿಬ್ಬಂದಿಗೆ ಕೊರೊನಾ ಟೆಸ್ಟ್ ಮಾಡಿಸಲಿದೆ. ಹೊರ ರಾಜ್ಯ ಮತ್ತು ಜಿಲ್ಲೆಯಿಂದ ಕೆಎಂಸಿಗೆ ಆಗಮಿಸುವ ಎಲ್ಲ …
Read More »ಹಾಸನ: ಜಿಲ್ಲೆಯಲ್ಲಿ ಇಂದು ಒಂದೇ ದಿನ 96 ಜನರಿಗೆ ಕೊರೊನಾ ಪಾಸಿಟಿವ್………
ಹಾಸನ: ಜಿಲ್ಲೆಯಲ್ಲಿ ಇಂದು ಒಂದೇ ದಿನ 96 ಜನರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ. ಇಂದಿನ 96 ಪಾಸಿಟಿವ್ ಪ್ರಕರಣಗಳು ಸೇರಿ ಹಾಸನದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಕೋವಿಡ್ ಸೋಂಕಿನಿಂದ ಮೃತರಾದವರ ಸಂಖ್ಯೆ 33ಕ್ಕೇರಿದೆ. ಇಂದು ಪಾಸಿಟಿವ್ ಬಂದ 96 ಜನರಲ್ಲಿ ಸುಮಾರು 18 ಜನ ಬೆಂಗಳೂರು ಟ್ರಾವೆಲ್ ಹಿಸ್ಟರಿಯನ್ನು ಹೊಂದಿದ್ದಾರೆ. ಹಾಸನದಲ್ಲಿ ಇದುವರೆಗೂ 1,049 …
Read More »ಪೌರ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ಆತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು: ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ವಾಹನ ಮೇಲಿಂದ ಬಿದ್ದು ಪೌರ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ಆತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಮಂಗಳವಾರ ಪಾಲಿಕೆ ಎದುರು ಪೌರ ಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸಿದರು. ಪೌರ ಕಾರ್ಮಿಕರ ಪ್ರತಿಭಟನೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಂಬಲ ಸೂಚಿಸಿದರು. ಪಾಲಿಕೆ ಎದುರು ಧರಣಿ ಕುಳಿತು ಪರಿಹಾರಕ್ಕೆ ಆಗ್ರಹಿಸಿದರು. ಜು. 19 ರಂದು ತ್ಯಾಜ್ಯ ವಿಲೇವಾರಿ ಮಾಡುವ ವೇಳೆ ವಾಹನ ಮೇಲಿಂದ ಬಿದ್ದ ಪೌರ ಕಾರ್ಮಿಕ ಪ್ರಾಣ …
Read More »ಕೊರೊನಾ ಸೋಂಕು ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ: ಸತೀಶ ಜಾರಕಿಹೊಳಿ
ಬೆಳಗಾವಿ: ಕೊರೊನಾ ಸೋಂಕು ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಮತ್ತು ಸಚಿವರು, ಅಧಿಕಾರಿಗಳ ಮಧ್ಯೆ ಸಮನ್ವಯತೆ ಕೊರತೆಯಿಂದ ಈ ರೀತಿ ಸಮಸ್ಯೆ ಉಂಟಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದ್ದಾರೆ. ಗೋಕಾಕ ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರ ಚಲಾಯಿಸುವುದೊಂದೆ ಅವರ ಗುರಿಯಾಗಿದೆ. ಹೇಗಾದರು ಮಾಡಿ ದಿನ ದೂಡುತ್ತಿದ್ದಾರೆ. ಜನರ ಸಮಸ್ಯೆ ಪರಿಹರಿಸಲು ಇವರಿಗೆ ಇಂಟರೆಸ್ಟ್ ಇಲ್ಲವಾಗಿದೆ ಎಂದು ಶಾಸಕ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. …
Read More »
Laxmi News 24×7