Breaking News

Corona ಕ್ಷಯರೋಗಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಧಾರವಾಡ ಯುವಕರು

ಧಾರವಾಡ: ಕ್ಷಯರೋಗದಿಂದ ಬಳಲುತ್ತಿದ್ದ ಆಂಧ್ರ ಪ್ರದೇಶ ಮೂಲದ ವ್ಯಕ್ತಿಯನ್ನು ಯುವಕರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಧಾರವಾಡದಲ್ಲಿ ಘಟನೆ ನಡೆದಿದ್ದು, ನಗರ ಸಾರಿಗೆ ಬಸ್ ನಿಲ್ದಾಣ(ಸಿಬಿಟಿ)ದ ಬಳಿ ನರಳುತ್ತ ಬಿದ್ದಿದ್ದ ವ್ಯಕ್ತಿಯನ್ನು ಯುವಕರಾದ ದೇವರಾಜ್, ವಿನಾಯಕ ಗೊಂಧಳಿ ಮತ್ತು ಮಂಜುನಾಥ ನೀರಲಕಟ್ಟಿಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ರಸ್ತೆ ಬದಿ ಈತನ್ನು ಕಂಡ ಧಾರವಾಡ ಯುವಕರು, ಸಹಾಯ ಮಾಡಿ, ಉಪಚರಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ರಸ್ತೆ ಪಕ್ಕ ರಾತ್ರಿಯಿಡಿ ನರಳುತ್ತ ಮಲಗಿದ್ದ …

Read More »

ಬಿಬಿಎಂಪಿ 7 ವಲಯಗಳಲ್ಲಿ 38 ವಾರ್ಡ್ ಗಳು ರೆಡ್‍ಝೋನ್………..

ಬೆಂಗಳೂರು: ಸಕ್ರಿಯ ಕೊರೊನಾ ಪ್ರಕರಣಗಳಲ್ಲಿ ಸಿಲಿಕಾನ್ ಸಿಟಿ ಮೊದಲ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಹಾಟ್‍ಸ್ಪಾಟ್ ಪಟ್ಟಿಯಿಂದ ನಮ್ಮ ಏರಿಯಾ ಇಲ್ಲ ಅಂತ ನಿಟ್ಟುಸಿರು ಬಿಡುತ್ತಿರುವವರು ಆತಂಕ ಪಡುವಂತಾಗಿದೆ. ಬೆಂಗಳೂರಿನಲ್ಲಿ ವಲಯವಾರು ರೆಡ್ ಝೋನ್‍ಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಬಿಬಿಎಂಪಿ 8 ವಲಯಗಳಲ್ಲಿ 38 ವಾರ್ಡ್ ಗಳು ರೆಡ್ ಝೋನ್ ಪಟ್ಟಿಯಲ್ಲಿವೆ. ಬೆಂಗಳೂರಿನಲ್ಲಿ 80 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ. ಬಿಬಿಎಂಪಿ 8 …

Read More »

17ನೇ ಮಹಡಿಯಿಂದ ಸಾಯಲು ಹೊರಟಿದ್ದ ಯುವತಿ ಬಚಾವ್…..

ಬೆಂಗಳೂರು: 17ನೇ ಮಹಡಿಯಿಂದ ಸಾಯಲು ಹೊರಟಿದ್ದ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಸ್ನೇಹಾ (ಹೆಸರು ಬದಲಾಯಿಸಲಾಗಿದೆ) ಎಂಬಾಕೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಸುಮಾರು 1 ಗಂಟೆಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯ ಅಗ್ನಿಶಾಮಕ ಸಿಬ್ಬಂದಿಯ ವರ್ಗ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ನಡೆದಿದ್ದೇನು? ಸ್ನೇಹಾ ದೆಹಲಿ ಮೂಲದ ಯುವತಿಯಾಗಿದ್ದು, ಎಲೆಕ್ಟ್ರಾನಿಕ್ ಸಿಟಿಯ ಪ್ರೆಸ್ಟೀಜ್ ಸನ್‍ರೈಸ್ …

Read More »

