ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ಬೆಳಗಾವಿಯಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಚೆನ್ನಾಗಿ ಸರ್ಕಾರ ನಡೆಸುತ್ತಿದ್ದಾರೆ. ಹಾಗಾಗಿ, ಅವರ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಗ್ಯಾರಂಟಿ ಸೇರಿದಂತೆ ಒಳ್ಳೆಯ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ಮುಂದೆ ಬಜೆಟ್ ಇದೆ, ಒಳ್ಳೆಯ ಬಜೆಟ್ ಅನ್ನು ಮುಖ್ಯಮಂತ್ರಿಗಳು ನೀಡಲಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, …
Read More »ಟಿಟಿಡಿ ಮಾದರಿಯಲ್ಲಿ ಯಲ್ಲಮ್ಮನ ಗುಡ್ಡ ಅಭಿವೃದ್ಧಿ : ಸಚಿವ ಹೆಚ್ ಕೆ ಪಾಟೀಲ
ಬೆಳಗಾವಿ: ಈ ಬಾರಿ ಭರತ ಹುಣ್ಣಿಮೆ ವೇಳೆ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಜಿಲ್ಲಾಡಳಿತದ ವತಿಯಿಂದ ಜನಸಂದಣಿ ನಿರ್ವಹಣೆಗೆ ಪಾರ್ಕಿಂಗ್, ಶೌಚಾಲಯ, ಎಲ್.ಇ.ಡಿ. ಸ್ಕ್ರೀನ್ ಅಳವಡಿಕೆ ಸೇರಿದಂತೆ ಸಕಲ ವ್ಯವಸ್ಥೆ ಕೈಗೊಳ್ಳಲಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಚಿವ ಹೆಚ್. ಕೆ. ಪಾಟೀಲ ಹೇಳಿದರು. ದಾಸೋಹ ಭವನಕ್ಕೆ ಒಂದು ತಿಂಗಳಲ್ಲಿ ಶಂಕುಸ್ಥಾಪನೆ; ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ದಾಸೋಹ ಭವನ ಮತ್ತು ಮೇವು ದಾಸೋಹ ಭವನ ನಿರ್ಮಾಣಕ್ಕೆ ಒಂದು ತಿಂಗಳಿನಲ್ಲಿ …
Read More »ಶ್ರೀರಾಮುಲುಗೂ ವಿಜಯೇಂದ್ರ ಮುಂದುವರಿಯುವುದು ಬೇಕಿಲ್ಲ, ಅದನ್ನು ಚಾಣಾಕ್ಷತೆಯಿಂದ ಹೇಳುತ್ತಾರೆ!
ಕೋಲಾರ: ಹಿರಿಯ ಬಿಜೆಪಿ ನಾಯಕ ಬಿ ಶ್ರೀರಾಮುಲು ಅವರಿಗೂ ಬಿವೈ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷನಾಗಿ ಮುಂದುವರಿಯುವುದು ಬೇಕಿಲ್ಲ, ಅದರೆ ಅದನ್ನು ಅವರು ಹೇಳುವ ರೀತಿ ಬೇರೆಯಾಗಿದೆ. ದೆಹಲಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ತನ್ನ ಹೆಸರು ಉಲ್ಲೇಖಿಸಿರುವುದಕ್ಕೆ ಹಿಗ್ಗಿರುವ ಅವರು ಯಡಿಯೂರಪ್ಪರನ್ನು ದಕ್ಷಿಣ ಭಾರತದ ಭೀಷ್ಮ ಮತ್ತು ತನ್ನ ತಂದೆಯ ಸಮಾನ ಹಾಗೂ ವಿಜಯೇಂದ್ರರನ್ನು ತಮ್ಮ ಕಿರಿಯ ಸಹೋದರ ಎನ್ನುತ್ತ ತಾವು ಯಡಿಯೂರಪ್ಪ ಕುಟುಂಬದ ಒಂದು ಭಾಗ ಎನ್ನುತ್ತಾರೆ. ಹಿಂದೆ ಯಡಿಯೂರಪ್ಪ ತಮ್ಮ …
Read More »ಎಂಆರ್ಪಿ ಬಾರ್ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ
ಚಾಮರಾಜನಗರ, ಫೆಬ್ರವರಿ 05: ಎಂಆರ್ಪಿ ಬಾರ್ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ ಮಾಡಿದ್ದಾರೆ. ಜಿಲ್ಲೆಯ ಯಳಂದೂರು ತಾಲೂಕಿನ ಯಳಂದೂರು ಪಟ್ಟಣದ ಶ್ರೀರಂಗ ವೈನ್ಸ್ ಮುಂದೆ ನಿನ್ನೆ ರಾತ್ರಿ ಹೈಡ್ರಾಮಾವೇ ನಡೆದಿದೆ. MRP ಬೋರ್ಡ್ ಹಾಕಿಕೊಂಡು ಮದ್ಯಪ್ರಿಯರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡಲಾಗುತಿತ್ತು. ಹೀಗಾಗಿ ಕೈಯಲ್ಲಿ ಬಾಟಲಿ ಹಾಗೂ ಬಿಲ್ ಹಿಡಿದು ವೈನ್ಸ್ ಸ್ಟೋರ್ ಮಾಲೀಕರಿಗೆ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ನೋಡಿ.
