Breaking News

ಕೊರೊನಾ ಸೋಂಕು ಭೀತಿಯಲ್ಲಿ ರಾಮನಗರ ಪಟ್ಟಣ ಇಂದಿನಿಂದ ಲಾಕ್‍ಡೌನ್

ರಾಮನಗರ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕೊರೊನಾ ಸೋಂಕು ಭೀತಿಯಲ್ಲಿ ರಾಮನಗರ ಪಟ್ಟಣ ಇಂದಿನಿಂದ ಲಾಕ್‍ಡೌನ್ ಆಗಿದೆ. ಜಿಲ್ಲೆಯಲ್ಲಿ ಸ್ವಯಂ ಪ್ರೇರಿತವಾಗಿ ಲಾಕ್‍ಡೌನ್ ಘೋಷಣೆ ಮಾಡಲಾಗಿದ್ದು, ಈಗಾಗಲೇ ಜಿಲ್ಲೆಯ ಮಾಗಡಿ ಪಟ್ಟಣ ಮತ್ತು ಕನಕಪುರ ಲಾಕ್‍ಡೌನ್ ಮಾಡಲಾಗಿದೆ. ಇಂದಿನಿಂದ ರಾಮನಗರ ಪಟ್ಟಣ ಕೂಡ ಲಾಕ್‍ಡೌನ್ ಆಗಿದೆ. ಕಳೆದ ದಿನವೇ ಅಂಗಡಿ, ಮುಂಗಟ್ಟುಗಳನ್ನು ವರ್ತಕರು ಬಂದ್ ಮಾಡುವ ಮೂಲಕ ಲಾಕ್‍ಡೌನ್‍ಗೆ ಸ್ವಯಂ ಪ್ರೇರಿತರಾಗಿ ಬೆಂಬಲ ಸೂಚಿಸಿದ್ದಾರೆ. ಸ್ವಯಂ …

Read More »

ನೇಪಾಳದ ಕೃಷಿ ಸಚಿವಾಲಯದ ಸರ್ವೇ ಇಲಾಖೆ ಒಟ್ಟು 11 ಸ್ಥಳಗಳನ್ನು ಪಟ್ಟಿ ಮಾಡಿದ್ದು, ಇದರಲ್ಲಿ 10 ಪ್ರದೇಶಗಳನ್ನು ಚೀನಾ ವಶಪಡಿಸಿಕೊಂಡಿದೆ.

ಕಠ್ಮಂಡು: ಚೀನಾ ತನ್ನ ನೆರೆಯ ಎಲ್ಲ ದೇಶಗಳ ಗಡಿಯನ್ನು ಅತಿಕ್ರಮಣ ಮಾಡಿಕೊಳ್ಳುತ್ತಿರುವುದು ತಿಳಿದ ವಿಚಾರ. ಇತ್ತೀಚೆಗೆ ಭಾರತದೊಂದಿಗೆ ತಂಟೆ ತೆಗೆದಿದೆ. ಇದೀಗ ಇನ್ನೊಂದು ಭಯಾನಕ ಅಂಶವನ್ನು ನೇಪಾಳ ಸರ್ಕಾರ ಬಹಿರಂಗಪಡಿಸಿದೆ. ನೇಪಾಳದ ಬರೋಬ್ಬರಿ 10 ಪ್ರದೇಶಗಳನ್ನು ಚೀನಾ ಈಗಾಗಲೇ ಆಕ್ರಮಿಸಿಕೊಂಡಿದೆ ಎಂದು ನೇಪಾಳ ಸರ್ಕಾರ ತನ್ನ ವರದಿಯಲ್ಲಿ ತಿಳಿಸಿದೆ. ಲಡಾಖ್‍ನ ಗಲ್ವಾನ್ ವ್ಯಾಲಿಯಲ್ಲಿ ಭಾರತದ-ಚೀನಾದ ಗಡಿ ತಂಟೆ ನಡೆದ ಕೆಲವೇ ದಿನಗಳ ನಂತರ ನೇಪಾಳ ಈ ಕುರಿತು ಸರ್ವೇ ವರದಿಯನ್ನು …

Read More »

ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಸಾಲು ಸಾಲು ಸಿನಿಮಾಗಳಿಗೆ ಸಹಿ

ಹೈದರಾಬಾದ್: ಟಾಲಿವುಡ್ ತಾರಕ್ ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಸಾಲು ಸಾಲು ಸಿನಿಮಾಗಳಿಗೆ ಸಹಿ ಹಾಕುತ್ತಿದ್ದು, ತೆಲುಗು ಚಿತ್ರರಂಗದಲ್ಲಿ ಸದ್ಯದ ಬ್ಯಸಿಯೆಸ್ಟ್ ನಟರಾಗಿದ್ದಾರೆ. ಇದೀಗ ಮತ್ತೊಂದು ಸಿನಿಮಾದದಲ್ಲಿ ಯಂಗ್ ಟೈಗರ್ ನಟಿಸುವುದು ಖಚಿತವಾಗಿದ್ದು, ಈ ಸಿನಿಮಾದಲ್ಲಿ ಕನ್ನಡದ ನಟಿ ಸಹ ಸ್ಥಾನ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಹಲವು ಸಿನಿಮಾಗಳಿಗೆ ಸಹಿ ಹಾಕುತ್ತಿದ್ದು, ಒಂದೆಡೆ ಸ್ಯಾಂಡಲ್‍ವುಡ್ ನಿರ್ದೇಶಕ ಪ್ರಶಾಂತ್ ನೀಲ್ ಜೂನಿಯರ್ ಎನ್‍ಟಿಆರ್ ಸಿನಿಮಾಗೆ …

Read More »

ಯುವರತ್ನ ಚಿತ್ರ ತಂಡದಿಂದ ಸುದ್ದಿಯೊಂದು ಹೊರ ಬಂದಿದ್ದು, ಪವರ್ ಸ್ಟಾರ್ ಅಭಿಮಾನಿಗಳಿಗೆ ಬೇಸರ ತರಿಸಿದೆ.

ಬೆಂಗಳೂರು: ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆದ್ರೆ ಚಿತ್ರದ ಕಲಾವಿದರು, ತಂತ್ರಜ್ಞರು ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದರಿಂದ ಸಿನಿಮಾ ಕೆಲಸಗಳು ಕುಂಟುತ್ತಾ ಸಾಗುತ್ತಿವೆ. ಚಂದನವನದ ಬಹು ನಿರೀಕ್ಷಿತ ಯುವರತ್ನ ಚಿತ್ರ ತಂಡದಿಂದ ಸುದ್ದಿಯೊಂದು ಹೊರ ಬಂದಿದ್ದು, ಪವರ್ ಸ್ಟಾರ್ ಅಭಿಮಾನಿಗಳಿಗೆ ಬೇಸರ ತರಿಸಿದೆ. ಯುವರತ್ನ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಟ್ವೀಟ್ ಮಾಡಿದ್ದು, ಚೆನ್ನೈ, ಹೈದರಾಬಾದ್ ಹಾಗೂ ಮುಂಬೈನಲ್ಲಿ ಕೆಲಸಗಳು ನೆಡೆಯುತ್ತಿಲ್ಲ. ಚೆನ್ನೈ …

Read More »

ತಾಯಿಯಾದ ಸಂತಸದಲ್ಲಿ ಬಿಗ್‍ಬಾಸ್ ಸ್ಪರ್ಧಿ ನೇಹಾ ಗೌಡ

ವಾಷಿಂಗ್ಟನ್: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 3’ರ ಸ್ಪರ್ಧಿ ನೇಹಾ ಗೌಡ ತಾಯಿಯಾದ ಸಂತಸದಲ್ಲಿದ್ದು, ಇತ್ತೀಚೆಗಷ್ಟೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾವು ತಾಯಿಯಾಗಿರುವ ವಿಚಾರವನ್ನ ನೇಹಗೌಡ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಕುವ ಮೂಲಕ ಶೇರ್ ಮಾಡಿಕೊಂಡಿದ್ದಾರೆ. ನೇಹಾ ಗೌಡ ಪತಿಯೊಂದಿಗೆ ಅಮೆರಿಕಾದ ನಾರ್ತ್ ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿದ್ದಾರೆ. ಪತಿ ಸೇರಿದಂತೆ ಕುಟುಂಬದವರು ತಮ್ಮ ಮನೆಗೆ ಹೊಸ ಸದಸ್ಯೆಯನ್ನು ಬರಮಾಡಿಕೊಂಡಿದ್ದಾರೆ. ನೇಹಾ ಗೌಡ ಸೀಮಂತ ಕಾರ್ಯಕ್ರಮ ಸರಳವಾಗಿ ನಡೆದಿದ್ದು, ಆಪ್ತರು, ಸ್ನೇಹಿತರು …

