Breaking News

ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಸಾರಿಗೆ ನೌಕರರು

ನವೆಂಬರ್ 23: ಕರ್ನಾಟಕ ಸರ್ಕಾರ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರಿಗೆ 38 ತಿಂಗಳ ಅರಿಯರ್ಸ್ ಬಾಕಿ ಹಣ ಬಿಡುಗಡೆ ಮಾಡಿಲ್ಲ. 2024 ಜನವರಿಯಿಂದ ನೌಕರರಿಗೆ ಸಂಬಳ ಹೆಚ್ಚಳ ಮಾಡಬೇಕಿತ್ತು, ಆದರೆ ನವೆಂಬರ್ ತಿಂಗಳು ಬಂದರೂ ಇನ್ನೂ ಈ ಬಗ್ಗೆ ‌ಸರ್ಕಾರ ತೀರ್ಮಾನ ಕೈಗೊಂಡಿಲ್ಲ. ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ. ಅರಿಯರ್ಸ್ ಹಣವೇ ಒಟ್ಟು 1750 ಕೋಟಿ ರುಪಾಯಿ ನೀಡಬೇಕಿದೆ. ಗ್ರಾಚ್ಯುಟಿ ಹಣ ಸುಮಾರು …

Read More »

ನಮ್ಮ ಭೂಮಿ ನಮ್ಮ ಹಕ್ಕು ಹೆಸರಿನಡಿ ಒಂದು ದಿನದ ಧರಣಿ ನಡೆಸಿದ ಬಿಜೆಪಿ

ರೈತರ ಪಹಣಿ ಪತ್ರಿಕೆಯಲ್ಲಿ ಹಾಗೂ ರಾಜ್ಯದ ಬೇರೆ ಬೇರೆ ಆಸ್ತಿಗಳು ವಕ್ಫಗೆ ಒಳಪಟ್ಟಿವೆ ಎಂದು ನಮೂದಾಗಿರುವುದನ್ನು ವಿರೋಧಿಸಿ ಸಚಿವ ಜಮೀರ್ ಅಹ್ಮದ್ ರಾಜೀನಾಮೆಗೆ ಆಗ್ರಹಿಸಿ, ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ನಮ್ಮ ಭೂಮಿ ನಮ್ಮ ಹಕ್ಕು ಹೆಸರಿನಡಿ ಒಂದು ದಿನದ ಧರಣಿ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹುಬ್ಬಳ್ಳಿ ಧಾರವಾಡ ಜಿಲ್ಲಾ ಬಿಜೆಪಿ ಘಟಕದ ನೇತ್ರತ್ವದಲ್ಲಿ ಧರಣಿ ನಡೆಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು, ರಾಜ್ಯ ಕಾಂಗ್ರೆಸ್ ಸರ್ಕಾರ ಸೇರಿ …

Read More »

ಖಾನಾಪೂರ ತಾಲೂಕಿನ ಘೋಟಗಾಳಿ-ರಂಜನಕುಡಿ ರಸ್ತೆಯಲ್ಲಿ ಆನೆ

ಖಾನಾಪೂರ ತಾಲೂಕಿನ ಘೋಟಗಾಳಿ-ರಂಜನಕುಡಿ ರಸ್ತೆಯಲ್ಲಿ ಆನೆ ಘೋಟಗಾಳಿ-ರಂಜನಕುಡಿ ಮಾರ್ಗದಲ್ಲಿ ಆನೆಗಳ ದರ್ಶನ್ ಆನೆಯನ್ನು ಮತ್ತೆ ಕಾಡಿಗೆ ಥಳಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು! ಆಂಕರ್ ಖಾನಾಪೂರ ತಾಲೂಕಿನ ಘೋಟಗಾಳಿ-ರಂಜನಕುಡಿ ರಸ್ತೆಯಲ್ಲಿ ಆನೆಯನ್ನು ಆಕಸ್ಮಿಕ ದರ್ಶನ ಪಡೆದು ಭಯ ಭೀತಗೊಂಡ ನಾಗರಿಕರು, ಸ್ವಲ್ಪ ಹೊತ್ತಿನಲ್ಲೇ ಆನೆ ರಸ್ತೆ ದಾಟಿ ರಸ್ತೆ ಪಕ್ಕದ ಜಾಧವ್ ಅವರ ಜಮೀನಿಗೆ ನುಗ್ಗಿತ್ತು. ಗದ್ದೆಯಲ್ಲಿ ಭತ್ತದ ಕಟಾವು ಕಾರ್ಯ ಪ್ರಗತಿಯಲ್ಲಿತು. ಆನೆಯನ್ನು ಕಂಡು ರಸ್ತೆಯಲ್ಲಿ ಹೊಲಗಳಲ್ಲಿ ಕೆಲಸ ಮಾಡುವ …

