ಬೆಳಗಾವಿ – ನಗರದ ಮಾಳ ಮಾರುತಿ ಪೋಲೀಸ್ ಠಾಣೆಯಲ್ಲಿ ಎರಡು ವರ್ಷಗಳ ಕಾಲ ಮಹಿಳಾ ಪೋಲೀಸ್ ಪೇದೆಯಾಗಿ ಕರ್ತವ್ಯ ನಿಭಾಯಿಸಿದ್ದ ರಾಜ್ಯ ಮಟ್ಟದ ಮಹಿಳಾ ಕಬ್ಬಡ್ಡಿ ಆಟಗಾರ್ತಿ ಯಾಗಿದ್ದ ಕುಮಾರಿ ಗೌರಿ ಜೀವಾಜಿಗೋಳ (28) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ರಾಗಿದ್ದಾರೆ. ಗೌರಿ ಜೋವಾಜಿಗೋಳ ಮೂಲತಹ ವಿಜಯಪೂರದ ಬಬಲೇಶ್ವರ ಗ್ರಾಮದವರು.ಸ್ಪೋರ್ಟ್ಸ್ ಕೋಟಾದಲ್ಲಿ ಮಹಿಳಾ ಪೋಲೀಸ್ ಪೇದೆಯಾಗಿ ಬೆಳಗಾವಿಯ ಮಾಳ ಮಾರುತಿ ಪೋಲೀಸ್ ಠಾಣೆಯಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು …
Read More »ಕಳೆದ ಎರಡು ದಿನಗಳಿಂದಬೆಳಗಾವಿಗೆ ಬಿಗ್ ರಿಲೀಫ್
ಬೆಳಗಾವಿ – ಕಳೆದ ಎರಡು ದಿನಗಳಿಂದ ಬೆಳಗಾವಿ ನಿರಾಳವಾಗುತ್ತಿದೆ, ಪೋಲೀಸರ ಬಿಗಿ ಲಾಕ್ ಡೌನ್,ಜಿಲ್ಲಾಡಳಿತದ ಕ್ವಾರಂಟೈನ್ ಕಾರ್ಯಚರಣೆಯ ಪರಿಣಾಮವಾಗಿ ಬೆಳಗಾವಿಗೆ ಬಿಗ್ ರಿಲೀಫ್ ಸಿಗುತ್ತಿದೆ . ಇಂದು ಬೆಳಗಿನ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಕಲಬುರಗಿಯ ಐದು ಪಾಸಿಟೀವ್ ಪ್ರಕರಣಗಳು ಮಾತ್ರ ಬೆಳಕಿಗೆ ಬಂದಿದ್ದು ಭಾನುವಾರ,ಸೋಮವಾರ ಬೆಳಗಾವಿ ಪಾಲಿಗೆ ಕೊಂಚ ನೆಮ್ಮದಿ ನೀಡಿವೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸರಪಳಿ ಕಳಚಿ ಬೀಳುವತ್ತ ಸಾಗಿದೆ. ಬೆಳಗಾವಿ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
Read More »ಕೊರೋನಾ ಶಂಕಿತರನ್ನು ಕ್ವಾರಂಟೈನ್ ಮಾಡಿರುವ ಹಿನ್ನೆಲೆಯಲ್ಲಿ ಸುತ್ತಲಿನ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿ ಹೋಗುತ್ತಿದ್ದಾರೆ
ಚಿಕ್ಕೋಡಿ -ಚಿಂಚಲಿ ಪಟ್ಟಣದಲ್ಲಿ ಕಟ್ಟಡವೊಂದರಲ್ಲಿ ಕೊರೋನಾ ಶಂಕಿತರನ್ನು ಕ್ವಾರಂಟೈನ್ ಮಾಡಿರುವ ಹಿನ್ನೆಲೆಯಲ್ಲಿ ಸುತ್ತಲಿನ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿ ಹೋಗುತ್ತಿದ್ದಾರೆ. ಕೊರೊನಾ ಭಯಕ್ಕೆ ರಾತ್ರೋರಾತ್ರಿ ಮಾನೆಗಳನ್ನ ಖಾಲಿ ಮಾಡುತ್ತಿರುವ ಜನ ಹತ್ತಿರದ ತೋಟಗಳಲ್ಲಿ ಟೆಂಟ್ ಹಾಕಿಕೊಂಡು