Read More »

ಲೈಟ್ ಆಫ್ ಮಾಡಿ ಕೊರೊನಾ ಸೋಂಕಿತೆಯ ಕೈ ಹಿಡಿದು ಎಳೆದಾಡಿದ ಕಾಮುಕ

ಕೋಲಾರ: ಕೋವಿಡ್-19 ಆಸ್ಪತ್ರೆಗೆ ನುಗ್ಗಿದ ವ್ಯಕ್ತಿ ಕೊರೊನಾ ಸೋಂಕಿತ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಭಾನುವಾರ ಘಟನೆ ನಡೆದಿದ್ದು, ಈ ಸಂಬಂಧ ಆಸ್ಪತ್ರೆಯ ರಕ್ಷಣಾಧಿಕಾರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಶ್ವನಾಥಾಚಾರಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ. ಈತ ನಗರದ ಬೆಸ್ತರ ಬೀದಿಯ ಗೆಲ್ಪೇಟ್ ನಿವಾಸಿ ಎಂದು ತಿಳಿದು ಬಂದಿದೆ. ಶ್ರೀನಿವಾಸಪುರ ತಾಲೂಕಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಅರೋಗ್ಯ ಸಹಾಯಕನಾಗಿದ್ದಾನೆ ಎಂದು ತಿಳಿದು ಬಂದಿದೆ.   …

Read More »

ಐಎಎಸ್ ಅಧಿಕಾರಿವಿಜಯ್ ಶಂಕರ್ಆತ್ಮಹತ್ಯೆಗೆ ಶರಣಾಗಿದ್ದಾರೆ.

ias sucide

ಬೆಂಗಳೂರು: ಬಹುಕೋಟಿ ಐಎಂಎ ಹಗರಣದಲ್ಲಿ ಜೈಲು ವಾಸ ಅನುಭವಿಸಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಇಂದು ಬೆಂಗಳೂರಿನ ಜಯನಗರದ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಮಾನತುಗೊಂಡಿದ್ದ ವಿಜಯ್ ಶಂಕರ್ 20 ದಿನಗಳ ಹಿಂದೆ ಕೆಲಸಕ್ಕೆ ಮರಳಿದ್ದರು. ಇಂದು ಬೆಳಗ್ಗೆ ಕಚೇರಿಯಲ್ಲಿ ಸಾಲು ಸಾಲು ಸಭೆ ನಡೆಸಿದ್ದು, ಲವಲವಿಕೆಯಿಂದಲೇ ಕೆಲಸ ಮಾಡಿದ್ದರು ಎಂದು ತಿಳಿದು ಬಂದಿದೆ. 1.5 ಕೋಟಿ ಲಂಚದ ಆರೋಪ: ಐಎಂಎ ಪ್ರಕರಣದಲ್ಲಿ 1.5 ಕೋಟಿ ರೂ. ಲಂಚ …

Read More »

ನೆಮ್ಮದಿಯಿಂದ ಇದ್ದ ಜನರು ಈಗ ಭಯದ ವಾತಾವರಣದಲ್ಲೇ ಜೀವನಸ್ವಯಂಪ್ರೇರಿತವಾಗಿ ಚನ್ನಗಿರಿ ಲಾಕ್‍ಡೌನ್

