ಬಳ್ಳಾರಿ: ಕಂಠಪೂರ್ತಿ ಮದ್ಯ ಕುಡಿದು ನಶೆಯಲ್ಲಿ ತೇಲಾಡುತ್ತಿದ್ದ ಕುಡುಕನೋರ್ವ ತನ್ನ ಮನೆಗೇ ಬೆಂಕಿ ಹಚ್ಚಿದ ಘಟನೆ ಬಳ್ಳಾರಿಯ ಕೊಳ್ಳೆಗಲ್ಲು ಗ್ರಾಮದ ಶ್ರೀರಾಮುಲು ನಗರದಲ್ಲಿ ನಡೆದಿದೆ. ಕೊಳಗಲ್ಲು ಗ್ರಾಮದ ನಿವಾಸಿ ಚಿದಾನಂದ ಕುಡಿದ ಮತ್ತಿನಲ್ಲಿ ತನ್ನ ಮನೆಗೆ ಬೆಂಕಿ ಹಚ್ಚಿದ್ದಾನೆ. ಅದೃಷ್ಟವಶಾತ್ ಕುಡುಕನ ಅವಾಂತರದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಾರ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಈ ಚಿದಾನಂದ ಶುಕ್ರವಾರ ತಡ ರಾತ್ರಿ ವಿಪರೀತ ಮದ್ಯಸೇವನೆ ಮಾಡಿದ್ದನು. ಮದ್ಯದ ಅಮಲಿನಲ್ಲಿದ್ದ ಚಿದಾನಂದ ತನ್ನ …
Read More »ಮದ್ಯ ಖರೀದಿ ಫುಲ್ ಡಲ್ – ಮದ್ಯದಂಗಡಿಗಳತ್ತ ಮುಖ ಮಾಡದ ಮದ್ಯಪ್ರಿಯರು
ಚಿಕ್ಕಬಳ್ಳಾಪುರ: ಲಾಕ್ಡೌನ್ ನಡುವೆ ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿದ್ದೆ ತಡ ಮದ್ಯಪ್ರಿಯರು ಸರದಿ ಸಾಲಿನಲ್ಲಿ ನಿಂತು ಮದ್ಯ ಖರೀದಿಗೆ ಮುಗಿಬಿದ್ದಿದ್ದರು. ಆದರೆ ಇದೀಗ ಮದ್ಯಪ್ರಿಯರು ಎಣ್ಣೆ ಅಂಗಡಿಯತ್ತ ಮುಖ ಮಾಡುತ್ತಿಲ್ಲ. ಇಷ್ಟು ದಿನ ಕೇವಲ ಎಂಎಸ್ಐಎಲ್ನಲ್ಲಿ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಇಂದಿನಿಂದ ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಆದರೆ ಇಷ್ಟು ದಿನ ಚಿಕ್ಕಬಳ್ಳಾಪುರದ ಮದ್ಯದಂಗಡಿಗಳ ಮುಂದೆ ಮದ್ಯಪ್ರಿಯರು ಕ್ಯೂ ಇರುತ್ತಿದ್ದರು. ಆದರೆ ಇಂದು …
Read More »ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿ – ಮಲೆನಾಡಿಗರನ್ನು ಆವರಿಸಿಕೊಂಡ ಕೊರೊನಾ ಭೀತಿ…
ಶಿವಮೊಗ್ಗ: ಗ್ರೀನ್ ಝೋನ್ನಲ್ಲಿದ್ದ ಚಿತ್ರದುರ್ಗ ಜಿಲ್ಲೆ ತಬ್ಲಿಘಿಗಳ ಎಂಟ್ರಿಯಿಂದ ರೆಡ್ ಝೋನ್ಗೆ ಬಂದಿದ್ದು, ಇದೇ ಹಾದಿಯಲ್ಲೀಗ ಶಿವಮೊಗ್ಗ ಇದೆ ಎನಿಸುತ್ತಿದೆ. ಯಾಕಂದ್ರೆ ಇದೀಗ ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿಯಾಗಿದ್ದು, ಮಲೆನಾಡಿಗರಲ್ಲಿ ಕೊರೊನಾ ಭೀತಿ ಹೆಚ್ಚಿಸಿದೆ. ಜಿಲ್ಲೆಯ ಶಿಕಾರಿಪುರ ಮೂಲದ 8 ಮತ್ತು ತೀರ್ಥಹಳ್ಳಿಯ ಒಬ್ಬರು ತಬ್ಲಿಘಿಗಳು ಗುಜರಾತ್ನ ಅಹಮದಾಬಾದ್ನಿಂದ ಬೆಳಗಾವಿ ಗಡಿ ಮೂಲಕ ಶಿವಮೊಗ್ಗಕ್ಕೆ ವಾಪಸ್ ಬಂದಿದ್ದು, ಇದು ಮಲೆನಾಡಿಗರಲ್ಲಿ ಭೀತಿ ಹೆಚ್ಚಿಸಿದೆ. ಮಾರ್ಚ್ 5ರಂದು ಗುಜರಾತ್ನ ಅಹಮದಾಬಾದ್ಗೆ ದಾವಣಗೆರೆಯಿಂದ ರೈಲಿನ …
Read More »ವಾಣಿ ವಿಲಾಸ್ ಆಸ್ಪತ್ರೆ ಸಿಬ್ಬಂದಿ ದಿಢೀರ್ ಪ್ರತಿಭಟನೆ, ಕಾರಣವೇನು ಗೊತ್ತೇ..