ಸೈಕಲ್ ಕಳ್ಳತನ ಮಾಡ್ಕೊಂಡು ಹೋಗೋ ಗಾಬರಿಯಲ್ಲಿ ಹಣ ಬೀಳಿಸಿದ್ದ ಕಳ್ಳ…

ಮೈಸೂರು: ವ್ಯಕ್ತಿಯೊಬ್ಬ ಜಿಲ್ಲೆಯಲ್ಲಿ ನಾಣ್ಯ, ನೋಟು ಎಸೆದು ಹೋಗಿದ್ದು, ಇದರಿಂದ ಜನರು ತುಂಬಾ ಗಾಬರಿಗೊಂಡಿದ್ದರು. ಆದರೆ ಇದೀಗ ಕಳ್ಳತನ ಮಾಡಿದ್ದ ಸೈಕಲನ್ನು ತೆಗೆದುಕೊಂಡು ಹೋಗುವಾಗ ಗಾಬರಿಯಲ್ಲಿ ಹಣ, ನಾಣ್ಯ ಕೆಳಗೆ ಬೀಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದ ಬೋಟಿ ಬಜಾರ್ ಬೀದಿಯಲ್ಲಿ ವ್ಯಕ್ತಿಯೊಬ್ಬ ಹಣ, ನ್ಯಾಣ ಎಸೆದು ಹೋಗಿದ್ದನು ಎಂದು ಹೇಳಲಾಗಿತ್ತು. ಬೀದಿಯಲ್ಲಿ ಬಿದ್ದಿದ್ದ ನಾಣ್ಯ, ನೋಟನ್ನು ಟೀ ಅಂಗಡಿ ಮಾಲೀಕ ಬಾಬು ಎತ್ತಿಕೊಂಡಿದ್ದರು. ಎಲ್ಲವೂ ಸಿಸಿ ಕ್ಯಾಮೆರಾದಲ್ಲಿ …

Read More »

ಕ್ವಾರಂಟೈನ್‍ನಲ್ಲಿದ್ದ ಬಾಗಲಕೋಟೆಯ 80ಕ್ಕೂ ಹೆಚ್ಚು ಪೊಲೀಸರ ವರದಿ ನೆಗೆಟಿವ್…….

ಬಾಗಲಕೋಟೆ: ಜಿಲ್ಲೆಯ ಪೊಲೀಸರಲ್ಲಿ ತಲ್ಲಣ ಸೃಷ್ಟಿಸಿದ್ದ 130ಕ್ಕೂ ಹೆಚ್ಚು ಪೊಲೀಸರ ಕ್ವಾರಂಟೈನ್ ಪ್ರಕರಣ ಇದೀಗ ಖಾಕಿ ಪಡೆಯನ್ನು ನಿಟ್ಟುಸಿರು ಬಿಡುವಂತೆ ಮಾಡಿದ್ದು, 80ಕ್ಕೂ ಹೆಚ್ಚು ಪೊಲೀಸರ ವರದಿ ನೆಗೆಟಿವ್ ಬಂದಿದೆ. ಮುಧೋಳ ಠಾಣೆಯ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇವರೊಂದಿಗೆ ಪ್ರಾಥಮಿಕ, ದ್ವಿತೀಯ ಹಂತದ ಸಂಪರ್ಕ ಹೊಂದಿದ್ದ ಹಿನ್ನೆಲೆ 130ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ಇದರಲ್ಲಿ ಶೇ.90ರಷ್ಟು ಸಿಬ್ಬಂದಿಯ ಗಂಟಲು ದ್ರವ, ರಕ್ತ …

Read More »

