Breaking News

388ಕ್ಕೆ ಏರಿದ ಸೋಂಕಿತರ ಸಂಖ್ಯೆ – ಮೈಸೂರಿನಲ್ಲಿ ನಾಲ್ವರಿಗೆ ಕೊರೊನಾ

ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇವತ್ತು ನಾಲ್ವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ 388ಕ್ಕೆ ಏರಿಕೆ ಕಂಡಿದೆ. ಬೆಳಗ್ಗೆ ಒಟ್ಟು ನಾಲ್ವರಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ದೆಹಲಿಗೆ ತಬ್ಲಿಘಿ ಜಮಾತ್‍ಗೆ ಹೋಗಿದ್ದ ಮೈಸೂರಿನ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಇನ್ನೂ ನಂಜನಗೂಡಿನ ಇಬ್ಬರಲ್ಲಿ ಸೋಂಕು ಇರುವುದು ದೃಢವಾಗಿದೆ. ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 4 #COVID19 …

Read More »

ಯಾದಗಿರಿ/ಹಾವೇರಿ:ರಾತ್ರಿ ಸುರಿದ ಮಳೆಗೆ ಭತ್ತದ ಬೆಳೆ ಮಣ್ಣುಪಾಲಾಗಿದೆ.

ಯಾದಗಿರಿ/ಹಾವೇರಿ: ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಯಾದಗಿರಿ ಹಾಗೂ ಹಾವೇರಿ ಜಿಲ್ಲೆಯ ರೈತರು ಅಕ್ಷರಶಃ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಯಾದಗಿರಿಯಲ್ಲಿ ರಾತ್ರಿ ಸುರಿದ ಮಳೆಗೆ ಭತ್ತದ ಬೆಳೆ ಮಣ್ಣುಪಾಲಾಗಿದೆ. ಜಿಲ್ಲೆಯ ಅಬ್ಬೆತುಮಕೂರ, ಹೆಡಗಿಮುದ್ರಾ, ಠಾಣಾಗುಂದಿ, ನಾಯ್ಕಲ್, ಮನಗನಾಳ, ಅನಕಸೂಗುರ, ಐಕೂರ ಮೊದಲಾದ ಕಡೆ ಭತ್ತದ ಬೆಳೆ ಹಾಗೂ ಸಜ್ಜೆ ಬೆಳೆ ನೆಲ ಕಚ್ಚಿದೆ. ಏಪ್ರಿಲ್ 7ರಂದು ಸುರಿದ ಬಿರುಗಾಳಿ ಸಹಿತ ಮಳೆಗೆ ಕೂಡ ಬೆಳೆ ಹಾನಿಯಾಗಿತ್ತು. ಈಗ ಮತ್ತೆ …

Read More »

ರಾಜ್ಯದ ವಿವಿಧೆಡೆ ಗುಡುಗು , ಭಾರೀ ಮಳೆ, ನಿವೃತ್ತ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.

ಬೆಂಗಳೂರು: ರಾಜ್ಯದ ಹಲವೆಡೆ ಸಿಡಿಲು, ಗುಡುಗು ಸಹಿತ ಮಳೆ ಸುರಿದಿದ್ದು, ಸಿಡಿಲಿನ ಹೊಡೆತಕ್ಕೆ ನಿವೃತ್ತ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ನಿವೃತ್ತ ಯೋಧ ಚನ್ನಬಸಪ್ಪ ರುದ್ರಪ್ಪ ಚಾಜಗೌಡ (50) ಮೃತರಾಗಿದ್ದಾರೆ. ಸಂಜೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಈ ವೇಳೆ ಸಿಡಿಲು ಬಡಿದು ಚನ್ನಬಸಪ್ಪ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಚನ್ನಬಸಪ್ಪ ಅವರು ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಸುತ್ತಿದ್ದರು. ಕೆಲಸದಿಂದ ನಿವೃತ್ತಿ …

Read More »

ನೀನು ನನಗೆ ವೋಟ್ ಹಾಕಲ್ಲ, ನಾನ್ಯಾಕೆ ನಿಂಗ ರೇಷನ್ ಕಿಟ್ ಕೊಡಬೇಕು?ವಿಧವೆಯ ಮೇಲೆ ಹಲ್ಲೆ

ಬಳ್ಳಾರಿ: ರೇಷನ್ ಕಿಟ್ ಕೇಳಿದ್ದಕ್ಕೆ ವಿಧವೆಯೊಬ್ಬರಿಗೆ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ತಾಲೂಕಿನ ಬೆಳಗಲ್ಲು ತಾಂಡಾದ ಮೋತಿ ಬಾಯಿ (38) ಹಲ್ಲೆಗೆ ಒಳಗಾದ ವಿಧವೆ. ಬೆಳಗಲ್ಲು ತಾಂಡಾದ ನಿವಾಸಿಗಳಾದ ಲೇಬರ್ ಕಂಟ್ರಾಕ್ಟರ್ ರಾಮುನಾಯ್ಕ, ಲಾರಿ ಮಾಲೀಕರಾದ ಬಾಬು ನಾಯ್ಕ, ವೆಂಕಟೇಶ ನಾಯ್ಕ, ಲಕ್ಷ್ಮಣ ನಾಯ್ಕ ಹಾಗೂ ತೇಜು ನಾಯ್ಕ ಹಲ್ಲೆಗೈದವರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಬಡ ಜನರಿಗೆ ಬೆಳಗಲ್ಲು ತಾಂಡಾ ಸಮೀಪ ಕಾರ್ಖಾನೆಗಳು ರೇಷನ್ ಕಿಟ್ …