Read More »

ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು.: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು. ನಮ್ಮ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅನ್ಯ ಭಾಷೆಯ ಬಗ್ಗೆ ಗೌರವ ಇಟ್ಟುಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಇಲ್ಲಿಯ ಕನ್ನಡ ರಾಜ್ಯೋತ್ಸವ ಸಮೀತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ನಂತರ ಕಲ್ಮೇಶ್ವರ ವೃತ್ತದಲ್ಲಿ ಕನ್ನಡಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕನ್ನಡ ಭಾಷೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು …

Read More »

ಕೆಪಿಟಿಸಿಎಲ್‌ ಹುದ್ದೆಗಳ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್‌ ಪರಿಚಾರಕ ಮತ್ತು ಕಿರಿಯ ಪವರ್‌ ಮ್ಯಾನ್‌ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇ-ಸಹಿ ಮಾಡಿ ಅಂಚೆ ಚಲನ್‌ ಪಡೆಯುವ ದಿನಾಂಕವನ್ನು ಹಾಗೂ ಅರ್ಜಿ ಶುಲ್ಕ ಪಾವತಿ ಮಾಡುವ ದಿನಾಂಕವನ್ನು ಕ್ರಮವಾಗಿ ಡಿ.5 ಹಾಗೂ ಡಿ. 10 ರವರೆಗೆ ವಿಸ್ತರಿಸಲಾಗಿದೆ. ಕೆಪಿಟಿಸಿಎಲ್‌ ಹಾಗೂ ಎಸ್ಕಾಂಗಳಲ್ಲಿ ಸದರಿ ಹುದ್ದೆಗಳ ಭರ್ತಿಗಾಗಿ 2024ರ ಅಕ್ಟೋಬರ್ 14ರಂದು ಉದ್ಯೋಗ ಪ್ರಕಟಣೆ …

Read More »

ಸವದತ್ತಿಯ ಬೆಟಸೂರಮಠದ ವೇದಮೂರ್ತಿ ಶ್ರೀ ಅಜ್ಜಯ್ಯ ಸ್ವಾಮೀಜಿಯವರು ಶುಕ್ರವಾರ ದಿ. 22-11-2024 ರಂದು ಬೆಳಿಗ್ಗೆ ತಮ್ಮ 77ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ.

ಸವದತ್ತಿ : ಸವದತ್ತಿಯ ಬೆಟಸೂರಮಠದ ವೇದಮೂರ್ತಿ ಶ್ರೀ ಅಜ್ಜಯ್ಯ ಸ್ವಾಮೀಜಿಯವರು ಶುಕ್ರವಾರ ದಿ. 22-11-2024 ರಂದು ಬೆಳಿಗ್ಗೆ ತಮ್ಮ 77ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಪಾರ್ಥಿವ ಶರೀರವನ್ನು ಇಂದು ಶುಕ್ರವಾರ ಸಾಯಂಕಾಲ 3 ಗಂಟೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ನಂತರ ಸವದತ್ತಿಯ ಬಂಡಿ ಓಣಿಯ ಬೆಟಸೂರಮಠದ ಆವರಣದಲ್ಲಿ ಶ್ರೀಗಳ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಗುತ್ತಿದೆ.

Read More »

ಚಳಿಗಾಲದ ಅಧಿವೇಶನವು ಪೂರ್ಣಾವಧಿಯ ಅಧಿವೇಶನವಾದರೆ ಅದಕ್ಕೆ ಅರ್ಥ:ಡಾ. ಪ್ರಭಾಕರ್ ಕೋರೆ

ಬೆಳಗಾವಿ : ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ಚಳಿಗಾಲದ ಅಧಿವೇಶನವು ಪೂರ್ಣಾವಧಿಯ ಅಧಿವೇಶನವಾದರೆ ಅದಕ್ಕೆ ಅರ್ಥ ಬರುತ್ತದೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ 2006ರಲ್ಲಿ ಮೊಟ್ಟ ಮೊದಲ ಬಾರಿಗೆ ಅಧಿವೇಶನ ನಡೆಸುವುದಕ್ಕೆ ಸ್ಥಳಾವಕಾಶ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಟ್ಟು, ಸಂಪೂರ್ಣ ಮುತುವರ್ಜಿವಹಿಸಿ ಯಶಸ್ವಿಯಾಗಲು ಕಾರಣೀಭೂತರಾಗಿರುವ ಡಾ.ಪ್ರಭಾಕರ ಕೋರೆ, ಅಧಿವೇಶನ ನಡೆಸುವ ಉದ್ದೇಶ ಈವರೆಗೂ ಯಶಸ್ವಿಯಾಗಲಿಲ್ಲ. ಈ ಭಾಗದ ಜನರ ಕನಸು …

