Breaking News

ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗದೇ ಅನುಶ್ರೀ ನಾಟ್ ರೀಚೇಬಲ್ ಆಗಿದ್ದಾರೆ.

ಮಂಗಳೂರು: ನಿರೂಪಕಿ ಹಾಗೂ ನಟಿ ಅನುಶ್ರೀ ಹೆಗಲಿಗೆ ಅಂಟಿಕೊಂಡ ಡ್ರಗ್ಸ್ ಕೇಸ್ ನ ವಿಚಾರ ಮುಂದುವರಿದಿದೆ. ಆದರೆ ಇಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದ ಅನುಶ್ರೀ ಮಾತ್ರ ವಿಚಾರಣೆಗೆ ಗೈರಾಗಿದ್ದಾರೆ. ಡ್ರಗ್ಸ್ ಪೆಡ್ಲರ್ ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್ ನೀಡಿದೆ. ನಿನ್ನೆ ಖುದ್ದಾಗಿ ಬೆಂಗಳೂರಿಗೆ ತೆರಳಿ ನೋಟಿಸ್ ನೀಡಿದ್ದ ಮಂಗಳೂರು ಸಿಸಿಬಿ ಪೊಲೀಸರಿಗೆ ಇಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಅನುಶ್ರೀ ಹೇಳಿದ್ದರು. …

Read More »

ಡ್ರಗ್ಸ್ ಪ್ರಕರಣ – ಡ್ಯಾನ್ಸರ್ ಕಿಶೋರ್‌ಗೆ ಅ.9ರವರೆಗೆ ನ್ಯಾಯಾಂಗ ಬಂಧನ

ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಬಂಧಿಸಿದಂತೆ ಬಂಧಿತರಾಗಿರುವ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಹಾಗೂ ಅಕೀಲ್ ನೌಶೀನ್‍ನನ್ನು ಅಕ್ಟೋಬರ್ 9 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತರನ್ನು ಶುಕ್ರವಾರ ನಾರ್ಕೊಟಿಕ್ ಕ್ರೈಂ ಪೊಲೀಸರು ಮಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿದ ಪೊಲೀಸರು, ಅ.9 ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.ಕಳೆದ ಆರು ದಿನಗಳಿಂದ ಆರೋಪಿಗಳು ನಾರ್ಕೊಟಿಕ್ ಪೊಲೀಸರ ವಶದಲ್ಲಿದ್ದರು. ಸೆಪ್ಟೆಂಬರ್ 19ರಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ …

Read More »

ಚೆನ್ನೈ ಫಾರ್ಮ್‍ಹೌಸ್‍ನಲ್ಲಿ ಎಸ್‍ಪಿಬಿ ಅಂತ್ಯಸಂಸ್ಕಾರ- ಬೆಳಗ್ಗೆ 11 ಗಂಟೆವರೆಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ

ಚೆನ್ನೈ: ಗಾನ ಗಾರುಡಿಗ ಎಸ್.ಪಿ ಬಾಲಸುಬ್ರಹ್ಮಣಂ ಅವರ ಅಂತ್ಯಸಂಸ್ಕಾರ ಇಂದು ಚೆನ್ನೈನ ರೆಡ್‍ಹಿಲ್ ಫಾರ್ಮ್ ಹೌಸ್‍ನಲ್ಲಿ ನಡೆಯಲಿದೆ. ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಫಾರ್ಮ್ ಹೌಸ್‍ನಲ್ಲಿ  ಎಸ್‍ಪಿಬಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೂ ಸಾರ್ವಜನಿಕರು ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ತಿರುವಳ್ಳೂರ್ ಎಸ್‍ಪಿ ಎಸ್‍ಪಿಬಿ ಅವರ ಅಂತ್ಯಸಂಸ್ಕಾರದ ಕುರಿತ ಹೆಚ್ಚಿನ ಮಾಹಿತಿಯನ್ನು ನೀಡಿದ್ದಾರೆ. ತಮ್ಮ ನೆಚ್ಚಿನ ಹಾಡುಗಾರನ ಅಂತಿಮ ದರ್ಶನ ಪಡೆಯಲು …