ಬೆಂಗಳೂರು, ಮೇ 9- ಪಿಪಿಇ ಕಿಟ್ ಇಲ್ಲ. ನಮಗೆ ಇಲ್ಲಿ ಯಾವ ಸೇಫ್ಟಿ ಇಲ್ಲ… ಕನಿಷ್ಠ ಸುರಕ್ಷಾ ಕ್ರಮಗಳಿಲ್ಲ. ಸೋಂಕಿತರನ್ನೆಲ್ಲಾ ಇಲ್ಲಿಗೆ ಸ್ಥಳಾಂತರ ಮಾಡಿದರೆ ನಾವು ಕೆಲಸ ಮಾಡುವುದು ಹೇಗೆ. ನಮಗೂ ಸೋಂಕು ತಗುಲುವ ಆತಂಕವಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ನಗರದ ವಾಣಿ ವಿಲಾಸ್ ಆಸ್ಪತ್ರೆ ಸಿಬ್ಬಂದಿ ಆಡಳಿತ ಮಂಡಳಿ ವಿರುದ್ಧ ದಿಢೀರ್ ಪ್ರತಿಭಟನೆ ನಡೆಸಿದರು. ವೈದ್ಯರು, ನರ್ಸ್ಗಳು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಬಹಳಷ್ಟು ಜನ ಆಸ್ಪತ್ರೆಯ ಮುಂದೆ ಜಮಾಯಿಸಿ …
Read More »ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಅಬಕಾರಿ ಇಲಾಖೆಯಲ್ಲಿ ಭಾರಿ ವರ್ಗಾವಣೆ
ಬೆಂಗಳೂರು, ಮೇ 9- ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಅಬಕಾರಿ ಇಲಾಖೆಯಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಇಲಾಖೆಯನ್ನು ಮರು ವಿನ್ಯಾಸಗೊಳಿಸಿ ಅಧಿಕಾರಿಗಳ ಸ್ಥಳ ನಿಯುಕ್ತಿ ಹಾಗೂ ವರ್ಗಾವಣೆ ಮಾಡಲಾಗಿದೆ. 11 ಮಂದಿ ಅಬಕಾರಿ ಉಪ ಆಯುಕ್ತರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಅದೇ ರೀತಿ 15 ಮಂದಿ ಅಬಕಾರಿ ಉಪ ಅಧೀಕ್ಷಕರಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಮೂರು ಮಂದಿ ಅಬಕಾರಿ ಅಧೀಕ್ಷಕರುಗಳನ್ನು ವರ್ಗಾವಣೆ ಮಾಡಲಾಗಿದೆ ಹಾಗೂ 14 ಮಂದಿ …
Read More »ಎದ್ದು ಬಿದ್ದು ಸ್ವಗ್ರಾಮಕ್ಕೆ ತೆರಳಿದ್ದ ಕಾರ್ಮಿಕರು ಅಷ್ಟೇ ವೇಗದಲ್ಲಿ ಬೆಂಗಳೂರಿಗೆ ವಾಪಾಸ್..!
