ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 96,169ಕ್ಕೆ ಏರಿಕೆಯಾಗಿದೆ. 3,029 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. 24 ಗಂಟೆಯಲ್ಲಿ 5,242 ಹೊಸ ಪ್ರಕರಣಗಳು ಹಾಗೂ 157 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈವರೆಗೆ ಭಾರತದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು 36,824 ಮಂದಿ ಗುಣಮುಖರಾಗಿದ್ದಾರೆ. 56,316 ಸೋಂಕಿತರು ಇನ್ನೂ ಕೊರೊನಾದಿಂದ ಬಳಲುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಅತೀ …
Read More »ಹಿರಿಯ ರಾಜಕೀಯ ಮುತ್ಸದ್ಧಿ ದೇವೇಗೌಡರ ಹುಟ್ಟುಹಬ್ಬಕ್ಕೆ ಗಣ್ಯರಿಂದ ಶುಭಾಶಯ
ಬೆಂಗಳೂರು: ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು 88ನೇ ವಸಂತಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು “ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಆಯಸ್ಸು ಮತ್ತು ಆರೋಗ್ಯವನ್ನು ಕೊಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡುವ ಮೂಲಕ …
Read More »ಲಾಕ್ಡೌನ್ನಿಂದ ಹೆಚ್ಚಾದ ಆರ್ಥಿಕ ಸಮಸ್ಯೆ- ಬೆಂಕಿ ಹಚ್ಚಿಕೊಂಡು 26ರ ಗೃಹಿಣಿ ಆತ್ಮಹತ್ಯೆ
ಹೈದರಾಬಾದ್: ಕೊರೊನಾ ವೈರಸ್ ಎಂಬ ಮಹಾಮಾರಿ ಹರಡುವಿಕೆಯನ್ನು ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಹೇರಲಾಗಿತ್ತು. ಆದರೆ ಈ ಲಾಕ್ ಡೌನ್ ನಿಂದಾಗಿ ಸ್ವಲ್ಪ ಮಟ್ಟಿಗೆ ಪ್ರಯೋಜನವಾದರೆ ಇನ್ನೂ ಕೆಲವರ ಬದುಕಿನಲ್ಲಿ ಕತ್ತಲು ಕವಿದಂತಾಗಿದೆ. ಹಾಗೆಯೇ ಆರ್ಥಿಕ ಸಮಸ್ಯೆಯನ್ನು ಎದುರಿಸಲಾಗಿದೆ 26 ವರ್ಷದ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಈ ಘಟನೆ ಹೈದರಾಬಾದ್ ನ ಪರಿಗಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಆರ್ಥಿಕವಾಗಿ ಸರಳ ಕುಟುಂಬ ಹಿಂದುಳಿದಿತ್ತು. ಇದೀಗ …
Read More »ಹೆರಿಗೆಗೆ 3 ದಿನ ಟೈಮ್ ಕೊಟ್ಟಿದ್ದಾರೆ ಸರ್, ನಾನು ಊರಿಗೆ ಹೋಗ್ಲೇಬೇಕು- ಮೆಜೆಸ್ಟಿಕ್ನಲ್ಲಿ ಪ್ರಯಾಣಿಕರ ದಂಡು
ಬೆಂಗಳೂರು: ಇಂದಿನಿಂದ ಬಸ್ ಸಂಚಾರ ಆರಂಭವಾಗುತ್ತೆ ಅಂತ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ನೂರಾರು ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಎರಡು ದಿನಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ಬಸ್ ಸೇವೆ ಪುನಾರಂಭ ಮುಂದೂಡಿಕೆಯಾಗಿದೆ. ಇಂದಿನಿಂದ ಬಸ್ ಸಂಚಾರ ಆರಂಭವಾಗುತ್ತೆ ಅಂತ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ನೂರಾರು ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಸರ್.. ನಮ್ಮೂರಿಗೆ ಬಸ್ ಎಲ್ಲಿ ಬರುತ್ತೆ, ನಮ್ ಏರಿಯಾಗೆ ಯಾವ ಫ್ಲಾಟ್ ಫಾರಂಗೆ ಬಸ್ ಬರುತ್ತೆ …
Read More »ಶಾಲೆಯಲ್ಲಿ ಕ್ವಾರಂಟೈನ್ ಮಾಡದಂತೆ ತಡರಾತ್ರಿ ದಿಢೀರ್ ಪ್ರತಿಭಟನೆ………..