Read More »

ಜಿಲ್ಲಾಧಿಕಾರಿ ಕಾಳಜಿಗೆ ಮನಸೋತು ಮಗುವಿಗೆ ಡಿಸಿ ಹೆಸರಿಟ್ಟ ದಂಪತಿ

ಬಳ್ಳಾರಿ: ಜನ್ಮವಿತ್ತ ಮಗುವಿಗೆ ತಮ್ಮ ಜಿಲ್ಲೆಯ ಡಿಸಿ ಹೆಸರನ್ನೇ ನಾಮಕರಣ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ದಾವಣಗೆರೆಯಲ್ಲಿ ನೆಲೆಸಿರುವ ದಂಪತಿ ತಮ್ಮ ಮಗುವಿಗೆ ಡಿಸಿ ಎಸ್.ಎಸ್.ನಕುಲ್ ಅವರ ಹೆಸರನ್ನಿಟ್ಟಿದ್ದಾರೆ. ಮಹಿಳೆಯ ತವರು ಮನೆ ಬಳ್ಳಾರಿಯಾಗಿದ್ದರಿಂದ ಕಳೆದ ಎರಡು ತಿಂಗಳ ಹಿಂದೆ ಹೆರಿಗೆಗೆಂದು ಬಳ್ಳಾರಿಗೆ ಬಂದಿದ್ದರು. ಈ ವೇಳೆ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಈ ವೇಳೆ ಹೆರಿಗೆಯನ್ನು ಯಶಸ್ವಿಯಾಗಿಯೇ ಬಳ್ಳಾರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಮಾಡಿಸಲಾಗಿತ್ತು. ಅದೃಷ್ಟವಶಾತ್ ತಾಯಿಗೆ …

Read More »

ರಾಮನಗರ: ಹೇಗೇ ಸತ್ತರೂ ಕೊರೋನಾ ಸಾವೆಂದು ದಾಖಲಿಸಿ ಹಣ ಲೂಟಿ; ಜಿಲ್ಲಾಧಿಕಾರಿ ವಿರುದ್ಧ ಸಿಡಿದ ಜನ

ರಾಮನಗರ : ಕೊರೋನಾ ವರದಿಯಲ್ಲಿ ನೆಗೆಟಿವ್ ಬಂದಿದ್ದರೂ ಸಹ ಕೊರೋನಾ ಪಾಸಿಟಿವ್ ಇದೇ ಎಂದು ಚಿಕಿತ್ಸೆ ನೀಡಿ ಹಣ ವಸೂಲಿ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ರಾಮನಗರ ತಾಲೂಕಿನ ಅಂಜನಾಪುರ ಗ್ರಾಮದ 65 ವರ್ಷದ ಹೊನ್ನಮ್ಮ ಎಂಬುವರು ಕೆಮ್ಮು ಹಾಗೂ ಇತರೆ ಆರೋಗ್ಯ ಸಮಸ್ಯೆಯಿಂದಾಗಿ ರಾಮನಗರ ಜಿಲ್ಲಾಸ್ಪತ್ರೆಗೆ 17-09-2020 ರಂದು ದಾಖಲಾಗಿದ್ದರು. ನಂತರ ಆರೋಗ್ಯದಲ್ಲಿ ವ್ಯತ್ಯಾಸವಾದ ಕಾರಣ ಅವರನ್ನ ಕೋವಿಡ್ …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (26-09-2020-ಶನಿವಾರ)