Read More »ಥಿನ್ನರ್ ಸೇವಿಸಿ ಬಾಲಕ ಸಾವು
ರಾಯಚೂರು, ಫೆಬ್ರವರಿ 05: ಪೇಂಟ್ನಲ್ಲಿ ಬಳಸುವ ಥಿನ್ನರ್ ಸೇವಿಸಿ ಬಾಲಕ (Child) ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಹಿರೆಕೊಟ್ನೇಕಲ್ನಲ್ಲಿ ನಡೆದಿದೆ. ರಮೇಶ್ ನಾಯಕ್ ಪುತ್ರ ಶಿವಾರ್ಜುನ ನಾಯಕ್(3) ಮೃತ ಬಾಲಕ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಜಾತ್ರೆ ಸಂಭ್ರಮದಲ್ಲಿದ್ದ ಕುಟುಂಬದಲ್ಲಿದೀಗ ಸೂತಕದ ಛಾಯೆ ಆವರಿಸಿದೆ. ಗ್ರಾಮದಲ್ಲಿ ಜಾತ್ರೆ ಹಿನ್ನೆಲೆ ಮನೆಗೆ ಪೇಂಟಿಂಗ್ ಮಾಡಲಾಗುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಬಾಲಕ ಶಿವಾರ್ಜುನ ಥಿನ್ನರ್ ಸೇವಿಸಿದ್ದಾನೆ. ಈ ವೇಳೆ ಶಿವಾರ್ಜುನ ಅಸ್ವಸ್ಥಗೊಂಡಿದ್ದಾನೆ. ಕೂಡಲೇ …
Read More »ಸರ್ಕಾರಿ ಕೆಲ್ಸದಾಸೆಗೆ ಗಂಡನನ್ನೇ ಕೊಂದಳಾ ಪತ್ನಿ? 4 ತಿಂಗ್ಳು ಬಳಿಕ ಸಮಾಧಿಯಿಂದ ಕಳೆಬರಹ ಹೊರಕ್ಕೆ
ಚಿತ್ರದುರ್ಗ, (ಫೆಬ್ರವರಿ 04): ವಿಚಿತ್ರ. ನಂಬುವುದಕ್ಕೆ ಕಷ್ಟ ಅನಿಸಿದರೂ ನೀವು ನಂಬಲೇಬೇಕು. ಸರ್ಕಾರಿ ಕೆಲಸದ ಆಸೆಗೆ ಪತ್ನಿಯೇ ಗಂಡನನ್ನ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಘಟನೆ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ನಡೆದಿದೆ. ಈತನ ಹೆಸರು ಸುರೇಶ್. ಚಿತ್ರದುರ್ಗದ ನೆಹರು ನಗರ ನಿವಾಸಿ. ಈತನ ತಂದೆ ಸರ್ಕಾರಿ ಕೆಲಸದಲ್ಲಿದ್ದ. ತಂದೆ ಸಾವಿನ ಬಳಿಕ ಅನುಕಂಪದ ಆಧಾರದಲ್ಲಿ ಸುರೇಶ್ಗೆ ತಂದೆಯ ಕೆಲಸ ಒಲಿದು ಬಂದಿತ್ತು. ಮಗ ನನ್ನ ಚೆನ್ನಾಗಿ ನೋಡಿಕೊಳ್ಳುತ್ತಾನೆಂದು ತಾಯಿ ಆಸೆಯಿಂದ …
Read More »ಬಳ್ಳಾರಿ: ಪ್ರೀತಿಸಿದ್ದಕ್ಕೆ ಯುವಕನ ಕೊಲೆ; ಯುವತಿಯ ತಂದೆ, ಅಣ್ಣನ ಬಂಧನ
ಬಳ್ಳಾರಿ: ಮಗಳನ್ನು ಪ್ರೀತಿಸದಂತೆ ಹಲವು ಬಾರಿ ಎಚ್ಚರಿಕೆ ನೀಡಿದರೂ ಪ್ರೀತಿಸುತ್ತಿದ್ದ ಯುವಕನನ್ನು ಹುಡುಗಿಯ ತಂದೆ ಹಾಗೂ ಅಣ್ಣ ಸೇರಿ ಕೊಲೆಗೈದ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಇದೀಗ ಪ್ರಕರಣದ ಆರೋಪಿಗಳಾದ ಡಿ.ಮಲ್ಲಯ್ಯ (45) ಹಾಗೂ ಸುರೇಶ್ (21) ಎಂಬಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಗೌಡ (22) ಕೊಲೆಯಾಗಿದ್ದರು. ಎಸ್ಪಿ ಡಾ.ಶೋಭಾರಾಣಿ ಮಾತನಾಡಿ, “ಜ.7ರಂದು ಹಗರಿ ಬಳಿ ನದಿಯ ದಡದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. …