ಯಾದಗಿರಿ: ವಲಸೆ ಕಾರ್ಮಿಕರನ್ನು ಶಾಲೆಯಲ್ಲಿ ಕ್ವಾರಂಟೈನ್ ಮಾಡದಂತೆ ವಿರೋಧಿಸಿ ದಿಢೀರ್ ಪ್ರತಿಭಟನೆ ನಡೆಸಿದ ಸ್ಥಳೀಯರನ್ನು ಪೊಲೀಸರು ಬಲವಂತವಾಗಿ ಚದುರಿಸಿದ ಘಟನೆ ತಡರಾತ್ರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ತಡರಾತ್ರಿ ಮಹಿಳೆಯರು ಮತ್ತು ಸ್ಥಳೀಯರಿಂದ ಈ ಪ್ರತಿಭಟನೆ ನಡೆದಿದೆ. ಪಟ್ಟಣದ ಪೋಸ್ಟ್ ಆಫೀಸ್ ಪಕ್ಕ ಸ.ಹಿ.ಪ್ರಾ ಶಾಲೆಯಲ್ಲಿ ವಲಸೆ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ನಿರ್ಧಾರಿಸಿದೆ. ಆದರೆ ಶಾಲೆಯ ಅಕ್ಕಪಕ್ಕದಲ್ಲಿ ಹೆಚ್ಚು ಜನವಸತಿ ಇರುವ ಹಿನ್ನೆಲೆ ಮತ್ತು ಕೆಲವೊಂದು ಮನೆಗಳು ಶಾಲೆಯ …
Read More »ರೈತ ಮುಖಂಡನ ಸರಳ ವಿವಾಹ – ಜೋಡಿಯಿಂದ ಮದ್ವೆ ಖರ್ಚಿನ ಹಣ ದೇಣಿಗೆ
ಚಾಮರಾಜನಗರ: ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಅನೇಕರು ತುಂಬಾ ಸರಳವಾಗಿ ಮದುವೆಯಾಗುತ್ತಿದ್ದಾರೆ. ಇದೀಗ ರೈತ ಮುಖಂಡ ಕೊರೊನಾ ಲಾಕ್ಡೌನ್ನಿಂದಾಗಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಡಬೂರು ನಿವಾಸಿ ಮಂಜು ಅದೇ ಗ್ರಾಮದ ಮಾದಲಾಂಬಿಕೆ ವಧುವಿನ ಜೊತೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಷ್ಟೇ ಅಲ್ಲದೇ ವರ ಮಂಜು ತಮ್ಮ ಮದುವೆಗೆಂದು ಕೂಡಿಟ್ಟಿದ್ದ ಹಣವನ್ನು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವರ …
Read More »ಗ್ರೀನ್ ಝೋನ್ ನಲ್ಲಿದ್ದ ರಾಯಚೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರೋರಾತ್ರಿ ನಿಷೇಧಾಜ್ಞೆ ಜಾರಿ
ರಾಯಚೂರು: ಗ್ರೀನ್ ಝೋನ್ ನಲ್ಲಿದ್ದ ರಾಯಚೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರೋರಾತ್ರಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೇ 31ರವರೆಗೆ ನಿಷೇಧಾಜ್ಞೆ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಸಂಜೆ 7 ರಿಂದ ಬೆಳಗ್ಗೆ 7ರವರೆಗೆ ಜನರು ಓಡಾಡದಂತೆ ಎಚ್ಚರಿಕೆ ನೀಡಲಾಗಿದೆ. ಂಮಹಾರಾಷ್ಟ್ರದ ಮುಂಬೈ ನಂಟಿನಿಂದ ರಾಯಚೂರಿನಲ್ಲಿ ಆತಂಕ ಸೃಷ್ಟಿಯಾಗಿದೆ. ಮುಂಬೈನಿಂದ ಬಂದ 6 ಮಂದಿಯಲ್ಲಿ ಕೊರೊನಾ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮಧ್ಯಾಹ್ನ …