ಮಾಸ್ಕ್ ಇಲ್ಲದೆ ಓಡಾಡುವವರಿಗೆ ಬಸ್ಕಿ ಹೊಡೆಯುವ ಶಿಕ್ಷೆ…

ಹಾಸನ: ಹಾಸನದಲ್ಲಿ ಈ ವರೆಗೆ ಯಾವುದೇ ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ಗ್ರೀನ್ ಝೋನ್‍ಗೆ ಒಳಪಟ್ಟಿದೆ. ಹೀಗಾಗಿ ಲಾಕ್‍ಡೌನ್ ನಿಯಮಗಳನ್ನು ಕೊಂಚ ಸಡಿಲಿಕೆ ಮಾಡಿದ್ದು, ಜನ ಮಾಸ್ಕ್ ಇಲ್ಲದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಗ್ರೀನ್‍ಝೋನ್‍ನಲ್ಲಿ ನಿಯಮ ಸಡಿಲಿಕೆ ಮಾಡಿದ ಬೆನ್ನಲ್ಲೇ ಜನ ಬೇಕಾಬಿಟ್ಟಿಯಾಗಿ ಬೀದಿಗಿಳಿಯುತ್ತಿದ್ದು, ಕೆಲವರು ಏನೂ ಕೆಲಸವಿಲ್ಲದಿದ್ದರೂ ರಸ್ತೆಗಿಳಿಯುತ್ತಿದ್ದಾರೆ. ಅಲ್ಲದೆ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದಾರೆ. ಇದನ್ನು ಮನಗಂಡ ಪೊಲೀಸರು ಶಿಕ್ಷೆ ನೀಡಲು ಮುಂದಾಗಿದ್ದು, ಅನಗತ್ಯವಾಗಿ ಓಡಾಡುವವರಿಗೆ ಹಾಗೂ ಮಾಸ್ಕ್ ಇಲ್ಲದೆ ರಸ್ತೆಗಿಳಿಯುವವರಿಗೆ …

Read More »

ಲಾಕ್‍ಡೌನ್ ಸಡಿಲಿಕೆ ಮಾಡಿದ್ದು, ಜನ ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ

ಬೆಂಗಳೂರು: ಗ್ರೀನ್ ಝೋನ್ ನಲ್ಲಿರುವ ಜಿಲ್ಲೆಗಳಲ್ಲಿ ಜನರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಲಾಕ್‍ಡೌನ್ ಸಡಿಲಿಕೆ ಮಾಡಿದ್ದು, ಜನ ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ರಾಯಚೂರು, ಕೊಪ್ಪಳ, ಯಾದಗಿರಿ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ನಿರ್ಲಕ್ಷ್ಯದಿಂದ ಓಡಾಡುತ್ತಿದ್ದಾರೆ. ರಾಯಚೂರಿನಲ್ಲಿ ಲಾಕ್‍ಡೌನ್ ಸಡಿಲಿಕೆ ಮಾಡಿರುವುದರಿಂದ ಜನ ನಿಯಮಗಳನ್ನು ಪಾಲಿಸದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಮಾರುಕಟ್ಟೆ ಪ್ರದೇಶಗಳು ಜನಜಂಗುಳಿಯಿಂದ ಕೂಡಿದ್ದು, ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಕೊಪ್ಪಳದಲ್ಲಿ ಸಹ ಕಟ್ಟೆಚ್ಚರ …

Read More »

ಇಂದು ಪ್ರಧಾನಿ ಮೋದಿ ಮನ್ ಕೀ ಬಾತ್-ದೇಶದ ಜನರಿಗೆ ಲಾಕ್‍ಡೌನ್ ಸಿಹಿಯೋ? ಕಹಿಯೋ?

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಇಡೀ ದೇಶವನ್ನುದ್ದೇಶಿಸಿ ಮನ್ ಕೀ ಬಾತ್ ನಲ್ಲಿ ಮಾತನಾಡಲಿದ್ದಾರೆ. ಕಳೆದ ತಿಂಗಳ ಮನ್ ಕೀ ಬಾತ್ ನಲ್ಲಿ ಲಾಕ್‍ಡೌನ್ ಹೇರಿಕೆ ಕ್ಷಮೆ ಕೇಳಿದ್ದ ಅವರು ಕೊರೊನಾ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಕಟ್ಟುನಿಟ್ಟಿನ ಲಾಕ್‍ಡೌನ್ ನಡುವೆಯೂ ಮಾರಕ ಕೊರೊನಾ ವೈರಸ್ ಆರ್ಭಟ ಭಾರತದಲ್ಲಿ ಮುಂದುವರಿದಿದೆ. ಕೊರೊನಾ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಮೇ 3ರವರೆಗೂ ಲಾಕ್‍ಡೌನ್ ವಿಸ್ತರಿಸಿದ್ದಾರೆ. ಕೊರೊನಾ ಬಿಕ್ಕಟ್ಟಿನ ನಡುವೆ ಆಗ್ಗಾಗ …