ಇರಲು ನಿರ್ಧರಿಸಿದ್ದಾರೆ. ಚಿಂಚಲಿ ಪಟ್ಟಣದ ಭಕ್ತಿ ನಿವಾಸದಲ್ಲಿ 44 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಮಾಯಕ್ಕಾ ದೇವಸ್ಥಾನದ ಭಕ್ತಿನಿವಾಸದ ಸುತ್ತಲೂ ಇರುವ 40 ಕ್ಕೂ ಹೆಚ್ಚು ಕುಟುಂಬಗಳು ಮನೆ ಖಾಲಿ ಮಾಡಿವೆ. ಕುಡಚಿ …
Read More »ಬೆಂಗಳೂರು: ಪಾದರಾಯನಪುರದ ನಿವಾಸಿಗಳಿಗೆ, ಶಾಂತಿ ಕಾಪಾಡುವಂತೆ ಶಾಸಕ ಜಮೀರ್ ಅಹ್ಮದ್ ಮನವಿ
ಬೆಂಗಳೂರು: ಪಾದರಾಯನಪುರದ ನಿವಾಸಿಗಳಿಗೆ, ಶಾಂತಿ ಕಾಪಾಡುವಂತೆನಿನ್ನೆ ಇಲ್ಲಿನ ಕೆಲ ನಿವಾಸಿಗಳನ್ನ ಕ್ವಾರಂಟೈನ್ಗೆ ಒಳಪಡಿಸುವ ವಿಚಾರವಾಗಿ ಸ್ಥಳೀಯರು, ಬಿಬಿಎಂಪಿ, ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಗಲಾಟೆ ಮಾಡಿದ್ರು. ಈ ಹಿನ್ನೆಲೆ ಟ್ವೀಟ್ ಮಾಡಿರೋ ಜಮೀರ್ ಅಹ್ಮದ್, ಪಾದರಾಯನಪುರ ನಿವಾಸಿಗಳೆಲ್ಲಾ ಶಾಂತಿಯಿಂದ ಇದ್ದು, ಬಿಬಿಎಂಪಿಯ ಮಾರ್ಗಸೂಚಿಗಳನ್ನ ಪಾಲಿಸುವಂತೆ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ. ಶಾಸಕ ಜಮೀರ್ ಅಹ್ಮದ್ ಮನವಿ ಮಾಡಿದ್ದಾರೆ. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆಗೆ ಯತ್ನಿಸಿರುವುದು ದುಃಖಕರ. …
Read More »ಶ್ರೀಪಾದ ಬೊಧ ಮಹಾಸ್ವಾಮಿಗಳು (66) ಭಾನುವಾರ ಐಕ್ಯ,ಕೆಎಂಎಫ್ ಅಧ್ಯಕ್ಷ ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಮೂಡಲಗಿ: ಇಲ್ಲಿನ ಇತಿಹಾಸ ಪ್ರಸಿದ್ದಿ ಪಡೆದಿರುವ ಶಿವಬೊಧ ರಂಗಮಠದ ಪೀಠಾದಿಪತಿ, ಈ ಭಾಗದ ನಡೆದಾಡುವ ದೇವರು ಎಂದೇ ಭಕ್ತರ ಹೃದಯದಲ್ಲಿ ನೆಲೆಸಿದ್ದ ಶ್ರೀಪಾದ ಬೊಧ ಮಹಾಸ್ವಾಮಿಗಳು (66) ಭಾನುವಾರ ಐಕ್ಯರಾದ ಸುದ್ದಿ ಕೇಳಿ ದಿಗ್ಭ್ರಮೆ ಉಂಟಾಯಿತು. ಪೂಜ್ಯರ ಪವಿತ್ರ ಆತ್ಮಕ್ಕೆ ಭಕ್ತಿಪೂರ್ವಕ ನಮನವನ್ನು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಲ್ಲಿಸಿ ಅತೀವ ಸಂತಾಪ ಸೂಚಿಸಿದ್ದಾರೆ. ಪೂಜ್ಯರ ಐಕ್ಯದಿಂದಾಗಿ ನಾಡಿಗೆ ಅಪಾರ ಹಾನಿಯಾಗಿದೆ.ಮೂಡಲಗಿ ಭಾಗದಲ್ಲಿ ಶೈಕ್ಷಣಿಕ, …
Read More »ಅಮೆರಿಕದಲ್ಲಿ ಕೊರೊನಾಗೆ ಒಂದೇ ದಿನ 1,997 ಮಂದಿ ಬಲಿ