ಬೆಂಗಳೂರು, ಮೇ 9- ದೇಶಾದ್ಯಂತ ಲಾಕ್ ಡೌನ್ ಸಡಿಲಿಸಿ ವಲಸೆ ಕಾರ್ಮಿಕರಿಗೆ ತಮ್ಮೂರಿಗೆ ಸೇರಿಕೊಳ್ಳಲು ಅವಕಾಶ ಮಾಡಿಕೊಟ್ಟ ಬೆನ್ನಲ್ಲೆ ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿರುವ ಚೆಕ್ ಪೋಸ್ಟ್ ಗಳಿಗೆ ಬರುತ್ತಿರುವ ವಾಹನಗಳ ಸಂಖ್ಯೆ 20 ಪಟ್ಟು ಹೆಚ್ಚಾಗಿದೆ. ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಮಧ್ಯ ಪ್ರದೇಶದಗಳಿಂದ ಸಾವಿರಾರು ವಾಹನಗಳು ಬರಲಾರಂಭಿಸಿವೆ. ಇಲ್ಲಿಂದ ಬೇರೆ ಹೋಗಿ ಕೆಲಸ ಮಾಡುತ್ತಿದ್ದವರು ವಾಪಸ್ ಬರುವುದು ಒಂದು ಕತೆಯಾದರೆ, ಇಲ್ಲಿದ್ದು ಮೇ 4ರ ನಂತರ ಸ್ವಂತ ಅಥವಾ ಬಾಡಿಗೆ …
Read More »ಬೆಂಗಳೂರು – ರಾಜ್ಯದಲ್ಲಿ ಇಂದು 36 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟೂ ಸೋಂಕಿತರ ಸಂಖ್ಯೆ 789ಕ್ಕೇ
ಬೆಂಗಳೂರು – ರಾಜ್ಯದಲ್ಲಿ ಇಂದು 36 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟೂ ಸೋಂಕಿತರ ಸಂಖ್ಯೆ 789ಕ್ಕೇರಿದೆ. ದಾವಣಗೆರೆ 6, ಬೆಂಗಳೂರು 12, ಭಟ್ಕಳದಲ್ಲಿ 10, ಬೀದರ್ ನಲ್ಲಿ 3, ಚಿತ್ರದಿರ್ಗದಲ್ಲಿ 3, ವಿಜಯಪುರ ಹಾಗೂ ತುಮಕೂರಿನಲ್ಲಿ ತಲಾ 1 ಸೋಂಕು ಪತ್ತೆಯಾಗಿದೆ. ಭಟ್ಕಳದಲ್ಲಿ ನಿನ್ನೆ 12 ಜನರಿಗೆ ಸೋಂಕು ಪತ್ತೆಯಾಗಿತ್ತು. ಇಂದು ಮತ್ತೆ 10 ಜನರಿಗೆ ಸೋಂಕು ತಗುಲಿದೆ. ಬೆಂಗಳೂರಿನ ಪಾದರಾಯನಪುರದಲ್ಲಿ 7 ಜನರಿಗೆ ಸೋಂಕು ತಗುಲಿದೆ. ಬೆಳಗಾವಿಯಲ್ಲಿ …
Read More »ಸರ್ಕಾರದ ಎಡವಟ್ಟಿನಿಂದ ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕು ಇನ್ನಷ್ಟು ಹೆಚ್ಚುವ ಭೀತಿ
ಬೆಂಗಳೂರು: ಸರ್ಕಾರದ ಎಡವಟ್ಟಿನಿಂದ ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕು ಇನ್ನಷ್ಟು ಹೆಚ್ಚುವ ಭೀತಿ ಎದುರಾಗಿದೆ. ವಲಸೆ ಕಾರ್ಮಿಕರನ್ನು ಊರಿಗೆ ಕಳುಹಿಸುವ ಮೂಲಕ ಇದೀಗ ಗ್ರಾಮೀಣ ಪ್ರದೇಶಗಳಲ್ಲೂ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಲಾಕ್ ಡೌನ್ ಸಡಿಲಿಕೆಯಿಂದಾಗಿ ಬೆಂಗಳೂರಿನಲ್ಲಿದ್ದ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ತೆರಳಲು ಕೆ ಎಸ್ ಆರ್ ಟಿಸಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಿ ಕಳುಹಿಸಲಾಗಿತ್ತು. ಹೀಗೆ ಕಳುಹಿಸುವಾಗ ಕಾರ್ಮಿಕರಿಗೆ ಕಾಟಾಚಾರಕ್ಕೆ ತಪಾಸಣೆ ನಡೆಸಲಾಗಿದೆ ಹೊರತು ಸೂಕ್ತವಾಗಿ ತಪಾಸಣೆ …
Read More »ತಣ್ಣಗಿದ್ದ ಹೊಂಗಸಂಧ್ರದಲ್ಲಿ ಮತ್ತೆ ಕೊರೊನಾ – ಕ್ವಾರಂಟೈನ್ ಮುಗಿಸಿದ್ದ 5 ಮಂದಿಗೆ ಸೋಂಕು
ಬೆಂಗಳೂರು: ಹೊಂಗಸಂಧ್ರದಲ್ಲಿ ಬಿಹಾರಿ ಕೂಲಿ ಕಾರ್ಮಿಕನಿಂದ 29 ಪ್ರಕರಣಗಳು ಪತ್ತೆಯಾಗಿತ್ತು. ಕೆಲ ದಿನಗಳ ನಂತರ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಹೊಂಗಸಂಧ್ರ ಸಹಜ ಸ್ಥಿತಿಯತ್ತ ಸಾಗುತ್ತಿದೆ ಎನ್ನುವಷ್ಟರಲ್ಲೇ ಬಿಹಾರಿ ಕೂಲಿ ಕಾರ್ಮಿಕನ ಸಂಬಂಧ ಕ್ವಾರಂಟೈನ್ ಮಾಡಿದ್ದವರಲ್ಲಿ ಬರೋಬ್ಬರಿ ಐದು ಜನರಿಗೆ ಸೊಂಕು ಪತ್ತೆಯಾಗಿದೆ. ಇದರಿಂದ ಮತ್ತೆ ಹೊಂಗಸಂಧ್ರದಲ್ಲಿ ಭೀತಿ ಎದುರಾಗಿದೆ. ಬಿಹಾರಿ ಕೂಲಿ ಕಾರ್ಮಿಕನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 184 ಜನರನ್ನ ಹೋಟೆಲ್ ಕ್ವಾರಂಟೈನ್ ಮಾಡಲಾಗಿತ್ತು. ಇವರನ್ನು 14 ದಿನಗಳು ಕ್ವಾರಂಟೈನ್ …
Read More »ಪತಿಯ ಅಂತ್ಯಕ್ರಿಯೆಗೆ ತೆರಳಲು 20 ನಿಮಿಷದಲ್ಲೇ ಪಾಸ್ ನೀಡಿದ ತಾಲೂಕಾಡಳಿತ………
ಹುಬ್ಬಳ್ಳಿ: ಪತಿಯ ಅಂತ್ಯ ಸಂಸ್ಕಾರಕ್ಕೆ ತೆರಳಲು ಪಾಸ್ ಇಲ್ಲದೆ ಪುಟ್ಟ ಮಕ್ಕಳೊಂದಿಗೆ ಪರದಾಡುತ್ತಿದ್ದ ಮಹಿಳೆಗೆ 20 ನಿಮಿಷದಲ್ಲಿ ಪಾಸ್ ವ್ಯವಸ್ಥೆ ಮಾಡುವ ಮೂಲಕ ಹುಬ್ಬಳ್ಳಿ ತಾಲೂಕ ಆಡಳಿತ ಕಾರ್ಯದಕ್ಷತೆಯನ್ನು ಮೆರೆದಿದೆ. ಅರವಿಂದ ನಗರದ ಯಶೋಧ ಲೋಕಾಪುರ ಎಂಬವರ ಪತಿ ಬಾಗಲಕೋಟೆಯ ನವನಗರದಲ್ಲಿ ಸಾವನ್ನಪ್ಪಿದ್ದರು. ಬಾಗಲಕೋಟೆಗೆ ತೆರಳು ಪಾಸ್ ಇಲ್ಲದೆ ಎರಡು ಚಿಕ್ಕ ಮಕ್ಕಳ ಜೊತೆ ತಹಶೀಲ್ದಾರ ಕಚೇರಿಗೆ ಆಗಮಿಸಿದ್ದರು. ಅಂತ್ಯ ಸಂಸ್ಕಾರಕ್ಕೆ ತೆರಳಲು ಪಾಸ್ ನೀಡುವಂತೆ ಮನವಿ ಮಾಡಿದ್ದಾರೆ. ಮಹಿಳೆಯ …
Read More »