Breaking News

ಮುಂದಿನ ತಿಂಗಳು ಗ್ರಾಮ ಪಂಚಾಯತಿ ಚುನಾವಣೆ

ಬೆಂಗಳೂರು: ಅವಧಿ ಮುಗಿದರೂ ಕೊರೋನಾ ಕಾರಣದಿಂದ ಮುಂದೂಡಲ್ಪಟ್ಟಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಕಾಲ ಕೂಡಿ ಬಂದಿದೆ. ಅಕ್ಟೋಬರ್ ಮೊದಲ ವಾರ ಇಲ್ಲವೇ ಎರಡನೇ ವಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಬಹುದು. ಸಾರ್ವತ್ರಿಕವಾಗಿ ಏಕಕಾಲಕ್ಕೆ ಚುನಾವಣೆ ನಡೆಸುವ ಬದಲು ಬಹುಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಚುನಾವಣಾ ಆಯೋಗಕ್ಕೆ ಜಿಲ್ಲಾಧಿಕಾರಿಗಳು ಈ ಕುರಿತಾಗಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಕೊರೋನಾ ನಿಯಮಗಳನ್ನು ಪಾಲಿಸುವ ಮೂಲಕ ಚುನಾವಣೆ ನಡೆಸಲು ಚುನಾವಣಾ ಆಯೋಗ ಕ್ರಮಕೈಗೊಂಡಿದೆ. …

Read More »

ಸಚಿವ ಕೆಎಸ್ ಈಶ್ವರಪ್ಪಗೂ ಕೊರೋನಾ ಪಾಸಿಟಿವ್

ಬೆಂಗಳೂರು : ಕಳೆದ ನಿನ್ನೆಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಫೇಸ್ ಬುಕ್ ಹಾಗೂ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ …

Read More »

ಪ್ರಥಮ ದರ್ಜೆ ಕಾಲೇಜ್ 2ನೇ ಹಂತದ ಕಟ್ಟಡ ಕಾಮಗಾರಿಗೆ ಕುಲಪತಿ ಪ್ರೋ.ಎಂ ರಾಮಚಂದ್ರಗೌಡ ಸೋಮವಾರ ಚಾಲನೆ

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜ್ 2ನೇ ಹಂತದ ಕಟ್ಟಡ ಕಾಮಗಾರಿಗೆ ಕುಲಪತಿ ಪ್ರೋ.ಎಂ ರಾಮಚಂದ್ರಗೌಡ ಸೋಮವಾರ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿ, ಸಂಗೊಳ್ಳಿ ರಾಯಣ್ಣ  ಪ್ರಥಮ ದರ್ಜೆ ಕಾಲೇಜ್ ಸುಸಜ್ಜಿತವಾದ ಮೂಲ ಸೌಕರ್ಯದೊಂದಿಗೆ  ಗ್ರಾಮೀಣ ಪ್ರತಿಭೆಗಳ ಉನ್ನತ ವ್ಯಾಸಂಗದ ಕನಸನ್ನು ನನಸು ಮಾಡುವ ಉದ್ದೇಶ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹೊಂದಿದೆ. ಸುಮಾರು 9.8 ಕೋಟಿ ವೆಚ್ಚದಲ್ಲಿ  ಕಟ್ಟಡ ನಿರ್ಮಾಣವಾಗುತ್ತಿದೆ ಎಂದು ಹೇಳಿದರು. …

Read More »

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯಲ್ಲಿಉತ್ತರ ಕರ್ನಾಟಕ ಭಾಗದ ಶಾಸಕರ ಪುತ್ರನ ವಿರುದ್ಧ ಡ್ರಗ್ಸ್​ ಸೇವನೆ ಆರೋಪ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯಲ್ಲಿ ಎನ್ ಸಿಬಿ ಅಧಿಕಾರಿಗಳು  ನಿರಂತರ ತನಿಖೆ ಕೈಗೊಂಡಿದ್ದು, ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರತಿದೆ. ಮೈಸೂರು ಭಾಗದ ಓರ್ವ ಶಾಸಕರ ಪುತ್ರ ಹಾಗೂ ಉತ್ತರ ಕರ್ನಾಟಕ ಭಾಗದ ಮತ್ತೋರ್ವ ಶಾಸಕರ ಪುತ್ರನ ವಿರುದ್ಧ ಡ್ರಗ್ಸ್​ ಸೇವನೆ ಆರೋಪ ಕೇಳಿಬಂದಿದೆ. ಇಬ್ಬರು ತಾವು ಮಾತ್ರವಲ್ಲದೆ ತಮ್ಮದೆಯಾದ ಗುಂಪು ಕಟ್ಟಿಕೊಂಡು ಡ್ರಗ್ಸ್ ಸೇವೆನೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಇವರ ವಿಚಾರಣೆ ಮತ್ತು ತನಿಖೆಗೆ ಮುಂದಾಗಿದ್ದು, ಸೂಕ್ತ …