ದಾವಣಗೆರೆ: ಬೆಣ್ಣೆ ನಗರಿಯ ಕೊರೊನಾ ಸೋಂಕಿನ ಜಾಡು ಇದುವರೆಗೂ ಕಂಡು ಹಿಡಿಯಲು ಆಗುತ್ತಿಲ್ಲ. ಇಷ್ಟು ದಿನ ಕೇವಲ ಸಿಟಿಗೆ ಮಾತ್ರ ಸೀಮಿತವಾಗಿದ್ದ ಕೊರೊನಾ ಅಟ್ಟಹಾಸ ಈಗ ತಾಲೂಕು ಮಟ್ಟಕ್ಕೆ ತಲುಪಿದೆ. ನೆಮ್ಮದಿಯಿಂದ ಇದ್ದ ಜನರು ಈಗ ಭಯದ ವಾತಾವರಣದಲ್ಲೇ ಜೀವನ ನಡೆಸುವಂತಾಗಿದೆ. ಇದಕ್ಕೆ ಅಲ್ಲಿನ ಜನತೆಯೇ ಮದ್ದನ್ನು ಕಂಡುಕೊಂಡಿದ್ದಾರೆ. ದಾವಣಗೆರೆಯಲ್ಲಿ ಕೊರೊನಾರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗ್ತಾನೆ ಇದೆ. ದಾವಣಗೆರೆ ನಗರಕ್ಕೆ ಮಾತ್ರ ಸೀಮಿತವಾಗಿದ್ದ ಕೊರೊನಾ ಮಹಾಮಾರಿ ಈ ಹಳ್ಳಿಗಳಿಂದ ತಾಲೂಕು …

Read More »

ಕೊರೊನಾ ಭಯದ ಮಧ್ಯೆನಾಳೆಯಿಂದ SSLC ಪರೀಕ್ಷೆ……….

ಬೆಂಗಳೂರು: ಕೊರೊನಾ ಭಯದ ಮಧ್ಯೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆತಂಕ ಶುರುವಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ ಅಂತ ಶಿಕ್ಷಣ ಇಲಾಖೆ ಹೇಳಿದೆ. ಜೊತೆಗೆ ಸಿದ್ಧತೆ ಕೂಡ ನಡೆಸಿದೆ. ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ಆರ್ಭಟದ ನಡುವೆಯೂ ನಿಗದಿಯಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾಡಿಯೇ ತೀರಲು ಶಿಕ್ಷಣ ಇಲಾಖೆ ಪಣ ತೊಟ್ಟಿದೆ. ನಾಳೆಯಿಂದ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾಗಲಿದೆ. ಕೊರೊನಾ ಆತಂಕದ ನಡುವೆಯೇ 8.5 ಲಕ್ಷ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದಾರೆ. …

Read More »

ಕೊರೊನಾ ವಾರಿಯರ್ಸ್‍ಗಳಿಗೂ ಸೋಂಕುತಪಾಸಣೆ ಮಾಡೋ ಸಿಬ್ಬಂದಿಯಂತೂ ಕಾಳಜಿಯನ್ನೆ ವಹಿಸ್ತಿಲ್ಲ…..

ಹಾವೇರಿ: ಕೊರೊನಾ ವಾರಿಯರ್ಸ್‍ಗಳಿಗೂ ಸೋಂಕು ತಗುಲಿದೆ. ಆದರೆ ಆರೋಗ್ಯ ಇಲಾಖೆ ಸಿಬ್ಬಂದಿ ನಿಷ್ಕಾಳಜಿ ತೋರುತ್ತಿದೆ. ಅದರಲ್ಲೂ ಈ ಜಿಲ್ಲೆಯಲ್ಲಿನ ಕ್ವಾರಂಟೈನ್ ಕೇಂದ್ರಗಳಲ್ಲಿನ ಜನರ ತಪಾಸಣೆ ಮಾಡೋ ಸಿಬ್ಬಂದಿಯಂತೂ ಕಾಳಜಿಯನ್ನೆ ವಹಿಸ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ರಾಜ್ಯದಲ್ಲಿ ಕೊರೊನಾ ವಾರಿಯರ್ಸ್ ಆಗಿರೋ ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೋಂಕು ತಗುಲಿದೆ. ಅದರಲ್ಲೂ ಹಾವೇರಿ ಜಿಲ್ಲೆಯಲ್ಲಿ ದೃಢಪಟ್ಟಿರೋ ಬಹುತೇಕ ಪ್ರಕರಣಗಳು ಸಾಂಸ್ಥಿಕ ಕ್ವಾರಂಟೈನ್ ಆಗಿದ್ದವರು. ಹೀಗಿದ್ದರೂ ಕ್ವಾರಂಟೈನ್ ಕೇಂದ್ರಗಳಲ್ಲಿನ ಜನರ ತಪಾಸಣೆ …

Read More »