ನಿತ್ಯ ನೀತಿ: ಸರ್ವರನ್ನು ಸಮಬುದ್ಧಿಯಿಂದ ಪ್ರೀತಿಸು. ಸರ್ವ ಕಾರ್ಯ ಗಳನ್ನು ಸಮರ್ಪಣ ಬುದ್ಧಿಯಿಂದ ಮಾಡು. ಚಿತ್ತದಲ್ಲಿ ಸತ್ಕಾಮನೆಗಳನ್ನು ಬಿತ್ತಿದರೆ ಸತಲವೇ ದೊರೆ ಯುತ್ತದೆ. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 26.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.13 ಚಂದ್ರ ಉದಯ ಬೆ.02.38 / ಚಂದ್ರ ಅಸ್ತ ರಾ.02.18 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / …

Read More »

ಅಂಗಡಿ ಉತ್ತರಾಧಿಕಾರಿ ಯಾರು? ಉಪ ಚುನಾವಣೆ ಚರ್ಚೆ ಆರಂಭ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಎದುರಾಗುವ ಉಪ ಚುನಾವಣೆಗೆ ಅಭ್ಯರ್ಥಿಗಳು ಯಾರಾಗಬಹುದು ಎನ್ನುವ ಚರ್ಚೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಅಂಗಡಿ ಅವರು 2004ರಿಂದ ಒಟ್ಟು 4 ಚುನಾವಣೆಗಳಲ್ಲಿ ಸತತವಾಗಿ ಜಯ ಗಳಿಸಿದ್ದರು. ಇದರಿಂದಾಗಿ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಪ್ರಬಲ ಹಿಡಿತ ಹೊಂದಿದ್ದ ಅಂಗಡಿ ಅವರ ಹಠಾತ್ ನಿಧನದಿಂದ ಬಿಜೆಪಿ ವಲಯದಲ್ಲಿ ಆಘಾತ ಉಂಟಾಗಿದೆ. ಹೀಗಾಗಿ, ಉತ್ತರಾಧಿಕಾರಿ ಯಾರಾಗುತ್ತಾರೆ ಎನ್ನುವ ಕುತೂಹಲ …

Read More »

ಟೊಮೆಟೊಗೆ ಬೇಡಿಕೆ ಹೆಚ್ಚಿದ್ದು ಚದುರಂಗದಾಟ

ಮುಳಬಾಗಿಲು: ಟೊಮೆಟೊಗೆ ಬೇಡಿಕೆ ಹೆಚ್ಚಿದ್ದು, ದರವೂ 15 ಕೆಜಿ ಬಾಕ್ಸ್‌ಗೆ ₹ 400 ರಿಂದ ₹ 450ಕ್ಕೆ ಏರಿಕೆಯಾಗಿದೆ. ತಾಲ್ಲೂಕಿನ ಕಸಬಾ ಹೋಬಳಿ ಎನ್. ವಡ್ಡಹಳ್ಳಿ ಗ್ರಾಮದ ಆರ್‌ಸಿ ಉಪ ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ಶುಕ್ರವಾರ 15 ಕೆಜಿ ಬಾಕ್ಸ್‌ಗೆ ₹ 400 ರಿಂದ ₹ 450ಕ್ಕೆ ಏರಿಕೆಯಾಗಿದೆ. ಬುಧವಾರ, ಗುರುವಾರ ₹ 300 ರಿಂದ ₹ 400ಕ್ಕೆ ಮಾರಾಟವಾಗಿತ್ತು. ಕಳೆದ ವಾರ ₹ 850ಕ್ಕೆ ಮಾರಾಟವಾಗಿತ್ತು. ಶುಕ್ರವಾರ ಮಾರುಕಟ್ಟೆಗೆ 50 …

Read More »

ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿದ್ದರ ಹಿನ್ನೆಲೆಯಲ್ಲಿ ಪ್ರಮುಖ ಈರುಳ್ಳಿ ವ್ಯಾಪಾರಿಗಳು ಕಣ್ಣೀರುಡುವಂತೆ ಮಾಡಿದೆ.