Read More »

ನಮ್ಮ ಹೀರೋ ಮಾಡಿದ, ಹೀರೊಯಿನ್ ಮಾಡಿದ್ರು ಅಂತ ಮುಂದೆ ಫಾಲೋ ಮಾಡಿದ್ರೆ ಗತಿಯೇನು: ನಟಿ, ರಾಜಕಾರಣಿ ತಾರಾ

ಬೆಂಗಳೂರು: ನಮ್ಮನ್ನ ಅನುಸರಿಸುವವರು ಇದ್ದಾರೆ. ಹೀಗಾಗಿ ನಮ್ಮ ಹೀರೋ ಮಾಡಿದ, ಹೀರೊಯಿನ್ ಮಾಡಿದ್ರು ಅಂತ ಮುಂದೆ ಫಾಲೋ ಮಾಡಿದ್ರೆ ಗತಿಯೇನು ಎಂದು ನಟಿ, ರಾಜಕಾರಣಿ ತಾರಾ ಪ್ರಶ್ನಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸ್ಯಾಂಡಲ್ ವುಡ್ ಡ್ರಗ್ಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಕನ್ನಡ ಚಿತ್ರರಂಗಕ್ಕೆ ಯಾವುದೇ ದುರ್ನಾತ ಬಡಿಯದಿರಲಿ ಅಂತ ದೇವರಿಗೆ ನಮಸ್ಕಾರ ಮಾಡಿದೆ. ನಾನು ಸಿಎಂಗೆ ಇಂದು ಸಲಹೆ ನೀಡುವೆ. ನಾವೆಲ್ಲರೂ ಎಲ್ಲ ಬೆಳವಣಿಗೆ ವೀಕ್ಷಿಸುತ್ತಿದ್ದೀವಿ ಎಂದರು. ಡ್ರಗ್ಸ್ ವಿಚಾರ ನಮ್ಮ ರಂಗಕ್ಕೆ …

Read More »

ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ………..

ಚಿಕ್ಕಬಳ್ಳಾಪುರ: ಟೋಲ್ ಕಟ್ಟಲು ಸರದಿ ಸಾಲಿನಲ್ಲಿ ನಿಂತಿದ್ದ ಕಾರುಗಳಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಸ್ಕಾರ್ಪಿಯೋ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕರ್ನಾಟಕ ಆಂಧ್ರ ಗಡಿಭಾಗದ ಬಾಗೇಪಲ್ಲಿ ಟೋಲ್ ಪ್ಲಾಜಾದಲ್ಲಿ ಅಪಘಾತ ನಡೆದಿದೆ. ಬೆಂಗಳೂರು ಕಡೆಯಿಂದ ಬಂದ ಸ್ಕಾರ್ಪಿಯೋ ಕಾರು, ಸರದಿ ಸಾಲಿನಲ್ಲಿದ್ದ ಸ್ವಿಫ್ಟ್ ಡಿಜೈರ್ ಹಾಗೂ ಹುಂಡೈ ಕ್ರೆಟಾ ಕಾರಿಗೆ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ನಂತರ ಸ್ಕಾರ್ಪಿಯೋ ಕಾರು ಪಲ್ಟಿಯಾಗಿದೆ. ಈ …

Read More »

ಕಳ್ಳತನ ಮಾಡಲು ಹೋಗಿ ಅಪಾರ್ಟ್‍ಮೆಂಟ್‍ನಿಂದ ಬಿದ್ದ ಘಟನೆ ವಿದ್ಯಾನಗರದ ಚನ್ನಮ್ಮ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ.

ತಾರಿಹಾಳ ಗ್ರಾಮದ ಪುಟ್ಟರಾಜ ಕಳ್ಳತನ ಮಾಡುವ ವೇಳೆ ಮೇಲಿಂದ ಬಿದ್ದಿದ್ದಾನೆ. ಈತ ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಕಳ್ಳತನ ಮಾಡಲು ವಿದ್ಯಾನಗರದ ಚನ್ನಮ್ಮ ಅಪಾರ್ಟ್‍ಮೆಂಟ್‍ಗೆ ತೆರಳಿದ್ದ. ಆದರೆ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಕಳ್ಳನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಡಿದ ಅಮಲಿನಲ್ಲಿ ಬಿದ್ದು, ಕಳ್ಳ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳ ಈ ಹಿಂದೆ ಎಲ್ಲೆಲ್ಲಿ ಕಳ್ಳತನ …