Read More »ಕೊರೊನಾ ವಿಶೇಷ ಪ್ಯಾಕೇಜ್ ಕನ್ನಡಿಯೊಳಗಿನ ಗಂಟು: ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಆತ್ಮನಿರ್ಭರಭಾರತ ಯೋಜನೆಯಡಿಯಲ್ಲಿ ಘೋಷಿಸಿರುವ ಕೊರೊನಾ ವಿಶೇಷ ಪ್ಯಾಕೇಜ್ ಕನ್ನಡಿಯೊಳಗಿನ ಗಂಟು ಆಗಿದ್ದು, ಹಳೆ ಸರಕಿಗೆ ಹೊಸ ಹೊದಿಕೆ ಹೊದಿಸಿದಂತಾಗಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. 20 ಲಕ್ಷ ಕೋಟಿ ರೂ. ಪ್ಯಾಕೇಜ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದು ಕಂತುಗಳಾಗಿ ಹಂಚಿದರು. ಈ ಕುರಿತು ಸಹ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು ತಮ್ಮದೇ ಲೆಕ್ಕಾಚಾರವನ್ನು ಜನರ ಮುಂದಿಟ್ಟಿದ್ದಾರೆ. 20 …
Read More »ಹುಬ್ಬಳ್ಳಿಯ ಪಾರ್ಲೆ ಬಿಸ್ಕೆಟ್ ಕಂಪನಿ 53 ಸಾವಿರ ಬಿಸ್ಕೆಟ್ ಪೊಟ್ಟಣಗಳನ್ನು ದಾನವಾಗಿ ನೀಡಿದೆ.
ಹುಬ್ಬಳ್ಳಿ: ಕೊರೊನಾ ವೈರಸ್ ಹಿನ್ನೆಲೆ ಹಲವು ಕಂಪನಿಗಳು ಹಾಗೂ ಧನಿಕರು ಹಲವು ರೀತಿಯಲ್ಲಿ ಸಹಾಯ ಮಾಡುತ್ತಿದ್ದು, ಹುಬ್ಬಳ್ಳಿಯ ಪಾರ್ಲೆ ಬಿಸ್ಕೆಟ್ ಕಂಪನಿ 53 ಸಾವಿರ ಬಿಸ್ಕೆಟ್ ಪೊಟ್ಟಣಗಳನ್ನು ದಾನವಾಗಿ ನೀಡಿದೆ. ಹುಬ್ಬಳ್ಳಿಯ ಗೋಕುಲ ಕೈಗಾರಿಕಾ ಪ್ರದೇಶದಲ್ಲಿರುವ ತಯಾರಿಕಾ ಘಟಕದಲ್ಲಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಕಂಪನಿ ವತಿಯಿಂದ ಸಾಂಕೇತಿಕವಾಗಿ ಬಿಸ್ಕೆಟ್ ಪೊಟ್ಟಣ ನೀಡಲಾಯಿತು. ಒಟ್ಟು 53 ಸಾವಿರ …
Read More »ಬಸ್ ಸಂಚಾರ ಪುನರಾರಂಭಕ್ಕೆ ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ.
ಹುಬ್ಬಳ್ಳಿ: ಬಸ್ ಸಂಚಾರ ಪುನರಾರಂಭಕ್ಕೆ ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ. ಬಸ್ ಸಂಚಾರ ಪುನರಾರಂಭಿಸಲು ರಾಜ್ಯ ಸರ್ಕಾರದಿಂದ ನಿರ್ದೇಶನಗಳು ಬಂದ ನಂತರ ಮಾರ್ಗದರ್ಶಿ ಸೂಚನೆಗಳ ಪ್ರಕಾರ ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳನ್ನು ರಸ್ತೆ ಗಿಳಿಸಲು ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿಭಾಗದಲ್ಲಿ 2166 ಸಿಬ್ಬಂದಿಗಳಿದ್ದು ಎಲ್ಲರಿಗೂ ಕರ್ತವ್ಯಕ್ಕೆ ಸಿದ್ಧರಾಗಿರುವಂತೆ ಸೂಚಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ್ ತಿಳಿಸಿದ್ದಾರೆ. ಈಗಾಗಲೇ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ, …
Read More »