Read More »

ಕುಟುಂಬದ 26 ಮಂದಿಗೆ ಕೊರೊನಾ ಸೋಂಕು

ನವದೆಹಲಿ: ಇಡೀ ದೇಶ ಲಾಕ್‍ಡೌನ್ ಆಗಿದೆ. ಕೆಲವು ಕಡೆ ಸೀಲ್‍ಡೌನ್ ಕೂಡ ಮಾಡಿದೆ. ಸರ್ಕಾರ ಮನೆಯಿಂದ ಆಚೆ ಬರಬೇಡಿ ಅಂತ ಸಾರಿ ಸಾರಿ ಹೇಳುತ್ತಿದೆ. ಆದರೆ ಜನರು ಮಾತ್ರ ಸರ್ಕಾರದ ಮಾತು ಕೇಳುತ್ತಿಲ್ಲ. ಇದೀಗ ರೆಡ್ ಝೋನ್‍ನಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡಿದ ಇಡೀ ಕುಟುಂಬವೊಂದಕ್ಕೆ ಕೊರೊನಾ ಸಂಕಷ್ಟ ಎದುರಾಗಿದೆ. ದೆಹಲಿಯ ರೆಡ್ ಝೊನ್ ಪ್ರದೇಶವಾಗಿರುವ ಜಹಾಂಗೀರ್ ಪುರಿಯಲ್ಲಿ ಒಂದೇ ಕುಟುಂಬದ 26 ಜನರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ರೆಡ್ …

Read More »

ರಾಜ್ಯ ಸರ್ಕಾರ ಜನರ ಜೀವದ ಜೊತೆ ಆಟವಾಡುತ್ತಿದೆಯಾ? ಸರ್ಕಾರವೇ ಕೊರೊನಾ ಸೋಂಕು ಹರಡಿಸುತ್ತಿದೆಯಾ?

ಬೆಂಗಳೂರು: ರಾಜ್ಯ ಸರ್ಕಾರ ಜನರ ಜೀವದ ಜೊತೆ ಆಟವಾಡುತ್ತಿದೆಯಾ? ಸರ್ಕಾರವೇ ಕೊರೊನಾ ಸೋಂಕು ಹರಡಿಸುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಹೌದು, ಸರ್ಕಾರ ನೀಡುತ್ತಿರುವ ಉಚಿತ ಹಾಲು ಪಡೆಯಲು ಜನರು ಕಿಲೋ ಮೀಟರ್ ಗಟ್ಟಲೇ ಕ್ಯೂ ನಿಲ್ಲುತ್ತಿದ್ದಾರೆ. ಕೆಲವೊಮ್ಮೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದ ಪ್ರಸಂಗಗಳನ್ನು ವರದಿಯಾಗಿವೆ. ಇಂತಹದ್ದೇ ಪ್ರಸಂಗ ಇಂದು ಮಲ್ಲೇಶ್ವರಂನ ದತ್ತಾತ್ರೇಯ ವಾರ್ಡ್ ನಲ್ಲಿ ನಡೆದಿದೆ. ಮಲ್ಲೇಶ್ವರಂನ ದತ್ತಾತ್ರೇಯ ವಾರ್ಡ್‍ನಲ್ಲಿ ಬೆಳಗ್ಗೆ 7 ಗಂಟೆಗೆ ಉಚಿತ ಹಾಲು ವಿತರಣೆ ಮಾಡಲಾಗುತ್ತದೆ. …

Read More »

5 ಕೋಟಿ ಕೊಟ್ಟು 50 ಕೋಟಿ ತಂದರು,ಬಡಜನರಿಗೆ ದೊಡ್ಡ ಪ್ರಮಾಣದ ನೆರವನ್ನು ಸರಕಾರದಿಂದ ಪಡೆದಿದ್ದಾರೆ.:ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. ಯಾವುದೇ ಪಕ್ಷವಿರಲಿ ಸರಕಾರದ ಸ್ಥಿರತೆ ಮತ್ತು ಅಸ್ಥಿರತೆ ಎರಡರಲ್ಲೂ ಜಿಲ್ಲೆಯ ಪಾತ್ರ ಪ್ರಾಮುಖ್ಯತೆ ವಹಿಸುತ್ತದೆ. ಜಿಲ್ಲೆಯಲ್ಲಿ ಸಾಹುಕಾರರೆಂದು ಕರೆಸಿಕೊಳ್ಳುವ  3 ಮನೆತನಗಳು ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ನಿರಂತರ ಸುದ್ದಿ ಮಾಡುತ್ತಿವೆ. ಒಬ್ಬರು ಒಂದು ಸರಕಾರ ಬೀಳಿಸಿ ಮತ್ತೊಂದು ಸರಕಾರ ತಂದು ನಿಲ್ಲಿಸಿದರೆ, ಮತ್ತೊಬ್ಬರು ಹಿರಿಯರಾಗಿಯೂ ಸಚಿವಸ್ಥಾನ ಸಿಗದೆ ಸರಕಾರವನ್ನು ಸದಾ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ್ದಾರೆ. ಇನ್ನೊಬ್ಬರು ಚುನಾವಣೆಯಲ್ಲಿ ಸೋತು ಹೋಗಿದ್ದರೂ ಉಪಮುಖ್ಯಮಂತ್ರಿ …