ವಾಷಿಂಗ್ಟನ್: ಅಮೆರಿಕದಲ್ಲಿ ಒಂದೇ ದಿನಕ್ಕೆ 1,997 ಮಂದಿ ಬಲಿಯಾಗಿದ್ದಾರೆ ಎಂಬುದಾಗಿ ವರದಿಯಾಗಿದೆ. ಈ ಮೂಲಕ ಭಾನುವಾರದವರೆಗೆ ಮೃತಪಟ್ಟವರ ಸಂಖ್ಯೆ 40,661 ಕ್ಕೆ ಏರಿಕೆಯಾಗಿದೆ. ಪ್ರಪಂಚದಾದ್ಯಂತ ಕೋವಿಡ್ 19 ಎಂಬ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಇತ್ತ ವಿಶ್ವದ ದೊಡ್ಡಣ್ಣ ಈ ಮಹಾಮಾರಿಗೆ ತತ್ತರಿಸಿ ಹೋಗಿದೆ. ಭಾನುವಾರದ ಅಂಕಿ-ಅಂಶವನ್ನು ಗಮನಿಸಿದಾಗ ಇನ್ನೂ ದುಪ್ಪಟ್ಟಾಗುವ ಸಾಧ್ಯತೆಗಳಿರುವುದಾಗಿ ರಾಜ್ಯಪಾಲ ಆಂಡ್ರ್ಯೂ ಕುಮೊ ಆತಂಕ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಅಮೆರಿಕದಲ್ಲಿ 7,64,265 ಕೊರೊನಾ ಸೋಂಕಿತರಿದ್ದು, ಈ ಮೂಲಕ ಜಗತ್ತಿನಲ್ಲೇ …
Read More »ಸರ್ಜಿಕಲ್ ಸ್ಪಿರಿಟ್ಗೆ ನೀರು ಬೆರೆಸಿ ಕಳ್ಳಬಟ್ಟಿ ಸಾರಾಯಿ ಎಂದು ಮಾರಾಟ
ದಾವಣಗೆರೆ: ಮದ್ಯ ಸಿಗದ್ದಕ್ಕೆ ಹಲವರು ಕಳ್ಳಬಟ್ಟಿ ಸಾರಾಯಿ ಮೊರೆ ಹೋಗುತ್ತಿದ್ದು, ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಕೆಲವರು ಸರ್ಜಿಕಲ್ ಸ್ಪಿರಿಟ್ನ್ನು ಕಳ್ಳಬಟ್ಟಿ ಸರಾಯಿ ಎಂದು ನಂಬಿಸಿ ಮಾರಾಟ ಮಾಟುತ್ತಿದ್ದಾರೆ. ದಾವಣಗೆರೆಯಲ್ಲಿ ಸರ್ಜಿಕಲ್ ಸ್ಪಿರಿಟ್ ದಂಧೆ ಜೋರಾಗಿದ್ದು, ಸರ್ಜಿಕಲ್ ಸ್ಪೀರಿಟ್ನ್ನು ನೀರಿಗೆ ಬೆರೆಸಿ ಕಳ್ಳಬಟ್ಟಿ ಎಂದು ನಂಬಿಸಿ ಮಾರಾಟ ಮಾಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು, ಯಾರೇ ಕೇಳಿದರೂ ಸರ್ಜಿಕಲ್ ಸ್ಪಿರಿಟ್ ನೀಡದಂತೆ ಡ್ರಗ್ ಕಂಟ್ರೋಲ್ ರೂಮ್ಗೆ ಪತ್ರ ಬರೆಯಲಾಗಿದೆ. ಸರ್ಜಿಕಲ್ ಸ್ಪಿರಿಟ್ ಬೇಕು …
Read More »ಪ್ರತಿ ಜಿಲ್ಲೆಯಲ್ಲಿ ಕೊರೋನಾ ತಪಾಸಣಾ ಕೇಂದ್ರ ಸ್ಥಾಪಿಸಿ ರಾಪಿಡ್ ಟೆಸ್ಟಿಂಗ್ ಕಿಟ್ ಒದಗಿಸುವಂತೆ ದೇಶಪಾಂಡೆ ಆಗ್ರಹ