ಬೆಂಗಳೂರು: ಇದ್ದಕ್ಕಿದ್ದಂತೆ ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿದ್ದರ ಹಿನ್ನೆಲೆಯಲ್ಲಿ ಪ್ರಮುಖ ಈರುಳ್ಳಿ ವ್ಯಾಪಾರಿಗಳು ಕಣ್ಣೀರುಡುವಂತೆ ಮಾಡಿದೆ. ಸದ್ಯದ ಪರಿಹಾರ ಎಂಬಂತೆ ವ್ಯಾಪಾರಿಗಳು ಈಗಾಗಲೇ ಅರ್ಧ ಬೆಲೆಗೆ ಮಾರಾಟ ಮಾಡಿ ನಷ್ಟ ಅನುಭವಿಸಿದ್ದಾರೆ. ಸ್ಥಳೀಯ ಮಾರುಕಟ್ಟೆಯಲ್ಲಿನ ಕೊರತೆಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14 ರಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ ಈರುಳ್ಳಿ ರಫ್ತು ನಿಷೇಧಿಸಿತ್ತು, ಇದು ಕರ್ನಾಟಕ ಮತ್ತು ಮಹಾರಾಷ್ಟ್ರದ ಉತ್ಪಾದನಾ ಪ್ರದೇಶಗಳಲ್ಲಿ ಮಳೆ ಹಾನಿಗೊಳಗಾದ ನಂತರ ಬೆಲೆ ಏರಿಕೆಗೆ ಕಾರಣವಾಯಿತು. ಈರುಳ್ಳಿ ರಫ್ಚು …

Read More »

ಹಿಮಾಲಯ ಕರಗಲ್ಲ ಅಂತಾ ಅಂದುಕೊಂಡಿದ್ವಿ. ಆದ್ರೆ ಇವತ್ತು ಕರಗಿ ಹೋಯ್ತು. ಎಸ್.ಪಿ.ಬಿ ಅವರು ನಾದಬ್ರಹ್ಮ ಹಂಸಲೇಖ

  ಬೆಂಗಳೂರು : ಎಸ್​ಪಿಬಿ ವಿದ್ಯೆಯಲ್ಲೇ ವಿದ್ಯಾವಂತರು. ನನ್ನ ಲೌಖಿಕ ಜ್ಞಾನದಿಂದ ನಾನು ಬದುಕು ಕಟ್ಟಿಕೊಂಡೆ ಅಂತಾ ತಿಳಿಸುತ್ತಿದ್ರು. ಜಾಣತನದಿಂದ ಜ್ಞಾನವನ್ನು ಖರ್ಚು ಮಾಡಿ ಅಂತಾ ಎಸ್.ಪಿ.ಬಿ ತಿಳಿಸುತ್ತಿದ್ರು. ನನ್ನ ಸಂಗೀತದ ಸಂಗಾತಿ ಎಸ್.ಪಿ.ಬಿ. ನಾನು ಮಾಡಬೇಕಿರೋ ಕೆಲಸವನ್ನು ನೆನಪಿಸಿಕೊಟ್ಟು ಹೋದ್ರು. ಎಸ್.ಪಿ.ಬಿಯನ್ನು ಗುರುತಿಸಿದವರು ಎಸ್.ಜಾನಕಿ ಅಮ್ಮ. ಹೈದರಾಬಾದ್ನಲ್ಲಿ ಯಾವುದೋ ಒಂದು ಕಾಂಪಿಟೇಷನಲ್ಲಿ ಎಸ್.ಪಿ.ಬಿ ಎರಡನೇ ಸ್ಥಾನ ಗಿಟ್ಟಿಸಿದ್ರು. ಅವರನ್ನು ಗುರುತಿಸಿ ತಂದವರು ಎಸ್.ಜಾನಕಿ. ಪಂಚಾಕ್ಷರಿ ಗವಾಯಿ ಸಿನಿಮಾದಲ್ಲಿ ನಮ್ಮಿಬ್ಬರ …

Read More »