Read More »

ಕರ್ನಾಟಕಕ್ಕೆ Be Careful ಎಂದ ಕೇಂದ್ರ ಆರೋಗ್ಯ ಇಲಾಖೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಇತ್ತ ಸಾವಿನ ಸಂಖ್ಯೆಯೂ ದಿನಕಳೆದಂತೆ ಹೆಚ್ಚಾಗುತ್ತಿದೆ. ಹೀಗಾಗಿ ಕೇಂದ್ರ ಆರೋಗ್ಯ ಇಲಾಖೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕಿ ಎಂದು ಕರ್ನಾಟಕಕ್ಕೆ ಎಚ್ಚರಿಕೆ ನೀಡಿದೆ. ಕೇರಳದಲ್ಲಿ ಕೊರೊನಾ ವೈರಸ್‍ನಿಂದ ಮೂವರು ಮೃತಪಟ್ಟಿದ್ದಾರೆ. ಆದರೆ ಕರ್ನಾಟಕದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಕೇರಳಕ್ಕಿಂತ ಕರ್ನಾಟಕದಲ್ಲಿ ಕೊರೊನಾ ಕಡಿಮೆ ಇದ್ದರೂ ಸಾವಿನ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಕರ್ನಾಟಕಕ್ಕೆ ಕೇಂದ್ರ ಆರೋಗ್ಯ …

Read More »

ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡಿ, ಕದ್ದುಮುಚ್ಚಿ ಮದ್ಯ ಮಾರಾಟ ಮಾಡಿದ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿ: ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡಿ, ಕದ್ದುಮುಚ್ಚಿ ಮದ್ಯ ಮಾರಾಟ ಮಾಡಿದ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮುಖಂಡ ಡಿ.ರಾಘವೇಂದ್ರನನ್ನು ಅಕ್ರಮವಾಗಿ ಮದ್ಯ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಇಡೀ ದೇಶವೇ ಕೊರೊನಾ ಭೀತಿಯಿಂದ ಲಾಕ್‍ಡೌನ್ ಆಗಿದೆ. ಆದರೂ ಬಿಜೆಪಿ ಮುಖಂಡನ ಮಾಲೀಕತ್ವದ ಮದ್ಯದಂಗಡಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಇರುವ ಮದ್ಯದಂಗಡಿಯ …

Read More »

ಕೇರಳದಲ್ಲಿ ನಾಳೆಯಿಂದ ಹೋಟೆಲ್, ಬಸ್ ಸಂಚಾರಕ್ಕೆ ಅನುಮತಿ

ಕೇರಳದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ – ಷರತ್ತುಗಳೊಂದಿಗೆ ಅನುಮತಿ ನೀಡಿದ ಕೇರಳ – ಕೆಂಪು ವಲಯದಲ್ಲಿ ಮೇ 3ರವರೆಗೆ ಲಾಕ್‍ಡೌನ್ ಮುಂದುವರಿಕೆ ತಿರುವನಂತಪುರಂ: ಮಹತ್ವದ ನಿರ್ಧಾರವೊಂದರಲ್ಲಿ ಕೇರಳ ಸರ್ಕಾರ ರಾಜ್ಯದಲ್ಲಿ ಹೋಟೆಲ್, ರೆಸ್ಟೋರೆಂಟ್‍ಗಳ ಓಪನ್‍ಗೆ ಅನುಮತಿ ನೀಡುವುದರ ಜೊತೆಗೆ ಬಸ್‍ಗಳ ಓಡಾಟಕ್ಕೂ ಲಾಕ್‍ಡೌನ್‍ನಿಂದ ವಿನಾಯಿತಿ ನೀಡಿದೆ. ಈ ಮೂಲಕ ನಾಳೆಯಿಂದ ಕೇರಳದ 14 ಜಿಲ್ಲೆಗಳಲ್ಲಿ ಜನ ಜೀವನ ಸಹಜ ಸ್ಥಿತಿಗೆ ಬರಲಿದೆ. 21 ದಿನಗಳ ಲಾಕ್‍ಡೌನ್ ಬಳಿಕ ವಿನಾಯ್ತಿ …

Read More »