ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಸಾಗಿದೆ. ಈ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ರಾಜ್ಯ ಆರೋಗ್ಯ ಇಲಾಖೆಗೆ ವರದಿಯನ್ನ ಸಲ್ಲಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಿಂದ ಸೋಂಕಿತರು ಹೆಚ್ಚಾಗಿ ಬರುತ್ತಿದ್ದಾರೆ. ಕೊರೊನಾ ಸೋಂಕಿತರಿಗೆ ಇತರೆ ಕಾಯಿಲೆಗಳು ಕೂಡ ಇವೆ. ಕಿಡ್ನಿ ಸಮಸ್ಯೆ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಮಧುಮೇಹ ಸೇರಿದಂತೆ ಹಲವು ರೋಗಗಳಿಂದ ಬಳಲುತ್ತಿರುತ್ತಾರೆ. ಅವರು ಕೊನೇ ಕ್ಷಣದಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಬರುತ್ತಿದ್ದಾರೆ. ಅವರಿಗೆ ವೆಂಟಿಲೇಟರ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. …
Read More »20 ದಿನದಲ್ಲಿ 2ನೇ ಬಾರಿಗೆಮತ್ತೆ ಅತೃಪ್ತರ ಗುಂಪು ಕಟ್ಟಿದ ಯತ್ನಾಳ್…..
ಬೆಂಗಳೂರು: ಬಿಜೆಪಿಯಲ್ಲಿ 20 ದಿನದಲ್ಲಿ 2ನೇ ಬಾರಿಗೆ ಭಿನ್ನಮತ ಸ್ಫೋಟವಾಗಿದ್ದು, ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ಅತೃಪ್ತರ ಗುಂಪು ಕಟ್ಟಿದ್ದಾರೆ. ಈ ಮೂಲಕ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಭಿನ್ನಮತದ ಆತಂಕ ಶುರುವಾಗಿದೆ. ರಾಜ್ಯಸಭೆ ಚುನಾವಣೆ ಮೊದಲು ಕತ್ತಿ, ನಿರಾಣಿ ಜೊತೆಗೂಡಿ ಸಿಎಂ ಯಡಿಯೂರಪ್ಪ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಭಿನ್ನಮತದ ಕಹಳೆ ಊದಿದ್ದರು. ಈ ಬೆನ್ನಲ್ಲೇ ಫೀಲ್ಡಿಗೆ ಇಳಿದಿದ್ದ ಯಡಿಯೂರಪ್ಪ, ಕತ್ತಿ, ನಿರಾಣಿ ಕರೆಯಿಸಿ ಬಂಡಾಯ ತಣ್ಣಗೆ ಮಾಡಿದ್ದರು. …
Read More »ಕೊರೊನಾ ನಡುವೆಯೂ ಜಿಂದಾಲ್ ಆಡಿದ್ದೇ ಆಟ – ಜಿಲ್ಲಾಡಳಿತದ ಆದೇಶಕ್ಕೆ ಇಲ್ಲ ಕಿಮ್ಮತ್ತು
ಬಳ್ಳಾರಿ: ಜಿಂದಾಲ್ ಕಾರ್ಖಾನೆಯಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದರಿಂದ ಸುತ್ತಲಿನ ಗ್ರಾಮಗಳು ಸಹ ಭೀತಿಯಲ್ಲೇ ದಿನ ಕಳೆಯುತ್ತಿವೆ. ಈ ಮಧ್ಯೆ ಬಳ್ಳಾರಿ ಜಿಲ್ಲಾಡಳಿತ ಇಂದಿನಿಂದ 12 ದಿನಗಳ ಕಾಲ ಗ್ರಾಮ ಸಂಪರ್ಕ ನಿರ್ಬಂಧಿಸಿತ್ತು. ಆದರೆ ಜಿಂದಾಲ್ ಮಾತ್ರ ನೆಪ ಮಾತ್ರಕ್ಕೆ ಗೇಟ್ ಕ್ಲೋಸ್ ಮಾಡಿದ್ದು ಹೊರಗಿನ ಕಾರ್ಮಿಕರು ಬಿಂದಾಸ್ ಆಗಿಯೇ ಎಂಟ್ರಿ ಕೊಡುತ್ತಿದ್ದಾರೆ. ಹೌದು. ಬಳ್ಳಾರಿಯ ಜಿಂದಾಲ್ ಕಾರ್ಖಾನೆ ಕೊರೊನಾ ಕಾರ್ಖಾನೆಯಾಗಿದೆ. ಸೋಂಕಿತರ ಪ್ರಮಾಣ ಭಾರೀ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, …
