ಬೆಂಗಳೂರು: ಕಾರು ಸ್ಟಾರ್ಟ್ ಮಾಡುವ ವೇಳೆ ಅಜಾಗರೂಕತೆಯಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಬಿಇಎಲ್ ರಸ್ತೆಯಲ್ಲಿ ನಡೆದಿದೆ.ನಂದಿನಿ ರಾವ್ ಮೃತಪಟ್ಟ ಮಹಿಳೆ. ಇಂದು ಸಂಜೆ ನಂದಿನಿ ರಾವ್ ಡೋರ್ ಓಪನ್ ಮಾಡಿ ಹೊರಗಡೆಯಿಂದ ಟೊಯೊಟಾ ಕೊರೊಲಾ ಕಾರನ್ನು ಸ್ಟಾರ್ಟ್ ಮಾಡಿದ್ದಾರೆ. ಕಾರು ಸ್ಟಾರ್ಟ್ ಮಾಡುತ್ತಿದ್ದಂತೆ ರಿವರ್ಸ್ ಗೇರ್ನಲ್ಲಿದ್ದ ಕಾರು ಹಿಂದಕ್ಕೆ ಚಲಿಸಿದೆ. ಈ ವೇಳೆ ಕಾರಿನ ಡೋರ್ ಜೊತೆ ಅವರು ಮರಕ್ಕೆ ಸಿಕ್ಕಿ ಹಾಕಿಕೊಂಡಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ ಅಷ್ಟರಲ್ಲಿ …
Read More »ಡಿ.ಕೆ.ಶಿವಕುಮಾರ್ ತಪ್ಪು ಮಾಡಿಲ್ಲವೆಂದರೆ ಸೀತೆಯಷ್ಟು ಪವಿತ್ರವಾಗಿ ಕೇಸ್ ನಿಂದ ಹೊರಗೆ ಬರಲಿ:ಈಶ್ಚರಪ್
ರಾಯಚೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ಈ ಹಿಂದೆ ದಾಳಿ ಮಾಡಿದಾಗ ಹವಾಲಾ ಹಣ ಸಿಕ್ಕಿದೆ. ಈಗ ಡಿ.ಕೆ.ಶಿವಕುಮಾರ್ ತಪ್ಪು ಮಾಡಿಲ್ಲವೆಂದರೆ ಸೀತೆಯಷ್ಟು ಪವಿತ್ರವಾಗಿ ಕೇಸ್ ನಿಂದ ಹೊರಗೆ ಬರಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ಚರಪ್ಪ ಹೇಳಿದ್ದಾರೆ. ರಾಯಚೂರಿನಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಶಶಿಲ್ ನಮೋಶಿ ಪರ ಪಕ್ಷದ ಮುಖಂಡರ ಪ್ರಚಾರ ಸಭೆ ಬಳಿಕ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಕುರಿತು …
Read More »ಕೋವಿಡ್ ವಾರ್ಡಿನಲ್ಲಿ ಗ್ರಂಥಾಲಯದ ಸೌಲಭ್ಯ
ಶಿವಮೊಗ್ಗ: ಕೊರೊನಾ ಸೋಂಕಿತರು ಮಾನಸಿಕ ಖಿನ್ನತೆ ಹಾಗೂ ಒಂಟಿತನದಿಂದ ಹೊರ ಬರುವ ಸಲುವಾಗಿ ಶಿವಮೊಗ್ಗ ಜಿಲ್ಲೆ ಸಾಗರದ ಕೋವಿಡ್ ವಾರ್ಡಿನಲ್ಲಿ ಆರೋಗ್ಯ ಸಿಬ್ಬಂದಿ ಸೋಂಕಿತರಿಗಾಗಿ ಗ್ರಂಥಾಲಯ ತೆರೆದಿದ್ದಾರೆ.ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಹಲವು ಮಂದಿ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಕೊರೊನಾ ತುತ್ತಾಗಿ ಚಿಕಿತ್ಸೆ ಪಡೆಯಬೇಕಾದರೆ ತಮ್ಮವರಿಂದ ದೂರವಿದ್ದು ಚಿಕಿತ್ಸೆ ಪಡೆಯುವ ಅನಿವಾರ್ಯತೆ ಇದೆ. ಹೀಗಾಗಿ ಸೋಂಕಿತರಿಗೆ ಒಂಟಿತನ ಕಾಡುತ್ತಿದೆ. ಈ ಮಾನಸಿಕ ಖಿನ್ನತೆ ಹಾಗೂ ಒಂಟಿತನದಿಂದ ಸೋಂಕಿತರು ಹೊರ …
Read More »ಬೆಂಗಳೂರಿಗೆ ಬರುವಾಗ ದಾರಿ ಮಧ್ಯೆ ವಿಮಾನದಲ್ಲಿ ಯಶಸ್ವಿ ಹೆರಿಗೆ
ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಗರ್ಭಿಣಿಯೊಬ್ಬರು ವಿಮಾನದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ವೇಳೆ ವಿಮಾನದಲ್ಲಿ ಪ್ರಸೂತಿ ತಜ್ಞೆ ಬೆಂಗಳೂರಿನ ಕ್ಲೌಡ್ ನೈನ್ ಆಸ್ಪತ್ರೆಯ ಡಾ. ಶೈಲಜಾ ವಲ್ಲಭನಿ ಪ್ರಯಾಣಿಸುತ್ತಿದ್ದರು. ಹೆರಿಗೆ ನೋವಾಗುತ್ತಿದ್ದಂತೆ ಇಂಡಿಗೋ ಸಿಬ್ಬಂದಿ ಸಹಕಾರದಿಂದ ಡಾ. ಶೈಲಜಾ ಅವರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಅಂಬುಲೆನ್ಸ್ ಸಿದ್ಧವಾಗಿ ನಿಂತಿತ್ತು. ಅಂಬುಲೆನ್ಸ್ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ ಈಗ ಪ್ರಯಾಣಿಕರು …
Read More »ಮನೆಗೆ ಕನ್ನ ಹಾಕಿ ಮೋಜು-ಮಸ್ತಿ ಮಾಡುತ್ತಿದ್ದ ಯುವಕರನ್ನು ಬಂಧಿಸಿದ್ ಪೊಲೀಸರು
ಚಾಮರಾಜನಗರ: ಶೋಕಿಗಾಗಿ ವೃದ್ಧೆಯ ಮನೆಗೆ ಕನ್ನ ಹಾಕಿ ಮೋಜು-ಮಸ್ತಿ ಮಾಡುತ್ತಿದ್ದ ಯುವಕರನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ ಮನು (21), ಕಿರಣ್ (20) ಬಂಧಿತ ಆರೋಪಿಗಳು. ಗುಂಡ್ಲುಪೇಟೆಯ ನಾಯಕರ ಬೀದಿಯಲ್ಲಿ ವಾಸವಿದ್ದ ಬಸಮ್ಮ (70) ವೃದ್ಧೆಯ ಮನೆಗೆ ಕನ್ನ ಹಾಕಿ ಬೀರುವಿನ್ನಲ್ಲಿದ್ದ ಓಲೆ, ಕಾಸು, ಚಿನ್ನದ ಉಂಗುರ ಸೇರಿದಂತೆ 60 ಗ್ರಾಂ ಚಿನ್ನಾಭರಣವನ್ನು ಎಗರಿಸಿ ಪರಾರಿಯಾಗಿದ್ದರು. ಅಕ್ಟೋಬರ್ 6ರಂದು ವೃದ್ಧೆ ಪೊಲೀಸ್ ಠಾಣೆಗೆ …
Read More »ಸಚಿವ ಪ್ರಹ್ಲಾದ್ ಜೋಶಿಯವರಿಗೆ ಕೊರೊನಾ ಪಾಸಿಟಿವ್
ಬೆಂಗಳೂರು: ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇತ್ತೀಚೆಗೆ ಕೊರೊನಾ ಸೋಂಕು ರಾಜಕಾರಣಿಗಳನ್ನು ಬೆನ್ನು ಬಿಡದೆ ಕಾಡುತ್ತಿದೆ. ಇತ್ತೀಚೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೂ ಕೂಡ ಕೊರೊನಾ ಪಾಸಿಟಿವ್ ಬಂದಿತ್ತು. ಈಗ ಕೇಂದ್ರ ಸಚಿವರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ತಮಗೆ ಕೊರೊನಾ ಸೋಂಕು ತಗಲಿರುವ ಸುದ್ದಿಯನ್ನು ಸ್ವತಃ ಸಚಿವರೇ ಟ್ವೀಟ್ ಮಾಡಿ ಖಚಿತ ಪಡಿಸಿದ್ದಾರೆ. ಸೋಂಕು ತಗುಲಿರುವ ವಿಚಾರವಾಗಿ …
Read More »ರಾಜ್ಯದಲ್ಲಿ ಮೊದಲ ಬಾರಿಗೆ 1 ಲಕ್ಷ ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ 1 ಲಕ್ಷ ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಒಟ್ಟು 48,658 ಮಂದಿಗೆ ಆಂಟಿಜನ್ ಟೆಸ್ಟ್ 55,690 ಮಂದಿಗೆ ಆರ್ಟಿಪಿಸಿಆರ್ ಮತ್ತು ಇತ್ಯಾದಿ ಪರೀಕ್ಷೆ ಸೇರಿದಂತೆ ಒಟ್ಟು 1,04,348 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 55,24,302 ಕೊರೊನಾ ಪರೀಕ್ಷೆ ಮಾಡಲಾಗಿದೆ. ಇಂದು ರಾಜ್ಯದಲ್ಲಿ 10,947 ಮಂದಿಗೆ ಸೋಂಕು ಬಂದಿದ್ದು, ಆಸ್ಪತ್ರೆಯಿಂದ 9,832 ಮಂದಿ ಬಿಡುಗಡೆಯಾಗಿದ್ದಾರೆ. 113 ಮಂದಿ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ …
Read More »ಉಪಚುನಾವಣೆ ರಂಗೇರುತ್ತಿದ್ದಂತೆ ರಾಜಕೀಯ ನಾಯಕರ ವಾಗ್ದಾಳಿ ಆರಂಭ
ಬೆಂಗಳೂರು: ಉಪಚುನಾವಣೆ ರಂಗೇರುತ್ತಿದ್ದಂತೆ ರಾಜಕೀಯ ನಾಯಕರ ವಾಗ್ದಾಳಿ ಆರಂಭವಾಗಿದೆ. ಈಗ ಮಾಜಿ ಸಿಎಂ ಕುಮಾರಸ್ವಾಮಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಟ್ವಿಟ್ಟರ್ ಮೂಲಕ ಕಿಡಿ ಕಾರಿದ್ದಾರೆ. ಇಂದು ಸಿದ್ದರಾಮಯ್ಯನ ವಿರುದ್ಧ ಗುಡುಗಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ …
Read More »ಮಾಸ್ಕ್ ದಂಡ 250 ರೂ.ಗೆ ಇಳಿಕೆ
ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಬಿಗಿ ನಿಯಮ ರೂಪಿಸಿ ಮಾಸ್ಕ್ ವಿಚಾರದಲ್ಲಿ ಸಾವಿರ ರೂ. ದಂಡ ವಿಧಿಸಿದ್ದ ಸರ್ಕಾರ, ಹೊರಡಿಸಿ ದಂಡದ ಮೊತ್ತವನ್ನು ನಗರದ ಪ್ರದೇಶದಲ್ಲಿ 1 ಸಾವಿರ ರೂಗಳಿಂದ 250 ರೂ.ಗೆ ಇಳಿಸಿದೆ. ಗ್ರಾಮೀಣ ಭಾಗದಲ್ಲಿ ನಿಗದಿಯಾಗಿದ್ದ 500 ರೂ. ದಂಡ ಈಗ 100 ರೂ.ಗೆ ಇಳಿಕೆಯಾಗಿದೆ.ಮಾಸ್ಕ್ ಧರಿಸದ್ದಕ್ಕೆ 1 ಸಾವಿರ ರೂ. ದಂಡ ವಿಧಿಸುತ್ತಿದ್ದ ಕ್ರಮಕ್ಕೆ ಸಾರ್ವಜನಿಕಾ ವಲಯದಿಂದ ಭಾರೀ ಟೀಕೆ ವ್ಯಕ್ತವಾಗಿತ್ತು. ಕೆಲಸ ಇಲ್ಲ ನಾವು ಸಂಕಷ್ಟದಲ್ಲಿರುವಾಗ …
Read More »8 ತಾಸಿನ ದಾರಿಯನ್ನು 3 ಗಂಟೆಯಲ್ಲಿ ಕ್ರಮಿಸಿದ ಅಂಬುಲೆನ್ಸ್ ಚಾಲಕನಿಗೆ ಮೆಚ್ಚುಗೆ
ಚಿಕ್ಕಮಗಳೂರು: ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ ಅಂಬುಲೆನ್ಸ್ ಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಕೊಟ್ಟ ಕಾಫಿನಾಡ ಪೊಲೀಸರಿಗೆ ಚಿಕ್ಕಮಗಳೂರು ಜನ ಶ್ಲಾಘಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಮೂಲದ ಎರಡು ತಿಂಗಳ ಮಗುವಿಗೆ ತುರ್ತಾಗಿ ಹೃದಯ ಸಂಬಂಧಿ ಚಿಕಿತ್ಸೆ ನೀಡಬೇಕಿತ್ತು. ಆದರೆ ಬಡ ಕುಟುಂಬದ ಮಗುವಿನ ಪೋಷಕರು ಆಸ್ಪತ್ರೆಯಲ್ಲಿನ ಅಂಬುಲೆನ್ಸ್ ಹಣ ಹೆಚ್ಚಾಗಿದ್ದರಿಂದ ಟ್ರಸ್ಟ್ ಮೂಲಕ ಚಿಕ್ಕಮಗಳೂರಿನ ಅಂಬುಲೆನ್ಸ್ ಗೆ ಸಂಪರ್ಕಿಸಿದ್ದರು. ಕೂಡಲೇ ಶಿವಮೊಗ್ಗಕ್ಕೆ ಹೋಗಿ ಮಗುವನ್ನು ಕರೆದುಕೊಂಡು ಹೊರಟ ಅಂಬುಲೆನ್ಸ್ ಚಾಲಕ …
Read More »
Laxmi News 24×7