Read More »

ಬೆಳಗಾವಿ ಜಿಲ್ಲೆಯ ಪ್ರಮುಖ ದೇವಾಲಯಗಳನ್ನು ಲಾಕ್ ಡೌನ್ ಸಡಿಲಿಕೆಯ ನಡುವೆಯೂ  ಸೆ.30ರವರೆಗೆ ಬಂದ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಪ್ರಮುಖ ದೇವಾಲಯಗಳನ್ನು ಲಾಕ್ ಡೌನ್ ಸಡಿಲಿಕೆಯ ನಡುವೆಯೂ  ಸೆ.30ರವರೆಗೆ ಬಂದ್ ಮಾಡಲಾಗಿದೆ. ಸುಪ್ರಸಿದ್ಧ ಸವದತ್ತಿ ರೇಣುಕಾ ಯಲ್ಲಮ್ಮ, ಚಿಂಚಲಿ ಮಾಯಕ್ಕ , ಜೋಗುಳಬಾವಿ ಸತ್ಯಮ್ಮ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಮುಂದುವರೆದಿದೆ.     ಈ ಮೂರು ದೇವಾಲಯಗಳಿಗೂ ಮಹಾರಾಷ್ಟ್ರಾದಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಕೊರೊನಾ ಹಿನ್ನೆಲೆ ಭಕ್ತರ ಹಿತದೃಷ್ಟಿಯಿಂದ ಇನ್ನೂ ಒಂದು ತಿಂಗಳವರೆಗೂ ಈ ದೇವಾಲಯಗಳ ಬಾಗಿಲು ತೆರೆಯದಂತೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ …

Read More »

RTE’ ಪ್ರವೇಶ : ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಶಿಕ್ಷಣ ಹಕ್ಕು ಕಾಯ್ದೆಗೆ ಸಂಬಂಧಿಸಿದಂತೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಆರ್ ಟಿಇ ಎರಡನೇ ಸುತ್ತಿನ ಲಾಟರಿ ಪ್ರಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ಶಿಕ್ಷಣ ಇಲಾಖೆ ಕಚೇರಿಗಳಲ್ಲಿ ನಡೆಯಲಿದೆ.   ಆರ್ ಟಿಇ ಎರಡನೇ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಮಾಹಿತಿಯನ್ನು ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಅಲ್ಲದೆ, ಪಾಲಕರು ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲೂ http://www.schooleducation.kar.nic.in/ ನಲ್ಲಿ ಸೀಟು …

Read More »

ಇಂದಿನಿಂದ ‘ಆಫ್‌ಲೈನ್‌’ನಲ್ಲಿ ಪುನರ್‌ಮನನ ತರಗತಿ: ಬೆಂ.ವಿ.ವಿ ಕ್ರಮ

ಬೆಂಗಳೂರು: ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪಠ್ಯದ ಪುನರ್‌ಮನನಕ್ಕಾಗಿ ‘ರೆಗ್ಯುಲರ್‌ ಆಫ್‌ಲೈನ್‌’ ತರಗತಿಗಳನ್ನು ಸೆಪ್ಟೆಂಬರ್‌ 1ರಿಂದಲೇ ತೆಗೆದುಕೊಳ್ಳುವಂತೆ ಬೆಂಗಳೂರು ವಿಶ್ವವಿದ್ಯಾಲಯ ತನ್ನ ವ್ಯಾಪ್ತಿಯ ಕಾಲೇಜುಗಳಿಗೆ ನಿರ್ದೇಶಿಸಿದೆ. ಸೆ. 12ರಿಂದ ಪದವಿಯ 6ನೇ ಸೆಮಿಸ್ಟರ್‌ ಹಾಗೂ 23ರಿಂದ ಸ್ನಾತಕೋತ್ತರ ಪದವಿಯ 4ನೇ ಸೆಮಿಸ್ಟರ್‌ನ ಪರೀಕ್ಷೆಗಳನ್ನು ನಡೆಸಲು ವಿ.ವಿ. ದಿನಾಂಕ ನಿಗದಿಪಡಿಸಿದೆ. ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಲ್ಲಿ ಪಾಠಕ್ಕೆ ಸಂಬಂಧಿಸಿದಂತೆ ಪ್ರಶ್ನೆ, ಗೊಂದಲ, ಸಮಸ್ಯೆಗಳಿದ್ದರೆ ಪರಿಹರಿಸಿಕೊಳ್ಳಲು ಹಾಗೂ ಪಾಠಗಳ ಪುನರಾವರ್ತನೆಗೆ ಅವಕಾಶ …

Read More »