Read More »ಕಚೇರಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಕಚೇರಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕರ್ನಾಟಕ ಮಾಹಿತಿ ಆಯೋಗ ಬೆಳಗಾವಿ ಪೀಠವು ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರ, 1 ನೇ ಮಹಡಿ ಕೊಠಡಿ ಸಂಖ್ಯೆ 141 ರಲ್ಲಿ ಕಾರ್ಯಾರಂಭಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು,ಈಗಾಗಲೇ ಹಲವಾರು ಕಚೇರಿಗಳನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದ್ದು,ಉತ್ತರ ಕರ್ನಾಟಕದ ಜನರಿಗೆ ಅನಕೂಲವಾಗುವ ಪ್ರಮುಖ ಕಚೇರಿಗಳು ಒಂದೊಂದಾಗಿ …
Read More »ಜನರ ಮಾನವೀಯ ಮೌಲ್ಯಗಳನ್ನು ಕಿತ್ತುಕೊಂಡಿತಾ ಕೊರೊನಾ…….
ಬೆಳಗಾವಿ: ಕೊರೊನಾ ತಡೆಗಟ್ಟಲು 75 ದಿನಗಳ ಲಾಕ್ಡೌನ್ ಬಳಿಕ ಅನ್ಲಾಕ್ ಜಾರಿಗೆ ಬಂದು ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಲಾಕ್ಡೌನ್ ಎಫೆಕ್ಟ್ ಗೆ ಬಡ ಕುಟುಂಬಗಳ ಬದುಕು ಮೂರಾಬಟ್ಟೆಯಾಗಿದೆ. ಕೊರೊನಾ ಜನರ ಜೀವ ಹಿಂಡುತ್ತಿರುವುದಷ್ಟೇ ಅಲ್ಲದೇ ಜನರ ಮಾನವೀಯ ಮೌಲ್ಯಗಳನ್ನು ಕಿತ್ತುಕೊಂಡಿತಾ ಎಂಬ ಅನುಮಾನ ಕಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಬೆಳಗಾವಿಯಲ್ಲಿ ಒಂದು ಘಟನೆ ನಡೆದಿದೆ. ಹೌದು. ಲಾಕ್ಡೌನ್ ಎಫೆಕ್ಟ್ ಗೆ ಅದೆಷ್ಟೋ ಬಡ ಕೂಲಿಕಾರ್ಮಿಕರು, ದಿನಗೂಲಿ ನೌಕರರು, …
Read More »ಬರೋಬ್ಬರಿ 1,224 ಕೋಟಿ ಆಸ್ತಿ ಘೋಷಿಸಿಕೊಂಡ ಎಂಟಿಬಿ- 2.48 ಕೋಟಿ ಮೌಲ್ಯದ 5 ಐಷಾರಾಮಿ ಕಾರು
ಬೆಂಗಳೂರು: ವಿಧಾನ ಪರಿಷತ್ಗೆ ಬಿಜೆಪಿಯಿಂದ ಸ್ಪರ್ಧಿಸಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಬರೋಬ್ಬರಿ 1,224 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಮೇಲ್ಮನೆ ಚುನಾವಣೆಗೆ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಭ್ಯರ್ಥಿಗಳಾದ ಸುನೀಲ್ ವಲ್ಯಾಪುರೆ, ಎಂಟಿಬಿ ನಾಗರಾಜ್, ಆರ್.ಶಂಕರ್ ಹಾಗೂ ಪ್ರತಾಪ್ ಸಿಂಹ ನಾಯಕ್ ಅವರು ನಾಮಪತ್ರ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ತಮ್ಮ ಆಸ್ತಿಯನ್ನು ಫೋಷಿಸಿಕೊಂಡಿದ್ದಾರೆ. ಎಂಟಿಬಿ ವಿರುದ್ಧ ಒಂದು ಪೊಲೀಸ್ …
Read More »ಮಹಾಮಾರಿ ಕೊರೊನಾ ವೈರಸ್ಗೆ ಹೆಚ್ಚಾಗಿ ವೃದ್ಧರೇ ಬಲಿಯಾಗುತ್ತಿದ್ದು,…..