Read More »

ಕೆಲಸ ಮುಗಿಸಿ ವಾಪಸ್ ಆಗುವಾಗ ಅಪಘಾತ: ಇಬ್ಬರು ಸಾವು

ಬೆಳಗಾವಿ: ಕ್ರೂಸರ್ ಮರಕ್ಕೆ ಡಿಕ್ಕಿಯಾಗಿ ಬಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 16 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರಾಮದುರ್ಗ ತಾಲೂಕಿನ ಚುಂಚುನೂರು ಗ್ರಾಮದ 18 ಜನರು ಪಕ್ಕದ ಗ್ರಾಮಕ್ಕೆ ಹತ್ತಿ ಬಿಡಿಸಿ ವಾಪಸ್ ಆಗುವ ವೇಳೆ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ನೇರವಾಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಾಹನ ಪಲ್ಟಿಯಾಗಿದೆ. ಕ್ರೂಸರ್ …

Read More »

ಕೆ. ಎಲ್. ಎಸ್. ಗೋಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (KLS GIT) ಅತ್ಯಂತ ಜನಪ್ರಿಯವಾದ ಅವಲಾಂಚ 2024 ಟೆಕ್ನಿಕಲ್ ಫೆಸ್ಟ್ ಅನ್ನು ಉದ್ಘಾಟಿಸಲಾಯಿತು.

ಬೆಳಗಾವಿ – ಕೆ. ಎಲ್. ಎಸ್. ಗೋಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (KLS GIT) ಅತ್ಯಂತ ಜನಪ್ರಿಯವಾದ ಅವಲಾಂಚ 2024 ಟೆಕ್ನಿಕಲ್ ಫೆಸ್ಟ್ ಅನ್ನು ಗುರುವಾರ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಟಿಸಿಎಸ್‌ನ ಪ್ರಾದೇಶಿಕ ಮುಖ್ಯಸ್ಥ ವಿನಯ್ ಶಿವಾಪುರ ಉದ್ಘಾಟಿಸಿದರು. ಕೆಎಲ್‌ಎಸ್ ಜಿಐಟಿಯ ಆಡಳಿತ ಮಂಡಳಿಯ ಅಧ್ಯಕ್ಷ ರಾಜೇಂದ್ರ ಬೆಳಗಾಂವಕರ, ಪ್ರಾಚಾರ್ಯ ಡಾ. ಎಂ. ಎಸ್. ಪಾಟೀಲ, ಐ. ಎಸ್. ಇ. ವಿಭಾಗದ ಮುಖ್ಯಸ್ಥ ಡಾ. ಕಿರಣ ತಾಂಗೋಡ ಮತ್ತು ಏರೋನಾಟಿಕಲ್ ಇಂಜಿನಿಯರಿಂಗ್ ಮುಖ್ಯಸ್ಥ …

Read More »

ಸೋಮವಾರ (ನ.25 ರಂದು) ಜರುಗಲಿದೆ.ಶಿವಪ್ಪಯ್ಯ ಶಿವಯೋಗಿಗಳ ಜಾತ್ರೆ*

ಧಾರವಾಡ ನಗರದಿಂದ ಸುಮಾರು 40 ಕಿ.ಮೀ. ಅಂತರದಲ್ಲಿರುವ ಸವದತ್ತಿ ತಾಲೂಕು ಉಗರಗೋಳ ಗ್ರಾಮದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳವರ ಮಠದ ವಾರ್ಷಿಕ ಜಾತ್ರಾ ಮಹೋತ್ಸವ ಸೋಮವಾರ (ನ.25 ರಂದು) ಜರುಗಲಿದೆ. ಅಂದು ಪ್ರಾತಃಕಾಲದಲ್ಲಿ ಶ್ರೀಗುರು ಶಿವಪ್ಪಯ್ಯ ಶಿವಯೋಗಳವರ ಕರ್ತೃ ಗದ್ದುಗೆಗೆ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಪುಷ್ಪಾಲಂಕಾರದ ವಿಶೇಷ ಪೂಜೆ ಜರುಗುವುದು. ನಂತರ ಮುಂಜಾನೆ 9 ಗಂಟೆಗೆ ಶ್ರೀಮಠದಿಂದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳ ಭಾವಚಿತ್ರ ಹಾಗೂ ಪಲ್ಲಕ್ಕಿ ಉತ್ಸವವು ನಡೆಯಲಿದ್ದು, ನಂತರ …

Read More »