ಬೆಂಗಳೂರು:ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶೀಘ್ರವಾಗಿ ತಪಾಸಣೆ ನಡೆಸಲು ಈ ತಿಂಗಳ 30ರ ಒಳಗಾಗಿ ಪ್ರತಿ ಜಿಲ್ಲೆಗೊಂದು ಕೋವಿಡ್-19 ಪ್ರಯೋಗಾಲಯ ಹಾಗೂ ರಾಪಿಡ್ ಟೆಸ್ಟಿಂಗ್ ಕಿಟ್ ಒದಗಿಸಬೇಕು ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಿಯೋಗದೊಂದಿಗೆ ಸಿಎಂ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು ಸರ್ಕಾರವು ಕಟ್ಟಡ ಕಾರ್ಮಿಕರಿಗೆ ಸಹಾಯಧನ ಘೋಷಣೆ ಮಾಡಿದೆ. ಆದರೆ ಇತರೆ ಕಾರ್ಮಿಕರ ಬದುಕು ಸಂಕಷ್ಟದಲ್ಲಿದ್ದು ಸಂಘಟಿತ …
Read More »ಮಂಗಳೂರು ಜೈಲಿನಿಂದ 40 ಕೈದಿಗಳು ಚಿಕ್ಕಮಗಳೂರಿನ ಕಾರಾಗೃಹಕ್ಕೆ ಶಿಫ್ಟ್…
ಚಿಕ್ಕಮಗಳೂರು : ಮಂಗಳೂರು ಕಾರಾಗೃಹದಲ್ಲಿ ಸ್ಥಳಾವಕಾಶದ ಕೊರತೆಯಿಂದ ಚಿಕ್ಕಮಗಳೂರಿನ ಕಾರಾಗೃಹಕ್ಕೆ 40 ಕೈದಿಗಳನ್ನು ಸ್ಥಳಾಂತರಿಸಲಾಗಿದೆ. ಮಂಗಳೂರಿನ ಕೈದಿಗಳನ್ನು ಚಿಕ್ಕಮಗಳೂರು ಕಾರಾಗೃಹಕ್ಕೆ ಕರೆ ತಂದಿರುವುದಕ್ಕೆ ಇಲ್ಲಿನ ಕಾರಾಗೃಹದಲ್ಲಿರುವ ಕೈದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಕೊರೊನಾ ಸೋಂಕಿನ ಕಾರಣದಿಂದ ಸಾಮಾಜಿಕ ಅಂತರ ಕಾಪಾಡಲು ಸಮಸ್ಯೆಯಾಗುವ ಹಿನ್ನೆಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದ್ದು. ಎರಡು ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ 40 ಕೈದಿಗಳು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಕಾರಾಗೃಹ ಸೇರಿದ್ದಾರೆ.
Read More »ಲಾಕ್ಡೌನ್ ಸ್ವಲ್ಪ ಸಡಿಲಿಕೆ, ಯಾವಕ್ಷೇತ್ರಗಳಿಗೆ ವಿನಾಯಿತಿ..? ಇಲ್ಲಿದೆ ಫುಲ್ ಡೀಟೇಲ್ಸ್ ……
ನವದೆಹಲಿ : ಪ್ರಧಾನಿ ಮೋದಿ ಘೋಷಿಸಿರುವ ಕಟ್ಟುನಿಟ್ಟಿನ ಲಾಕ್ಡೌನ್ ನಾಳೆಯಿಂದ ಸ್ವಲ್ಪ ಪ್ರಮಾಣದಲ್ಲಿ ಸಡಿಲಿಕೆಯಾಗಲಿದ್ದು,ಕೆಲ ಕ್ಷೇತ್ರಗಳಿಗೆ ಲಾಕ್ ಡೌನ್ ನಿಂದ ಷರತ್ತು ಬದ್ಧ ವಿನಾಯಿತಿ ನೀಡಿದೆ. ಕೆಲ ಸರ್ಕಾರಿ ಕಾರ್ಯಚಟುವಟಿಕೆಗಳಿಗೆ ಅನುಮತಿ ನೀಡಿದೆ. ಕೇಂದ್ರ ಗೃಹ ಇಲಾಖೆ ಜಾರಿಗೊಳಿಸಲು ಉದ್ದೇಶಿಸಿರುವ ಸೇವೆಗಳು ಹಾಗೂ ಚಟುವಟಿಕೆಗಳಿಗಾಗಿ ವಿಶೇಷ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಒಂದಷ್ಟು ನಿರ್ದೇಶನಗಳನ್ನು ಮತ್ತು ಮಾಹಿತಿಗಳನ್ನು ನೀಡಿದ್ದು, ಕೆಲವು ಕ್ಷೇತ್ರಗಳು ಲಾಕ್ ಡೌನ್ ನಿಂದ …
Read More »