Read More »ಬಳ್ಳಾರಿ: ಪ್ರೀತಿಸಿದ್ದಕ್ಕೆ ಯುವಕನ ಕೊಲೆ; ಯುವತಿಯ ತಂದೆ, ಅಣ್ಣನ ಬಂಧನ
ಬಳ್ಳಾರಿ: ಮಗಳನ್ನು ಪ್ರೀತಿಸದಂತೆ ಹಲವು ಬಾರಿ ಎಚ್ಚರಿಕೆ ನೀಡಿದರೂ ಪ್ರೀತಿಸುತ್ತಿದ್ದ ಯುವಕನನ್ನು ಹುಡುಗಿಯ ತಂದೆ ಹಾಗೂ ಅಣ್ಣ ಸೇರಿ ಕೊಲೆಗೈದ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಇದೀಗ ಪ್ರಕರಣದ ಆರೋಪಿಗಳಾದ ಡಿ.ಮಲ್ಲಯ್ಯ (45) ಹಾಗೂ ಸುರೇಶ್ (21) ಎಂಬಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಗೌಡ (22) ಕೊಲೆಯಾಗಿದ್ದರು. ಎಸ್ಪಿ ಡಾ.ಶೋಭಾರಾಣಿ ಮಾತನಾಡಿ, “ಜ.7ರಂದು ಹಗರಿ ಬಳಿ ನದಿಯ ದಡದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. …
Read More »ಡಿಕೆಶಿ-ಸಿದ್ದರಾಮಯ್ಯ ಬಣಗಳ ಮುಖಂಡರ ನಡುವೆ ಪರಸ್ಪರ ವಾಕ್ಸಮರ
ತುಮಕೂರು: ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಡಿಕೆಶಿ ಬಣ vs ಸಿದ್ದರಾಮಯ್ಯ ಬಣಗಳ ನಡುವಿನ ಜಟಾಪಟಿ ಜೋರಾಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿದ್ದ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಸಿದ್ದರಾಮಯ್ಯ ಬಣದ ಸಚಿವ ರಾಜಣ್ಣ, ಜಿ.ಪರಮೇಶ್ವರ್ ವಿರುದ್ದ ವಾಗ್ದಾಳಿ ನಡೆಸಿದ್ದರು. ತುಮಕೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ ಶ್ರೀನಿವಾಸ್ ಪತ್ನಿ ಭಾರತಿ ಅವರಿಗೆ ಅಧ್ಯಕ್ಷ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಶ್ರೀನಿವಾಸ್, ಚುನಾವಣೆ ಗೆದ್ದ ಪ್ರತಿನಿಧಿಗಳನ್ನು ಬಿಟ್ಟು ನಾಮಿನಿ ಆದವರನ್ನು …
Read More »ಹುಬ್ಬಳ್ಳಿ ಮತ್ತು ವಾರಾಣಸಿ ನಿಲ್ದಾಣಗಳ ನಡುವೆ ಮೂರು ಟ್ರಿಪ್ ವಿಶೇಷ ರೈಲು ಸಂಚಾರ ಮಾಡಲಿದ್ದು, ಅದರ ಮಾಹಿತಿ ಇಲ್ಲಿದೆ.
ಹುಬ್ಬಳ್ಳಿ: ಕುಂಭಮೇಳದ ವೇಳೆ ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಇಲ್ಲಿನ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ (ಎಸ್ಎಸ್ಎಸ್) ಮತ್ತು ಉತ್ತರ ಪ್ರದೇಶದ ವಾರಾಣಸಿ ನಿಲ್ದಾಣಗಳ ನಡುವೆ 3 ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿವರಗಳು ಈ ಕೆಳಗಿನಂತಿವೆ: ಹುಬ್ಬಳ್ಳಿ – ವಾರಾಣಸಿ ನಿಲ್ದಾಣಗಳ ನಡುವೆ 3 ಟ್ರಿಪ್ ವಿಶೇಷ ರೈಲು (07383/84) ಸಂಚಾರ ರೈಲು ಸಂಖ್ಯೆ 07383 ಎಸ್ಎಸ್ಎಸ್ ಹುಬ್ಬಳ್ಳಿ – ವಾರಾಣಸಿ ವಿಶೇಷ …
Read More »
Laxmi News 24×7