Read More »

ಜುಬಿಲೆಂಟ್ಸ್ ಕಾರ್ಖಾನೆಗೆ ಸೋಂಕು ತಗುಲಿದ್ದು ಹೇಗೆ : ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಮೈಸೂರು (ಏಪ್ರಿಲ್ 25); ಜಿಲ್ಲೆಯ ನಂಜನಗೂಡಿನಲ್ಲಿ ಜುಬಿಲೆಂಟ್ಸ್ ಕಾರ್ಖಾನೆ ಕೊರೋನಾ ಹಾಟ್‌ಸ್ಪಾಟ್ ಆಗಿರುವ ಹಿನ್ನೆಲೆಯಲ್ಲಿ, ಕಾರ್ಖಾನೆಗೆ ಸೋಂಕು ತಗುಲಿದ್ದರ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಮೈಸೂರು ಕೋವಿಡ್-19 ವಿಶೇಷಾಧಿಕಾರಿ ಹರ್ಷಗುಪ್ತ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದ್ದು, ಒಂದು ವಾರದ ಒಳಗಾಗಿ ಸರ್ಕಾರಕ್ಕೆ ವರದಿ ನೀಡುವಂತೆ ಸೂಚಿಸಲಾಗಿದೆ. ಕಾರ್ಖಾನೆ ಸೋಂಕು ಎಲ್ಲಿಂದ ಬಂತು?  ಯಾರಿಂದ ಬಂತು? ಪ್ರಥಮವಾಗಿ ಯಾರಿಗೆ ಬಂತು? ಸೋಂಕು ಹರಡುವಿಕೆಗೆ ಕಾರಣವೇನು? ಕಾರ್ಖಾನೆ ಜವಬ್ದಾರಿ ಏನು? ಹೀಗೆ ಎಲ್ಲಾ ವಿಚಾರಗಳ …

Read More »

ದಂತ ಚಿಕಿತ್ಸಾಲಯ ತೆರೆಯಬಾರದು ಎಂಬ ನಿಯಮ ಗಾಳಿಗೆ ತೂರಿ ಕ್ಲಿನಿಕ್ ತೆರೆದು ಚಿಕಿತ್ಸೆ ನೀಡಿದ ಡಾ.ಖಾನ್

ಹಾಸನ; ದಂತ ಚಿಕಿತ್ಸಾಲಯ ತೆರೆಯಬಾರದೆಂಬ ನಿಯಮವಿದ್ದರೂ ಕ್ಲಿನಿಕ್ ತೆರೆದು ವೈದ್ಯನೋರ್ವ ಚಿಕಿತ್ಸೆ ಮಾಡುತ್ತಿದ್ದ ಘಟನೆ ಹಾಸನದಲ್ಲಿ ನಡೆದಿದೆ. ನಗರದ ಹಳೇ ಬಸ್ ನಿಲ್ದಾಣದ ಮುಂಭಾಗವಿರುವ ಹಾಸನ ದಂತ ಚಿಕಿತ್ಸಾಲಯದಲ್ಲಿ ಡಾ.ಖಾನ್ ಕ್ಲಿನಿಕ್ ತೆರೆದು ಬೆಳಿಗ್ಗೆಯಿಂದ ಕೆಲ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಈ ವೇಳೆ ಮಾಧ್ಯಮದವರು ಸ್ಥಳಕ್ಕೆ ತೆರಳಿದಾಗ ಕ್ಯಾಮರಾ ಕಂಡು ತಬ್ಬಿಬ್ಬಾದ ಡಾ.ಖಾನ್ ಕ್ಲಿನಿಕ್‌  ಬಾಗಿಲು ಮುಚ್ಚಲು ಮುಂದಾದರು. ಘಟನೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಅಧ್ಯಕ್ಷ …

Read More »