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ಗೆ ಹೆಚ್ಚಾಗಿ ವೃದ್ಧರೇ ಬಲಿಯಾಗುತ್ತಿದ್ದು, ಇದರ ಹಿಂದಿನ ಅಸಲಿಯತ್ತು ಇದೀಗ ಬಯಲಾಗಿದೆ. ವಯಸ್ಸಾಗಿದೆ ಅಂತ ವೃದ್ಧರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಐಸೂಲೇಷನ್ ವಾರ್ಡಿನಲ್ಲಿ ವೃದ್ಧರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೊರೊನಾಗೆ ಹೆಚ್ಚಾಗಿ ವೃದ್ಧರೇ ಬಲಿಯಾಗಿತ್ತಿದ್ದಾರೆ ಎಂಬ ಎಕ್ಸ್ ಕ್ಲೂಸೀವ್ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಸಾಯುವುದಕ್ಕೂ ಮುನ್ನ ಕುಟುಂಬಸ್ಥರ ಜೊತೆ ಚಿಕ್ಕಬಾಣಾವರದ ವೃದ್ಧೆಯೊಬ್ಬರು ತನ್ನ ಅಳಲು ತೋಡಿಕೊಂಡಿದ್ದಾರೆ. ಕುಟುಂಬದ ಮಗಳು, ಮೊಕ್ಕಳಿಗೆ …
Read More »ಪ್ರಧಾನ ಮಂತ್ರಿ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ……….?
ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಯಲಿದೆ. ಭಾರತ ಮತ್ತು ಚೀನಾ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷವಾಗಿ 20 ಮಂದಿ ಭಾರತೀಯ ಸೈನಿಕರು ಮೃತಪಟ್ಟಿರುವ ಬಗ್ಗೆ …
Read More »ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು
ಬೆಳಗಾವಿ: ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ವಿಜಯ ತಳವಾರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಇತ್ತೀಚಿಗೆ ಎಸ್.ಟಿ.ಪಂಗಡಕ್ಕೆ ವಾಲ್ಮೀಕಿ, ನಾಯಕ ಸಮುದಾಯದ ಪರ್ಯಾಯ ಪದಗಳಾದ ತಳವಾರ, ಪರಿವಾರರಿಗೆ ಮಾತ್ರ ಎಸ್.ಟಿ ಪ್ರಮಾಣ ಪತ್ರ ನೀಡುವಂತೆ ಸರ್ಕಾರ ಆದೇಶಿಸಿದ್ದು, ಇದನ್ನು ಅನ್ಯ ಸಮುದಾಯದವರಾದ ಅಂಬಿಗರು, ಬೇಸ್ತರು, ಕೋಳಿ, ಸುಣಗಾರ …
Read More »ಯುವ ಕ್ರಿಕೆಟಿಗ ಅರ್ಜುನ್ ತೆಂಡೂಲ್ಕರ್ ಬೌಲಿಂಗ್ ಎದುರಿಸುವುದು ಕಷ್ಟ..
ಲಂಡನ್: ಯುವ ಕ್ರಿಕೆಟಿಗ ಅರ್ಜುನ್ ತೆಂಡೂಲ್ಕರ್ ಬೌಲಿಂಗ್ ಎದುರಿಸುವುದು ಕಷ್ಟ ಎಂದು ಇಂಗ್ಲೆಂಡ್ ಕ್ರಿಕೆಟ್ ಆಟಗಾರ್ತಿ ಡೇನಿಯಲ್ ವ್ಯಾಟ್ ತಿಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜುನ್ ಹೆಚ್ಚಿನ ಸಮಯವನ್ನು ಇಂಗ್ಲೆಂಡ್ನಲ್ಲಿ ಕಳೆಯುತ್ತಾರೆ. ಇಂಗ್ಲೆಂಡ್ ಕ್ರಿಕೆಟ್ ಆಟಗಾರರಿಗೆ ತರಬೇತಿ ವೇಳೆ ಬೌಲಿಂಗ್ ಮಾಡುವ ಅವಕಾಶವನ್ನು ಅರ್ಜುನ್ ಪಡೆದಿದ್ದಾರೆ. ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಜೊತೆಯೂ ಅರ್ಜುನ್ …
Read More »
Laxmi News 24×7